Homeಮುಖಪುಟಜೊಮೊಟೊ ಏಜೆಂಟ್‌ ಹಿಂದಿ ಪ್ರೀತಿ: ತೀವ್ರ ಆಕ್ಷೇಪದ ಬಳಿಕ ಕಂಪನಿ ಕ್ಷಮೆಯಾಚನೆ

ಜೊಮೊಟೊ ಏಜೆಂಟ್‌ ಹಿಂದಿ ಪ್ರೀತಿ: ತೀವ್ರ ಆಕ್ಷೇಪದ ಬಳಿಕ ಕಂಪನಿ ಕ್ಷಮೆಯಾಚನೆ

- Advertisement -
- Advertisement -

ಗ್ರಾಹಕರೊಬ್ಬರ ಜೊತೆ ಆನ್‌ಲೈನ್‌ ಡೆಲಿವರಿ ಸಂಸ್ಥೆಯಾದ ಜೊಮೊಟೊದ ಗ್ರಾಹಕ ಸೇವಾ ಎಕ್ಸಿಕ್ಯೂಟಿವ್‌‌ ನಡೆಸಿದ ಸಂಭಾಷಣೆಯು ಟ್ವಿಟರ್‌ನಲ್ಲಿ ವೈರಲ್‌ ಆದ ಬಳಿಕ, ಜೊಮೊಟೊ ಕಂಪನಿಯು ಮಂಗಳವಾರ ಕ್ಷಮೆಯಾಚಿಸಿದೆ.

ಮರುಪಾವತಿಗಾಗಿ ಯತ್ನಿಸಿದ ವಿಕಾಸ್‌ ಅವರು ಜೊಮೊಟೊ ಗ್ರಾಹಕ ಸೇವಾ ಎಕ್ಸಿಕ್ಯೂಟಿವ್‌‌ ಜೊತೆ ನಡೆಸಿದ ಸಂವಹನದ ಸ್ಕ್ರೀನ್‌ ಶಾಟ್‌ಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದರು.

ಸ್ಕ್ರೀನ್‌ಶಾಟ್‌ಗಳ ಪ್ರಕಾರ ಗ್ರಾಹಕ ವಿಕಾಶ್ ಅವರು, ತಮಗೆ ತಲುಪದ ಆರ್ಡರ್‌ಗೆ ಸಂಬಂಧಿಸಿದಂತೆ ರೆಸ್ಟೋರೆಂಟ್‌ನಿಂದ ಮರುಪಾವತಿ ಪಡೆಯಲು ಪ್ರಯತ್ನಿಸುತ್ತಿದ್ದರು. ಜೊಮೊಟೊ ಗ್ರಾಹಕ ಸೇವೆಯನ್ನು ಸಂಪರ್ಕಿಸಿ ಅವರಿಂದ ಮರುಪಾವತಿಗಾಗಿ ಕೋರಿದರು.

ಜೊಮೊಟೊ ಎಕ್ಸಿಕ್ಯೂಟಿವ್‌‌, “ಕರೆ ಮಾಡಿ ಸಂಪರ್ಕಿಸಲು ಐದು ಬಾರಿ ಯತ್ನಿಸಲಾಯಿತು. ಭಾಷೆ ಸಮಸ್ಯೆಯಿಂದಾಗಿ ಸಂವಹನ ಸಾಧ್ಯವಾಗಿಲ್ಲ” ಎಂದಿದ್ದಾರೆ. ಕಂಪನಿಯು ತಮಿಳುನಾಡಿನಲ್ಲಿ ಕೆಲಸ ಮಾಡುತ್ತಿದೆ.  ತಮಿಳು ಮಾತನಾಡುವ ವ್ಯಕ್ತಿಯನ್ನು ನೇಮಕ ಮಾಡಿಕೊಳ್ಳಬೇಕು ಎಂದು ವಿಕಾಸ್ ಹೇಳಿದ್ದಾರೆ. ಹೀಗೆ ಹೇಳಿದಾಗ, “ಹಿಂದಿ ನಮ್ಮ ರಾಷ್ಟ್ರೀಯ ಭಾಷೆ” ಮತ್ತು “ಪ್ರತಿಯೊಬ್ಬರೂ ಹಿಂದಿ ತಿಳಿದಿರುವುದು ಬಹಳ ಸಾಮಾನ್ಯವಾಗಿದೆ. ಇದು ನಿಮ್ಮ ಮಾಹಿತಿಗೆ” ಎಂದು ಎಕ್ಸಿಕ್ಯೂಟಿವ್ ಹೇಳಿದ್ದಾರೆ. ಇದು ವಿವಾದಕ್ಕೆ ಕಾರಣವಾಗಿದೆ.

ಅಂತಿಮವಾಗಿ ಎಕ್ಸಿಕ್ಯೂಟಿವ್‌ ಚಾಟ್‌ನಲ್ಲಿ, “ಉಂಟಾದ ತೊಂದರೆಗೆ ನಾವು ನಿಜವಾಗಿಯೂ ವಿಷಾದಿಸುತ್ತೇವೆ. ಆದರೆ ಈ ದುರದೃಷ್ಟಕರ ತಪ್ಪಿಗೆ ಕ್ಷಮೆಯಾಚಿಸುವುದನ್ನು ಹೊರತುಪಡಿಸಿ ನಾವು ನಿಮಗೆ ಯಾವುದೇ ಪರಿಹಾರವನ್ನು ನೀಡಲು ಸಾಧ್ಯವಿಲ್ಲ” ಎಂದಿದ್ದಾರೆ.

ವಿಕಾಸ್‌‌ಗೆ ಹಿಂದಿ ಗೊತ್ತಿಲ್ಲದ ಕಾರಣ ಮರುಪಾವತಿಯನ್ನು ಪೂರ್ಣಗೊಳಿಸಲು ಸಾಧ್ಯವಿಲ್ಲ ಎಂದು ಟ್ವೀಟ್ ಆರೋಪಿಸಿದೆ. ಕಂಪನಿಯನ್ನು ಉದ್ದೇಶಿಸಿ, “ನೀವು ಗ್ರಾಹಕರೊಂದಿಗೆ ಮಾತನಾಡುವ ರೀತಿಯಲ್ಲ” ಎಂದು ವಿಕಾಸ್‌ ತಿಳಿಸಿದ್ದಾರೆ.

ಟ್ವೀಟ್ ಮಾಡಿದ ತಕ್ಷಣ ವೈರಲ್ ಆಗಿದ್ದು, ಸಾವಿರಾರು ಮಂದಿ ಲೈಕ್‌ ಹಾಗೂ ರೀಟ್ವೀಟ್‌ ಮಾಡಿದ್ದಾರೆ. ಇದಲ್ಲದೆ, #Reject_Zomato ಮತ್ತು #StopHindiImposition ಎಂಬ ಹ್ಯಾಶ್‌ಟ್ಯಾಗ್‌ಗಳು ಸಾಮಾಜಿಕ ಮಾಧ್ಯಮದಲ್ಲಿ ಟ್ರೆಂಡ್‌ ಆಗಿವೆ.

ಧರಮ್‌ಪುರಿ ಸಂಸದ ಸೆಂಥಿಲ್‌ಕುಮಾರ್ ಕೂಡ ಟ್ವಿಟರ್‌ನಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ, ಹಿಂದಿ ಯಾವಾಗ ರಾಷ್ಟ್ರೀಯ ಭಾಷೆಯಾಯಿತು ಎಂದು ಕೇಳಿದ್ದಾರೆ. ಕಂಪನಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.

ಭಾರತೀಯ ಸಂವಿಧಾನದ 343ನೇ ವಿಧಿಯಲ್ಲಿ ವಿವರಿಸಿರುವ ಅಧಿಕೃತ ಭಾಷೆಗಳಲ್ಲಿ ಹಿಂದಿ ಒಂದು ಭಾಷೆಯಾಗಿದೆ. ಆದರೆ ಯಾವುದೇ ಭಾಷೆಯನ್ನು “ರಾಷ್ಟ್ರೀಯ ಭಾಷೆ” ಎಂದು ಘೋಷಿಸಲಾಗಿಲ್ಲ. ಇತರ ಪ್ರಾದೇಶಿಕ ಭಾಷೆಗಳನ್ನು ಮಾತನಾಡುವ ಜನರ ಮೇಲೆ ಹಿಂದಿ ಹೇರಿಕೆಯನ್ನು ದಕ್ಷಿಣ ಭಾರತದ ರಾಜ್ಯಗಳು ಮೊದಲಿನಿಂದಲೂ ವಿರೋಧಿಸಿವೆ.

ಜೊಮೊಟೊ ಕಂಪನಿಯು, ತಮ್ಮ ಏಜೆಂಟ್‌ನ ವರ್ತನೆಗೆ ಕ್ಷಮೆಯಾಚಿಸಿದೆ. ತಮಿಳುನಾಡು ಜನತೆಯಲ್ಲಿ ಕ್ಷಮೆ ಕೋರಿ ಜೊಮೊಟೊ ಸಂಸ್ಥೆಯ ತನ್ನ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಟ್ವೀಟ್ ಮಾಡಿದೆ. ಇಂಗ್ಲಿಷ್‌ ಹಾಗೂ ತಮಿಳು ಭಾಷೆಯಲ್ಲಿ ಕ್ಷಮೆ ಕೋರಲಾಗಿದೆ.

“ನಮ್ಮ ವೈವಿಧ್ಯಮಯ ಸಂಸ್ಕೃತಿಯ ಕಡೆಗೆ ನಿರ್ಲಕ್ಷ್ಯ ವಹಿಸಿದ್ದಕ್ಕಾಗಿ ಏಜೆಂಟರನ್ನು ಕೆಲಸದಿಂದ ತೆಗೆಯಲಾಗಿದೆ. ಆ ಏಜೆಂಟರ ನಡವಳಿಕೆಯು ಜೊಮೊಟೊ ಕಂಪನಿಯ “ಸೂಕ್ಷ್ಮತೆಯ ತತ್ವಗಳಿಗೆ” ವಿರುದ್ಧವಾಗಿದೆ ಎಂದು ಹೇಳಿಕೆ ತಿಳಿಸಿದೆ.

ಈ ಗ್ರಾಹಕ ಏಜೆಂಟ್‌ನ ಹೇಳಿಕೆಗಳು ಸಂಸ್ಥೆಯನ್ನು ಪ್ರತಿನಿಧಿಸುವುದಿಲ್ಲ. ನಮ್ಮ ಸಂಸ್ಥೆಯು ಭಾಷೆ ಮತ್ತು ವೈವಿಧ್ಯತೆ ಕಡೆಗಿದೆ ಎಂದಿದೆ.

“ತಮಿಳು ವರ್ಷನ್‌ ಆಪ್‌‌ಅನ್ನು ಜೊಮೊಟೊ ಸಂಸ್ಥೆ ಅಭಿವೃದ್ಧಿಪಡಿಸುತ್ತಿದೆ. ತಮಿಳಿನಲ್ಲಿಯೇ ನಾವು ಈಗಾಗಲೇ ವ್ಯವಹಿಸುತ್ತಿದ್ದೇವೆ. ತಮಿಳು ಕಾಲ್‌ ಸೆಂಟರ್‌‌ಅನ್ನು ಕೊಯಮತ್ತೂರಿನಲ್ಲಿ ತೆರೆಯಲು ಸಿದ್ಧತೆ ನಡೆದಿದೆ” ಎಂದು ಹೇಳಿದೆ.


ಇದನ್ನೂ ಓದಿರಿ: ಹಿಂದಿ ಹೇರಿಕೆ ನಿಲ್ಲಿಸಿ: ಟ್ವಿಟರ್‌ನಲ್ಲಿ ಗಣ್ಯರು, ಕಲಾವಿದರಿಂದ StopHindiImposition ಟ್ವೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...