Homeಮುಖಪುಟಜೊಮೊಟೊ ಏಜೆಂಟ್‌ ಹಿಂದಿ ಪ್ರೀತಿ: ತೀವ್ರ ಆಕ್ಷೇಪದ ಬಳಿಕ ಕಂಪನಿ ಕ್ಷಮೆಯಾಚನೆ

ಜೊಮೊಟೊ ಏಜೆಂಟ್‌ ಹಿಂದಿ ಪ್ರೀತಿ: ತೀವ್ರ ಆಕ್ಷೇಪದ ಬಳಿಕ ಕಂಪನಿ ಕ್ಷಮೆಯಾಚನೆ

- Advertisement -
- Advertisement -

ಗ್ರಾಹಕರೊಬ್ಬರ ಜೊತೆ ಆನ್‌ಲೈನ್‌ ಡೆಲಿವರಿ ಸಂಸ್ಥೆಯಾದ ಜೊಮೊಟೊದ ಗ್ರಾಹಕ ಸೇವಾ ಎಕ್ಸಿಕ್ಯೂಟಿವ್‌‌ ನಡೆಸಿದ ಸಂಭಾಷಣೆಯು ಟ್ವಿಟರ್‌ನಲ್ಲಿ ವೈರಲ್‌ ಆದ ಬಳಿಕ, ಜೊಮೊಟೊ ಕಂಪನಿಯು ಮಂಗಳವಾರ ಕ್ಷಮೆಯಾಚಿಸಿದೆ.

ಮರುಪಾವತಿಗಾಗಿ ಯತ್ನಿಸಿದ ವಿಕಾಸ್‌ ಅವರು ಜೊಮೊಟೊ ಗ್ರಾಹಕ ಸೇವಾ ಎಕ್ಸಿಕ್ಯೂಟಿವ್‌‌ ಜೊತೆ ನಡೆಸಿದ ಸಂವಹನದ ಸ್ಕ್ರೀನ್‌ ಶಾಟ್‌ಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದರು.

ಸ್ಕ್ರೀನ್‌ಶಾಟ್‌ಗಳ ಪ್ರಕಾರ ಗ್ರಾಹಕ ವಿಕಾಶ್ ಅವರು, ತಮಗೆ ತಲುಪದ ಆರ್ಡರ್‌ಗೆ ಸಂಬಂಧಿಸಿದಂತೆ ರೆಸ್ಟೋರೆಂಟ್‌ನಿಂದ ಮರುಪಾವತಿ ಪಡೆಯಲು ಪ್ರಯತ್ನಿಸುತ್ತಿದ್ದರು. ಜೊಮೊಟೊ ಗ್ರಾಹಕ ಸೇವೆಯನ್ನು ಸಂಪರ್ಕಿಸಿ ಅವರಿಂದ ಮರುಪಾವತಿಗಾಗಿ ಕೋರಿದರು.

ಜೊಮೊಟೊ ಎಕ್ಸಿಕ್ಯೂಟಿವ್‌‌, “ಕರೆ ಮಾಡಿ ಸಂಪರ್ಕಿಸಲು ಐದು ಬಾರಿ ಯತ್ನಿಸಲಾಯಿತು. ಭಾಷೆ ಸಮಸ್ಯೆಯಿಂದಾಗಿ ಸಂವಹನ ಸಾಧ್ಯವಾಗಿಲ್ಲ” ಎಂದಿದ್ದಾರೆ. ಕಂಪನಿಯು ತಮಿಳುನಾಡಿನಲ್ಲಿ ಕೆಲಸ ಮಾಡುತ್ತಿದೆ.  ತಮಿಳು ಮಾತನಾಡುವ ವ್ಯಕ್ತಿಯನ್ನು ನೇಮಕ ಮಾಡಿಕೊಳ್ಳಬೇಕು ಎಂದು ವಿಕಾಸ್ ಹೇಳಿದ್ದಾರೆ. ಹೀಗೆ ಹೇಳಿದಾಗ, “ಹಿಂದಿ ನಮ್ಮ ರಾಷ್ಟ್ರೀಯ ಭಾಷೆ” ಮತ್ತು “ಪ್ರತಿಯೊಬ್ಬರೂ ಹಿಂದಿ ತಿಳಿದಿರುವುದು ಬಹಳ ಸಾಮಾನ್ಯವಾಗಿದೆ. ಇದು ನಿಮ್ಮ ಮಾಹಿತಿಗೆ” ಎಂದು ಎಕ್ಸಿಕ್ಯೂಟಿವ್ ಹೇಳಿದ್ದಾರೆ. ಇದು ವಿವಾದಕ್ಕೆ ಕಾರಣವಾಗಿದೆ.

ಅಂತಿಮವಾಗಿ ಎಕ್ಸಿಕ್ಯೂಟಿವ್‌ ಚಾಟ್‌ನಲ್ಲಿ, “ಉಂಟಾದ ತೊಂದರೆಗೆ ನಾವು ನಿಜವಾಗಿಯೂ ವಿಷಾದಿಸುತ್ತೇವೆ. ಆದರೆ ಈ ದುರದೃಷ್ಟಕರ ತಪ್ಪಿಗೆ ಕ್ಷಮೆಯಾಚಿಸುವುದನ್ನು ಹೊರತುಪಡಿಸಿ ನಾವು ನಿಮಗೆ ಯಾವುದೇ ಪರಿಹಾರವನ್ನು ನೀಡಲು ಸಾಧ್ಯವಿಲ್ಲ” ಎಂದಿದ್ದಾರೆ.

ವಿಕಾಸ್‌‌ಗೆ ಹಿಂದಿ ಗೊತ್ತಿಲ್ಲದ ಕಾರಣ ಮರುಪಾವತಿಯನ್ನು ಪೂರ್ಣಗೊಳಿಸಲು ಸಾಧ್ಯವಿಲ್ಲ ಎಂದು ಟ್ವೀಟ್ ಆರೋಪಿಸಿದೆ. ಕಂಪನಿಯನ್ನು ಉದ್ದೇಶಿಸಿ, “ನೀವು ಗ್ರಾಹಕರೊಂದಿಗೆ ಮಾತನಾಡುವ ರೀತಿಯಲ್ಲ” ಎಂದು ವಿಕಾಸ್‌ ತಿಳಿಸಿದ್ದಾರೆ.

ಟ್ವೀಟ್ ಮಾಡಿದ ತಕ್ಷಣ ವೈರಲ್ ಆಗಿದ್ದು, ಸಾವಿರಾರು ಮಂದಿ ಲೈಕ್‌ ಹಾಗೂ ರೀಟ್ವೀಟ್‌ ಮಾಡಿದ್ದಾರೆ. ಇದಲ್ಲದೆ, #Reject_Zomato ಮತ್ತು #StopHindiImposition ಎಂಬ ಹ್ಯಾಶ್‌ಟ್ಯಾಗ್‌ಗಳು ಸಾಮಾಜಿಕ ಮಾಧ್ಯಮದಲ್ಲಿ ಟ್ರೆಂಡ್‌ ಆಗಿವೆ.

ಧರಮ್‌ಪುರಿ ಸಂಸದ ಸೆಂಥಿಲ್‌ಕುಮಾರ್ ಕೂಡ ಟ್ವಿಟರ್‌ನಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ, ಹಿಂದಿ ಯಾವಾಗ ರಾಷ್ಟ್ರೀಯ ಭಾಷೆಯಾಯಿತು ಎಂದು ಕೇಳಿದ್ದಾರೆ. ಕಂಪನಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.

ಭಾರತೀಯ ಸಂವಿಧಾನದ 343ನೇ ವಿಧಿಯಲ್ಲಿ ವಿವರಿಸಿರುವ ಅಧಿಕೃತ ಭಾಷೆಗಳಲ್ಲಿ ಹಿಂದಿ ಒಂದು ಭಾಷೆಯಾಗಿದೆ. ಆದರೆ ಯಾವುದೇ ಭಾಷೆಯನ್ನು “ರಾಷ್ಟ್ರೀಯ ಭಾಷೆ” ಎಂದು ಘೋಷಿಸಲಾಗಿಲ್ಲ. ಇತರ ಪ್ರಾದೇಶಿಕ ಭಾಷೆಗಳನ್ನು ಮಾತನಾಡುವ ಜನರ ಮೇಲೆ ಹಿಂದಿ ಹೇರಿಕೆಯನ್ನು ದಕ್ಷಿಣ ಭಾರತದ ರಾಜ್ಯಗಳು ಮೊದಲಿನಿಂದಲೂ ವಿರೋಧಿಸಿವೆ.

ಜೊಮೊಟೊ ಕಂಪನಿಯು, ತಮ್ಮ ಏಜೆಂಟ್‌ನ ವರ್ತನೆಗೆ ಕ್ಷಮೆಯಾಚಿಸಿದೆ. ತಮಿಳುನಾಡು ಜನತೆಯಲ್ಲಿ ಕ್ಷಮೆ ಕೋರಿ ಜೊಮೊಟೊ ಸಂಸ್ಥೆಯ ತನ್ನ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಟ್ವೀಟ್ ಮಾಡಿದೆ. ಇಂಗ್ಲಿಷ್‌ ಹಾಗೂ ತಮಿಳು ಭಾಷೆಯಲ್ಲಿ ಕ್ಷಮೆ ಕೋರಲಾಗಿದೆ.

“ನಮ್ಮ ವೈವಿಧ್ಯಮಯ ಸಂಸ್ಕೃತಿಯ ಕಡೆಗೆ ನಿರ್ಲಕ್ಷ್ಯ ವಹಿಸಿದ್ದಕ್ಕಾಗಿ ಏಜೆಂಟರನ್ನು ಕೆಲಸದಿಂದ ತೆಗೆಯಲಾಗಿದೆ. ಆ ಏಜೆಂಟರ ನಡವಳಿಕೆಯು ಜೊಮೊಟೊ ಕಂಪನಿಯ “ಸೂಕ್ಷ್ಮತೆಯ ತತ್ವಗಳಿಗೆ” ವಿರುದ್ಧವಾಗಿದೆ ಎಂದು ಹೇಳಿಕೆ ತಿಳಿಸಿದೆ.

ಈ ಗ್ರಾಹಕ ಏಜೆಂಟ್‌ನ ಹೇಳಿಕೆಗಳು ಸಂಸ್ಥೆಯನ್ನು ಪ್ರತಿನಿಧಿಸುವುದಿಲ್ಲ. ನಮ್ಮ ಸಂಸ್ಥೆಯು ಭಾಷೆ ಮತ್ತು ವೈವಿಧ್ಯತೆ ಕಡೆಗಿದೆ ಎಂದಿದೆ.

“ತಮಿಳು ವರ್ಷನ್‌ ಆಪ್‌‌ಅನ್ನು ಜೊಮೊಟೊ ಸಂಸ್ಥೆ ಅಭಿವೃದ್ಧಿಪಡಿಸುತ್ತಿದೆ. ತಮಿಳಿನಲ್ಲಿಯೇ ನಾವು ಈಗಾಗಲೇ ವ್ಯವಹಿಸುತ್ತಿದ್ದೇವೆ. ತಮಿಳು ಕಾಲ್‌ ಸೆಂಟರ್‌‌ಅನ್ನು ಕೊಯಮತ್ತೂರಿನಲ್ಲಿ ತೆರೆಯಲು ಸಿದ್ಧತೆ ನಡೆದಿದೆ” ಎಂದು ಹೇಳಿದೆ.


ಇದನ್ನೂ ಓದಿರಿ: ಹಿಂದಿ ಹೇರಿಕೆ ನಿಲ್ಲಿಸಿ: ಟ್ವಿಟರ್‌ನಲ್ಲಿ ಗಣ್ಯರು, ಕಲಾವಿದರಿಂದ StopHindiImposition ಟ್ವೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...