Homeಮುಖಪುಟಜೊಮೊಟೊ ಏಜೆಂಟ್‌ ಹಿಂದಿ ಪ್ರೀತಿ: ತೀವ್ರ ಆಕ್ಷೇಪದ ಬಳಿಕ ಕಂಪನಿ ಕ್ಷಮೆಯಾಚನೆ

ಜೊಮೊಟೊ ಏಜೆಂಟ್‌ ಹಿಂದಿ ಪ್ರೀತಿ: ತೀವ್ರ ಆಕ್ಷೇಪದ ಬಳಿಕ ಕಂಪನಿ ಕ್ಷಮೆಯಾಚನೆ

- Advertisement -
- Advertisement -

ಗ್ರಾಹಕರೊಬ್ಬರ ಜೊತೆ ಆನ್‌ಲೈನ್‌ ಡೆಲಿವರಿ ಸಂಸ್ಥೆಯಾದ ಜೊಮೊಟೊದ ಗ್ರಾಹಕ ಸೇವಾ ಎಕ್ಸಿಕ್ಯೂಟಿವ್‌‌ ನಡೆಸಿದ ಸಂಭಾಷಣೆಯು ಟ್ವಿಟರ್‌ನಲ್ಲಿ ವೈರಲ್‌ ಆದ ಬಳಿಕ, ಜೊಮೊಟೊ ಕಂಪನಿಯು ಮಂಗಳವಾರ ಕ್ಷಮೆಯಾಚಿಸಿದೆ.

ಮರುಪಾವತಿಗಾಗಿ ಯತ್ನಿಸಿದ ವಿಕಾಸ್‌ ಅವರು ಜೊಮೊಟೊ ಗ್ರಾಹಕ ಸೇವಾ ಎಕ್ಸಿಕ್ಯೂಟಿವ್‌‌ ಜೊತೆ ನಡೆಸಿದ ಸಂವಹನದ ಸ್ಕ್ರೀನ್‌ ಶಾಟ್‌ಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದರು.

ಸ್ಕ್ರೀನ್‌ಶಾಟ್‌ಗಳ ಪ್ರಕಾರ ಗ್ರಾಹಕ ವಿಕಾಶ್ ಅವರು, ತಮಗೆ ತಲುಪದ ಆರ್ಡರ್‌ಗೆ ಸಂಬಂಧಿಸಿದಂತೆ ರೆಸ್ಟೋರೆಂಟ್‌ನಿಂದ ಮರುಪಾವತಿ ಪಡೆಯಲು ಪ್ರಯತ್ನಿಸುತ್ತಿದ್ದರು. ಜೊಮೊಟೊ ಗ್ರಾಹಕ ಸೇವೆಯನ್ನು ಸಂಪರ್ಕಿಸಿ ಅವರಿಂದ ಮರುಪಾವತಿಗಾಗಿ ಕೋರಿದರು.

ಜೊಮೊಟೊ ಎಕ್ಸಿಕ್ಯೂಟಿವ್‌‌, “ಕರೆ ಮಾಡಿ ಸಂಪರ್ಕಿಸಲು ಐದು ಬಾರಿ ಯತ್ನಿಸಲಾಯಿತು. ಭಾಷೆ ಸಮಸ್ಯೆಯಿಂದಾಗಿ ಸಂವಹನ ಸಾಧ್ಯವಾಗಿಲ್ಲ” ಎಂದಿದ್ದಾರೆ. ಕಂಪನಿಯು ತಮಿಳುನಾಡಿನಲ್ಲಿ ಕೆಲಸ ಮಾಡುತ್ತಿದೆ.  ತಮಿಳು ಮಾತನಾಡುವ ವ್ಯಕ್ತಿಯನ್ನು ನೇಮಕ ಮಾಡಿಕೊಳ್ಳಬೇಕು ಎಂದು ವಿಕಾಸ್ ಹೇಳಿದ್ದಾರೆ. ಹೀಗೆ ಹೇಳಿದಾಗ, “ಹಿಂದಿ ನಮ್ಮ ರಾಷ್ಟ್ರೀಯ ಭಾಷೆ” ಮತ್ತು “ಪ್ರತಿಯೊಬ್ಬರೂ ಹಿಂದಿ ತಿಳಿದಿರುವುದು ಬಹಳ ಸಾಮಾನ್ಯವಾಗಿದೆ. ಇದು ನಿಮ್ಮ ಮಾಹಿತಿಗೆ” ಎಂದು ಎಕ್ಸಿಕ್ಯೂಟಿವ್ ಹೇಳಿದ್ದಾರೆ. ಇದು ವಿವಾದಕ್ಕೆ ಕಾರಣವಾಗಿದೆ.

ಅಂತಿಮವಾಗಿ ಎಕ್ಸಿಕ್ಯೂಟಿವ್‌ ಚಾಟ್‌ನಲ್ಲಿ, “ಉಂಟಾದ ತೊಂದರೆಗೆ ನಾವು ನಿಜವಾಗಿಯೂ ವಿಷಾದಿಸುತ್ತೇವೆ. ಆದರೆ ಈ ದುರದೃಷ್ಟಕರ ತಪ್ಪಿಗೆ ಕ್ಷಮೆಯಾಚಿಸುವುದನ್ನು ಹೊರತುಪಡಿಸಿ ನಾವು ನಿಮಗೆ ಯಾವುದೇ ಪರಿಹಾರವನ್ನು ನೀಡಲು ಸಾಧ್ಯವಿಲ್ಲ” ಎಂದಿದ್ದಾರೆ.

ವಿಕಾಸ್‌‌ಗೆ ಹಿಂದಿ ಗೊತ್ತಿಲ್ಲದ ಕಾರಣ ಮರುಪಾವತಿಯನ್ನು ಪೂರ್ಣಗೊಳಿಸಲು ಸಾಧ್ಯವಿಲ್ಲ ಎಂದು ಟ್ವೀಟ್ ಆರೋಪಿಸಿದೆ. ಕಂಪನಿಯನ್ನು ಉದ್ದೇಶಿಸಿ, “ನೀವು ಗ್ರಾಹಕರೊಂದಿಗೆ ಮಾತನಾಡುವ ರೀತಿಯಲ್ಲ” ಎಂದು ವಿಕಾಸ್‌ ತಿಳಿಸಿದ್ದಾರೆ.

ಟ್ವೀಟ್ ಮಾಡಿದ ತಕ್ಷಣ ವೈರಲ್ ಆಗಿದ್ದು, ಸಾವಿರಾರು ಮಂದಿ ಲೈಕ್‌ ಹಾಗೂ ರೀಟ್ವೀಟ್‌ ಮಾಡಿದ್ದಾರೆ. ಇದಲ್ಲದೆ, #Reject_Zomato ಮತ್ತು #StopHindiImposition ಎಂಬ ಹ್ಯಾಶ್‌ಟ್ಯಾಗ್‌ಗಳು ಸಾಮಾಜಿಕ ಮಾಧ್ಯಮದಲ್ಲಿ ಟ್ರೆಂಡ್‌ ಆಗಿವೆ.

ಧರಮ್‌ಪುರಿ ಸಂಸದ ಸೆಂಥಿಲ್‌ಕುಮಾರ್ ಕೂಡ ಟ್ವಿಟರ್‌ನಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ, ಹಿಂದಿ ಯಾವಾಗ ರಾಷ್ಟ್ರೀಯ ಭಾಷೆಯಾಯಿತು ಎಂದು ಕೇಳಿದ್ದಾರೆ. ಕಂಪನಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.

ಭಾರತೀಯ ಸಂವಿಧಾನದ 343ನೇ ವಿಧಿಯಲ್ಲಿ ವಿವರಿಸಿರುವ ಅಧಿಕೃತ ಭಾಷೆಗಳಲ್ಲಿ ಹಿಂದಿ ಒಂದು ಭಾಷೆಯಾಗಿದೆ. ಆದರೆ ಯಾವುದೇ ಭಾಷೆಯನ್ನು “ರಾಷ್ಟ್ರೀಯ ಭಾಷೆ” ಎಂದು ಘೋಷಿಸಲಾಗಿಲ್ಲ. ಇತರ ಪ್ರಾದೇಶಿಕ ಭಾಷೆಗಳನ್ನು ಮಾತನಾಡುವ ಜನರ ಮೇಲೆ ಹಿಂದಿ ಹೇರಿಕೆಯನ್ನು ದಕ್ಷಿಣ ಭಾರತದ ರಾಜ್ಯಗಳು ಮೊದಲಿನಿಂದಲೂ ವಿರೋಧಿಸಿವೆ.

ಜೊಮೊಟೊ ಕಂಪನಿಯು, ತಮ್ಮ ಏಜೆಂಟ್‌ನ ವರ್ತನೆಗೆ ಕ್ಷಮೆಯಾಚಿಸಿದೆ. ತಮಿಳುನಾಡು ಜನತೆಯಲ್ಲಿ ಕ್ಷಮೆ ಕೋರಿ ಜೊಮೊಟೊ ಸಂಸ್ಥೆಯ ತನ್ನ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಟ್ವೀಟ್ ಮಾಡಿದೆ. ಇಂಗ್ಲಿಷ್‌ ಹಾಗೂ ತಮಿಳು ಭಾಷೆಯಲ್ಲಿ ಕ್ಷಮೆ ಕೋರಲಾಗಿದೆ.

“ನಮ್ಮ ವೈವಿಧ್ಯಮಯ ಸಂಸ್ಕೃತಿಯ ಕಡೆಗೆ ನಿರ್ಲಕ್ಷ್ಯ ವಹಿಸಿದ್ದಕ್ಕಾಗಿ ಏಜೆಂಟರನ್ನು ಕೆಲಸದಿಂದ ತೆಗೆಯಲಾಗಿದೆ. ಆ ಏಜೆಂಟರ ನಡವಳಿಕೆಯು ಜೊಮೊಟೊ ಕಂಪನಿಯ “ಸೂಕ್ಷ್ಮತೆಯ ತತ್ವಗಳಿಗೆ” ವಿರುದ್ಧವಾಗಿದೆ ಎಂದು ಹೇಳಿಕೆ ತಿಳಿಸಿದೆ.

ಈ ಗ್ರಾಹಕ ಏಜೆಂಟ್‌ನ ಹೇಳಿಕೆಗಳು ಸಂಸ್ಥೆಯನ್ನು ಪ್ರತಿನಿಧಿಸುವುದಿಲ್ಲ. ನಮ್ಮ ಸಂಸ್ಥೆಯು ಭಾಷೆ ಮತ್ತು ವೈವಿಧ್ಯತೆ ಕಡೆಗಿದೆ ಎಂದಿದೆ.

“ತಮಿಳು ವರ್ಷನ್‌ ಆಪ್‌‌ಅನ್ನು ಜೊಮೊಟೊ ಸಂಸ್ಥೆ ಅಭಿವೃದ್ಧಿಪಡಿಸುತ್ತಿದೆ. ತಮಿಳಿನಲ್ಲಿಯೇ ನಾವು ಈಗಾಗಲೇ ವ್ಯವಹಿಸುತ್ತಿದ್ದೇವೆ. ತಮಿಳು ಕಾಲ್‌ ಸೆಂಟರ್‌‌ಅನ್ನು ಕೊಯಮತ್ತೂರಿನಲ್ಲಿ ತೆರೆಯಲು ಸಿದ್ಧತೆ ನಡೆದಿದೆ” ಎಂದು ಹೇಳಿದೆ.


ಇದನ್ನೂ ಓದಿರಿ: ಹಿಂದಿ ಹೇರಿಕೆ ನಿಲ್ಲಿಸಿ: ಟ್ವಿಟರ್‌ನಲ್ಲಿ ಗಣ್ಯರು, ಕಲಾವಿದರಿಂದ StopHindiImposition ಟ್ವೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...