Homeಮುಖಪುಟಜೊಮೊಟೊ ಏಜೆಂಟ್‌ ಹಿಂದಿ ಪ್ರೀತಿ: ತೀವ್ರ ಆಕ್ಷೇಪದ ಬಳಿಕ ಕಂಪನಿ ಕ್ಷಮೆಯಾಚನೆ

ಜೊಮೊಟೊ ಏಜೆಂಟ್‌ ಹಿಂದಿ ಪ್ರೀತಿ: ತೀವ್ರ ಆಕ್ಷೇಪದ ಬಳಿಕ ಕಂಪನಿ ಕ್ಷಮೆಯಾಚನೆ

- Advertisement -
- Advertisement -

ಗ್ರಾಹಕರೊಬ್ಬರ ಜೊತೆ ಆನ್‌ಲೈನ್‌ ಡೆಲಿವರಿ ಸಂಸ್ಥೆಯಾದ ಜೊಮೊಟೊದ ಗ್ರಾಹಕ ಸೇವಾ ಎಕ್ಸಿಕ್ಯೂಟಿವ್‌‌ ನಡೆಸಿದ ಸಂಭಾಷಣೆಯು ಟ್ವಿಟರ್‌ನಲ್ಲಿ ವೈರಲ್‌ ಆದ ಬಳಿಕ, ಜೊಮೊಟೊ ಕಂಪನಿಯು ಮಂಗಳವಾರ ಕ್ಷಮೆಯಾಚಿಸಿದೆ.

ಮರುಪಾವತಿಗಾಗಿ ಯತ್ನಿಸಿದ ವಿಕಾಸ್‌ ಅವರು ಜೊಮೊಟೊ ಗ್ರಾಹಕ ಸೇವಾ ಎಕ್ಸಿಕ್ಯೂಟಿವ್‌‌ ಜೊತೆ ನಡೆಸಿದ ಸಂವಹನದ ಸ್ಕ್ರೀನ್‌ ಶಾಟ್‌ಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದರು.

ಸ್ಕ್ರೀನ್‌ಶಾಟ್‌ಗಳ ಪ್ರಕಾರ ಗ್ರಾಹಕ ವಿಕಾಶ್ ಅವರು, ತಮಗೆ ತಲುಪದ ಆರ್ಡರ್‌ಗೆ ಸಂಬಂಧಿಸಿದಂತೆ ರೆಸ್ಟೋರೆಂಟ್‌ನಿಂದ ಮರುಪಾವತಿ ಪಡೆಯಲು ಪ್ರಯತ್ನಿಸುತ್ತಿದ್ದರು. ಜೊಮೊಟೊ ಗ್ರಾಹಕ ಸೇವೆಯನ್ನು ಸಂಪರ್ಕಿಸಿ ಅವರಿಂದ ಮರುಪಾವತಿಗಾಗಿ ಕೋರಿದರು.

ಜೊಮೊಟೊ ಎಕ್ಸಿಕ್ಯೂಟಿವ್‌‌, “ಕರೆ ಮಾಡಿ ಸಂಪರ್ಕಿಸಲು ಐದು ಬಾರಿ ಯತ್ನಿಸಲಾಯಿತು. ಭಾಷೆ ಸಮಸ್ಯೆಯಿಂದಾಗಿ ಸಂವಹನ ಸಾಧ್ಯವಾಗಿಲ್ಲ” ಎಂದಿದ್ದಾರೆ. ಕಂಪನಿಯು ತಮಿಳುನಾಡಿನಲ್ಲಿ ಕೆಲಸ ಮಾಡುತ್ತಿದೆ.  ತಮಿಳು ಮಾತನಾಡುವ ವ್ಯಕ್ತಿಯನ್ನು ನೇಮಕ ಮಾಡಿಕೊಳ್ಳಬೇಕು ಎಂದು ವಿಕಾಸ್ ಹೇಳಿದ್ದಾರೆ. ಹೀಗೆ ಹೇಳಿದಾಗ, “ಹಿಂದಿ ನಮ್ಮ ರಾಷ್ಟ್ರೀಯ ಭಾಷೆ” ಮತ್ತು “ಪ್ರತಿಯೊಬ್ಬರೂ ಹಿಂದಿ ತಿಳಿದಿರುವುದು ಬಹಳ ಸಾಮಾನ್ಯವಾಗಿದೆ. ಇದು ನಿಮ್ಮ ಮಾಹಿತಿಗೆ” ಎಂದು ಎಕ್ಸಿಕ್ಯೂಟಿವ್ ಹೇಳಿದ್ದಾರೆ. ಇದು ವಿವಾದಕ್ಕೆ ಕಾರಣವಾಗಿದೆ.

ಅಂತಿಮವಾಗಿ ಎಕ್ಸಿಕ್ಯೂಟಿವ್‌ ಚಾಟ್‌ನಲ್ಲಿ, “ಉಂಟಾದ ತೊಂದರೆಗೆ ನಾವು ನಿಜವಾಗಿಯೂ ವಿಷಾದಿಸುತ್ತೇವೆ. ಆದರೆ ಈ ದುರದೃಷ್ಟಕರ ತಪ್ಪಿಗೆ ಕ್ಷಮೆಯಾಚಿಸುವುದನ್ನು ಹೊರತುಪಡಿಸಿ ನಾವು ನಿಮಗೆ ಯಾವುದೇ ಪರಿಹಾರವನ್ನು ನೀಡಲು ಸಾಧ್ಯವಿಲ್ಲ” ಎಂದಿದ್ದಾರೆ.

ವಿಕಾಸ್‌‌ಗೆ ಹಿಂದಿ ಗೊತ್ತಿಲ್ಲದ ಕಾರಣ ಮರುಪಾವತಿಯನ್ನು ಪೂರ್ಣಗೊಳಿಸಲು ಸಾಧ್ಯವಿಲ್ಲ ಎಂದು ಟ್ವೀಟ್ ಆರೋಪಿಸಿದೆ. ಕಂಪನಿಯನ್ನು ಉದ್ದೇಶಿಸಿ, “ನೀವು ಗ್ರಾಹಕರೊಂದಿಗೆ ಮಾತನಾಡುವ ರೀತಿಯಲ್ಲ” ಎಂದು ವಿಕಾಸ್‌ ತಿಳಿಸಿದ್ದಾರೆ.

ಟ್ವೀಟ್ ಮಾಡಿದ ತಕ್ಷಣ ವೈರಲ್ ಆಗಿದ್ದು, ಸಾವಿರಾರು ಮಂದಿ ಲೈಕ್‌ ಹಾಗೂ ರೀಟ್ವೀಟ್‌ ಮಾಡಿದ್ದಾರೆ. ಇದಲ್ಲದೆ, #Reject_Zomato ಮತ್ತು #StopHindiImposition ಎಂಬ ಹ್ಯಾಶ್‌ಟ್ಯಾಗ್‌ಗಳು ಸಾಮಾಜಿಕ ಮಾಧ್ಯಮದಲ್ಲಿ ಟ್ರೆಂಡ್‌ ಆಗಿವೆ.

ಧರಮ್‌ಪುರಿ ಸಂಸದ ಸೆಂಥಿಲ್‌ಕುಮಾರ್ ಕೂಡ ಟ್ವಿಟರ್‌ನಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ, ಹಿಂದಿ ಯಾವಾಗ ರಾಷ್ಟ್ರೀಯ ಭಾಷೆಯಾಯಿತು ಎಂದು ಕೇಳಿದ್ದಾರೆ. ಕಂಪನಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.

ಭಾರತೀಯ ಸಂವಿಧಾನದ 343ನೇ ವಿಧಿಯಲ್ಲಿ ವಿವರಿಸಿರುವ ಅಧಿಕೃತ ಭಾಷೆಗಳಲ್ಲಿ ಹಿಂದಿ ಒಂದು ಭಾಷೆಯಾಗಿದೆ. ಆದರೆ ಯಾವುದೇ ಭಾಷೆಯನ್ನು “ರಾಷ್ಟ್ರೀಯ ಭಾಷೆ” ಎಂದು ಘೋಷಿಸಲಾಗಿಲ್ಲ. ಇತರ ಪ್ರಾದೇಶಿಕ ಭಾಷೆಗಳನ್ನು ಮಾತನಾಡುವ ಜನರ ಮೇಲೆ ಹಿಂದಿ ಹೇರಿಕೆಯನ್ನು ದಕ್ಷಿಣ ಭಾರತದ ರಾಜ್ಯಗಳು ಮೊದಲಿನಿಂದಲೂ ವಿರೋಧಿಸಿವೆ.

ಜೊಮೊಟೊ ಕಂಪನಿಯು, ತಮ್ಮ ಏಜೆಂಟ್‌ನ ವರ್ತನೆಗೆ ಕ್ಷಮೆಯಾಚಿಸಿದೆ. ತಮಿಳುನಾಡು ಜನತೆಯಲ್ಲಿ ಕ್ಷಮೆ ಕೋರಿ ಜೊಮೊಟೊ ಸಂಸ್ಥೆಯ ತನ್ನ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಟ್ವೀಟ್ ಮಾಡಿದೆ. ಇಂಗ್ಲಿಷ್‌ ಹಾಗೂ ತಮಿಳು ಭಾಷೆಯಲ್ಲಿ ಕ್ಷಮೆ ಕೋರಲಾಗಿದೆ.

“ನಮ್ಮ ವೈವಿಧ್ಯಮಯ ಸಂಸ್ಕೃತಿಯ ಕಡೆಗೆ ನಿರ್ಲಕ್ಷ್ಯ ವಹಿಸಿದ್ದಕ್ಕಾಗಿ ಏಜೆಂಟರನ್ನು ಕೆಲಸದಿಂದ ತೆಗೆಯಲಾಗಿದೆ. ಆ ಏಜೆಂಟರ ನಡವಳಿಕೆಯು ಜೊಮೊಟೊ ಕಂಪನಿಯ “ಸೂಕ್ಷ್ಮತೆಯ ತತ್ವಗಳಿಗೆ” ವಿರುದ್ಧವಾಗಿದೆ ಎಂದು ಹೇಳಿಕೆ ತಿಳಿಸಿದೆ.

ಈ ಗ್ರಾಹಕ ಏಜೆಂಟ್‌ನ ಹೇಳಿಕೆಗಳು ಸಂಸ್ಥೆಯನ್ನು ಪ್ರತಿನಿಧಿಸುವುದಿಲ್ಲ. ನಮ್ಮ ಸಂಸ್ಥೆಯು ಭಾಷೆ ಮತ್ತು ವೈವಿಧ್ಯತೆ ಕಡೆಗಿದೆ ಎಂದಿದೆ.

“ತಮಿಳು ವರ್ಷನ್‌ ಆಪ್‌‌ಅನ್ನು ಜೊಮೊಟೊ ಸಂಸ್ಥೆ ಅಭಿವೃದ್ಧಿಪಡಿಸುತ್ತಿದೆ. ತಮಿಳಿನಲ್ಲಿಯೇ ನಾವು ಈಗಾಗಲೇ ವ್ಯವಹಿಸುತ್ತಿದ್ದೇವೆ. ತಮಿಳು ಕಾಲ್‌ ಸೆಂಟರ್‌‌ಅನ್ನು ಕೊಯಮತ್ತೂರಿನಲ್ಲಿ ತೆರೆಯಲು ಸಿದ್ಧತೆ ನಡೆದಿದೆ” ಎಂದು ಹೇಳಿದೆ.


ಇದನ್ನೂ ಓದಿರಿ: ಹಿಂದಿ ಹೇರಿಕೆ ನಿಲ್ಲಿಸಿ: ಟ್ವಿಟರ್‌ನಲ್ಲಿ ಗಣ್ಯರು, ಕಲಾವಿದರಿಂದ StopHindiImposition ಟ್ವೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....