Homeಮುಖಪುಟಜೊಮೊಟೊ ಏಜೆಂಟ್‌ ಹಿಂದಿ ಪ್ರೀತಿ: ತೀವ್ರ ಆಕ್ಷೇಪದ ಬಳಿಕ ಕಂಪನಿ ಕ್ಷಮೆಯಾಚನೆ

ಜೊಮೊಟೊ ಏಜೆಂಟ್‌ ಹಿಂದಿ ಪ್ರೀತಿ: ತೀವ್ರ ಆಕ್ಷೇಪದ ಬಳಿಕ ಕಂಪನಿ ಕ್ಷಮೆಯಾಚನೆ

- Advertisement -
- Advertisement -

ಗ್ರಾಹಕರೊಬ್ಬರ ಜೊತೆ ಆನ್‌ಲೈನ್‌ ಡೆಲಿವರಿ ಸಂಸ್ಥೆಯಾದ ಜೊಮೊಟೊದ ಗ್ರಾಹಕ ಸೇವಾ ಎಕ್ಸಿಕ್ಯೂಟಿವ್‌‌ ನಡೆಸಿದ ಸಂಭಾಷಣೆಯು ಟ್ವಿಟರ್‌ನಲ್ಲಿ ವೈರಲ್‌ ಆದ ಬಳಿಕ, ಜೊಮೊಟೊ ಕಂಪನಿಯು ಮಂಗಳವಾರ ಕ್ಷಮೆಯಾಚಿಸಿದೆ.

ಮರುಪಾವತಿಗಾಗಿ ಯತ್ನಿಸಿದ ವಿಕಾಸ್‌ ಅವರು ಜೊಮೊಟೊ ಗ್ರಾಹಕ ಸೇವಾ ಎಕ್ಸಿಕ್ಯೂಟಿವ್‌‌ ಜೊತೆ ನಡೆಸಿದ ಸಂವಹನದ ಸ್ಕ್ರೀನ್‌ ಶಾಟ್‌ಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದರು.

ಸ್ಕ್ರೀನ್‌ಶಾಟ್‌ಗಳ ಪ್ರಕಾರ ಗ್ರಾಹಕ ವಿಕಾಶ್ ಅವರು, ತಮಗೆ ತಲುಪದ ಆರ್ಡರ್‌ಗೆ ಸಂಬಂಧಿಸಿದಂತೆ ರೆಸ್ಟೋರೆಂಟ್‌ನಿಂದ ಮರುಪಾವತಿ ಪಡೆಯಲು ಪ್ರಯತ್ನಿಸುತ್ತಿದ್ದರು. ಜೊಮೊಟೊ ಗ್ರಾಹಕ ಸೇವೆಯನ್ನು ಸಂಪರ್ಕಿಸಿ ಅವರಿಂದ ಮರುಪಾವತಿಗಾಗಿ ಕೋರಿದರು.

ಜೊಮೊಟೊ ಎಕ್ಸಿಕ್ಯೂಟಿವ್‌‌, “ಕರೆ ಮಾಡಿ ಸಂಪರ್ಕಿಸಲು ಐದು ಬಾರಿ ಯತ್ನಿಸಲಾಯಿತು. ಭಾಷೆ ಸಮಸ್ಯೆಯಿಂದಾಗಿ ಸಂವಹನ ಸಾಧ್ಯವಾಗಿಲ್ಲ” ಎಂದಿದ್ದಾರೆ. ಕಂಪನಿಯು ತಮಿಳುನಾಡಿನಲ್ಲಿ ಕೆಲಸ ಮಾಡುತ್ತಿದೆ.  ತಮಿಳು ಮಾತನಾಡುವ ವ್ಯಕ್ತಿಯನ್ನು ನೇಮಕ ಮಾಡಿಕೊಳ್ಳಬೇಕು ಎಂದು ವಿಕಾಸ್ ಹೇಳಿದ್ದಾರೆ. ಹೀಗೆ ಹೇಳಿದಾಗ, “ಹಿಂದಿ ನಮ್ಮ ರಾಷ್ಟ್ರೀಯ ಭಾಷೆ” ಮತ್ತು “ಪ್ರತಿಯೊಬ್ಬರೂ ಹಿಂದಿ ತಿಳಿದಿರುವುದು ಬಹಳ ಸಾಮಾನ್ಯವಾಗಿದೆ. ಇದು ನಿಮ್ಮ ಮಾಹಿತಿಗೆ” ಎಂದು ಎಕ್ಸಿಕ್ಯೂಟಿವ್ ಹೇಳಿದ್ದಾರೆ. ಇದು ವಿವಾದಕ್ಕೆ ಕಾರಣವಾಗಿದೆ.

ಅಂತಿಮವಾಗಿ ಎಕ್ಸಿಕ್ಯೂಟಿವ್‌ ಚಾಟ್‌ನಲ್ಲಿ, “ಉಂಟಾದ ತೊಂದರೆಗೆ ನಾವು ನಿಜವಾಗಿಯೂ ವಿಷಾದಿಸುತ್ತೇವೆ. ಆದರೆ ಈ ದುರದೃಷ್ಟಕರ ತಪ್ಪಿಗೆ ಕ್ಷಮೆಯಾಚಿಸುವುದನ್ನು ಹೊರತುಪಡಿಸಿ ನಾವು ನಿಮಗೆ ಯಾವುದೇ ಪರಿಹಾರವನ್ನು ನೀಡಲು ಸಾಧ್ಯವಿಲ್ಲ” ಎಂದಿದ್ದಾರೆ.

ವಿಕಾಸ್‌‌ಗೆ ಹಿಂದಿ ಗೊತ್ತಿಲ್ಲದ ಕಾರಣ ಮರುಪಾವತಿಯನ್ನು ಪೂರ್ಣಗೊಳಿಸಲು ಸಾಧ್ಯವಿಲ್ಲ ಎಂದು ಟ್ವೀಟ್ ಆರೋಪಿಸಿದೆ. ಕಂಪನಿಯನ್ನು ಉದ್ದೇಶಿಸಿ, “ನೀವು ಗ್ರಾಹಕರೊಂದಿಗೆ ಮಾತನಾಡುವ ರೀತಿಯಲ್ಲ” ಎಂದು ವಿಕಾಸ್‌ ತಿಳಿಸಿದ್ದಾರೆ.

ಟ್ವೀಟ್ ಮಾಡಿದ ತಕ್ಷಣ ವೈರಲ್ ಆಗಿದ್ದು, ಸಾವಿರಾರು ಮಂದಿ ಲೈಕ್‌ ಹಾಗೂ ರೀಟ್ವೀಟ್‌ ಮಾಡಿದ್ದಾರೆ. ಇದಲ್ಲದೆ, #Reject_Zomato ಮತ್ತು #StopHindiImposition ಎಂಬ ಹ್ಯಾಶ್‌ಟ್ಯಾಗ್‌ಗಳು ಸಾಮಾಜಿಕ ಮಾಧ್ಯಮದಲ್ಲಿ ಟ್ರೆಂಡ್‌ ಆಗಿವೆ.

ಧರಮ್‌ಪುರಿ ಸಂಸದ ಸೆಂಥಿಲ್‌ಕುಮಾರ್ ಕೂಡ ಟ್ವಿಟರ್‌ನಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ, ಹಿಂದಿ ಯಾವಾಗ ರಾಷ್ಟ್ರೀಯ ಭಾಷೆಯಾಯಿತು ಎಂದು ಕೇಳಿದ್ದಾರೆ. ಕಂಪನಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.

ಭಾರತೀಯ ಸಂವಿಧಾನದ 343ನೇ ವಿಧಿಯಲ್ಲಿ ವಿವರಿಸಿರುವ ಅಧಿಕೃತ ಭಾಷೆಗಳಲ್ಲಿ ಹಿಂದಿ ಒಂದು ಭಾಷೆಯಾಗಿದೆ. ಆದರೆ ಯಾವುದೇ ಭಾಷೆಯನ್ನು “ರಾಷ್ಟ್ರೀಯ ಭಾಷೆ” ಎಂದು ಘೋಷಿಸಲಾಗಿಲ್ಲ. ಇತರ ಪ್ರಾದೇಶಿಕ ಭಾಷೆಗಳನ್ನು ಮಾತನಾಡುವ ಜನರ ಮೇಲೆ ಹಿಂದಿ ಹೇರಿಕೆಯನ್ನು ದಕ್ಷಿಣ ಭಾರತದ ರಾಜ್ಯಗಳು ಮೊದಲಿನಿಂದಲೂ ವಿರೋಧಿಸಿವೆ.

ಜೊಮೊಟೊ ಕಂಪನಿಯು, ತಮ್ಮ ಏಜೆಂಟ್‌ನ ವರ್ತನೆಗೆ ಕ್ಷಮೆಯಾಚಿಸಿದೆ. ತಮಿಳುನಾಡು ಜನತೆಯಲ್ಲಿ ಕ್ಷಮೆ ಕೋರಿ ಜೊಮೊಟೊ ಸಂಸ್ಥೆಯ ತನ್ನ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಟ್ವೀಟ್ ಮಾಡಿದೆ. ಇಂಗ್ಲಿಷ್‌ ಹಾಗೂ ತಮಿಳು ಭಾಷೆಯಲ್ಲಿ ಕ್ಷಮೆ ಕೋರಲಾಗಿದೆ.

“ನಮ್ಮ ವೈವಿಧ್ಯಮಯ ಸಂಸ್ಕೃತಿಯ ಕಡೆಗೆ ನಿರ್ಲಕ್ಷ್ಯ ವಹಿಸಿದ್ದಕ್ಕಾಗಿ ಏಜೆಂಟರನ್ನು ಕೆಲಸದಿಂದ ತೆಗೆಯಲಾಗಿದೆ. ಆ ಏಜೆಂಟರ ನಡವಳಿಕೆಯು ಜೊಮೊಟೊ ಕಂಪನಿಯ “ಸೂಕ್ಷ್ಮತೆಯ ತತ್ವಗಳಿಗೆ” ವಿರುದ್ಧವಾಗಿದೆ ಎಂದು ಹೇಳಿಕೆ ತಿಳಿಸಿದೆ.

ಈ ಗ್ರಾಹಕ ಏಜೆಂಟ್‌ನ ಹೇಳಿಕೆಗಳು ಸಂಸ್ಥೆಯನ್ನು ಪ್ರತಿನಿಧಿಸುವುದಿಲ್ಲ. ನಮ್ಮ ಸಂಸ್ಥೆಯು ಭಾಷೆ ಮತ್ತು ವೈವಿಧ್ಯತೆ ಕಡೆಗಿದೆ ಎಂದಿದೆ.

“ತಮಿಳು ವರ್ಷನ್‌ ಆಪ್‌‌ಅನ್ನು ಜೊಮೊಟೊ ಸಂಸ್ಥೆ ಅಭಿವೃದ್ಧಿಪಡಿಸುತ್ತಿದೆ. ತಮಿಳಿನಲ್ಲಿಯೇ ನಾವು ಈಗಾಗಲೇ ವ್ಯವಹಿಸುತ್ತಿದ್ದೇವೆ. ತಮಿಳು ಕಾಲ್‌ ಸೆಂಟರ್‌‌ಅನ್ನು ಕೊಯಮತ್ತೂರಿನಲ್ಲಿ ತೆರೆಯಲು ಸಿದ್ಧತೆ ನಡೆದಿದೆ” ಎಂದು ಹೇಳಿದೆ.


ಇದನ್ನೂ ಓದಿರಿ: ಹಿಂದಿ ಹೇರಿಕೆ ನಿಲ್ಲಿಸಿ: ಟ್ವಿಟರ್‌ನಲ್ಲಿ ಗಣ್ಯರು, ಕಲಾವಿದರಿಂದ StopHindiImposition ಟ್ವೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...