Homeಮುಖಪುಟಜೊಮೊಟೊ ಏಜೆಂಟ್‌ ಹಿಂದಿ ಪ್ರೀತಿ: ತೀವ್ರ ಆಕ್ಷೇಪದ ಬಳಿಕ ಕಂಪನಿ ಕ್ಷಮೆಯಾಚನೆ

ಜೊಮೊಟೊ ಏಜೆಂಟ್‌ ಹಿಂದಿ ಪ್ರೀತಿ: ತೀವ್ರ ಆಕ್ಷೇಪದ ಬಳಿಕ ಕಂಪನಿ ಕ್ಷಮೆಯಾಚನೆ

- Advertisement -
- Advertisement -

ಗ್ರಾಹಕರೊಬ್ಬರ ಜೊತೆ ಆನ್‌ಲೈನ್‌ ಡೆಲಿವರಿ ಸಂಸ್ಥೆಯಾದ ಜೊಮೊಟೊದ ಗ್ರಾಹಕ ಸೇವಾ ಎಕ್ಸಿಕ್ಯೂಟಿವ್‌‌ ನಡೆಸಿದ ಸಂಭಾಷಣೆಯು ಟ್ವಿಟರ್‌ನಲ್ಲಿ ವೈರಲ್‌ ಆದ ಬಳಿಕ, ಜೊಮೊಟೊ ಕಂಪನಿಯು ಮಂಗಳವಾರ ಕ್ಷಮೆಯಾಚಿಸಿದೆ.

ಮರುಪಾವತಿಗಾಗಿ ಯತ್ನಿಸಿದ ವಿಕಾಸ್‌ ಅವರು ಜೊಮೊಟೊ ಗ್ರಾಹಕ ಸೇವಾ ಎಕ್ಸಿಕ್ಯೂಟಿವ್‌‌ ಜೊತೆ ನಡೆಸಿದ ಸಂವಹನದ ಸ್ಕ್ರೀನ್‌ ಶಾಟ್‌ಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದರು.

ಸ್ಕ್ರೀನ್‌ಶಾಟ್‌ಗಳ ಪ್ರಕಾರ ಗ್ರಾಹಕ ವಿಕಾಶ್ ಅವರು, ತಮಗೆ ತಲುಪದ ಆರ್ಡರ್‌ಗೆ ಸಂಬಂಧಿಸಿದಂತೆ ರೆಸ್ಟೋರೆಂಟ್‌ನಿಂದ ಮರುಪಾವತಿ ಪಡೆಯಲು ಪ್ರಯತ್ನಿಸುತ್ತಿದ್ದರು. ಜೊಮೊಟೊ ಗ್ರಾಹಕ ಸೇವೆಯನ್ನು ಸಂಪರ್ಕಿಸಿ ಅವರಿಂದ ಮರುಪಾವತಿಗಾಗಿ ಕೋರಿದರು.

ಜೊಮೊಟೊ ಎಕ್ಸಿಕ್ಯೂಟಿವ್‌‌, “ಕರೆ ಮಾಡಿ ಸಂಪರ್ಕಿಸಲು ಐದು ಬಾರಿ ಯತ್ನಿಸಲಾಯಿತು. ಭಾಷೆ ಸಮಸ್ಯೆಯಿಂದಾಗಿ ಸಂವಹನ ಸಾಧ್ಯವಾಗಿಲ್ಲ” ಎಂದಿದ್ದಾರೆ. ಕಂಪನಿಯು ತಮಿಳುನಾಡಿನಲ್ಲಿ ಕೆಲಸ ಮಾಡುತ್ತಿದೆ.  ತಮಿಳು ಮಾತನಾಡುವ ವ್ಯಕ್ತಿಯನ್ನು ನೇಮಕ ಮಾಡಿಕೊಳ್ಳಬೇಕು ಎಂದು ವಿಕಾಸ್ ಹೇಳಿದ್ದಾರೆ. ಹೀಗೆ ಹೇಳಿದಾಗ, “ಹಿಂದಿ ನಮ್ಮ ರಾಷ್ಟ್ರೀಯ ಭಾಷೆ” ಮತ್ತು “ಪ್ರತಿಯೊಬ್ಬರೂ ಹಿಂದಿ ತಿಳಿದಿರುವುದು ಬಹಳ ಸಾಮಾನ್ಯವಾಗಿದೆ. ಇದು ನಿಮ್ಮ ಮಾಹಿತಿಗೆ” ಎಂದು ಎಕ್ಸಿಕ್ಯೂಟಿವ್ ಹೇಳಿದ್ದಾರೆ. ಇದು ವಿವಾದಕ್ಕೆ ಕಾರಣವಾಗಿದೆ.

ಅಂತಿಮವಾಗಿ ಎಕ್ಸಿಕ್ಯೂಟಿವ್‌ ಚಾಟ್‌ನಲ್ಲಿ, “ಉಂಟಾದ ತೊಂದರೆಗೆ ನಾವು ನಿಜವಾಗಿಯೂ ವಿಷಾದಿಸುತ್ತೇವೆ. ಆದರೆ ಈ ದುರದೃಷ್ಟಕರ ತಪ್ಪಿಗೆ ಕ್ಷಮೆಯಾಚಿಸುವುದನ್ನು ಹೊರತುಪಡಿಸಿ ನಾವು ನಿಮಗೆ ಯಾವುದೇ ಪರಿಹಾರವನ್ನು ನೀಡಲು ಸಾಧ್ಯವಿಲ್ಲ” ಎಂದಿದ್ದಾರೆ.

ವಿಕಾಸ್‌‌ಗೆ ಹಿಂದಿ ಗೊತ್ತಿಲ್ಲದ ಕಾರಣ ಮರುಪಾವತಿಯನ್ನು ಪೂರ್ಣಗೊಳಿಸಲು ಸಾಧ್ಯವಿಲ್ಲ ಎಂದು ಟ್ವೀಟ್ ಆರೋಪಿಸಿದೆ. ಕಂಪನಿಯನ್ನು ಉದ್ದೇಶಿಸಿ, “ನೀವು ಗ್ರಾಹಕರೊಂದಿಗೆ ಮಾತನಾಡುವ ರೀತಿಯಲ್ಲ” ಎಂದು ವಿಕಾಸ್‌ ತಿಳಿಸಿದ್ದಾರೆ.

ಟ್ವೀಟ್ ಮಾಡಿದ ತಕ್ಷಣ ವೈರಲ್ ಆಗಿದ್ದು, ಸಾವಿರಾರು ಮಂದಿ ಲೈಕ್‌ ಹಾಗೂ ರೀಟ್ವೀಟ್‌ ಮಾಡಿದ್ದಾರೆ. ಇದಲ್ಲದೆ, #Reject_Zomato ಮತ್ತು #StopHindiImposition ಎಂಬ ಹ್ಯಾಶ್‌ಟ್ಯಾಗ್‌ಗಳು ಸಾಮಾಜಿಕ ಮಾಧ್ಯಮದಲ್ಲಿ ಟ್ರೆಂಡ್‌ ಆಗಿವೆ.

ಧರಮ್‌ಪುರಿ ಸಂಸದ ಸೆಂಥಿಲ್‌ಕುಮಾರ್ ಕೂಡ ಟ್ವಿಟರ್‌ನಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ, ಹಿಂದಿ ಯಾವಾಗ ರಾಷ್ಟ್ರೀಯ ಭಾಷೆಯಾಯಿತು ಎಂದು ಕೇಳಿದ್ದಾರೆ. ಕಂಪನಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.

ಭಾರತೀಯ ಸಂವಿಧಾನದ 343ನೇ ವಿಧಿಯಲ್ಲಿ ವಿವರಿಸಿರುವ ಅಧಿಕೃತ ಭಾಷೆಗಳಲ್ಲಿ ಹಿಂದಿ ಒಂದು ಭಾಷೆಯಾಗಿದೆ. ಆದರೆ ಯಾವುದೇ ಭಾಷೆಯನ್ನು “ರಾಷ್ಟ್ರೀಯ ಭಾಷೆ” ಎಂದು ಘೋಷಿಸಲಾಗಿಲ್ಲ. ಇತರ ಪ್ರಾದೇಶಿಕ ಭಾಷೆಗಳನ್ನು ಮಾತನಾಡುವ ಜನರ ಮೇಲೆ ಹಿಂದಿ ಹೇರಿಕೆಯನ್ನು ದಕ್ಷಿಣ ಭಾರತದ ರಾಜ್ಯಗಳು ಮೊದಲಿನಿಂದಲೂ ವಿರೋಧಿಸಿವೆ.

ಜೊಮೊಟೊ ಕಂಪನಿಯು, ತಮ್ಮ ಏಜೆಂಟ್‌ನ ವರ್ತನೆಗೆ ಕ್ಷಮೆಯಾಚಿಸಿದೆ. ತಮಿಳುನಾಡು ಜನತೆಯಲ್ಲಿ ಕ್ಷಮೆ ಕೋರಿ ಜೊಮೊಟೊ ಸಂಸ್ಥೆಯ ತನ್ನ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಟ್ವೀಟ್ ಮಾಡಿದೆ. ಇಂಗ್ಲಿಷ್‌ ಹಾಗೂ ತಮಿಳು ಭಾಷೆಯಲ್ಲಿ ಕ್ಷಮೆ ಕೋರಲಾಗಿದೆ.

“ನಮ್ಮ ವೈವಿಧ್ಯಮಯ ಸಂಸ್ಕೃತಿಯ ಕಡೆಗೆ ನಿರ್ಲಕ್ಷ್ಯ ವಹಿಸಿದ್ದಕ್ಕಾಗಿ ಏಜೆಂಟರನ್ನು ಕೆಲಸದಿಂದ ತೆಗೆಯಲಾಗಿದೆ. ಆ ಏಜೆಂಟರ ನಡವಳಿಕೆಯು ಜೊಮೊಟೊ ಕಂಪನಿಯ “ಸೂಕ್ಷ್ಮತೆಯ ತತ್ವಗಳಿಗೆ” ವಿರುದ್ಧವಾಗಿದೆ ಎಂದು ಹೇಳಿಕೆ ತಿಳಿಸಿದೆ.

ಈ ಗ್ರಾಹಕ ಏಜೆಂಟ್‌ನ ಹೇಳಿಕೆಗಳು ಸಂಸ್ಥೆಯನ್ನು ಪ್ರತಿನಿಧಿಸುವುದಿಲ್ಲ. ನಮ್ಮ ಸಂಸ್ಥೆಯು ಭಾಷೆ ಮತ್ತು ವೈವಿಧ್ಯತೆ ಕಡೆಗಿದೆ ಎಂದಿದೆ.

“ತಮಿಳು ವರ್ಷನ್‌ ಆಪ್‌‌ಅನ್ನು ಜೊಮೊಟೊ ಸಂಸ್ಥೆ ಅಭಿವೃದ್ಧಿಪಡಿಸುತ್ತಿದೆ. ತಮಿಳಿನಲ್ಲಿಯೇ ನಾವು ಈಗಾಗಲೇ ವ್ಯವಹಿಸುತ್ತಿದ್ದೇವೆ. ತಮಿಳು ಕಾಲ್‌ ಸೆಂಟರ್‌‌ಅನ್ನು ಕೊಯಮತ್ತೂರಿನಲ್ಲಿ ತೆರೆಯಲು ಸಿದ್ಧತೆ ನಡೆದಿದೆ” ಎಂದು ಹೇಳಿದೆ.


ಇದನ್ನೂ ಓದಿರಿ: ಹಿಂದಿ ಹೇರಿಕೆ ನಿಲ್ಲಿಸಿ: ಟ್ವಿಟರ್‌ನಲ್ಲಿ ಗಣ್ಯರು, ಕಲಾವಿದರಿಂದ StopHindiImposition ಟ್ವೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...