Homeಮುಖಪುಟಹುಲಿಗಳಿಗೆ ಗೋಮಾಂಸ ನೀಡುವುದಕ್ಕೆ ಬಿಜೆಪಿ ಪ್ರತಿಭಟನೆ: ಹಾಗಾದರೆ ಇಡ್ಲಿ-ಸಾಂಬಾರ್ ಕೊಡಿ ಎಂದ ನೆಟ್ಟಿಗರು!

ಹುಲಿಗಳಿಗೆ ಗೋಮಾಂಸ ನೀಡುವುದಕ್ಕೆ ಬಿಜೆಪಿ ಪ್ರತಿಭಟನೆ: ಹಾಗಾದರೆ ಇಡ್ಲಿ-ಸಾಂಬಾರ್ ಕೊಡಿ ಎಂದ ನೆಟ್ಟಿಗರು!

ಇನ್ನು ಮುಂದೆ ಸಾತ್ವಿಕ ಹುಲಿಗಳಿಗೆ ಹಸುವಿನ ಸಗಣಿ ಮತ್ತು ಗೋಮೂತ್ರ ನೀಡಿ, ಹುಲಿಗಳಿಗೆ ಏಕಾದಶಿ ವ್ರತ ಮಾಡಿಸಿ, ಪಾರ್ಲೇಜಿ ಬಿಸ್ಕೆಟ್ ಕೊಡಿ" ಎನ್ನುವ ತರಾವರಿ ಕಮೆಂಟ್‌ಗಳು ವ್ಯಕ್ತವಾಗಿವೆ.

- Advertisement -
- Advertisement -

ಮೃಗಾಲಯಗಳಲ್ಲಿರುವ ಮಾಂಸಾಹಾರಿ ಪ್ರಾಣಿಗಳಿಗೆ, ಅದರಲ್ಲೂ ವಿಶೇಷವಾಗಿ ಹುಲಿಗಳಿಗೆ ಗೋಮಾಂಸ ನೀಡಬಾರದೆಂದು ಅಸ್ಸಾಂನ ಬಿಜೆಪಿ ನಾಯಕ ಸತ್ಯರಂಜನ್ ಬೋರಾ ಪ್ರತಿಭಟಿಸುತ್ತಿದ್ದಾರೆ.

ಸೋಮವಾರ, ಗುವಾಹಟಿ ಮೃಗಾಲಯದ ಮುಖ್ಯ ದ್ವಾರದಲ್ಲಿ, ಹುಲಿಗಳಿಗೆ ಗೋಮಾಂಸವನ್ನು ಸಾಗಿಸುವ ವಾಹನಗಳನ್ನು ಸತ್ಯರಂಜನ್ ಬೋರಾ ನೇತೃತ್ವದ ಪ್ರತಿಭಟನಾಕಾರರ ಸಣ್ಣ ಗುಂಪೊಂದು ಗೋಮಾಂಸ ವಿರೋಧಿ ಕಾರ್ಯಕರ್ತರು ಎಂದು ಹೇಳಿಕೊಂಡು ತಡೆದಿದ್ದರು. ಆದರೆ, ಮೃಗಾಲಯದ ಅಧಿಕಾರಿಗಳು ಪೊಲೀಸರ ಸಹಾಯದಿಂದ ಅವರನ್ನು ಚದುರಿಸುವಲ್ಲಿ ಯಶಸ್ವಿಯಾದರು ಎಂದು ಅಧಿಕೃತ ಮೂಲಗಳು ತಿಳಿಸಿವೆ. ಗೋಹತ್ಯೆಯನ್ನು ನಿಷೇಧಿಸುವಂತೆ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದ್ದಾರೆ.

ಮೃಗಾಲಯದ ಹುಲಿಗಳಿಗೆ ಗೋಮಾಂಸ ನೀಡಬಾರದು: ಅಸ್ಸಾಂ ಬಿಜೆಪಿಗರ ಪ್ರತಿಭಟನೆ
PC: Guwahati Plus

ಇದನ್ನೂ ಓದಿ: ಅದು ಗೋಮಾಂಸವಲ್ಲ ಎಂದು ಬೇಡಿಕೊಂಡೆ, ಆದರೂ ಹೊಡೆದರು: ಲುಕ್ಮನ್ ಖಾನ್

“ಹಿಂದೂ ಸಮಾಜದಲ್ಲಿ ನಾವು ಹಸುವಿನ ರಕ್ಷಣೆಗೆ ಪ್ರಾಮುಖ್ಯತೆ ನೀಡುತ್ತೇವೆ. ಆದರೆ ಮೃಗಾಲಯದಲ್ಲಿನ ಮಾಂಸಾಹಾರಿ ಪ್ರಾಣಿಗಳಿಗೆ ಪ್ರಧಾನ ಆಹಾರ ಗೋಮಾಂಸವಾಗಿದ್ದು ಸರ್ಕಾರವೇ ಪೂರೈಸುತ್ತಿದೆ. ನಮ್ಮ ಆಕ್ಷೇಪವೆಂದರೆ, ಗೋಮಾಂಸವನ್ನೇ ಏಕೆ ನೀಡಬೇಕು? ಬೇರೆ ಮಾಂಸ ಏಕಿಲ್ಲ?” ಎಂದು ಸತ್ಯರಂಜನ್ ಬೋರಾ ಸುದ್ದಿಗಾರರನ್ನು ಪ್ರಶ್ನಿಸಿದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: Fact Check: ಭಾರತದ ಮ್ಯಾಗಿ ನೂಡಲ್ಸ್ ನಲ್ಲಿ ಗೋಮಾಂಸವಿದೆಯೆ?

ಇದಕ್ಕೆ ಪರಿಹಾರ ನೀಡಿದ ಬಿಜೆಪಿ ಕಾರ್ಯಕರ್ತರು, “ಮೃಗಾಲಯದಲ್ಲಿರುವ ಸಾಂಬಾರ್ ಜಿಂಕೆಗಳನ್ನು ಮಾಂಸಾಹಾರಿ ಪ್ರಾಣಿಗಳಿಗೆ ಆಹಾರಕ್ಕಾಗಿ ಬಳಸಿದರೆ ಮೃಗಾಲಯವು ಸ್ವಯಂಪೂರ್ಣತೆಯನ್ನು ಸಾಧಿಸಬಹುದು” ಎಂದು ಹೇಳಿದರು.

“ಮಾಂಸವನ್ನು ಸಾಗಿಸುವ ವಾಹನಗಳನ್ನು ದುಷ್ಕರ್ಮಿಗಳು ತಡೆದಿದ್ದರು. ಅವರನ್ನು ಚದುರಿಸಲು ನಾವು ಪೊಲೀಸರನ್ನು ಕರೆಸಿದ್ದೇವೆ. ಮಾಂಸಾಹಾರಿ ಪ್ರಾಣಿಗಳಿಗೆ ಆಹಾರವನ್ನು ಕೇಂದ್ರ ಮೃಗಾಲಯ ಪ್ರಾಧಿಕಾರವು ಶಿಫಾರಸು ಮಾಡಿದೆ. ಕಾನೂನಿನ ಪ್ರಕಾರ ನಾವು ಮೃಗಾಲಯದ ಪ್ರಾಣಿಗಳ ಮಾಂಸವನ್ನು ಮಾಂಸಾಹಾರಿ ಪ್ರಾಣಿಗಳಿಗೆ ನೀಡಲು ಸಾಧ್ಯವಿಲ್ಲ. ಅಲ್ಲದೆ, ಸಾಂಬಾರ್ ಜಿಂಕೆ ಕಾಡು ಪ್ರಾಣಿಯಾಗಿದ್ದು, ನಾವು ಕಾಡು ಪ್ರಾಣಿಗಳನ್ನು ಕೊಲ್ಲಲು ಸಾಧ್ಯವಿಲ್ಲ” ಎಂದು ಮೃಗಾಲಯದ ವ್ಯಾಪ್ತಿಗೆ ಒಳಪಡುವ ವಿಭಾಗೀಯ ಅರಣ್ಯ ಅಧಿಕಾರಿ ತೇಜಸ್ ಮಾರಿಸ್ವಾಮಿ ಹೇಳಿದರು.

ಇದನ್ನೂ ಓದಿ: ಮತ್ತೆ ಶುರುವಾಯಿತು ಗೋಹತ್ಯೆ ನಿಷೇಧ ಕಾನೂನು ಚರ್ಚೆ: ಗೋಹತ್ಯೆ ಅಪರಾಧವೆಂದ ಸಚಿವ ಸುಧಾಕರ್

ಸಾಂಬಾರ್ ಜಿಂಕೆಗಳನ್ನು ಇಂಟರ್‌ನ್ಯಾಷನಲ್ ಯೂನಿಯನ್ ಫಾರ್ ಕನ್ಸರ್ವೇಶನ್ ಆಫ್ ನೇಚರ್ (ಐಯುಸಿಎನ್) ಪಟ್ಟಿಗೆ ಸೇರಿಸಿದ್ದು, 1972 ರ ವನ್ಯಜೀವಿ (ಸಂರಕ್ಷಣೆ) ಕಾಯ್ದೆಯ ಅನುಸೂಚಿ -3ರ ಅಡಿಯಲ್ಲಿ ಅವುಗಳನ್ನು ರಕ್ಷಿಸಲಾಗಿದೆ.

ಇದರ ಕುರಿತು ಅಸ್ಸಾಂ ಅರಣ್ಯ ಸಚಿವ ಪರಿಮಲ್ ಸುಕ್ಲಾಬೈದ್ಯ ಮಾತನಾಡಿ, “ಪ್ರಾಣಿಗಳಿಗೆ ಗೋಮಾಂಸವನ್ನು ನೀಡಲಾಗುತ್ತಿದೆ. ಏಕೆಂದರೆ ಅದು ಅವುಗಳ ಪೋಷಣೆಗೆ ಅಗತ್ಯವಾಗಿದೆ. ಕೆಲವು ರಾಜ್ಯಗಳು ಎಮ್ಮೆ ಮಾಂಸವನ್ನು ಮಾಂಸಾಹಾರಿ ಪ್ರಾಣಿಗಳ ಆಹಾರಕ್ಕಾಗಿ ಆರಿಸಿಕೊಂಡವು. ಆದರೆ ಅಸ್ಸಾಂನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಎಮ್ಮೆಗಳು ಇಲ್ಲದಿರುವುದರಿಂದ, ಕೇಂದ್ರದ ಮಾರ್ಗಸೂಚಿಯ ಪ್ರಕಾರ ಗೋಮಾಂಸವನ್ನು ನೀಡಲಾಗುತ್ತಿದೆ” ಎಂದು ಹೇಳಿದರು.

ಬಿಜೆಪಿ ಕಾರ್ಯಕರ್ತರ ಈ ವರ್ತನೆಯು ಸಾಮಾಜಿಕ ಮಾಧ್ಯಮಗಳಲ್ಲಿ ಅಪಹಾಸ್ಯಕ್ಕೊಳಗಾಗಿದ್ದು, ಫೇಸ್‌ಬುಕ್ ಬಳಕೆದಾರರೊಬ್ಬರು, “ಹೌದು, ಇನ್ನುಮುಂದೆ ಆಡಳಿತವು ಮೃಗಾಲಯದಲ್ಲಿನ ಪ್ರಾಣಿಗಳಿಗೆ ಇಡ್ಲಿ-ಸಾಂಬಾರ್-ಮಸಾಲೆವಡೆ ನೀಡಲಿ” ಎಂದು ಬರೆದುಕೊಂಡಿದ್ದಾರೆ.

ಟ್ವಿಟ್ಟರ್‌ನಲ್ಲಿ ಈ ಬಿಜೆಪಿಗರ ಈ ಹೇಳಿಕೆಗೆ ವಿಭಿನ್ನವಾಗಿ ಪ್ರತಿಕ್ರಿಯಿಸಿದ್ದು, “ಇನ್ನು ಮುಂದೆ ಸಾತ್ವಿಕ ಹುಲಿಗಳಿಗೆ ಹಸುವಿನ ಸಗಣಿ ಮತ್ತು ಗೋಮೂತ್ರ ನೀಡಿ, ಹುಲಿಗಳಿಗೆ ಏಕಾದಶಿ ವ್ರತ ಮಾಡಿಸಿ, ಪಾರ್ಲೇಜಿ ಬಿಸ್ಕೆಟ್ ಕೊಡಿ” ಎನ್ನುವ ತರಾವರಿ ಕಮೆಂಟ್‌ಗಳನ್ನು ಇಲ್ಲಿ ಕ್ಲಿಕ್ ಮಾಡಿ ನೋಡಬಹುದು.


ಇದನ್ನೂ ಓದಿ: ಸುತ್ತಿಗೆಯಿಂದ ಕ್ರೂರವಾಗಿ ಥಳಿಸಿದ ಗೋರಕ್ಷಕರು: ಕೈಕಟ್ಟಿ ನೋಡುತ್ತಿದ್ದ ಪೊಲೀಸರು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...

ಚೆನ್ನೈನಲ್ಲಿ ಮಾಸಿಕ ಸಹಾಯಧನ ಹೆಚ್ಚಿಸುವಂತೆ ಹೋರಾಟ ನಡೆಸುತ್ತಿದ್ದ ಅಂಗವಿಕಲರ ಮೇಲೆ ಪೊಲೀಸ್ ದೌರ್ಜನ್ಯದ ಆರೋಪ

ಚೆನ್ನೈ: ರಾಜ್ಯ ಸರ್ಕಾರದಿಂದ ನೀಡುತ್ತಿರುವ ಮಾಸಿಕ ಸಹಾಯಧನ ಹೆಚ್ಚಿಸುವಂತೆ ಒತ್ತಾಯಿಸಿ ಚೆನ್ನೈನಲ್ಲಿ ಅಂಗವಿಕಲರು ನಡೆಸುತ್ತಿರುವ ಪ್ರತಿಭಟನೆ ಆರನೇ ದಿನಕ್ಕೆ ಕಾಲಿಟ್ಟಿದೆ.  ಅಂಗವಿಕಲರು ನಡೆಸುತ್ತಿದ್ದ ಈ ಪ್ರತಿಭಟನೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಹಲವಾರು ಪ್ರತಿಭಟನಾಕಾರರನ್ನು...

ರಾಜ್ಯಸಭೆ 37 ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ; ವೇಳಾಪಟ್ಟಿ ಪ್ರಕಟಿಸಿದ ಚುನಾವಣಾ ಆಯೋಗ

10 ರಾಜ್ಯಗಳಿಂದ ಖಾಲಿ ಇರುವ 37 ಸ್ಥಾನಗಳನ್ನು ಭರ್ತಿ ಮಾಡಲು ರಾಜ್ಯಸಭೆಯ ದ್ವೈವಾರ್ಷಿಕ ಚುನಾವಣೆಗೆ ಭಾರತೀಯ ಚುನಾವಣಾ ಆಯೋಗ (ಇಸಿಐ) ಬುಧವಾರ ವೇಳಾಪಟ್ಟಿ ಪ್ರಕಟಿಸಿದೆ. ಆಯೋಗದ ಪ್ರಕಾರ, ಮಾರ್ಚ್ 16 ರಂದು ಬೆಳಿಗ್ಗೆ 9:00...

ಹಿಂದೂ ಕುಟುಂಬಗಳು ಕನಿಷ್ಠ ಮೂರು ಮಕ್ಕಳನ್ನು ಹೊಂದಬೇಕು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಹಿಂದೂ ಕುಟುಂಬಗಳು ಕನಿಷ್ಠ ಮೂರು ಮಕ್ಕಳನ್ನು ಹೊಂದಬೇಕು ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕರೆ ನೀಡಿದ್ದಾರೆ. ಮಂಗಳವಾರ ಲಕ್ನೋದ ಸರಸ್ವತಿ ಶಿಶು ಮಂದಿರದಲ್ಲಿ ನಡೆದ ಸಾಮಾಜಿಕ ಸಾಮರಸ್ಯ ಕಾರ್ಯಕ್ರಮದಲ್ಲಿ ಮಾತನಾಡಿದ ಭಾಗವತ್, ಹಿಂದೂ...

5% ಮುಸ್ಲಿಂ ಮೀಸಲಾತಿ ಪ್ರಕ್ರಿಯೆ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರ

ರಾಜ್ಯದಲ್ಲಿ ಮುಸ್ಲಿಂ ಮೀಸಲಾತಿಗಾಗಿ ಜಾತಿ ಪರಿಶೀಲನೆ ಮತ್ತು ಪ್ರಮಾಣೀಕರಣ ಪತ್ರಗಳನ್ನು ನೀಡುವ ಪ್ರಕ್ರಿಯೆಯನ್ನು ಮಹಾರಾಷ್ಟ್ರ ಸರ್ಕಾರ ಮಂಗಳವಾರ (ಫೆ.17) ರದ್ದುಗೊಳಿಸಿ ಆದೇಶ ಹೊರಡಿಸಿದೆ. ಇದು ಪ್ರಸ್ತುತ ಪರಿಸ್ಥಿತಿಯಲ್ಲಿ ಯಾವುದೇ ತಕ್ಷಣದ ಬದಲಾವಣೆಯನ್ನು ತರದಿದ್ದರೂ,...

‘ಆರ್‌ಎಸ್‌ಎಸ್ ನೋಂದಣಿಗೆ ಕಾಂಗ್ರೆಸ್ ಕಾನೂನು ತರಲಿದೆ’: ತಮ್ಮ ಹೇಳಿಕೆಗಳನ್ನು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮಂಗಳವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಕುರಿತ ತಮ್ಮ ಹೇಳಿಕೆಗಳನ್ನು ಮತ್ತು ಕರಾವಳಿ ಕರ್ನಾಟಕದ ಹೂಡಿಕೆಗಳ ಮೇಲೆ ಕೋಮು ಉದ್ವಿಗ್ನತೆ ಪರಿಣಾಮ...