Homeಮುಖಪುಟಹುಲಿಗಳಿಗೆ ಗೋಮಾಂಸ ನೀಡುವುದಕ್ಕೆ ಬಿಜೆಪಿ ಪ್ರತಿಭಟನೆ: ಹಾಗಾದರೆ ಇಡ್ಲಿ-ಸಾಂಬಾರ್ ಕೊಡಿ ಎಂದ ನೆಟ್ಟಿಗರು!

ಹುಲಿಗಳಿಗೆ ಗೋಮಾಂಸ ನೀಡುವುದಕ್ಕೆ ಬಿಜೆಪಿ ಪ್ರತಿಭಟನೆ: ಹಾಗಾದರೆ ಇಡ್ಲಿ-ಸಾಂಬಾರ್ ಕೊಡಿ ಎಂದ ನೆಟ್ಟಿಗರು!

ಇನ್ನು ಮುಂದೆ ಸಾತ್ವಿಕ ಹುಲಿಗಳಿಗೆ ಹಸುವಿನ ಸಗಣಿ ಮತ್ತು ಗೋಮೂತ್ರ ನೀಡಿ, ಹುಲಿಗಳಿಗೆ ಏಕಾದಶಿ ವ್ರತ ಮಾಡಿಸಿ, ಪಾರ್ಲೇಜಿ ಬಿಸ್ಕೆಟ್ ಕೊಡಿ" ಎನ್ನುವ ತರಾವರಿ ಕಮೆಂಟ್‌ಗಳು ವ್ಯಕ್ತವಾಗಿವೆ.

- Advertisement -
- Advertisement -

ಮೃಗಾಲಯಗಳಲ್ಲಿರುವ ಮಾಂಸಾಹಾರಿ ಪ್ರಾಣಿಗಳಿಗೆ, ಅದರಲ್ಲೂ ವಿಶೇಷವಾಗಿ ಹುಲಿಗಳಿಗೆ ಗೋಮಾಂಸ ನೀಡಬಾರದೆಂದು ಅಸ್ಸಾಂನ ಬಿಜೆಪಿ ನಾಯಕ ಸತ್ಯರಂಜನ್ ಬೋರಾ ಪ್ರತಿಭಟಿಸುತ್ತಿದ್ದಾರೆ.

ಸೋಮವಾರ, ಗುವಾಹಟಿ ಮೃಗಾಲಯದ ಮುಖ್ಯ ದ್ವಾರದಲ್ಲಿ, ಹುಲಿಗಳಿಗೆ ಗೋಮಾಂಸವನ್ನು ಸಾಗಿಸುವ ವಾಹನಗಳನ್ನು ಸತ್ಯರಂಜನ್ ಬೋರಾ ನೇತೃತ್ವದ ಪ್ರತಿಭಟನಾಕಾರರ ಸಣ್ಣ ಗುಂಪೊಂದು ಗೋಮಾಂಸ ವಿರೋಧಿ ಕಾರ್ಯಕರ್ತರು ಎಂದು ಹೇಳಿಕೊಂಡು ತಡೆದಿದ್ದರು. ಆದರೆ, ಮೃಗಾಲಯದ ಅಧಿಕಾರಿಗಳು ಪೊಲೀಸರ ಸಹಾಯದಿಂದ ಅವರನ್ನು ಚದುರಿಸುವಲ್ಲಿ ಯಶಸ್ವಿಯಾದರು ಎಂದು ಅಧಿಕೃತ ಮೂಲಗಳು ತಿಳಿಸಿವೆ. ಗೋಹತ್ಯೆಯನ್ನು ನಿಷೇಧಿಸುವಂತೆ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದ್ದಾರೆ.

ಮೃಗಾಲಯದ ಹುಲಿಗಳಿಗೆ ಗೋಮಾಂಸ ನೀಡಬಾರದು: ಅಸ್ಸಾಂ ಬಿಜೆಪಿಗರ ಪ್ರತಿಭಟನೆ
PC: Guwahati Plus

ಇದನ್ನೂ ಓದಿ: ಅದು ಗೋಮಾಂಸವಲ್ಲ ಎಂದು ಬೇಡಿಕೊಂಡೆ, ಆದರೂ ಹೊಡೆದರು: ಲುಕ್ಮನ್ ಖಾನ್

“ಹಿಂದೂ ಸಮಾಜದಲ್ಲಿ ನಾವು ಹಸುವಿನ ರಕ್ಷಣೆಗೆ ಪ್ರಾಮುಖ್ಯತೆ ನೀಡುತ್ತೇವೆ. ಆದರೆ ಮೃಗಾಲಯದಲ್ಲಿನ ಮಾಂಸಾಹಾರಿ ಪ್ರಾಣಿಗಳಿಗೆ ಪ್ರಧಾನ ಆಹಾರ ಗೋಮಾಂಸವಾಗಿದ್ದು ಸರ್ಕಾರವೇ ಪೂರೈಸುತ್ತಿದೆ. ನಮ್ಮ ಆಕ್ಷೇಪವೆಂದರೆ, ಗೋಮಾಂಸವನ್ನೇ ಏಕೆ ನೀಡಬೇಕು? ಬೇರೆ ಮಾಂಸ ಏಕಿಲ್ಲ?” ಎಂದು ಸತ್ಯರಂಜನ್ ಬೋರಾ ಸುದ್ದಿಗಾರರನ್ನು ಪ್ರಶ್ನಿಸಿದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: Fact Check: ಭಾರತದ ಮ್ಯಾಗಿ ನೂಡಲ್ಸ್ ನಲ್ಲಿ ಗೋಮಾಂಸವಿದೆಯೆ?

ಇದಕ್ಕೆ ಪರಿಹಾರ ನೀಡಿದ ಬಿಜೆಪಿ ಕಾರ್ಯಕರ್ತರು, “ಮೃಗಾಲಯದಲ್ಲಿರುವ ಸಾಂಬಾರ್ ಜಿಂಕೆಗಳನ್ನು ಮಾಂಸಾಹಾರಿ ಪ್ರಾಣಿಗಳಿಗೆ ಆಹಾರಕ್ಕಾಗಿ ಬಳಸಿದರೆ ಮೃಗಾಲಯವು ಸ್ವಯಂಪೂರ್ಣತೆಯನ್ನು ಸಾಧಿಸಬಹುದು” ಎಂದು ಹೇಳಿದರು.

“ಮಾಂಸವನ್ನು ಸಾಗಿಸುವ ವಾಹನಗಳನ್ನು ದುಷ್ಕರ್ಮಿಗಳು ತಡೆದಿದ್ದರು. ಅವರನ್ನು ಚದುರಿಸಲು ನಾವು ಪೊಲೀಸರನ್ನು ಕರೆಸಿದ್ದೇವೆ. ಮಾಂಸಾಹಾರಿ ಪ್ರಾಣಿಗಳಿಗೆ ಆಹಾರವನ್ನು ಕೇಂದ್ರ ಮೃಗಾಲಯ ಪ್ರಾಧಿಕಾರವು ಶಿಫಾರಸು ಮಾಡಿದೆ. ಕಾನೂನಿನ ಪ್ರಕಾರ ನಾವು ಮೃಗಾಲಯದ ಪ್ರಾಣಿಗಳ ಮಾಂಸವನ್ನು ಮಾಂಸಾಹಾರಿ ಪ್ರಾಣಿಗಳಿಗೆ ನೀಡಲು ಸಾಧ್ಯವಿಲ್ಲ. ಅಲ್ಲದೆ, ಸಾಂಬಾರ್ ಜಿಂಕೆ ಕಾಡು ಪ್ರಾಣಿಯಾಗಿದ್ದು, ನಾವು ಕಾಡು ಪ್ರಾಣಿಗಳನ್ನು ಕೊಲ್ಲಲು ಸಾಧ್ಯವಿಲ್ಲ” ಎಂದು ಮೃಗಾಲಯದ ವ್ಯಾಪ್ತಿಗೆ ಒಳಪಡುವ ವಿಭಾಗೀಯ ಅರಣ್ಯ ಅಧಿಕಾರಿ ತೇಜಸ್ ಮಾರಿಸ್ವಾಮಿ ಹೇಳಿದರು.

ಇದನ್ನೂ ಓದಿ: ಮತ್ತೆ ಶುರುವಾಯಿತು ಗೋಹತ್ಯೆ ನಿಷೇಧ ಕಾನೂನು ಚರ್ಚೆ: ಗೋಹತ್ಯೆ ಅಪರಾಧವೆಂದ ಸಚಿವ ಸುಧಾಕರ್

ಸಾಂಬಾರ್ ಜಿಂಕೆಗಳನ್ನು ಇಂಟರ್‌ನ್ಯಾಷನಲ್ ಯೂನಿಯನ್ ಫಾರ್ ಕನ್ಸರ್ವೇಶನ್ ಆಫ್ ನೇಚರ್ (ಐಯುಸಿಎನ್) ಪಟ್ಟಿಗೆ ಸೇರಿಸಿದ್ದು, 1972 ರ ವನ್ಯಜೀವಿ (ಸಂರಕ್ಷಣೆ) ಕಾಯ್ದೆಯ ಅನುಸೂಚಿ -3ರ ಅಡಿಯಲ್ಲಿ ಅವುಗಳನ್ನು ರಕ್ಷಿಸಲಾಗಿದೆ.

ಇದರ ಕುರಿತು ಅಸ್ಸಾಂ ಅರಣ್ಯ ಸಚಿವ ಪರಿಮಲ್ ಸುಕ್ಲಾಬೈದ್ಯ ಮಾತನಾಡಿ, “ಪ್ರಾಣಿಗಳಿಗೆ ಗೋಮಾಂಸವನ್ನು ನೀಡಲಾಗುತ್ತಿದೆ. ಏಕೆಂದರೆ ಅದು ಅವುಗಳ ಪೋಷಣೆಗೆ ಅಗತ್ಯವಾಗಿದೆ. ಕೆಲವು ರಾಜ್ಯಗಳು ಎಮ್ಮೆ ಮಾಂಸವನ್ನು ಮಾಂಸಾಹಾರಿ ಪ್ರಾಣಿಗಳ ಆಹಾರಕ್ಕಾಗಿ ಆರಿಸಿಕೊಂಡವು. ಆದರೆ ಅಸ್ಸಾಂನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಎಮ್ಮೆಗಳು ಇಲ್ಲದಿರುವುದರಿಂದ, ಕೇಂದ್ರದ ಮಾರ್ಗಸೂಚಿಯ ಪ್ರಕಾರ ಗೋಮಾಂಸವನ್ನು ನೀಡಲಾಗುತ್ತಿದೆ” ಎಂದು ಹೇಳಿದರು.

ಬಿಜೆಪಿ ಕಾರ್ಯಕರ್ತರ ಈ ವರ್ತನೆಯು ಸಾಮಾಜಿಕ ಮಾಧ್ಯಮಗಳಲ್ಲಿ ಅಪಹಾಸ್ಯಕ್ಕೊಳಗಾಗಿದ್ದು, ಫೇಸ್‌ಬುಕ್ ಬಳಕೆದಾರರೊಬ್ಬರು, “ಹೌದು, ಇನ್ನುಮುಂದೆ ಆಡಳಿತವು ಮೃಗಾಲಯದಲ್ಲಿನ ಪ್ರಾಣಿಗಳಿಗೆ ಇಡ್ಲಿ-ಸಾಂಬಾರ್-ಮಸಾಲೆವಡೆ ನೀಡಲಿ” ಎಂದು ಬರೆದುಕೊಂಡಿದ್ದಾರೆ.

ಟ್ವಿಟ್ಟರ್‌ನಲ್ಲಿ ಈ ಬಿಜೆಪಿಗರ ಈ ಹೇಳಿಕೆಗೆ ವಿಭಿನ್ನವಾಗಿ ಪ್ರತಿಕ್ರಿಯಿಸಿದ್ದು, “ಇನ್ನು ಮುಂದೆ ಸಾತ್ವಿಕ ಹುಲಿಗಳಿಗೆ ಹಸುವಿನ ಸಗಣಿ ಮತ್ತು ಗೋಮೂತ್ರ ನೀಡಿ, ಹುಲಿಗಳಿಗೆ ಏಕಾದಶಿ ವ್ರತ ಮಾಡಿಸಿ, ಪಾರ್ಲೇಜಿ ಬಿಸ್ಕೆಟ್ ಕೊಡಿ” ಎನ್ನುವ ತರಾವರಿ ಕಮೆಂಟ್‌ಗಳನ್ನು ಇಲ್ಲಿ ಕ್ಲಿಕ್ ಮಾಡಿ ನೋಡಬಹುದು.


ಇದನ್ನೂ ಓದಿ: ಸುತ್ತಿಗೆಯಿಂದ ಕ್ರೂರವಾಗಿ ಥಳಿಸಿದ ಗೋರಕ್ಷಕರು: ಕೈಕಟ್ಟಿ ನೋಡುತ್ತಿದ್ದ ಪೊಲೀಸರು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...