Homeಕರ್ನಾಟಕಮೃಗಾಲಯಗಳು, ರಕ್ಷಣಾ ಕೇಂದ್ರಗಳು ಪ್ರಾಣಿಗಳಿಗೆ ಜೈಲುಗಳಾಗುತ್ತಿವೆ: ತಜ್ಞರು

ಮೃಗಾಲಯಗಳು, ರಕ್ಷಣಾ ಕೇಂದ್ರಗಳು ಪ್ರಾಣಿಗಳಿಗೆ ಜೈಲುಗಳಾಗುತ್ತಿವೆ: ತಜ್ಞರು

- Advertisement -
- Advertisement -

ರಾಜ್ಯದ ಮೃಗಾಲಯಗಳು ಮತ್ತು ಪ್ರಾಣಿ ರಕ್ಷಣಾ ಕೇಂದ್ರಗಳು ಪ್ರಾಣಿಗಳಿಗೆ ಜೈಲುಗಳಾಗುತ್ತಿವೆ. ರಕ್ಷಣಾ ಕೇಂದ್ರಗಳಲ್ಲಿ ಪ್ರಾಣಿಗಳು ಶಾಶ್ವತ ಖೈದಿಗಳಾಗುವುದನ್ನು ಕಡಿಮೆ ಮಾಡಲು ಸರಿಯಾದ ಮಾರ್ಗಸೂಚಿಗಳನ್ನು ರೂಪಿಸಬೇಕು ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಪ್ರಾಣಿ ಸಂರಕ್ಷಣಾಕಾರರು ಒತ್ತಾಯಿಸಿದ್ದಾರೆ.

ಮಾಂಸಾಹಾರಿ ಪ್ರಾಣಿಗಳಿಗೆ ಈ ಪ್ರಾಣಿ ರಕ್ಷಣಾ ಕೇಂದ್ರಗಳಲ್ಲಿ ನೀಡುವ ವಸತಿ ಸೌಕರ್ಯಗಳ ಬಗ್ಗೆ ತಾರತಮ್ಯವಿದೆ. ಹೊರ ಭಾಗಗಳಿಂದ ರಕ್ಷಿಸಲಾಗುವ ಎಲ್ಲಾ ಹುಲಿಗಳನ್ನು ಮೈಸೂರು ರಕ್ಷಣಾ ಕೇಂದ್ರಕ್ಕೆ ಮತ್ತು ಚಿರತೆಗಳನ್ನು ಬನ್ನೇರುಘಟ್ಟಕ್ಕೆ ಕಳುಹಿಸಲಾಗುತ್ತದೆ. ಹೀಗಾಗಿ, ಬನ್ನೇರುಘಟ್ಟ ರಕ್ಷಣಾ ಕೇಂದ್ರದಲ್ಲಿ 35 ಚಿರತೆಗಳಿದ್ದರೆ, ಮೈಸೂರು ರಕ್ಷಣಾ ಕೇಂದ್ರದಲ್ಲಿ ಸುಮಾರು 8 ರಿಂದ 10 ಹುಲಿಗಳಿವೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕೆಲವೇ ದಿನಗಳಲ್ಲಿ ಬೆಂಗಳೂರಿನ ವಿವಿಧೆಡೆಯಿಂದ ಮೂರು ಚಿರತೆಗಳನ್ನು ರಕ್ಷಿಸಲಾಗಿದೆ. ಅಕ್ಟೋಬರ್ 21 ರಂದು ಗಾಯಗೊಂಡಿದ್ದ ಹುಲಿಯನ್ನು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಿಂದ ಮೈಸೂರು ರಕ್ಷಣಾ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ.

ಮೈಸೂರು ರಕ್ಷಣಾ ಕೇಂದ್ರದಲ್ಲಿ ಸ್ಥಳಾವಕಾಶದ ಕೊರತೆಯಿಂದಾಗಿ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸೆರೆ ಸಿಕ್ಕ ಗಾಯಗೊಂಡ ಹುಲಿಯನ್ನು ಬನ್ನೇರುಘಟ್ಟ ರಕ್ಷಣಾ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ಅನಾಮಧೇಯ ಪಶುವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ: ಮೈಜುಮ್ಮೆನಿಸುವ ದೃಶ್ಯ: ತಮ್ಮ ಜೀವ ಲೆಕ್ಕಿಸದೆ ಸಿನಿಮೀಯ ರೀತಿಯಲ್ಲಿ ತಾಯಿ-ಮಗುವನ್ನು ರಕ್ಷಿಸಿದ ಅರಣ್ಯ ಇಲಾಖೆ ಸಿಬ್ಬಂದಿ

“ಕೇಂದ್ರ ಮೃಗಾಲಯ ಪ್ರಾಧಿಕಾರ ಮತ್ತು ಪರಿಸರ ಸಚಿವಾಲಯ, ಅರಣ್ಯ ಮತ್ತು ಹವಾಮಾನ ಬದಲಾವಣೆಯ ನಿಯಮಗಳ ಪ್ರಕಾರ, ರಕ್ಷಿಸಿದ ಕಾಡು ಪ್ರಾಣಿಗಳನ್ನು ಮೃಗಾಲಯಗಳಲ್ಲಿ ಪ್ರದರ್ಶನಕ್ಕೆ ಇಡುವಂತಿಲ್ಲ. ಅವುಗಳನ್ನು ಬೋನ್‌ಗಳಲ್ಲಿ ಇಟ್ಟರೆ, ಈ ಪ್ರಾಣಿಗಳು ತಮ್ಮ ಜೀವನದುದ್ದಕ್ಕೂ ಕೈದಿಗಳಂತೆ ಸೆರೆಯಲ್ಲಿ ಉಳಿಯುತ್ತವೆ. ರೈತರು ತಮ್ಮ ಭತ್ತ, ಕಬ್ಬು ಮತ್ತು ಇತರ ಗದ್ದೆಗಳಲ್ಲಿ ಚಿರತೆಗಳ ಕೊರಗುತ್ತಿರುವುದನ್ನು ಗಮನಿಸಿದ್ದಾರೆ. ಆದರೆ, ಅವುಗಳನ್ನು ಅವುಗಳ ತಾಯಿ ಬಿಟ್ಟು ಹೋಗಿರಬೇಕು ಎಂದು ಅರ್ಥಮಾಡಿಕೊಳ್ಳಲು ವಿಫಲರಾಗಿದ್ದಾರೆ. ಮರಿಗಳು ಬೇಟೆಯಾಡಲು ಅಥವಾ ಉತ್ತಮ ಸುರಕ್ಷಿತ ಸ್ಥಳವನ್ನು ಹುಡುಕಲು ಯತ್ನಿಸುತ್ತಿರುವಾಗ, ಮನುಷ್ಯರು ಅವುಗಳನ್ನು ಮೃಗಾಲಯಗಳಿಗೆ ತಲುಪಿಸುತ್ತಿದ್ದಾರೆ. ಹೀಗಾಗಿ, ಅವುಗಳನ್ನು ಕಾಡಿನಲ್ಲಿ ಬಿಡಲಾಗುವುದಿಲ್ಲ. ಅಂತಹ ಮರಿಗಳು ಬದುಕುಳಿಯುವುದಿಲ್ಲ. ಹಾಗಾಗಿ ಅವು ಕೂಡ ರಕ್ಷಣಾ ಕೇಂದ್ರದಲ್ಲಿ ಉಳಿಯುತ್ತವೆ” ಎಂದು ಅರಣ್ಯ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಶುವೈದ್ಯರ ಪ್ರೋಟೋಕಾಲ್ ಪ್ರಕಾರ, ಕೋರೆಹಲ್ಲುಗಳು ಅಥವಾ ಉಗುರುಗಳು ಮುರಿದುಹೋದ, ತೀವ್ರವಾಗಿ ಗಾಯಗೊಂಡ, ಬೇಟೆಯಾಡಲು ಸಾಧ್ಯವಾಗದಂತಹ ಪ್ರಾಣಿಗಳನ್ನು ಮಾತ್ರ ಸೆರೆಹಿಡಿದು ರಕ್ಷಣಾ ಕೇಂದ್ರಗಳಲ್ಲಿ ಇರಿಸಬೇಕು.

“ಸೆರೆಯಲ್ಲಿರುವ 50% ರಷ್ಟು ಪ್ರಾಣಿಗಳನ್ನು ಮೃಗಾಲಯಗಳಿಂದ ಬಿಡುಗಡೆ ಮಾಡಲು ಯೋಗ್ಯವಾಗಿವೆ. ಆದರೆ, ಸೆರೆಯಲ್ಲಿ ಉಳಿದಿವೆ. ಆದ್ದರಿಂದ, ಅವುಗಳ ರಕ್ಷಣೆಗಾಗಿ ಕೇಂದ್ರ ಸರ್ಕಾರವು ಕಠಿಣ ರಕ್ಷಣಾ ಮತ್ತು ಪುನರ್ವಸತಿ ನಿಯಮಗಳನ್ನು ರೂಪಿಸಬೇಕು” ಎಂದು ಹಿರಿಯ ಅರಣ್ಯ ಇಲಾಖೆಯ ಪಶುವೈದ್ಯರು ಹೇಳಿದ್ದಾರೆ.


ಇದನ್ನೂ ಓದಿ: ಇರುವ ಮನೆಗಳ ಒಡೆದು, ಲೇಔಟ್ ಮಾಡಿ ಇನ್ನೊಬ್ಬರಿಗೆ ಸೈಟ್‌ ಹಂಚುವುದು ಯಾವ ನ್ಯಾಯ?: ಬಿಡಿಎ ವಿರುದ್ಧ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...