Homeಕರ್ನಾಟಕಮೃಗಾಲಯಗಳು, ರಕ್ಷಣಾ ಕೇಂದ್ರಗಳು ಪ್ರಾಣಿಗಳಿಗೆ ಜೈಲುಗಳಾಗುತ್ತಿವೆ: ತಜ್ಞರು

ಮೃಗಾಲಯಗಳು, ರಕ್ಷಣಾ ಕೇಂದ್ರಗಳು ಪ್ರಾಣಿಗಳಿಗೆ ಜೈಲುಗಳಾಗುತ್ತಿವೆ: ತಜ್ಞರು

- Advertisement -
- Advertisement -

ರಾಜ್ಯದ ಮೃಗಾಲಯಗಳು ಮತ್ತು ಪ್ರಾಣಿ ರಕ್ಷಣಾ ಕೇಂದ್ರಗಳು ಪ್ರಾಣಿಗಳಿಗೆ ಜೈಲುಗಳಾಗುತ್ತಿವೆ. ರಕ್ಷಣಾ ಕೇಂದ್ರಗಳಲ್ಲಿ ಪ್ರಾಣಿಗಳು ಶಾಶ್ವತ ಖೈದಿಗಳಾಗುವುದನ್ನು ಕಡಿಮೆ ಮಾಡಲು ಸರಿಯಾದ ಮಾರ್ಗಸೂಚಿಗಳನ್ನು ರೂಪಿಸಬೇಕು ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಪ್ರಾಣಿ ಸಂರಕ್ಷಣಾಕಾರರು ಒತ್ತಾಯಿಸಿದ್ದಾರೆ.

ಮಾಂಸಾಹಾರಿ ಪ್ರಾಣಿಗಳಿಗೆ ಈ ಪ್ರಾಣಿ ರಕ್ಷಣಾ ಕೇಂದ್ರಗಳಲ್ಲಿ ನೀಡುವ ವಸತಿ ಸೌಕರ್ಯಗಳ ಬಗ್ಗೆ ತಾರತಮ್ಯವಿದೆ. ಹೊರ ಭಾಗಗಳಿಂದ ರಕ್ಷಿಸಲಾಗುವ ಎಲ್ಲಾ ಹುಲಿಗಳನ್ನು ಮೈಸೂರು ರಕ್ಷಣಾ ಕೇಂದ್ರಕ್ಕೆ ಮತ್ತು ಚಿರತೆಗಳನ್ನು ಬನ್ನೇರುಘಟ್ಟಕ್ಕೆ ಕಳುಹಿಸಲಾಗುತ್ತದೆ. ಹೀಗಾಗಿ, ಬನ್ನೇರುಘಟ್ಟ ರಕ್ಷಣಾ ಕೇಂದ್ರದಲ್ಲಿ 35 ಚಿರತೆಗಳಿದ್ದರೆ, ಮೈಸೂರು ರಕ್ಷಣಾ ಕೇಂದ್ರದಲ್ಲಿ ಸುಮಾರು 8 ರಿಂದ 10 ಹುಲಿಗಳಿವೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕೆಲವೇ ದಿನಗಳಲ್ಲಿ ಬೆಂಗಳೂರಿನ ವಿವಿಧೆಡೆಯಿಂದ ಮೂರು ಚಿರತೆಗಳನ್ನು ರಕ್ಷಿಸಲಾಗಿದೆ. ಅಕ್ಟೋಬರ್ 21 ರಂದು ಗಾಯಗೊಂಡಿದ್ದ ಹುಲಿಯನ್ನು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಿಂದ ಮೈಸೂರು ರಕ್ಷಣಾ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ.

ಮೈಸೂರು ರಕ್ಷಣಾ ಕೇಂದ್ರದಲ್ಲಿ ಸ್ಥಳಾವಕಾಶದ ಕೊರತೆಯಿಂದಾಗಿ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸೆರೆ ಸಿಕ್ಕ ಗಾಯಗೊಂಡ ಹುಲಿಯನ್ನು ಬನ್ನೇರುಘಟ್ಟ ರಕ್ಷಣಾ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ಅನಾಮಧೇಯ ಪಶುವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ: ಮೈಜುಮ್ಮೆನಿಸುವ ದೃಶ್ಯ: ತಮ್ಮ ಜೀವ ಲೆಕ್ಕಿಸದೆ ಸಿನಿಮೀಯ ರೀತಿಯಲ್ಲಿ ತಾಯಿ-ಮಗುವನ್ನು ರಕ್ಷಿಸಿದ ಅರಣ್ಯ ಇಲಾಖೆ ಸಿಬ್ಬಂದಿ

“ಕೇಂದ್ರ ಮೃಗಾಲಯ ಪ್ರಾಧಿಕಾರ ಮತ್ತು ಪರಿಸರ ಸಚಿವಾಲಯ, ಅರಣ್ಯ ಮತ್ತು ಹವಾಮಾನ ಬದಲಾವಣೆಯ ನಿಯಮಗಳ ಪ್ರಕಾರ, ರಕ್ಷಿಸಿದ ಕಾಡು ಪ್ರಾಣಿಗಳನ್ನು ಮೃಗಾಲಯಗಳಲ್ಲಿ ಪ್ರದರ್ಶನಕ್ಕೆ ಇಡುವಂತಿಲ್ಲ. ಅವುಗಳನ್ನು ಬೋನ್‌ಗಳಲ್ಲಿ ಇಟ್ಟರೆ, ಈ ಪ್ರಾಣಿಗಳು ತಮ್ಮ ಜೀವನದುದ್ದಕ್ಕೂ ಕೈದಿಗಳಂತೆ ಸೆರೆಯಲ್ಲಿ ಉಳಿಯುತ್ತವೆ. ರೈತರು ತಮ್ಮ ಭತ್ತ, ಕಬ್ಬು ಮತ್ತು ಇತರ ಗದ್ದೆಗಳಲ್ಲಿ ಚಿರತೆಗಳ ಕೊರಗುತ್ತಿರುವುದನ್ನು ಗಮನಿಸಿದ್ದಾರೆ. ಆದರೆ, ಅವುಗಳನ್ನು ಅವುಗಳ ತಾಯಿ ಬಿಟ್ಟು ಹೋಗಿರಬೇಕು ಎಂದು ಅರ್ಥಮಾಡಿಕೊಳ್ಳಲು ವಿಫಲರಾಗಿದ್ದಾರೆ. ಮರಿಗಳು ಬೇಟೆಯಾಡಲು ಅಥವಾ ಉತ್ತಮ ಸುರಕ್ಷಿತ ಸ್ಥಳವನ್ನು ಹುಡುಕಲು ಯತ್ನಿಸುತ್ತಿರುವಾಗ, ಮನುಷ್ಯರು ಅವುಗಳನ್ನು ಮೃಗಾಲಯಗಳಿಗೆ ತಲುಪಿಸುತ್ತಿದ್ದಾರೆ. ಹೀಗಾಗಿ, ಅವುಗಳನ್ನು ಕಾಡಿನಲ್ಲಿ ಬಿಡಲಾಗುವುದಿಲ್ಲ. ಅಂತಹ ಮರಿಗಳು ಬದುಕುಳಿಯುವುದಿಲ್ಲ. ಹಾಗಾಗಿ ಅವು ಕೂಡ ರಕ್ಷಣಾ ಕೇಂದ್ರದಲ್ಲಿ ಉಳಿಯುತ್ತವೆ” ಎಂದು ಅರಣ್ಯ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಶುವೈದ್ಯರ ಪ್ರೋಟೋಕಾಲ್ ಪ್ರಕಾರ, ಕೋರೆಹಲ್ಲುಗಳು ಅಥವಾ ಉಗುರುಗಳು ಮುರಿದುಹೋದ, ತೀವ್ರವಾಗಿ ಗಾಯಗೊಂಡ, ಬೇಟೆಯಾಡಲು ಸಾಧ್ಯವಾಗದಂತಹ ಪ್ರಾಣಿಗಳನ್ನು ಮಾತ್ರ ಸೆರೆಹಿಡಿದು ರಕ್ಷಣಾ ಕೇಂದ್ರಗಳಲ್ಲಿ ಇರಿಸಬೇಕು.

“ಸೆರೆಯಲ್ಲಿರುವ 50% ರಷ್ಟು ಪ್ರಾಣಿಗಳನ್ನು ಮೃಗಾಲಯಗಳಿಂದ ಬಿಡುಗಡೆ ಮಾಡಲು ಯೋಗ್ಯವಾಗಿವೆ. ಆದರೆ, ಸೆರೆಯಲ್ಲಿ ಉಳಿದಿವೆ. ಆದ್ದರಿಂದ, ಅವುಗಳ ರಕ್ಷಣೆಗಾಗಿ ಕೇಂದ್ರ ಸರ್ಕಾರವು ಕಠಿಣ ರಕ್ಷಣಾ ಮತ್ತು ಪುನರ್ವಸತಿ ನಿಯಮಗಳನ್ನು ರೂಪಿಸಬೇಕು” ಎಂದು ಹಿರಿಯ ಅರಣ್ಯ ಇಲಾಖೆಯ ಪಶುವೈದ್ಯರು ಹೇಳಿದ್ದಾರೆ.


ಇದನ್ನೂ ಓದಿ: ಇರುವ ಮನೆಗಳ ಒಡೆದು, ಲೇಔಟ್ ಮಾಡಿ ಇನ್ನೊಬ್ಬರಿಗೆ ಸೈಟ್‌ ಹಂಚುವುದು ಯಾವ ನ್ಯಾಯ?: ಬಿಡಿಎ ವಿರುದ್ಧ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...