Homeಮುಖಪುಟಗುಜರಾತಿ ವಂಚಕನಿಗೆ ಝಡ್‌ಪ್ಲಸ್ ಸೆಕ್ಯೂರಿಟಿ: ಜಮ್ಮು-ಕಾಶ್ಮೀರ ಆಡಳಿತ ವೈಫಲ್ಯದ ವಿರುದ್ಧ ಪ್ರತಿಪಕ್ಷಗಳ ವಾಗ್ದಾಳಿ

ಗುಜರಾತಿ ವಂಚಕನಿಗೆ ಝಡ್‌ಪ್ಲಸ್ ಸೆಕ್ಯೂರಿಟಿ: ಜಮ್ಮು-ಕಾಶ್ಮೀರ ಆಡಳಿತ ವೈಫಲ್ಯದ ವಿರುದ್ಧ ಪ್ರತಿಪಕ್ಷಗಳ ವಾಗ್ದಾಳಿ

- Advertisement -
- Advertisement -

ಗುಜರಾತ್‌ನ ವಂಚಕ ಕಿರಣ್ ಪಟೇಲ್ ಪ್ರಧಾನ ಮಂತ್ರಿ ಕಚೇರಿಯಲ್ಲಿ (ಪಿಎಂಒ) ಉನ್ನತ ಅಧಿಕಾರಿಯಾಗಿದ್ದೇನೆ ಎಂದು ಹೇಳಿಕೊಂಡು ಕಳೆದ ವರ್ಷ ಅಕ್ಟೋಬರ್‌ನಿಂದ ಕಾಶ್ಮೀರ ಕಣಿವೆಗೆ ಭೇಟಿ ನೀಡುತ್ತಿದ್ದನು. ಈ ವೇಳೆ ಆತ ಝಡ್‌ಪ್ಲಸ್ ಸೆಕ್ಯೂರಿಟಿ ಮತ್ತು ಸರ್ಕಾರಿ ಆತಿಥ್ಯವನ್ನು ಆನಂದಿಸಿದ್ದನು. ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದನು. ಕಾಶ್ಮೀರ ಕಣಿವೆಗೆ ಮೂರನೇ ಭೇಟಿಯಲ್ಲಿದ್ದಾಗ ಮಾರ್ಚ್ 3ರಂದು ಭದ್ರತಾ ಅಧಿಕಾರಿಗಳು ಅವರನ್ನು ಬಂಧಿಸಿದ್ದಾರೆ. ಈ ವಿಚಾರವಾಗಿ  ಶಿವಸೇನಾ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಸಂಸದೆ ಪ್ರಿಯಾಂಕಾ ಚತುರ್ವೇದಿ ಜಮ್ಮು ಮತ್ತು ಕಾಶ್ಮೀರ ಆಡಳಿತದ ವೈಫಲ್ಯದ ವಿರುದ್ಧ ವಾಗ್ದಾಳಿ ನಡೆಸಿದರು.

ಈ ಸುದ್ದಿಯು ಜಮ್ಮು ಮತ್ತು ಕಾಶ್ಮೀರ ಆಡಳಿತಕ್ಕೆ ಭಾರಿ ಮುಜುಗರವನ್ನು ಉಂಟುಮಾಡಿದೆ, ಪ್ರತಿಪಕ್ಷಗಳು ಸೇರಿದಂತೆ ಅನೇಕರು ಗುಪ್ತಚರ ಲೋಪವನ್ನು ಪ್ರಶ್ನಿಸಿದ್ದಾರೆ.

ಸಂಸದೆ ಪ್ರಿಯಾಂಕಾ ಚತುರ್ವೇದಿ ಅವರು ಸಂತ್ರಸ್ತರ ಕುಟುಂಬಗಳನ್ನು ಭೇಟಿ ಮಾಡಲು ಜಮ್ಮುವಿಗೆ ಭೇಟಿ ನೀಡಿದ್ದರು. ಈ ವೇಳೆ ಅವರಿಗೆ ಜಿಲ್ಚ್ ಭದ್ರತೆಯನ್ನು ನೀಡಲಾಗಿತ್ತು. ಈ ಬಗ್ಗೆ ಟ್ವಿಟರ್‌ನಲ್ಲಿ ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: PMಕಚೇರಿಯ ಉನ್ನತ ಅಧಿಕಾರಿ ಎಂದು ಹೇಳಿಕೊಂಡು ಝಡ್‌ಪ್ಲಸ್ ಸೆಕ್ಯೂರಿಟಿ ಪಡೆದಿದ್ದ ವ್ಯಕ್ತಿ ಅರೆಸ್ಟ್

”ಸಂಸದನಾಗಿ ನಾನು ಉದ್ದೇಶಿತ ಹಿಂದೂ ಹತ್ಯೆಗಳ ಸಂತ್ರಸ್ತರ ಕುಟುಂಬಗಳನ್ನು ಭೇಟಿ ಮಾಡಲು ಜಮ್ಮುವಿಗೆ ಭೇಟಿ ನೀಡಿದಾಗ, ನನಗೆ ಜಿಲ್ಚ್ ಭದ್ರತೆಯನ್ನು ನೀಡಲಾಯಿತು. ಆ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ ಆದರೆ ಇಲ್ಲಿ ಒಬ್ಬ ವಂಚಕನು ಝಡ್‌ಪ್ಲಸ್ ಭದ್ರತೆ, ವಿಐಪಿ ಪ್ರೋಟೋಕಾಲ್, ಹೋಟೆಲ್ ವಾಸ್ತವ್ಯ ಮತ್ತು ಪಡೆದಿದ್ದಾನೆ. ಇದು ಅದ್ಭುತ!” ಎಂದು ಟ್ವೀಟ್ ಮಾಡಿದ್ದಾರೆ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು, ಈ ಗಂಭೀರ ಸಮಸ್ಯೆಗೆ ಕಾರಣರಾದವರ ವಿರುದ್ಧ “ಕಠಿಣ ಕ್ರಮ”ಕ್ಕೆ ಒತ್ತಾಯಿಸಿದ್ದಾರೆ.

”ಗುಜರಾತ್‌ನ ನಕಲಿ ಅಧಿಕಾರಿ ಕಿರಣ್ ಭಾಯ್ ಪಟೇಲ್‌ಗೆ ಭದ್ರತೆ ನೀಡುವ ಸಂದರ್ಭದಲ್ಲಿ ಭದ್ರತಾ ಅಧಿಕಾರಿಗಳು ಯಾವುದೇ ತನಿಖೆ ನಡೆಸಿಲ್ಲ, ಅವರು ದೇಶದ ಭದ್ರತೆಯೊಂದಿಗೆ ಆಟವಾಡುತ್ತಿದ್ದಾರೆ. ಈ ಗಂಭೀರ ಸಮಸ್ಯೆಗೆ ಕಾರಣರಾದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು, ತಕ್ಷಣದಿಂದ ಜಾರಿಗೆ ಬರುವಂತೆ ಅವರನ್ನು ಕೆಲಸದಿಂದ ತೆಗೆದುಹಾಕಬೇಕು ಮತ್ತು ಶಿಕ್ಷೆಗೆ ಗುರಿಪಡಿಸಬೇಕು” ಎಂದು ಯಾದವ್ ಟ್ವೀಟ್ ಮಾಡಿದ್ದಾರೆ.

ಈ ವಿಚಾರವಾಗಿ ಕೇಂದ್ರ ಬಿಜೆಪಿ ಸರ್ಕಾರವನ್ನು ಆಮ್ ಆದ್ಮಿ ಪಕ್ಷವು ಸರಣಿ ಟ್ವೀಟ್ ಮೂಲಕ ಟೀಕಿಸಿದೆ.

”ಬಿಜೆಪಿ ಕಾರ್ಯಕರ್ತ ಕಿರಣ್ ಪಟೇಲ್ ಕಾಶ್ಮೀರದಲ್ಲಿ ಪಿಎಂಒ ಹೆಚ್ಚುವರಿ ನಿರ್ದೇಶಕರಾಗಿ ವಾಸಿಸುತ್ತಿದ್ದಾರೆ. Z+ ಭದ್ರತೆ, 2 ಜ್ಯಾಮರ್ ವಾಹನಗಳು, 50 ಗನ್‌ಮ್ಯಾನ್‌ಗಳೊಂದಿಗೆ ಯಾರು ಚಲಿಸುತ್ತಾರೆ, 5 ಸ್ಟಾರ್ ಹೋಟೆಲ್‌ನಲ್ಲಿ ತಂಗುತ್ತಾರೆ. ಬಿಜೆಪಿ ಕಾರ್ಯಕರ್ತ ಎಂಬ ಕಾರಣಕ್ಕೆ ಅದರ ತನಿಖಾ ಸಂಸ್ಥೆ ತನಿಖೆ ನಡೆಸುವುದಿಲ್ಲ. ಅವರು ಸಿಸೋಡಿಯಾ ಅಂತವರನ್ನು ಜೈಲಿಗೆ ಹಾಕುತ್ತಾರೆ” ಎಂದು ಎಎಪಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ.

”ಗುಜರಾತ್‌ನ ಒಬ್ಬ ಕೊಲೆಗಡುಕನು, ಪ್ರಧಾನ ಮಂತ್ರಿ ಕಚೇರಿಯ ಅಧಿಕಾರಿ ಎಂದು ಹೇಳಿಕೊಂಡು ಸರ್ಕಾರಿ ಸವಲತ್ತುಗಳನ್ನು ದುರುಪಯೋಗಪಡಿಸಿಕೊಂದ್ದಾನೆ. ಸಾರ್ವಜನಿಕರ ಕೋಟಿಗಟ್ಟಲೆ ಹಣವನ್ನು ಖರ್ಚು ಮಾಡಿದ್ದಾನೆ ಮತ್ತು Z+ ಭದ್ರತೆಯೊಂದಿಗೆ ಬುಲೆಟ್‌ಪ್ರೂಫ್ ಕಾರಿನಲ್ಲಿ ರಜಾದಿನಗಳನ್ನು ಆನಂದಿಸಿದ್ದಾನೆ. ಆತನ ಹೆಸರೇ ಕಿರಣ್ ಭಾಯ್ ಪಟೇಲ್” ಎಂದು ಎಎಪಿ ಟ್ವೀಟ್ ಮಾಡಿದೆ.

”ಮೋದಿಜಿಯವರ ಅಮೂಲ್ಯ ರತ್ನಗಳಿಗೆ ಸಂಬಂಧಿಸಿದ 2 ದೊಡ್ಡ ಸುದ್ದಿಗಳು: 1) BJP ನಾಯಕ #BaleshDhankar ಆಸ್ಟ್ರೇಲಿಯಾದಲ್ಲಿ ಅನೇಕ ಹುಡುಗಿಯರ ಮೇಲೆ ಅತ್ಯಾಚಾರವೆಸಗಿದ್ದಾನೆ. 2) ಪ್ರಧಾನಿ ಮೋದಿಯನ್ನು ಮೂರ್ಖರನ್ನಾಗಿಸುವ ಪಿಎಂಒ ಅಧಿಕಾರಿಯಾಗಿ ಕಿರಣ್ ಪಟೇಲ್, ಕಾಶ್ಮೀರದಲ್ಲಿ ಭಾರತದ ಭದ್ರತೆಯಲ್ಲಿ ಒಂದು ಪ್ರವಾಸ ಮಾಡುತ್ತಲೇ ಇದ್ದರು. ದೇಶದ ಪ್ರಧಾನಿ ಶಿಕ್ಷಣ ಪಡೆದಿದ್ದರೆ ಭಾರತ ನಾಚಿಕೆಪಡುತ್ತಿರಲಿಲ್ಲ” ಎಂದು ಟ್ವೀಟ್ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...