Homeಮುಖಪುಟಜುಬೇರ್‌ ಪ್ರಕರಣ: ಜಾಮೀನು ನೀಡಲು ನ್ಯಾಯಾಧೀಶರು ಹೆದರುತ್ತಿದ್ದಾರೆ- ಜಸ್ಟೀಸ್‌ ದೀಪಕ್‌ ಗುಪ್ತಾ

ಜುಬೇರ್‌ ಪ್ರಕರಣ: ಜಾಮೀನು ನೀಡಲು ನ್ಯಾಯಾಧೀಶರು ಹೆದರುತ್ತಿದ್ದಾರೆ- ಜಸ್ಟೀಸ್‌ ದೀಪಕ್‌ ಗುಪ್ತಾ

- Advertisement -
- Advertisement -

ಆಲ್ಟ್‌ನ್ಯೂಸ್ ಸಹಸಂಸ್ಥಾಪಕ ಮೊಹಮ್ಮದ್‌ ಜುಬೇರ್ ಪ್ರಕರಣದಲ್ಲಿ ಏನೋ ತಪ್ಪಾಗಿದೆ ಎಂದು ನಾನು ಭಾವಿಸುತ್ತೇನೆ ಎಂದು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ದೀಪಕ್ ಗುಪ್ತಾ ಅಭಿಪ್ರಾಯಪಟ್ಟಿದ್ದಾರೆ.

ಕಾನೂನು ವಿದ್ಯಮಾನಗಳ ವರದಿಗಳನ್ನು ಮಾಡುವ ‘ಲೈವ್‌ ಲಾ’ ಜಾಲತಾಣದೊಂದಿಗೆ ಮಾತನಾಡಿರುವ ಅವರು, ಜುಬೇರ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಹತ್ವದ ಸಂಗತಿಗಳ ಕುರಿತು ಪ್ರಸ್ತಾಪ ಮಾಡಿದ್ದಾರೆ.

“ಈ ಟ್ವೀಟ್‌ ಮಾಡಿ ನಾಲ್ಕು ವರ್ಷಗಳಾಯಿತು. ಪೋಸ್ಟ್‌ ಮಾಡಲಾಗಿರುವ ಚಲನಚಿತ್ರದ ದೃಶ್ಯವನ್ನು ನಿರ್ಮಿಸಿ 40 ವರ್ಷಗಳಾಗಿದೆ. ಯಾವುದೇ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿಲ್ಲ. ಯಾರೂ ದೂರು ನೀಡಿಲ್ಲ. ಪೊಲೀಸರು ಇದ್ದಕ್ಕಿದ್ದಂತೆ ಹೇಗೆ ಎಚ್ಚರಗೊಂಡರು?” ಎಂದು ಅವರು ಪ್ರಶ್ನಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಾರ್ವಜನಿಕ ಅಭಿಪ್ರಾಯಕ್ಕೆ ಭಯಬಿದ್ದು ಅನೇಕ ನ್ಯಾಯಾಧೀಶರು ಜಾಮೀನು ನೀಡಲು ಹೆದರುತ್ತಿದ್ದಾರೆ ಎಂದು ಹೇಳುತ್ತಿರುವುದಕ್ಕೆ ಕ್ಷಮೆ ಇರಲಿ. ನಮ್ಮ ಜೈಲುಗಳು ವಿಚಾರಣಾಧೀನ ಕೈದಿಗಳಿಂದ ತುಂಬಿವೆ. ಅವರಲ್ಲಿ 70-80% ಜನರು ಖುಲಾಸೆಯಾಗಿದ್ದಾರೆ. ನ್ಯಾಯಾಧೀಶರು ಮನಸ್ಥಿತಿಯನ್ನು ಬದಲಿಸಿ ದೇಶದ ನಿಯಮವನ್ನು ಅನುಸರಿಸಬೇಕು. ದೇಶದ ನಿಯಮ ಜಾಮೀನು ನೀಡುವುದಾಗಿದೆಯೇ ಹೊರತು ಜೈಲಲ್ಲ ಎಂದು ಜಸ್ಟೀಸ್‌ ದೀಪಕ್‌ ಗುಪ್ತಾ ತಿಳಿಸಿದ್ದಾರೆ.

ಜನರ ಹಕ್ಕುಗಳ ಪಾಲಕರಾಗಿ ಉನ್ನತ ನ್ಯಾಯಾಲಯಗಳು ವಿವಾದಗಳ ತೀರ್ಪುಗಾರರಾಗಿ ಉತ್ತಮ ಕೆಲಸ ಮಾಡುತ್ತಿದ್ದರೂ, ಸುಧಾರಣೆಗೆ ಅವಕಾಶವಿದೆ ಎಂದಿದ್ದಾರೆ.

ಸರಿಯಾದ ಪರೀಕ್ಷೆ ನಡೆಸದೆ ನ್ಯಾಯಾಲಯಗಳು ಜಾಮೀನು ನಿರಾಕರಿಸುವ ಆತಂಕಕಾರಿ ಪ್ರವೃತ್ತಿಯ ಬಗ್ಗೆ ಅವರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕ ಅಭಿಪ್ರಾಯದ ಭಯದಿಂದ ಅನೇಕ ನ್ಯಾಯಾಧೀಶರು ಜಾಮೀನು ನೀಡಲು ಹೆದರುತ್ತಾರೆ. ಮ್ಯಾಜಿಸ್ಟ್ರೇಟ್‌ಗಳಿಗೆ ತರಬೇತಿ ನೀಡುವ ನ್ಯಾಯಾಂಗ ಅಕಾಡೆಮಿಗಳು ನಾಗರಿಕರ ಮೂಲಭೂತ ಹಕ್ಕುಗಳ ರಕ್ಷಣೆಗಾಗಿ ನಾವಿದ್ದೇವೆ ಎಂಬುದನ್ನು ಅವರ ಮನಸ್ಸಿನಲ್ಲಿ ತುಂಬಬೇಕು ಎಂದಿದ್ದಾರೆ.

“ನಾನು ‘ದುರುದ್ದೇಶಪೂರಿತ’ ಎಂದು ಹೇಳುವ ಮಟ್ಟಕ್ಕೆ ಹೋಗುವುದಿಲ್ಲ. ಕಾನೂನಿನಲ್ಲಿನ ದುರುದ್ದೇಶವು ತುಂಬಾ ವಿಭಿನ್ನವಾಗಿದೆ. ಆದರೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಏನೋ ತಪ್ಪಾಗಿದೆ ಎಂದು ನಾನು ಖಂಡಿತವಾಗಿ ಭಾವಿಸುತ್ತೇನೆ” ಎಂದು ಸ್ಪಷ್ಟಪಡಿಸಿದ್ದಾರೆ.

ಎರಡು ಧಾರ್ಮಿಕ ಸಮುದಾಯಗಳ ನಡುವೆ ದೊಡ್ಡ ಅಸಮಾಧಾನವನ್ನು ಉಂಟುಮಾಡುವ ಸಾಧ್ಯತೆಯಿರುವ ಯಾವುದೋ ವಿಷಯದ ವ್ಯಾಪ್ತಿಯಲ್ಲಿ ಈ ಟ್ವೀಟ್‌ ಬರುತ್ತದೆಯೇ? ಏನಾದರೂ ಅಪರಾಧವಾಗಬೇಕಾದರೆ, ಅದು ಧಾರ್ಮಿಕ ಭಾವನೆಗಳನ್ನು ನೋಯಿಸುವ ಪ್ರವೃತ್ತಿಯನ್ನು ಹೊಂದಿರಬೇಕು. ಈ ಟ್ವೀಟ್‌ ಮಾಡಿ ನಾಲ್ಕು ವರ್ಷಗಳ ನಂತರ ಮತ್ತು ಈ ಚಲನಚಿತ್ರವು ತಯಾರಾಗಿ 40 ವರ್ಷಗಳ ನಂತರ ವಿವಾದ ಸೃಷ್ಟಿಯಾಗಿದೆ. ಯಾವುದೇ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿಲ್ಲ. ಯಾರೂ ಈ ಟ್ವೀಟ್‌ಗೆ ದೂರು ನೀಡಿಲ್ಲ. ಪೊಲೀಸರು ಏಕಾಏಕಿ ಎಚ್ಚೆತ್ತುಕೊಂಡು ನಮಗೆ ಅನಾಮಧೇಯ ದೂರು ಬಂದಿದೆ ಎಂದು ಹೇಗೆ ಹೇಳುತ್ತಾರೆ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: ಖ್ಯಾತ ಪತ್ರಕರ್ತ ಮೊಹಮ್ಮದ್ ಜುಬೇರ್ ಜಾಮೀನು ನಿರಾಕರಣೆ; ಹೊಸ ಆರೋಪಗಳನ್ನು ಸೇರಿಸಿದ ಪೊಲೀಸರು!

ಇಂದು ನೀವು ದೂರು ನೀಡಲು ಹೋದರೆ, ಬಡವರು ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಹೋದರೆ, ತುಂಬಾ ಗಂಭೀರವಾದ ಅಪರಾಧದಲ್ಲೂ ದೂರು ದಾಖಲಿಸುವುದು ತುಂಬಾ ಕಷ್ಟ. ಅವರು ‘ಲಿಖಿತ ದೂರು ಸಲ್ಲಿಸಿ, ಅಫಿಡವಿಟ್ ಸಲ್ಲಿಸಿ’ ಎಂದು ಹೇಳುತ್ತಾರೆ. ಈಗ ಟ್ವೀಟ್‌ ಸಂಬಂಧ ದೂರು ನೀಡಲಾಗಿದೆ ಎಂದು ಅವರು ಹೇಳುತ್ತಾರೆ. ಇದು ಕಾನೂನುಬಾಹಿರ ಎಂದು ನಾನು ಹೇಳುತ್ತಿಲ್ಲ – ಅವರು ಅದನ್ನು ಮಾಡಬಹುದು. ಆದರೆ ಸಾಮಾನ್ಯ ಪ್ರಕರಣಗಳಲ್ಲಿ ಅವರು ಹೀಗೆಯೇ ಮಾಡುತ್ತಾರೆಯೇ? ಸುಪ್ರೀಂ ಕೋರ್ಟ್‌ನಲ್ಲಿ ಮಹಿಳೆಯರು ಹೋಗಿ ಅತ್ಯಾಚಾರದ ದೂರು ನೀಡಿದರೂ ಪ್ರಕರಣ ದಾಖಲಾಗದ ಪ್ರಕರಣಗಳನ್ನು ನಾವು ಪ್ರತಿದಿನ ನೋಡುತ್ತೇವೆ. ನಾವು ಕಳೆದ ವರ್ಷ ಹತ್ರಾಸ್‌ ಪ್ರಕರಣ ಹಾಗೂ ಇತರ ಹಲವು ನಿದರ್ಶನ ಕಂಡಿದ್ದೇವೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...