Homeಮುಖಪುಟಜುಬೇರ್‌ ಪ್ರಕರಣ: ಜಾಮೀನು ನೀಡಲು ನ್ಯಾಯಾಧೀಶರು ಹೆದರುತ್ತಿದ್ದಾರೆ- ಜಸ್ಟೀಸ್‌ ದೀಪಕ್‌ ಗುಪ್ತಾ

ಜುಬೇರ್‌ ಪ್ರಕರಣ: ಜಾಮೀನು ನೀಡಲು ನ್ಯಾಯಾಧೀಶರು ಹೆದರುತ್ತಿದ್ದಾರೆ- ಜಸ್ಟೀಸ್‌ ದೀಪಕ್‌ ಗುಪ್ತಾ

- Advertisement -
- Advertisement -

ಆಲ್ಟ್‌ನ್ಯೂಸ್ ಸಹಸಂಸ್ಥಾಪಕ ಮೊಹಮ್ಮದ್‌ ಜುಬೇರ್ ಪ್ರಕರಣದಲ್ಲಿ ಏನೋ ತಪ್ಪಾಗಿದೆ ಎಂದು ನಾನು ಭಾವಿಸುತ್ತೇನೆ ಎಂದು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ದೀಪಕ್ ಗುಪ್ತಾ ಅಭಿಪ್ರಾಯಪಟ್ಟಿದ್ದಾರೆ.

ಕಾನೂನು ವಿದ್ಯಮಾನಗಳ ವರದಿಗಳನ್ನು ಮಾಡುವ ‘ಲೈವ್‌ ಲಾ’ ಜಾಲತಾಣದೊಂದಿಗೆ ಮಾತನಾಡಿರುವ ಅವರು, ಜುಬೇರ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಹತ್ವದ ಸಂಗತಿಗಳ ಕುರಿತು ಪ್ರಸ್ತಾಪ ಮಾಡಿದ್ದಾರೆ.

“ಈ ಟ್ವೀಟ್‌ ಮಾಡಿ ನಾಲ್ಕು ವರ್ಷಗಳಾಯಿತು. ಪೋಸ್ಟ್‌ ಮಾಡಲಾಗಿರುವ ಚಲನಚಿತ್ರದ ದೃಶ್ಯವನ್ನು ನಿರ್ಮಿಸಿ 40 ವರ್ಷಗಳಾಗಿದೆ. ಯಾವುದೇ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿಲ್ಲ. ಯಾರೂ ದೂರು ನೀಡಿಲ್ಲ. ಪೊಲೀಸರು ಇದ್ದಕ್ಕಿದ್ದಂತೆ ಹೇಗೆ ಎಚ್ಚರಗೊಂಡರು?” ಎಂದು ಅವರು ಪ್ರಶ್ನಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಾರ್ವಜನಿಕ ಅಭಿಪ್ರಾಯಕ್ಕೆ ಭಯಬಿದ್ದು ಅನೇಕ ನ್ಯಾಯಾಧೀಶರು ಜಾಮೀನು ನೀಡಲು ಹೆದರುತ್ತಿದ್ದಾರೆ ಎಂದು ಹೇಳುತ್ತಿರುವುದಕ್ಕೆ ಕ್ಷಮೆ ಇರಲಿ. ನಮ್ಮ ಜೈಲುಗಳು ವಿಚಾರಣಾಧೀನ ಕೈದಿಗಳಿಂದ ತುಂಬಿವೆ. ಅವರಲ್ಲಿ 70-80% ಜನರು ಖುಲಾಸೆಯಾಗಿದ್ದಾರೆ. ನ್ಯಾಯಾಧೀಶರು ಮನಸ್ಥಿತಿಯನ್ನು ಬದಲಿಸಿ ದೇಶದ ನಿಯಮವನ್ನು ಅನುಸರಿಸಬೇಕು. ದೇಶದ ನಿಯಮ ಜಾಮೀನು ನೀಡುವುದಾಗಿದೆಯೇ ಹೊರತು ಜೈಲಲ್ಲ ಎಂದು ಜಸ್ಟೀಸ್‌ ದೀಪಕ್‌ ಗುಪ್ತಾ ತಿಳಿಸಿದ್ದಾರೆ.

ಜನರ ಹಕ್ಕುಗಳ ಪಾಲಕರಾಗಿ ಉನ್ನತ ನ್ಯಾಯಾಲಯಗಳು ವಿವಾದಗಳ ತೀರ್ಪುಗಾರರಾಗಿ ಉತ್ತಮ ಕೆಲಸ ಮಾಡುತ್ತಿದ್ದರೂ, ಸುಧಾರಣೆಗೆ ಅವಕಾಶವಿದೆ ಎಂದಿದ್ದಾರೆ.

ಸರಿಯಾದ ಪರೀಕ್ಷೆ ನಡೆಸದೆ ನ್ಯಾಯಾಲಯಗಳು ಜಾಮೀನು ನಿರಾಕರಿಸುವ ಆತಂಕಕಾರಿ ಪ್ರವೃತ್ತಿಯ ಬಗ್ಗೆ ಅವರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕ ಅಭಿಪ್ರಾಯದ ಭಯದಿಂದ ಅನೇಕ ನ್ಯಾಯಾಧೀಶರು ಜಾಮೀನು ನೀಡಲು ಹೆದರುತ್ತಾರೆ. ಮ್ಯಾಜಿಸ್ಟ್ರೇಟ್‌ಗಳಿಗೆ ತರಬೇತಿ ನೀಡುವ ನ್ಯಾಯಾಂಗ ಅಕಾಡೆಮಿಗಳು ನಾಗರಿಕರ ಮೂಲಭೂತ ಹಕ್ಕುಗಳ ರಕ್ಷಣೆಗಾಗಿ ನಾವಿದ್ದೇವೆ ಎಂಬುದನ್ನು ಅವರ ಮನಸ್ಸಿನಲ್ಲಿ ತುಂಬಬೇಕು ಎಂದಿದ್ದಾರೆ.

“ನಾನು ‘ದುರುದ್ದೇಶಪೂರಿತ’ ಎಂದು ಹೇಳುವ ಮಟ್ಟಕ್ಕೆ ಹೋಗುವುದಿಲ್ಲ. ಕಾನೂನಿನಲ್ಲಿನ ದುರುದ್ದೇಶವು ತುಂಬಾ ವಿಭಿನ್ನವಾಗಿದೆ. ಆದರೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಏನೋ ತಪ್ಪಾಗಿದೆ ಎಂದು ನಾನು ಖಂಡಿತವಾಗಿ ಭಾವಿಸುತ್ತೇನೆ” ಎಂದು ಸ್ಪಷ್ಟಪಡಿಸಿದ್ದಾರೆ.

ಎರಡು ಧಾರ್ಮಿಕ ಸಮುದಾಯಗಳ ನಡುವೆ ದೊಡ್ಡ ಅಸಮಾಧಾನವನ್ನು ಉಂಟುಮಾಡುವ ಸಾಧ್ಯತೆಯಿರುವ ಯಾವುದೋ ವಿಷಯದ ವ್ಯಾಪ್ತಿಯಲ್ಲಿ ಈ ಟ್ವೀಟ್‌ ಬರುತ್ತದೆಯೇ? ಏನಾದರೂ ಅಪರಾಧವಾಗಬೇಕಾದರೆ, ಅದು ಧಾರ್ಮಿಕ ಭಾವನೆಗಳನ್ನು ನೋಯಿಸುವ ಪ್ರವೃತ್ತಿಯನ್ನು ಹೊಂದಿರಬೇಕು. ಈ ಟ್ವೀಟ್‌ ಮಾಡಿ ನಾಲ್ಕು ವರ್ಷಗಳ ನಂತರ ಮತ್ತು ಈ ಚಲನಚಿತ್ರವು ತಯಾರಾಗಿ 40 ವರ್ಷಗಳ ನಂತರ ವಿವಾದ ಸೃಷ್ಟಿಯಾಗಿದೆ. ಯಾವುದೇ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿಲ್ಲ. ಯಾರೂ ಈ ಟ್ವೀಟ್‌ಗೆ ದೂರು ನೀಡಿಲ್ಲ. ಪೊಲೀಸರು ಏಕಾಏಕಿ ಎಚ್ಚೆತ್ತುಕೊಂಡು ನಮಗೆ ಅನಾಮಧೇಯ ದೂರು ಬಂದಿದೆ ಎಂದು ಹೇಗೆ ಹೇಳುತ್ತಾರೆ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: ಖ್ಯಾತ ಪತ್ರಕರ್ತ ಮೊಹಮ್ಮದ್ ಜುಬೇರ್ ಜಾಮೀನು ನಿರಾಕರಣೆ; ಹೊಸ ಆರೋಪಗಳನ್ನು ಸೇರಿಸಿದ ಪೊಲೀಸರು!

ಇಂದು ನೀವು ದೂರು ನೀಡಲು ಹೋದರೆ, ಬಡವರು ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಹೋದರೆ, ತುಂಬಾ ಗಂಭೀರವಾದ ಅಪರಾಧದಲ್ಲೂ ದೂರು ದಾಖಲಿಸುವುದು ತುಂಬಾ ಕಷ್ಟ. ಅವರು ‘ಲಿಖಿತ ದೂರು ಸಲ್ಲಿಸಿ, ಅಫಿಡವಿಟ್ ಸಲ್ಲಿಸಿ’ ಎಂದು ಹೇಳುತ್ತಾರೆ. ಈಗ ಟ್ವೀಟ್‌ ಸಂಬಂಧ ದೂರು ನೀಡಲಾಗಿದೆ ಎಂದು ಅವರು ಹೇಳುತ್ತಾರೆ. ಇದು ಕಾನೂನುಬಾಹಿರ ಎಂದು ನಾನು ಹೇಳುತ್ತಿಲ್ಲ – ಅವರು ಅದನ್ನು ಮಾಡಬಹುದು. ಆದರೆ ಸಾಮಾನ್ಯ ಪ್ರಕರಣಗಳಲ್ಲಿ ಅವರು ಹೀಗೆಯೇ ಮಾಡುತ್ತಾರೆಯೇ? ಸುಪ್ರೀಂ ಕೋರ್ಟ್‌ನಲ್ಲಿ ಮಹಿಳೆಯರು ಹೋಗಿ ಅತ್ಯಾಚಾರದ ದೂರು ನೀಡಿದರೂ ಪ್ರಕರಣ ದಾಖಲಾಗದ ಪ್ರಕರಣಗಳನ್ನು ನಾವು ಪ್ರತಿದಿನ ನೋಡುತ್ತೇವೆ. ನಾವು ಕಳೆದ ವರ್ಷ ಹತ್ರಾಸ್‌ ಪ್ರಕರಣ ಹಾಗೂ ಇತರ ಹಲವು ನಿದರ್ಶನ ಕಂಡಿದ್ದೇವೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...