Homeರಾಷ್ಟ್ರೀಯಜುಬೇರ್‌ ಪ್ರಕರಣಗಳ ‘ವಿಷ ವರ್ತುಲ’ದಲ್ಲಿ ಸಿಲುಕಿದ್ದಾರೆ: ಸುಪ್ರೀಂಕೋರ್ಟ್‌ ಹೇಳಿಕೆ

ಜುಬೇರ್‌ ಪ್ರಕರಣಗಳ ‘ವಿಷ ವರ್ತುಲ’ದಲ್ಲಿ ಸಿಲುಕಿದ್ದಾರೆ: ಸುಪ್ರೀಂಕೋರ್ಟ್‌ ಹೇಳಿಕೆ

ಜುಲೈ 20ರ ವರೆಗೆ ಯುಪಿ ಪೊಲೀಸರು ಅವರನ್ನು ಬಂಧಿಸುವಂತಿಲ್ಲ ಎಂದು ಕೋರ್ಟ್ ಹೇಳಿದೆ

- Advertisement -
- Advertisement -

ಅಂತಾರಾಷ್ಟ್ರೀಯ ಖ್ಯಾತಿಯ ಫ್ಯಾಕ್ಟ್‌ಚೆಕ್ಕರ್‌‌, ಪತ್ರಕರ್ತ ಮೊಹಮ್ಮದ್ ಜುಬೇರ್‌ ವಿರುದ್ಧ ಉತ್ತರ ಪ್ರದೇಶದಲ್ಲಿ ದಾಖಲಾದ ಐದು ಎಫ್‌ಐಆರ್‌ಗಳಿಗೆ ಸಂಬಂಧಿಸಿದಂತೆ ಪೊಲೀಸರು ಯಾವುದೇ ಆತುರದ ಕ್ರಮ ಕೈಗೊಳ್ಳದಂತೆ ಸೋಮವಾರದಂದು ಸುಪ್ರೀಂಕೋರ್ಟ್ ಜುಲೈ 20 ರವರೆಗೆ ರಕ್ಷಣೆ ಒದಗಿಸಿದೆ. ಜೊತೆಗೆ ಅವರು ಅನೇಕ ಪ್ರಕರಣಗಳ ‘ವಿಷ ವರ್ತುಲ’ ದಲ್ಲಿ ಸಿಕ್ಕಿಬಿದ್ದಿದ್ದಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಸುಪ್ರೀಂ ಕೋರ್ಟ್ ಯುಪಿ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ್ದು, ಐದು ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರಿದ್ದ ಜುಬೈರ್ ಅವರ ಮನವಿಯನ್ನು ಬುಧವಾರ ವಿಚಾರಣೆಗೆ ಮುಂದೂಡಿದೆ. ಜುಬೈರ್ ವಿರುದ್ಧ ದಾಖಲಾಗಿರುವ ಐದು ಎಫ್‌ಐಆರ್‌ಗಳ ಅಡಿಯಲ್ಲಿ ಜುಲೈ 20ರ ವರೆಗೆ ಯುಪಿ ಪೊಲೀಸರು ಬಂಧಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶದ ಅರ್ಥ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜುಬೈರ್ ಪರ ವಕೀಲರಾದ ವೃಂದಾ ಗ್ರೋವರ್ ಅವರು ನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್ ಮತ್ತು ಎ ಎಸ್ ಬೋಪಣ್ಣ ಅವರ ಪೀಠಕ್ಕೆ ಎಫ್‌ಐಆರ್‌ಗಳ ವಿಷಯವು ದೆಹಲಿ ಪೊಲೀಸರು ದಾಖಲಿಸಿದಂತೆಯೇ ಇದೆ ಎಂದು ಹೇಳಿದ್ದಾರೆ. ದೆಹಲಿ ಪೊಲೀಸರು ಜಬೇರ್‌ ಅವರ ಟ್ವೀಟ್‌ಗಳಲ್ಲಿ ಹಿಂದೂ ದೇವರು ಮತ್ತು ದೇವತೆಗಳನ್ನು ನಿಂದಿಸಲಾಗಿದೆ ಮತ್ತು ವಿದೇಶದಿಂದ ಅನಧಿಕೃತ ಹಣವನ್ನು ಪಡೆದಿವೆ ಎಂದು ಆರೋಪಿಸಲಾಗಿತ್ತು.

ಇದನ್ನೂ ಓದಿ: ಜುಬೇರ್‌ ಬಂಧನ: ಬರವಣಿಗೆ, ಟ್ವೀಟ್ ಆಧಾರದಲ್ಲಿ ಪತ್ರಕರ್ತರನ್ನು ಜೈಲಿಗೆ ಹಾಕಬಾರದು- ವಿಶ್ವಸಂಸ್ಥೆ

“ಐದು ಎಫ್‌ಐಆರ್‌ಗಳಿಗೆ ಸಂಬಂಧಿಸಿದಂತೆ ಜುಬೈರ್ ವಿರುದ್ಧ ಆತುರದ ಕ್ರಮವನ್ನು ತಡೆಹಿಡಿಯಲಾಗಿದೆ. ಯಾಕೆಂದರೆ ಅವರು ಒಂದು ಪ್ರಕರಣದಲ್ಲಿ ಜಾಮೀನು ಪಡೆದ ತಕ್ಷಣ ಹೊಸ ಎಫ್‌ಐಆರ್‌ನಲ್ಲಿ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗುತ್ತಿದೆ. ಆದರೆ ಈ ಹೊಸ ಪ್ರಕರಣಗಳ ವಿಷಯವು ಹಳೆಯ ಎಫ್‌ಐಆರ್‌ ಅನ್ನು ಹೋಲುತ್ತದೆ ಎಂದು ತೋರುತ್ತಿದೆ” ಎಂದು ಸುಪ್ರೀಂಕೋರ್ಟ್ ಹೇಳಿದೆ.

ಧಾರ್ಮಿಕ ಭಾವನೆಗಳಿಗೆ ನೋವು ಮಾಡಿರುವ ಆರೋಪದ ಮೇಲೆ ಉತ್ತರ ಪ್ರದೇಶದ ಹಲವು ಜಿಲ್ಲೆಗಳಲ್ಲಿ ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿಯ ತುರ್ತು ಪಟ್ಟಿ ಮಾಡಬೇಕು ಎಂದು ಸೋಮವಾರ ಜುಬೇರ್‌ ಕೋರಿದ್ದರು.

ಅರ್ಜಿದಾರರು, ಫ್ಯಾಕ್ಟ್‌ಚೆಕ್ಕರ್‌ ಮತ್ತು ಪತ್ರಕರ್ತರಾಗಿದ್ದು ಹಲವಾರು ಎಫ್‌ಐಆರ್‌ಗಳನ್ನು ಎದುರಿಸುತ್ತಿದ್ದಾರೆ. ಅವರ ಮನವಿಯನ್ನು ತುರ್ತು ವಿಚಾರಣೆಯ ಅಗತ್ಯವಿದೆ ಎಂದು ಜುಬೇರ್‌ ಪರವಾಗಿ ಹಾಜರಾದ ವಕೀಲೆ ವೃಂದಾ ಗ್ರೋವರ್ ಅವರ ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ಪೀಠವು ಗಮನಿಸಿದೆ. “ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ಮುಂದೆ ಪಟ್ಟಿ ಮಾಡಿ. ಆ ಪೀಠದ ಮುಂದೆ ನೀವು ಪ್ರಕರಣಗಳನ್ನು ಪ್ರಸ್ತಾಪಿಸಬಹುದು” ಎಂದು ಸಿಜೆಐ ಪೀಠ ಹೇಳಿದೆ.

ಇದನ್ನೂ ಓದಿ: ಜುಬೇರ್‌ ಪ್ರಕರಣ: ಜಾಮೀನು ನೀಡಲು ನ್ಯಾಯಾಧೀಶರು ಹೆದರುತ್ತಿದ್ದಾರೆ- ಜಸ್ಟೀಸ್‌ ದೀಪಕ್‌ ಗುಪ್ತಾ

ಜುಬೇರ್‌ನ ಹೊಸ ಮನವಿಯು ಆರು ಪ್ರಕರಣಗಳ ತನಿಖೆಗಾಗಿ ಉತ್ತರ ಪ್ರದೇಶ ಸರ್ಕಾರದಿಂದ ವಿಶೇಷ ತನಿಖಾ ತಂಡದ (ಎಸ್‌ಐಟಿ) ರಚನೆಯನ್ನು ಪ್ರಶ್ನಿಸಿದೆ. ರಾಜ್ಯದಲ್ಲಿ ದಾಖಲಾಗಿರುವ ಎಲ್ಲಾ ಆರು ಎಫ್‌ಐಆರ್‌ಗಳನ್ನು ತನಿಖೆಗಾಗಿ ಎಸ್‌ಐಟಿಗೆ ವರ್ಗಾಯಿಸಲಾಗಿದ್ದು, ದೆಹಲಿ ಪೊಲೀಸ್ ವಿಶೇಷ ಸೆಲ್‌ ಕೂಡಾ ಅದೇ ಎಫ್‌ಐಆರ್‌ನ ವಿಷಯದ ಮೇಲೆ ತನಿಖೆ ನಡೆಸುತ್ತಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...