Homeರಾಷ್ಟ್ರೀಯಜುಬೇರ್‌ ಪ್ರಕರಣಗಳ ‘ವಿಷ ವರ್ತುಲ’ದಲ್ಲಿ ಸಿಲುಕಿದ್ದಾರೆ: ಸುಪ್ರೀಂಕೋರ್ಟ್‌ ಹೇಳಿಕೆ

ಜುಬೇರ್‌ ಪ್ರಕರಣಗಳ ‘ವಿಷ ವರ್ತುಲ’ದಲ್ಲಿ ಸಿಲುಕಿದ್ದಾರೆ: ಸುಪ್ರೀಂಕೋರ್ಟ್‌ ಹೇಳಿಕೆ

ಜುಲೈ 20ರ ವರೆಗೆ ಯುಪಿ ಪೊಲೀಸರು ಅವರನ್ನು ಬಂಧಿಸುವಂತಿಲ್ಲ ಎಂದು ಕೋರ್ಟ್ ಹೇಳಿದೆ

- Advertisement -
- Advertisement -

ಅಂತಾರಾಷ್ಟ್ರೀಯ ಖ್ಯಾತಿಯ ಫ್ಯಾಕ್ಟ್‌ಚೆಕ್ಕರ್‌‌, ಪತ್ರಕರ್ತ ಮೊಹಮ್ಮದ್ ಜುಬೇರ್‌ ವಿರುದ್ಧ ಉತ್ತರ ಪ್ರದೇಶದಲ್ಲಿ ದಾಖಲಾದ ಐದು ಎಫ್‌ಐಆರ್‌ಗಳಿಗೆ ಸಂಬಂಧಿಸಿದಂತೆ ಪೊಲೀಸರು ಯಾವುದೇ ಆತುರದ ಕ್ರಮ ಕೈಗೊಳ್ಳದಂತೆ ಸೋಮವಾರದಂದು ಸುಪ್ರೀಂಕೋರ್ಟ್ ಜುಲೈ 20 ರವರೆಗೆ ರಕ್ಷಣೆ ಒದಗಿಸಿದೆ. ಜೊತೆಗೆ ಅವರು ಅನೇಕ ಪ್ರಕರಣಗಳ ‘ವಿಷ ವರ್ತುಲ’ ದಲ್ಲಿ ಸಿಕ್ಕಿಬಿದ್ದಿದ್ದಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಸುಪ್ರೀಂ ಕೋರ್ಟ್ ಯುಪಿ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ್ದು, ಐದು ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರಿದ್ದ ಜುಬೈರ್ ಅವರ ಮನವಿಯನ್ನು ಬುಧವಾರ ವಿಚಾರಣೆಗೆ ಮುಂದೂಡಿದೆ. ಜುಬೈರ್ ವಿರುದ್ಧ ದಾಖಲಾಗಿರುವ ಐದು ಎಫ್‌ಐಆರ್‌ಗಳ ಅಡಿಯಲ್ಲಿ ಜುಲೈ 20ರ ವರೆಗೆ ಯುಪಿ ಪೊಲೀಸರು ಬಂಧಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶದ ಅರ್ಥ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜುಬೈರ್ ಪರ ವಕೀಲರಾದ ವೃಂದಾ ಗ್ರೋವರ್ ಅವರು ನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್ ಮತ್ತು ಎ ಎಸ್ ಬೋಪಣ್ಣ ಅವರ ಪೀಠಕ್ಕೆ ಎಫ್‌ಐಆರ್‌ಗಳ ವಿಷಯವು ದೆಹಲಿ ಪೊಲೀಸರು ದಾಖಲಿಸಿದಂತೆಯೇ ಇದೆ ಎಂದು ಹೇಳಿದ್ದಾರೆ. ದೆಹಲಿ ಪೊಲೀಸರು ಜಬೇರ್‌ ಅವರ ಟ್ವೀಟ್‌ಗಳಲ್ಲಿ ಹಿಂದೂ ದೇವರು ಮತ್ತು ದೇವತೆಗಳನ್ನು ನಿಂದಿಸಲಾಗಿದೆ ಮತ್ತು ವಿದೇಶದಿಂದ ಅನಧಿಕೃತ ಹಣವನ್ನು ಪಡೆದಿವೆ ಎಂದು ಆರೋಪಿಸಲಾಗಿತ್ತು.

ಇದನ್ನೂ ಓದಿ: ಜುಬೇರ್‌ ಬಂಧನ: ಬರವಣಿಗೆ, ಟ್ವೀಟ್ ಆಧಾರದಲ್ಲಿ ಪತ್ರಕರ್ತರನ್ನು ಜೈಲಿಗೆ ಹಾಕಬಾರದು- ವಿಶ್ವಸಂಸ್ಥೆ

“ಐದು ಎಫ್‌ಐಆರ್‌ಗಳಿಗೆ ಸಂಬಂಧಿಸಿದಂತೆ ಜುಬೈರ್ ವಿರುದ್ಧ ಆತುರದ ಕ್ರಮವನ್ನು ತಡೆಹಿಡಿಯಲಾಗಿದೆ. ಯಾಕೆಂದರೆ ಅವರು ಒಂದು ಪ್ರಕರಣದಲ್ಲಿ ಜಾಮೀನು ಪಡೆದ ತಕ್ಷಣ ಹೊಸ ಎಫ್‌ಐಆರ್‌ನಲ್ಲಿ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗುತ್ತಿದೆ. ಆದರೆ ಈ ಹೊಸ ಪ್ರಕರಣಗಳ ವಿಷಯವು ಹಳೆಯ ಎಫ್‌ಐಆರ್‌ ಅನ್ನು ಹೋಲುತ್ತದೆ ಎಂದು ತೋರುತ್ತಿದೆ” ಎಂದು ಸುಪ್ರೀಂಕೋರ್ಟ್ ಹೇಳಿದೆ.

ಧಾರ್ಮಿಕ ಭಾವನೆಗಳಿಗೆ ನೋವು ಮಾಡಿರುವ ಆರೋಪದ ಮೇಲೆ ಉತ್ತರ ಪ್ರದೇಶದ ಹಲವು ಜಿಲ್ಲೆಗಳಲ್ಲಿ ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿಯ ತುರ್ತು ಪಟ್ಟಿ ಮಾಡಬೇಕು ಎಂದು ಸೋಮವಾರ ಜುಬೇರ್‌ ಕೋರಿದ್ದರು.

ಅರ್ಜಿದಾರರು, ಫ್ಯಾಕ್ಟ್‌ಚೆಕ್ಕರ್‌ ಮತ್ತು ಪತ್ರಕರ್ತರಾಗಿದ್ದು ಹಲವಾರು ಎಫ್‌ಐಆರ್‌ಗಳನ್ನು ಎದುರಿಸುತ್ತಿದ್ದಾರೆ. ಅವರ ಮನವಿಯನ್ನು ತುರ್ತು ವಿಚಾರಣೆಯ ಅಗತ್ಯವಿದೆ ಎಂದು ಜುಬೇರ್‌ ಪರವಾಗಿ ಹಾಜರಾದ ವಕೀಲೆ ವೃಂದಾ ಗ್ರೋವರ್ ಅವರ ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ಪೀಠವು ಗಮನಿಸಿದೆ. “ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ಮುಂದೆ ಪಟ್ಟಿ ಮಾಡಿ. ಆ ಪೀಠದ ಮುಂದೆ ನೀವು ಪ್ರಕರಣಗಳನ್ನು ಪ್ರಸ್ತಾಪಿಸಬಹುದು” ಎಂದು ಸಿಜೆಐ ಪೀಠ ಹೇಳಿದೆ.

ಇದನ್ನೂ ಓದಿ: ಜುಬೇರ್‌ ಪ್ರಕರಣ: ಜಾಮೀನು ನೀಡಲು ನ್ಯಾಯಾಧೀಶರು ಹೆದರುತ್ತಿದ್ದಾರೆ- ಜಸ್ಟೀಸ್‌ ದೀಪಕ್‌ ಗುಪ್ತಾ

ಜುಬೇರ್‌ನ ಹೊಸ ಮನವಿಯು ಆರು ಪ್ರಕರಣಗಳ ತನಿಖೆಗಾಗಿ ಉತ್ತರ ಪ್ರದೇಶ ಸರ್ಕಾರದಿಂದ ವಿಶೇಷ ತನಿಖಾ ತಂಡದ (ಎಸ್‌ಐಟಿ) ರಚನೆಯನ್ನು ಪ್ರಶ್ನಿಸಿದೆ. ರಾಜ್ಯದಲ್ಲಿ ದಾಖಲಾಗಿರುವ ಎಲ್ಲಾ ಆರು ಎಫ್‌ಐಆರ್‌ಗಳನ್ನು ತನಿಖೆಗಾಗಿ ಎಸ್‌ಐಟಿಗೆ ವರ್ಗಾಯಿಸಲಾಗಿದ್ದು, ದೆಹಲಿ ಪೊಲೀಸ್ ವಿಶೇಷ ಸೆಲ್‌ ಕೂಡಾ ಅದೇ ಎಫ್‌ಐಆರ್‌ನ ವಿಷಯದ ಮೇಲೆ ತನಿಖೆ ನಡೆಸುತ್ತಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...