Homeರಾಷ್ಟ್ರೀಯಜುಬೇರ್‌‌‌ ಬಂಧನದ ಐದು ದಿನದ ನಂತರ ದೂರುದಾರನನ್ನು ಹುಡುಕುತ್ತಿರುವ ದೆಹಲಿ ಪೊಲೀಸರು!

ಜುಬೇರ್‌‌‌ ಬಂಧನದ ಐದು ದಿನದ ನಂತರ ದೂರುದಾರನನ್ನು ಹುಡುಕುತ್ತಿರುವ ದೆಹಲಿ ಪೊಲೀಸರು!

ಪ್ರಕರಣವನ್ನು ಜುಲೈ 27 ರಂದು ಕೈಗೆತ್ತಿಕೊಳ್ಳಲಾಗುವುದು ಎಂದು ನ್ಯಾಯಾಲಯ ಹೇಳಿದೆ

- Advertisement -
- Advertisement -

ಅಂತಾರಾಷ್ಟ್ರೀಯ ಖ್ಯಾತಿಯ ಫ್ಯಾಕ್ಟ್‌ಚೆಕ್ಕರ್‌, ಪತ್ರಕರ್ತ ಮೊಹಮ್ಮದ್‌ ಜುಬೇರ್‌ ಬಂಧನ ಪ್ರಕರಣದ ಕುರಿತಂತೆ ದೆಹಲಿ ಪೊಲೀಸರು ಟ್ವಿಟರ್‌ಗೆ ಶುಕ್ರವಾರ ನೋಟಿಸ್ ಕಳುಹಿಸಿದ್ದು, ‘ಹನುಮಾನ್ ಭಕ್ತ್‌‌@balajikijaiin’ ಖಾತೆಯ ವಿವರಗಳನ್ನು ನೀಡುವಂತೆ ಕೇಳಿದ್ದಾರೆ. ಈ ಖಾತೆಯೂ, 2018 ರಲ್ಲಿ ಜುಬೇರ್‌ ಪೋಸ್ಟ್ ಮಾಡಿದ ಟ್ವೀಟ್‌ ಅನ್ನು ದೆಹಲಿ ಪೊಲೀಸರಿಗೆ ಟ್ಯಾಗ್ ಮಾಡಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಳಿಕೊಂಡಿತ್ತು. ಇದರ ನಂತರ ದೆಹಲಿ ಪೊಲೀಸರ ‘ಐಎಫ್‌ಎಸ್‌ಒ’ ಶಾಖೆ ಜುಬೈರ್ ವಿರುದ್ಧ ಪ್ರಕರಣ ದಾಖಲಿಸಿ ಸೋಮವಾರ ಅವರನ್ನು ಬಂಧಿಸಿತ್ತು.

ಟ್ರಯಲ್ ಕೋರ್ಟ್ ನೀಡಿದ ನಾಲ್ಕು ದಿನಗಳ ಪೊಲೀಸ್ ಕಸ್ಟಡಿಯನ್ನು ಪ್ರಶ್ನಿಸಿ ಜುಬೇರ್ ಸಲ್ಲಿಸಿರುವ ಅರ್ಜಿಯ ಕುರಿತು ದೆಹಲಿ ಹೈಕೋರ್ಟ್ ಶುಕ್ರವಾರ ನೋಟಿಸ್ ಜಾರಿ ಮಾಡಿದೆ. ಅವರಿಗೆ ನೀಡಲಾಗಿದ್ದ ನಾಲ್ಕು ದಿನಗಳ ರಿಮಾಂಡ್ ಆದೇಶವು ನಾಳೆ ಕೊನೆಗೊಳ್ಳುತ್ತದೆ, ಜುಲೈ 2 ರಂದು ಅವರನ್ನು ಸಂಬಂಧಪಟ್ಟ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ನ್ಯಾಯಮೂರ್ತಿ ಸಂಜೀವ್ ನರುಲಾ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅವರು ಕಸ್ಟಡಿ ವಿಸ್ತರಣೆಗೆ ಪ್ರಯತ್ನಿಸುತ್ತಿದ್ದಾರೆಯೇ ಎಂದು ನನಗೆ ತಿಳಿದಿಲ್ಲ, ಬಹಷಃ… ಆರೋಪಿಯನ್ನು ಬಿಡುಗಡೆ ಮಾಡಬಹುದು ಅಥವಾ ನ್ಯಾಯಾಂಗ ಬಂಧನಕ್ಕೆ ಕಳುಹಿಸಬಹುದು. ನೀವು ಈ ವಿಚಾರಗಳನ್ನು ಟ್ರಯಲ್ ಕೋರ್ಟ್‌ನಲ್ಲಿ ಯಾಕೆ ಒತ್ತಾಯಿಸಬಾರದು?… ನೀವು ಪ್ರಕರಣದ ಕಾನೂನು ಬದ್ಧತೆಯ ಬಗ್ಗೆ ಮಾತನಾಡುತ್ತಿದ್ದರೆ, ನಾನು ನೋಟಿಸ್ ಜಾರಿ ಮಾಡಬೇಕು, ಇನ್ನೊಂದು ಕಡೆಯವರಿಗೆ ಕಳುಹಿಸಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ತೀಸ್ತಾ, ಜುಬೇರ್‌‌ ಬಂಧನ ಆತಂಕಕಾರಿ: ನೊಬೆಲ್‌ ಪ್ರಶಸ್ತಿ ಪುರಸ್ಕೃತ ಪತ್ರಕರ್ತೆ ಮಾರಿಯಾ ಪ್ರತಿಕ್ರಿಯೆ

ಜುಬೇರ್‌ ವಿರುದ್ಧ ಸಲ್ಲಿಸಲಾದ ಪ್ರಕರಣದ ಬಗ್ಗೆ ಅಫಿಡವಿಟ್‌ ಸಲ್ಲಿಸಲು ನ್ಯಾಯಾಲಯವು ಎರಡು ವಾರಗಳ ಕಾಲಾವಕಾಶವನ್ನು ಪ್ರತಿವಾದಿಗಳಿಗೆ ನೀಡಿದೆ. ಪ್ರತಿವಾದಗಳು ಏನಾದರೂ ಇದ್ದರೆ, ಒಂದು ವಾರದೊಳಗೆ ಅವುಗಳನ್ನು ಸಲ್ಲಿಸಬೇಕು ಎಂದು ಹೇಳಿದ್ದು, ಜುಲೈ 27 ರಂದು ಈ ಪ್ರಕರಣವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿದೆ.

ಸಿಆರ್‌ಪಿಸಿಯ ಸೆಕ್ಷನ್ 91 ರ ಅಡಿಯಲ್ಲಿ ಬುಧವಾರ ಸಂಜೆ ಟ್ವಿಟರ್‌ಗೆ ನೋಟಿಸ್ ಕಳುಹಿಸಲಾಗಿದೆ ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿವೆ. “ಅನಾಮಧೇಯ ಟ್ವಿಟರ್ ಹ್ಯಾಂಡಲ್ @balajikijaiin ನ ಐಪಿ ಲಾಗ್ ವಿವರಗಳು, ಖಾತೆಯ ನೋಂದಣಿ ವಿವರಗಳು, ಮೊಬೈಲ್ ಸಂಖ್ಯೆ, ಸಂಪರ್ಕಿತ ಇಮೇಲ್ ಐಡಿ ಮತ್ತು ಬಳಕೆದಾರರು ಬಳಸುವ ಸಾಧನವನ್ನು ಒದಗಿಸಲು ನಾವು ಅವರನ್ನು ಕೇಳಿದ್ದೇವೆ” ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಬುಧವಾರದಂದು ಈ ಖಾತೆಯನ್ನು ಅಳಿಸಲಾಗಿತ್ತು, ಆದರೆ ನಂತರ ಗುರುವಾರ ಸಂಜೆಯ ಹೊತ್ತಿಗೆ ಅದು ಮತ್ತೇ ವಾಪಾಸಾಗಿತ್ತು. ಈ ಬಗ್ಗೆ ಬುಧವಾರದಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾತನಾಡಿ, “ವ್ಯಕ್ತಿ ತನ್ನ ಖಾತೆಯನ್ನು ಅಳಿಸಿದ್ದಾನೆ ಎಂದು ನಮಗೆ ತಿಳಿದು ಬಂದಿದೆ. ಆದಾಗ್ಯೂ, ಇದು ನಮ್ಮ ತನಿಖೆಯ ಮೇಲೆ ಪರಿಣಾಮ ಬೀರುವುದಿಲ್ಲ. ಜುಬೈರ್ ಅವರ ಹಳೆಯ ಟ್ವೀಟ್ ವಿಚಾರವಾಗಿ ತನಿಖೆ ಮಾಡುತ್ತಿದ್ದೇವೆ. ನಾವು ವ್ಯಕ್ತಿಯನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದೇವೆ ಮತ್ತು ದೂರಿನ ಬಗ್ಗೆ ಕೇಳುತ್ತೇವೆ. ಅವರು ಹೆದರಿ ಅಕೌಂಟ್ ಡಿಲೀಟ್ ಮಾಡಿರಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅನಾಮಧೇಯ ಟ್ವಿಟರ್‌ ಅಕೌಂಟ್‌‌‌ ಬಿಜೆಪಿ ಐಟಿ ಸೆಲ್‌ನದ್ದು: ಸಾಮಾಜಿಕ ಹೋರಾಟಗಾರ ಸಾಕೇತ್‌ ಗೋಖಲೆ

ಮಂಗಳವಾರ ನಡೆದ ಜುಬೈರ್ ಅವರ ಬಂಧನದ ವಿಚಾರಣೆಯ ಸಂದರ್ಭದಲ್ಲಿ, ಟ್ವಿಟರ್ ಖಾತೆಯನ್ನು ನಡೆಸುತ್ತಿರುವ ವ್ಯಕ್ತಿ ‘ಅನಾಮಧೇಯನಲ್ಲ’ ಎಂದು ಪೊಲೀಸರು ನ್ಯಾಯಾಲಯದಲ್ಲಿ ಹೇಳಿದ್ದರು.

ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಸ್ನಿಗ್ಧಾ ಸವಾರಿಯಾ ಅವರ ಮುಂದೆ ರಿಮಾಂಡ್ ಅರ್ಜಿಯನ್ನು ವಿರೋಧಿಸಿದ ಜುಬೈರ್ ಅವರ ವಕೀಲೆ ವೃಂದಾ ಗ್ರೋವರ್, ಪ್ರಕರಣದಲ್ಲಿ ಇರುವ ಟ್ವಿಟರ್ ಖಾತೆಯು ಕಿಡಿಗೇಡಿತನವನ್ನು ಸೃಷ್ಟಿಸಲು ಮಾಡಿದ ಅನಾಮಧೇಯ ಹ್ಯಾಂಡಲ್ ಎಂದು ವಾದಿಸಿದ್ದರು.

ಈ ಟ್ವಿಟ್ಟರ್ ಖಾತೆಯನ್ನು ಜುಬೇರ್‌ ಅವರನ್ನು ಗುರಿಯಾಗಿಸಲು ಮಾಡಲಾಗಿದ್ದು, ಖಾತೆಯ ಬಳಕೆದಾರರನ್ನು ಪೊಲೀಸರು ತನಿಖೆ ಮಾಡಬೇಕು ಎಂದು ಅವರು ವಾದಿಸಿದ್ದರು.

ಇದನ್ನೂ ಓದಿ: ಜುಬೇರ್‌ ಬಂಧನ: ಬರವಣಿಗೆ, ಟ್ವೀಟ್ ಆಧಾರದಲ್ಲಿ ಪತ್ರಕರ್ತರನ್ನು ಜೈಲಿಗೆ ಹಾಕಬಾರದು- ವಿಶ್ವಸಂಸ್ಥೆ

ಆದರೆ ಇದನ್ನು ತಳ್ಳಿಹಾಕಿದ ಪೊಲೀಸರು, “ಅದು ಅನಾಮಧೇಯ ಟ್ವಿಟರ್ ಹ್ಯಾಂಡಲ್ ಅಲ್ಲ. ಅವರು ಕೇವಲ ಮಾಹಿತಿದಾರ. ಅವರು ಅನಾಮಧೇಯ ದೂರುದಾರರಲ್ಲ. ಅವರ ವಿವರಗಳು ಇಲ್ಲಿವೆ. ವಿವರಗಳಿಲ್ಲದೆ, ಯಾರೂ ಟ್ವಿಟರ್ ಖಾತೆಯನ್ನು ಪಡೆಯಲು ಸಾಧ್ಯವಿಲ್ಲ” ಎಂದು ವಾದಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....