Homeರಾಷ್ಟ್ರೀಯಜುಬೇರ್‌‌‌ ಬಂಧನದ ಐದು ದಿನದ ನಂತರ ದೂರುದಾರನನ್ನು ಹುಡುಕುತ್ತಿರುವ ದೆಹಲಿ ಪೊಲೀಸರು!

ಜುಬೇರ್‌‌‌ ಬಂಧನದ ಐದು ದಿನದ ನಂತರ ದೂರುದಾರನನ್ನು ಹುಡುಕುತ್ತಿರುವ ದೆಹಲಿ ಪೊಲೀಸರು!

ಪ್ರಕರಣವನ್ನು ಜುಲೈ 27 ರಂದು ಕೈಗೆತ್ತಿಕೊಳ್ಳಲಾಗುವುದು ಎಂದು ನ್ಯಾಯಾಲಯ ಹೇಳಿದೆ

- Advertisement -
- Advertisement -

ಅಂತಾರಾಷ್ಟ್ರೀಯ ಖ್ಯಾತಿಯ ಫ್ಯಾಕ್ಟ್‌ಚೆಕ್ಕರ್‌, ಪತ್ರಕರ್ತ ಮೊಹಮ್ಮದ್‌ ಜುಬೇರ್‌ ಬಂಧನ ಪ್ರಕರಣದ ಕುರಿತಂತೆ ದೆಹಲಿ ಪೊಲೀಸರು ಟ್ವಿಟರ್‌ಗೆ ಶುಕ್ರವಾರ ನೋಟಿಸ್ ಕಳುಹಿಸಿದ್ದು, ‘ಹನುಮಾನ್ ಭಕ್ತ್‌‌@balajikijaiin’ ಖಾತೆಯ ವಿವರಗಳನ್ನು ನೀಡುವಂತೆ ಕೇಳಿದ್ದಾರೆ. ಈ ಖಾತೆಯೂ, 2018 ರಲ್ಲಿ ಜುಬೇರ್‌ ಪೋಸ್ಟ್ ಮಾಡಿದ ಟ್ವೀಟ್‌ ಅನ್ನು ದೆಹಲಿ ಪೊಲೀಸರಿಗೆ ಟ್ಯಾಗ್ ಮಾಡಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಳಿಕೊಂಡಿತ್ತು. ಇದರ ನಂತರ ದೆಹಲಿ ಪೊಲೀಸರ ‘ಐಎಫ್‌ಎಸ್‌ಒ’ ಶಾಖೆ ಜುಬೈರ್ ವಿರುದ್ಧ ಪ್ರಕರಣ ದಾಖಲಿಸಿ ಸೋಮವಾರ ಅವರನ್ನು ಬಂಧಿಸಿತ್ತು.

ಟ್ರಯಲ್ ಕೋರ್ಟ್ ನೀಡಿದ ನಾಲ್ಕು ದಿನಗಳ ಪೊಲೀಸ್ ಕಸ್ಟಡಿಯನ್ನು ಪ್ರಶ್ನಿಸಿ ಜುಬೇರ್ ಸಲ್ಲಿಸಿರುವ ಅರ್ಜಿಯ ಕುರಿತು ದೆಹಲಿ ಹೈಕೋರ್ಟ್ ಶುಕ್ರವಾರ ನೋಟಿಸ್ ಜಾರಿ ಮಾಡಿದೆ. ಅವರಿಗೆ ನೀಡಲಾಗಿದ್ದ ನಾಲ್ಕು ದಿನಗಳ ರಿಮಾಂಡ್ ಆದೇಶವು ನಾಳೆ ಕೊನೆಗೊಳ್ಳುತ್ತದೆ, ಜುಲೈ 2 ರಂದು ಅವರನ್ನು ಸಂಬಂಧಪಟ್ಟ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ನ್ಯಾಯಮೂರ್ತಿ ಸಂಜೀವ್ ನರುಲಾ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅವರು ಕಸ್ಟಡಿ ವಿಸ್ತರಣೆಗೆ ಪ್ರಯತ್ನಿಸುತ್ತಿದ್ದಾರೆಯೇ ಎಂದು ನನಗೆ ತಿಳಿದಿಲ್ಲ, ಬಹಷಃ… ಆರೋಪಿಯನ್ನು ಬಿಡುಗಡೆ ಮಾಡಬಹುದು ಅಥವಾ ನ್ಯಾಯಾಂಗ ಬಂಧನಕ್ಕೆ ಕಳುಹಿಸಬಹುದು. ನೀವು ಈ ವಿಚಾರಗಳನ್ನು ಟ್ರಯಲ್ ಕೋರ್ಟ್‌ನಲ್ಲಿ ಯಾಕೆ ಒತ್ತಾಯಿಸಬಾರದು?… ನೀವು ಪ್ರಕರಣದ ಕಾನೂನು ಬದ್ಧತೆಯ ಬಗ್ಗೆ ಮಾತನಾಡುತ್ತಿದ್ದರೆ, ನಾನು ನೋಟಿಸ್ ಜಾರಿ ಮಾಡಬೇಕು, ಇನ್ನೊಂದು ಕಡೆಯವರಿಗೆ ಕಳುಹಿಸಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ತೀಸ್ತಾ, ಜುಬೇರ್‌‌ ಬಂಧನ ಆತಂಕಕಾರಿ: ನೊಬೆಲ್‌ ಪ್ರಶಸ್ತಿ ಪುರಸ್ಕೃತ ಪತ್ರಕರ್ತೆ ಮಾರಿಯಾ ಪ್ರತಿಕ್ರಿಯೆ

ಜುಬೇರ್‌ ವಿರುದ್ಧ ಸಲ್ಲಿಸಲಾದ ಪ್ರಕರಣದ ಬಗ್ಗೆ ಅಫಿಡವಿಟ್‌ ಸಲ್ಲಿಸಲು ನ್ಯಾಯಾಲಯವು ಎರಡು ವಾರಗಳ ಕಾಲಾವಕಾಶವನ್ನು ಪ್ರತಿವಾದಿಗಳಿಗೆ ನೀಡಿದೆ. ಪ್ರತಿವಾದಗಳು ಏನಾದರೂ ಇದ್ದರೆ, ಒಂದು ವಾರದೊಳಗೆ ಅವುಗಳನ್ನು ಸಲ್ಲಿಸಬೇಕು ಎಂದು ಹೇಳಿದ್ದು, ಜುಲೈ 27 ರಂದು ಈ ಪ್ರಕರಣವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿದೆ.

ಸಿಆರ್‌ಪಿಸಿಯ ಸೆಕ್ಷನ್ 91 ರ ಅಡಿಯಲ್ಲಿ ಬುಧವಾರ ಸಂಜೆ ಟ್ವಿಟರ್‌ಗೆ ನೋಟಿಸ್ ಕಳುಹಿಸಲಾಗಿದೆ ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿವೆ. “ಅನಾಮಧೇಯ ಟ್ವಿಟರ್ ಹ್ಯಾಂಡಲ್ @balajikijaiin ನ ಐಪಿ ಲಾಗ್ ವಿವರಗಳು, ಖಾತೆಯ ನೋಂದಣಿ ವಿವರಗಳು, ಮೊಬೈಲ್ ಸಂಖ್ಯೆ, ಸಂಪರ್ಕಿತ ಇಮೇಲ್ ಐಡಿ ಮತ್ತು ಬಳಕೆದಾರರು ಬಳಸುವ ಸಾಧನವನ್ನು ಒದಗಿಸಲು ನಾವು ಅವರನ್ನು ಕೇಳಿದ್ದೇವೆ” ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಬುಧವಾರದಂದು ಈ ಖಾತೆಯನ್ನು ಅಳಿಸಲಾಗಿತ್ತು, ಆದರೆ ನಂತರ ಗುರುವಾರ ಸಂಜೆಯ ಹೊತ್ತಿಗೆ ಅದು ಮತ್ತೇ ವಾಪಾಸಾಗಿತ್ತು. ಈ ಬಗ್ಗೆ ಬುಧವಾರದಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾತನಾಡಿ, “ವ್ಯಕ್ತಿ ತನ್ನ ಖಾತೆಯನ್ನು ಅಳಿಸಿದ್ದಾನೆ ಎಂದು ನಮಗೆ ತಿಳಿದು ಬಂದಿದೆ. ಆದಾಗ್ಯೂ, ಇದು ನಮ್ಮ ತನಿಖೆಯ ಮೇಲೆ ಪರಿಣಾಮ ಬೀರುವುದಿಲ್ಲ. ಜುಬೈರ್ ಅವರ ಹಳೆಯ ಟ್ವೀಟ್ ವಿಚಾರವಾಗಿ ತನಿಖೆ ಮಾಡುತ್ತಿದ್ದೇವೆ. ನಾವು ವ್ಯಕ್ತಿಯನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದೇವೆ ಮತ್ತು ದೂರಿನ ಬಗ್ಗೆ ಕೇಳುತ್ತೇವೆ. ಅವರು ಹೆದರಿ ಅಕೌಂಟ್ ಡಿಲೀಟ್ ಮಾಡಿರಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅನಾಮಧೇಯ ಟ್ವಿಟರ್‌ ಅಕೌಂಟ್‌‌‌ ಬಿಜೆಪಿ ಐಟಿ ಸೆಲ್‌ನದ್ದು: ಸಾಮಾಜಿಕ ಹೋರಾಟಗಾರ ಸಾಕೇತ್‌ ಗೋಖಲೆ

ಮಂಗಳವಾರ ನಡೆದ ಜುಬೈರ್ ಅವರ ಬಂಧನದ ವಿಚಾರಣೆಯ ಸಂದರ್ಭದಲ್ಲಿ, ಟ್ವಿಟರ್ ಖಾತೆಯನ್ನು ನಡೆಸುತ್ತಿರುವ ವ್ಯಕ್ತಿ ‘ಅನಾಮಧೇಯನಲ್ಲ’ ಎಂದು ಪೊಲೀಸರು ನ್ಯಾಯಾಲಯದಲ್ಲಿ ಹೇಳಿದ್ದರು.

ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಸ್ನಿಗ್ಧಾ ಸವಾರಿಯಾ ಅವರ ಮುಂದೆ ರಿಮಾಂಡ್ ಅರ್ಜಿಯನ್ನು ವಿರೋಧಿಸಿದ ಜುಬೈರ್ ಅವರ ವಕೀಲೆ ವೃಂದಾ ಗ್ರೋವರ್, ಪ್ರಕರಣದಲ್ಲಿ ಇರುವ ಟ್ವಿಟರ್ ಖಾತೆಯು ಕಿಡಿಗೇಡಿತನವನ್ನು ಸೃಷ್ಟಿಸಲು ಮಾಡಿದ ಅನಾಮಧೇಯ ಹ್ಯಾಂಡಲ್ ಎಂದು ವಾದಿಸಿದ್ದರು.

ಈ ಟ್ವಿಟ್ಟರ್ ಖಾತೆಯನ್ನು ಜುಬೇರ್‌ ಅವರನ್ನು ಗುರಿಯಾಗಿಸಲು ಮಾಡಲಾಗಿದ್ದು, ಖಾತೆಯ ಬಳಕೆದಾರರನ್ನು ಪೊಲೀಸರು ತನಿಖೆ ಮಾಡಬೇಕು ಎಂದು ಅವರು ವಾದಿಸಿದ್ದರು.

ಇದನ್ನೂ ಓದಿ: ಜುಬೇರ್‌ ಬಂಧನ: ಬರವಣಿಗೆ, ಟ್ವೀಟ್ ಆಧಾರದಲ್ಲಿ ಪತ್ರಕರ್ತರನ್ನು ಜೈಲಿಗೆ ಹಾಕಬಾರದು- ವಿಶ್ವಸಂಸ್ಥೆ

ಆದರೆ ಇದನ್ನು ತಳ್ಳಿಹಾಕಿದ ಪೊಲೀಸರು, “ಅದು ಅನಾಮಧೇಯ ಟ್ವಿಟರ್ ಹ್ಯಾಂಡಲ್ ಅಲ್ಲ. ಅವರು ಕೇವಲ ಮಾಹಿತಿದಾರ. ಅವರು ಅನಾಮಧೇಯ ದೂರುದಾರರಲ್ಲ. ಅವರ ವಿವರಗಳು ಇಲ್ಲಿವೆ. ವಿವರಗಳಿಲ್ಲದೆ, ಯಾರೂ ಟ್ವಿಟರ್ ಖಾತೆಯನ್ನು ಪಡೆಯಲು ಸಾಧ್ಯವಿಲ್ಲ” ಎಂದು ವಾದಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...