Homeಮುಖಪುಟಜುಬೀನ್ ಗರ್ಗ್ 'ಹತ್ಯೆ' ಪ್ರಕರಣ: ಅಸ್ಸಾಂ ಸಿಐಡಿಯಿಂದ 3,500 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ

ಜುಬೀನ್ ಗರ್ಗ್ ‘ಹತ್ಯೆ’ ಪ್ರಕರಣ: ಅಸ್ಸಾಂ ಸಿಐಡಿಯಿಂದ 3,500 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ

- Advertisement -
- Advertisement -

ಗುವಾಹಟಿ: ಖ್ಯಾತ ಗಾಯಕ ಜುಬೀನ್ ಗರ್ಗ್ ಅವರ ಸಾವಿನ ಪ್ರಕರಣದ ತನಿಖೆ ನಡೆಸುತ್ತಿರುವ ಅಸ್ಸಾಂ ಸಿಐಡಿಯ ವಿಶೇಷ ತನಿಖಾ ತಂಡ (ಎಸ್‌ಐಟಿ) ಶುಕ್ರವಾರ ಗುವಾಹಟಿಯ ನ್ಯಾಯಾಲಯದಲ್ಲಿ 3,500 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದೆ

ಅಸ್ಸಾಂ ಸಾಂಸ್ಕೃತಿಕ ಪ್ರತಿಮೆ ಎಂದೇ ಗುರಿತಿಕೊಂಡಿದ್ದ ಜುಬೀನ್ ಗರ್ಗ್ ಅವರ ಸಾವು ಕೊಲೆಯೇ ಅಥವಾ ಅಪಘಾತ ಪ್ರಕರಣವೇ ಎಂಬ ಊಹಾಪೋಹಗಳ ನಡುವೆಯೇ ಎಸ್ಐಟಿ ತನ್ನ ಆರೋಪಪಟ್ಟಿಯನ್ನು ಸಲ್ಲಿಸಿದೆ.

ಸಿಐಡಿಯ ವಿಶೇಷ ಮಹಾನಿರ್ದೇಶಕ ಮುನ್ನಾ ಪ್ರಸಾದ್ ಗುಪ್ತಾ ನೇತೃತ್ವದ ಎಸ್‌ಐಟಿ, ಗುವಾಹಟಿಯ ಕಾಮರೂಪ ಮೆಟ್ರೋಪೊಲಿಟನ್ ಜಿಲ್ಲೆ(ಮಹಾನಗರ) ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ 3,500 ಕ್ಕೂ ಹೆಚ್ಚು ಪುಟಗಳು ಮತ್ತು ಲಗತ್ತುಗಳನ್ನು ಒಳಗೊಂಡ ಆರೋಪಪಟ್ಟಿಯನ್ನು ಸಲ್ಲಿಸಿದೆ. 

ದಾಖಲೆಗಳನ್ನು ಹೊತ್ತ ನಾಲ್ಕು ಟ್ರಂಕ್‌ಗಳನ್ನು ಬೆಳಿಗ್ಗೆ 11.20 ರ ಸುಮಾರಿಗೆ ನ್ಯಾಯಾಲಯದೊಳಗೆ ತೆಗೆದುಕೊಂಡು ಹೋಗಿ ನ್ಯಾಯಾಲಯದ ಮುಂದೆ ಸಲ್ಲಿಸಲಾಯಿದೆ. ಜುಬೀನ್ ಅವರ ಮ್ಯಾನೇಜರ್, ಅವರ ಸೋದರ ಸಂಬಂಧಿ ಮತ್ತು ಸಿಂಗಾಪುರದಲ್ಲಿ ಉತ್ಸವದ ಆಯೋಜಕರು ಸೇರಿದಂತೆ ಏಳು ಜನರನ್ನು ಎಸ್‌ಐಟಿ ಬಂಧಿಸಿದೆ. ತನಿಖೆಯ ಸಮಯದಲ್ಲಿ ಅವರ ಕುಟುಂಬ ಸದಸ್ಯರು, ಸ್ನೇಹಿತರು, ಬ್ಯಾಂಡ್ ಸದಸ್ಯರು, ಅಭಿಮಾನಿಗಳು ಮತ್ತು ಸಿಂಗಾಪುರದಲ್ಲಿರುವ ಅಸ್ಸಾಮಿ ಎನ್‌ಆರ್‌ಐಗಳು ಸೇರಿದಂತೆ 300 ಕ್ಕೂ ಹೆಚ್ಚು ಜನರನ್ನು ವಿಚಾರಣೆಗೆ ಒಳಪಡಿಸಲಾಗಿದೆ.

ಸಿಂಗಾಪುರದಲ್ಲಿ ಸಮುದ್ರದಲ್ಲಿ ಈಜುತ್ತಿದ್ದಾಗ ಪ್ರಸಿದ್ಧ ಗಾಯಕ, ಸಂಗೀತಗಾರ, ಚಲನಚಿತ್ರ ನಿರ್ಮಾಪಕ ಮತ್ತು ನಟ ಗರ್ಗ್ ಸೆಪ್ಟೆಂಬರ್ 19 ರಂದು ನಿಧನರಾದ ನಂತರ ಅಸ್ಸಾಂನಾದ್ಯಂತ ಜನಜೀವನ ಸ್ತಬ್ಧವಾಯಿತು. ಸಿಂಗಾಪುರ ಮೂಲದ ಅಸ್ಸಾಮಿ ಅನಿವಾಸಿ ಭಾರತೀಯರು ಆಯೋಜಿಸಿದ್ದ ವಿಹಾರ ನೌಕೆ ಪಾರ್ಟಿಯ ನಂತರ ಗರ್ಗ್ ತನ್ನ ಸ್ನೇಹಿತರು ಮತ್ತು ಸಹಚರರೊಂದಿಗೆ ಈಜುತ್ತಿದ್ದರು. 52 ವರ್ಷದ ಗರ್ಗ್ “ಸಾಂಸ್ಕೃತಿಕ ರಾಯಭಾರಿ”ಯಾಗಿ ಈಶಾನ್ಯ ಭಾರತ ಉತ್ಸವದಲ್ಲಿ ಭಾಗವಹಿಸಲು ಸಿಂಗಾಪುರದಲ್ಲಿದ್ದರು. 

ಕೊಲೆ ಅಥವಾ ಅಪಘಾತ  

ಆರಂಭದಲ್ಲಿ ಗರ್ಗ್ ಸಾವು ಅಪಘಾತದಿಂದ ಸಂಭವಿಸಿರಬಹುದು ಎಂದು ಶಂಕಿಸಲಾಗಿದ್ದರೂ, ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಇದು ಕೊಲೆ ಪ್ರಕರಣ ಎಂದು ಹಲವಾರು ಬಾರಿ ಹೇಳಿಕೊಂಡರು. ನವೆಂಬರ್ 25 ರಂದು, ಗರ್ಗ್ ಅವರನ್ನು ಒಬ್ಬ ವ್ಯಕ್ತಿ ಕೊಂದಿದ್ದಾನೆ ಮತ್ತು ಇತರರು ಅಪರಾಧ ಮಾಡಲು ಸಹಾಯ ಮಾಡಿದ್ದಾರೆ ಎಂದು ಶರ್ಮಾ ವಿಧಾನಸಭೆಯಲ್ಲಿ ಅವರು ನೇರವಾಗಿ ಹೇಳಿದ್ದರು. “ಇದು ಸರಳ, ಸರಳ ಕೊಲೆ ಪ್ರಕರಣವಾಗಿತ್ತು. ಆರೋಪಪಟ್ಟಿಗಳು ಎಲ್ಲರನ್ನೂ ಆಘಾತಗೊಳಿಸುತ್ತವೆ” ಎಂದು ಶರ್ಮಾ ವಿಧಾನಸಭೆಯ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಸದನದಲ್ಲಿ ಹೇಳಿದ್ದರು. 

ಗರ್ಗ್ ಸಾವಿನ ಪ್ರಕರಣ ರಾಜಕೀಯ ಆದಾಗಲೂ, ವಿರೋಧ ಪಕ್ಷ ಕಾಂಗ್ರೆಸ್ ಮತ್ತು ಇತರರು ಈ ಪ್ರಕರಣದ ಬಗ್ಗೆ ಸಿಬಿಐ ತನಿಖೆಗೆ ಒತ್ತಾಯಿಸುತ್ತಿದ್ದಾರೆ. ಕಾಂಗ್ರೆಸ್ ನಾಯಕ ಗೌರವ್ ಗೊಗೊಯ್ ಇತ್ತೀಚೆಗೆ, ಕೇಂದ್ರ ವಿದೇಶಾಂಗ ಸಚಿವಾಲಯವು ಈಶಾನ್ಯ ಭಾರತ ಉತ್ಸವವನ್ನು ಬೆಂಬಲಿಸಿದ್ದರಿಂದ ಅದನ್ನು ತನಿಖೆಯ ವ್ಯಾಪ್ತಿಗೆ ತರಬೇಕು ಎಂದು ಹೇಳಿದ್ದಾರೆ. ಅವರ ಅಭಿಮಾನಿಗಳು ಆನ್‌ಲೈನ್ ಮತ್ತು ಬೀದಿಗಳಲ್ಲಿ ಅಭಿಯಾನವನ್ನು ಪ್ರಾರಂಭಿಸಿದ್ದು, ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿದ್ದರು.

ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳಿಗೆ ಈ ಪ್ರಕರಣವು ಒಂದು ಸಮಸ್ಯೆಯಾಗಿ ಪರಿಣಮಿಸಿದೆ. ಗರ್ಗ್ ಅವರ ಸಾವು ಮತ್ತು ಪ್ರಕರಣವನ್ನು ನಿರ್ವಹಿಸುತ್ತಿರುವ ರೀತಿ ಚುನಾವಣಾ ಪ್ರಚಾರದಲ್ಲಿ ಪ್ರಾಬಲ್ಯ ಸಾಧಿಸುವ ಸಾಧ್ಯತೆಯಿರುವುದರಿಂದ, ಮೂರನೇ ಅವಧಿಗೆ ಮುಖ್ಯಮಂತ್ರಿಯಾಗುವ ನಿರೀಕ್ಷೆಯಲ್ಲಿರುವ ಆಡಳಿತಾರೂಢ ಬಿಜೆಪಿ ಒತ್ತಡದಲ್ಲಿದೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನಿಸಿದ್ದೇವೆ : ಸಿಎಂ ಸಿದ್ದರಾಮಯ್ಯ

ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ತೃತೀಯ ಭಾಷೆ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು (ಮಾ.28) ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಶಿಕ್ಷಣದಲ್ಲಿ ದ್ವಿಭಾಷಾ ನೀತಿ ಜಾರಿ ಮತ್ತು...

ಇರಾನ್‌ನ ಸರ್ವೋಚ್ಚ ನಾಯಕನನ್ನು ‘ನಿರ್ಮೂಲನೆ’ ಮಾಡಲಾಗಿದೆ; ನಮ್ಮ ಮುಂದಿನ ಗುರಿ ಕ್ಯೂಬಾ: ಡೊನಾಲ್ಡ್‌ ಟ್ರಂಪ್

ಪಶ್ಚಿಮ ಏಷ್ಯಾದಾದ್ಯಂತ ಯುದ್ಧ ಮುಂದುವರೆದಿದ್ದರೂ ಮತ್ತು ರಾಜತಾಂತ್ರಿಕ ಪ್ರಯತ್ನಗಳು ಅನಿಶ್ಚಿತವಾಗಿದ್ದರೂ ಸಹ, ಇರಾನ್‌ನ ಉನ್ನತ ನಾಯಕರು ಮತ್ತು ಅದರ ಹೆಚ್ಚಿನ ಮಿಲಿಟರಿ ಸಾಮರ್ಥ್ಯ ನಾಶವಾಗಿದೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಮಿಯಾಮಿಯಲ್ಲಿ ಸೌದಿ...

ತೆಲಂಗಾಣ| ನಿಗದಿತ ವೇತನ-ಉದ್ಯೋಗ ಭದ್ರತೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರಿಂದ ಸರ್ಕಾರದ ವಿರುದ್ಧ ಪ್ರತಿಭಟನೆ

ಹೈದರಾಬಾದ್‌ನ ಧರಣಾ ಚೌಕ್‌ನಲ್ಲಿ ಇಂದು ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯರು ನಡೆಸುತ್ತಿದ್ದ ಪ್ರತಿಭಟನೆ ಸಂದರ್ಭದಲ್ಲಿ ಅವರನ್ನು ಬಂಧಿಸಲಾಯಿತು. ಸರ್ಕಾರವು 18,000 ರೂ.ಗಳ ಮಾಸಿಕ ನಿಗದಿತ ವೇತನ ಮತ್ತು ಉದ್ಯೋಗ ಭದ್ರತೆಯ ಚುನಾವಣಾ...

2001-2006 ರ ಚುನಾವಣೆ ಗೆಲ್ಲಲು ವಿ.ಡಿ. ಸತೀಸನ್ ಆರ್‌ಎಸ್‌ಎಸ್ ಬೆಂಬಲ ಕೋರಿದ್ದರು: ಸಂಘದ ನಾಯಕನಿಂದ ಆರೋಪ

ಕೇರಳದ ಯುಡಿಎಫ್ ಅಧ್ಯಕ್ಷ ವಿ ಡಿ ಸತೀಸನ್ 2001 ಮತ್ತು 2006 ರಲ್ಲಿ ವಿಧಾನಸಭಾ ಚುನಾವಣೆಗಳಲ್ಲಿ ಗೆಲ್ಲಲು ರಾಷ್ಟ್ರೀಯ ಸ್ವಯಂಸೇವಕ ಸಂಘದ ನಾಯಕರ ಬೆಂಬಲ ಕೋರಿದ್ದರು ಎಂದು ಸಂಘ ಪರಿವಾರದ ಹಿರಿಯ ನಾಯಕ...

ಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಲು ಕನ್ನಡ ಕಲಿತು ಬರಬೇಕು: ಡಾ.ಎಲ್.ಹನುಮಂತಯ್ಯ

ಬೆಂಗಳೂರು, ಮಾ.28: ಇತರೇ ರಾಜ್ಯಗಳಿಂದ ಕರ್ನಾಟಕದ ಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಲು ಬರುವವರು ಕಡ್ಡಾಯವಾಗಿ ಕನಿಷ್ಠ ಆರು ತಿಂಗಳು ವ್ಯಾವಹಾರಿಕ ಕನ್ನಡವನ್ನು ಕಲಿತು ಬರಬೇಕು. ಇಲ್ಲದಿದ್ದರೆ ಇಲ್ಲಿನ ಧರ್ಮಾಧ್ಯಕ್ಷರ ಸ್ಥಾನಕ್ಕೆ ಗೌರವ ಉಳಿಯುವುದಿಲ್ಲ ಎಂದು ಸಾಹಿತಿ...

‘ಮಾನವಶಕ್ತಿ ಕೊರತೆಯಿಂದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಒತ್ತಡ ಎದುರಿಸಬಹುದು..’; ಸೇನಾ ಮುಖ್ಯಸ್ಥರಿಂದ ಸರ್ಕಾರಕ್ಕೆ ಎಚ್ಚರಿಕೆ

ಹೆಚ್ಚುತ್ತಿರುವ ಮಾನವಶಕ್ತಿ ಕೊರತೆಯಿಂದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಕಾರ್ಯಾಚರಣೆಯ ಗಂಭೀರ ಒತ್ತಡವನ್ನು ಎದುರಿಸಬಹುದು ಎಂದು ಸೇನಾ ಮುಖ್ಯಸ್ಥ ಇಯಾಲ್ ಜಮೀರ್ ಭದ್ರತಾ ಕ್ಯಾಬಿನೆಟ್ ಸಭೆಯಲ್ಲಿ ಸರ್ಕಾರಕ್ಕೆ ಎಚ್ಚರಿಸಿದ್ದಾರೆ ಎಂದು ಇಸ್ರೇಲ್ ಮಾಧ್ಯಮ ವರದಿಗಳನ್ನು...

ಯೆಮೆನ್‌ನಿಂದ ಹಾರಿದ ಮೊದಲ ಕ್ಷಿಪಣಿ ಎದುರಿಸಿದ ಇಸ್ರೇಲ್; ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಹೌತಿ ಪ್ರವೇಶ?

ಕಳೆದ ತಿಂಗಳು ಮಧ್ಯಪ್ರಾಚ್ಯದಲ್ಲಿ ಯುದ್ಧ ಭುಗಿಲೆದ್ದ ನಂತರ, ಮಾರ್ಚ್ 28 ರಂದು ಯೆಮೆನ್‌ನಿಂದ ಹಾರಿಸಲಾದ ಕ್ಷಿಪಣಿಯೊಂದನ್ನು ಇಸ್ರೇಲ್ ಮೊದಲಬಾರಿಗೆ ಎದುರಿಸಿದೆ. ಕಳೆದ ತಿಂಗಳು ಮಧ್ಯಪ್ರಾಚ್ಯದಲ್ಲಿ ಯುದ್ಧ ಭುಗಿಲೆದ್ದ ನಂತರ ಯೆಮೆನ್‌ನಿಂದ ಮೊದಲ ಬಾರಿಗೆ...

ಬಿಜೆಪಿಗೆ ಮತ ಹಾಕುವುದು ವ್ಯರ್ಥ; ಬದಲಿಗೆ ಕಾಂಗ್ರೆಸ್‌ಗೆ ಹಾಕಿ: ಸಂಸದ ಶಶಿ ತರೂರ್

ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಮತ ಹಾಕುವುದು ವ್ಯರ್ಥ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಕೇರಳದಲ್ಲಿ ಹೇಳಿದ್ದಾರೆ. ರಾಜ್ಯದ ಚುನಾವಣಾ ಸ್ಪರ್ಧೆ ಪ್ರಾಥಮಿಕವಾಗಿ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಮತ್ತು ಎಡ...

ಅಬುಧಾಬಿ | ಭದ್ರತಾ ಪಡೆಗಳು ಹೊಡೆದುರುಳಿಸಿದ ಕ್ಷಿಪಣಿಯ ಅವಶೇಷಗಳು ಬಿದ್ದು ಐವರು ಭಾರತೀಯರಿಗೆ ಗಾಯ

ಯುಎಇ ರಾಜಧಾನಿ ಅಬುಧಾಬಿ ಸೇರಿದಂತೆ ವಿವಿಧ ಪ್ರದೇಶಗಳ ಮೇಲೆ ಇರಾನ್ ನಡೆಸಿದ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳ ಸಂದರ್ಭದಲ್ಲಿ, ಕ್ಷಿಪಣಿಗಳ ಅವಶೇಷಗಳು ಬಿದ್ದ ಪರಿಣಾಮ ಐವರು ಭಾರತೀಯರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅಬುಧಾಬಿಯ ಸರ್ಕಾರಿ...

ಧುರಂಧರ್-2 ಬಿಜೆಪಿಯ ದೊಡ್ಡ ಬಜೆಟ್‌ನ ರಾಜಕೀಯ ಜಾಹೀರಾತು: ಧ್ರುವ ರಾಥೀ

ಚಲನಚಿತ್ರ ನಿರ್ಮಾಪಕ ಆದಿತ್ಯ ಧರ್ ಅವರ ಆಕ್ಷನ್ ಎಂಟರ್‌ಟೈನರ್ ಧುರಂಧರ್‌ನ ಮುಂದುವರಿದ ಭಾಗವು ಬಾಕ್ಸ್ ಆಫೀಸ್‌ನಲ್ಲಿ ಭಾರಿ ಗಳಿಕೆಯ ಜೊತೆಗೆ ಬಲಪಂಥೀಯ ವರ್ಗದ ಪ್ರೇಕ್ಷಕರ ಪ್ರತಿಕ್ರಿಯೆಯನ್ನು ಗಳಿಸುತ್ತಿದೆ. ಆದರೂ, ಈ ಚಿತ್ರವು ಸಾಕಷ್ಟು...