Homeಮುಖಪುಟಜುಬೀನ್ ಗರ್ಗ್ 'ಹತ್ಯೆ' ಪ್ರಕರಣ: ಅಸ್ಸಾಂ ಸಿಐಡಿಯಿಂದ 3,500 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ

ಜುಬೀನ್ ಗರ್ಗ್ ‘ಹತ್ಯೆ’ ಪ್ರಕರಣ: ಅಸ್ಸಾಂ ಸಿಐಡಿಯಿಂದ 3,500 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ

- Advertisement -
- Advertisement -

ಗುವಾಹಟಿ: ಖ್ಯಾತ ಗಾಯಕ ಜುಬೀನ್ ಗರ್ಗ್ ಅವರ ಸಾವಿನ ಪ್ರಕರಣದ ತನಿಖೆ ನಡೆಸುತ್ತಿರುವ ಅಸ್ಸಾಂ ಸಿಐಡಿಯ ವಿಶೇಷ ತನಿಖಾ ತಂಡ (ಎಸ್‌ಐಟಿ) ಶುಕ್ರವಾರ ಗುವಾಹಟಿಯ ನ್ಯಾಯಾಲಯದಲ್ಲಿ 3,500 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದೆ

ಅಸ್ಸಾಂ ಸಾಂಸ್ಕೃತಿಕ ಪ್ರತಿಮೆ ಎಂದೇ ಗುರಿತಿಕೊಂಡಿದ್ದ ಜುಬೀನ್ ಗರ್ಗ್ ಅವರ ಸಾವು ಕೊಲೆಯೇ ಅಥವಾ ಅಪಘಾತ ಪ್ರಕರಣವೇ ಎಂಬ ಊಹಾಪೋಹಗಳ ನಡುವೆಯೇ ಎಸ್ಐಟಿ ತನ್ನ ಆರೋಪಪಟ್ಟಿಯನ್ನು ಸಲ್ಲಿಸಿದೆ.

ಸಿಐಡಿಯ ವಿಶೇಷ ಮಹಾನಿರ್ದೇಶಕ ಮುನ್ನಾ ಪ್ರಸಾದ್ ಗುಪ್ತಾ ನೇತೃತ್ವದ ಎಸ್‌ಐಟಿ, ಗುವಾಹಟಿಯ ಕಾಮರೂಪ ಮೆಟ್ರೋಪೊಲಿಟನ್ ಜಿಲ್ಲೆ(ಮಹಾನಗರ) ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ 3,500 ಕ್ಕೂ ಹೆಚ್ಚು ಪುಟಗಳು ಮತ್ತು ಲಗತ್ತುಗಳನ್ನು ಒಳಗೊಂಡ ಆರೋಪಪಟ್ಟಿಯನ್ನು ಸಲ್ಲಿಸಿದೆ. 

ದಾಖಲೆಗಳನ್ನು ಹೊತ್ತ ನಾಲ್ಕು ಟ್ರಂಕ್‌ಗಳನ್ನು ಬೆಳಿಗ್ಗೆ 11.20 ರ ಸುಮಾರಿಗೆ ನ್ಯಾಯಾಲಯದೊಳಗೆ ತೆಗೆದುಕೊಂಡು ಹೋಗಿ ನ್ಯಾಯಾಲಯದ ಮುಂದೆ ಸಲ್ಲಿಸಲಾಯಿದೆ. ಜುಬೀನ್ ಅವರ ಮ್ಯಾನೇಜರ್, ಅವರ ಸೋದರ ಸಂಬಂಧಿ ಮತ್ತು ಸಿಂಗಾಪುರದಲ್ಲಿ ಉತ್ಸವದ ಆಯೋಜಕರು ಸೇರಿದಂತೆ ಏಳು ಜನರನ್ನು ಎಸ್‌ಐಟಿ ಬಂಧಿಸಿದೆ. ತನಿಖೆಯ ಸಮಯದಲ್ಲಿ ಅವರ ಕುಟುಂಬ ಸದಸ್ಯರು, ಸ್ನೇಹಿತರು, ಬ್ಯಾಂಡ್ ಸದಸ್ಯರು, ಅಭಿಮಾನಿಗಳು ಮತ್ತು ಸಿಂಗಾಪುರದಲ್ಲಿರುವ ಅಸ್ಸಾಮಿ ಎನ್‌ಆರ್‌ಐಗಳು ಸೇರಿದಂತೆ 300 ಕ್ಕೂ ಹೆಚ್ಚು ಜನರನ್ನು ವಿಚಾರಣೆಗೆ ಒಳಪಡಿಸಲಾಗಿದೆ.

ಸಿಂಗಾಪುರದಲ್ಲಿ ಸಮುದ್ರದಲ್ಲಿ ಈಜುತ್ತಿದ್ದಾಗ ಪ್ರಸಿದ್ಧ ಗಾಯಕ, ಸಂಗೀತಗಾರ, ಚಲನಚಿತ್ರ ನಿರ್ಮಾಪಕ ಮತ್ತು ನಟ ಗರ್ಗ್ ಸೆಪ್ಟೆಂಬರ್ 19 ರಂದು ನಿಧನರಾದ ನಂತರ ಅಸ್ಸಾಂನಾದ್ಯಂತ ಜನಜೀವನ ಸ್ತಬ್ಧವಾಯಿತು. ಸಿಂಗಾಪುರ ಮೂಲದ ಅಸ್ಸಾಮಿ ಅನಿವಾಸಿ ಭಾರತೀಯರು ಆಯೋಜಿಸಿದ್ದ ವಿಹಾರ ನೌಕೆ ಪಾರ್ಟಿಯ ನಂತರ ಗರ್ಗ್ ತನ್ನ ಸ್ನೇಹಿತರು ಮತ್ತು ಸಹಚರರೊಂದಿಗೆ ಈಜುತ್ತಿದ್ದರು. 52 ವರ್ಷದ ಗರ್ಗ್ “ಸಾಂಸ್ಕೃತಿಕ ರಾಯಭಾರಿ”ಯಾಗಿ ಈಶಾನ್ಯ ಭಾರತ ಉತ್ಸವದಲ್ಲಿ ಭಾಗವಹಿಸಲು ಸಿಂಗಾಪುರದಲ್ಲಿದ್ದರು. 

ಕೊಲೆ ಅಥವಾ ಅಪಘಾತ  

ಆರಂಭದಲ್ಲಿ ಗರ್ಗ್ ಸಾವು ಅಪಘಾತದಿಂದ ಸಂಭವಿಸಿರಬಹುದು ಎಂದು ಶಂಕಿಸಲಾಗಿದ್ದರೂ, ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಇದು ಕೊಲೆ ಪ್ರಕರಣ ಎಂದು ಹಲವಾರು ಬಾರಿ ಹೇಳಿಕೊಂಡರು. ನವೆಂಬರ್ 25 ರಂದು, ಗರ್ಗ್ ಅವರನ್ನು ಒಬ್ಬ ವ್ಯಕ್ತಿ ಕೊಂದಿದ್ದಾನೆ ಮತ್ತು ಇತರರು ಅಪರಾಧ ಮಾಡಲು ಸಹಾಯ ಮಾಡಿದ್ದಾರೆ ಎಂದು ಶರ್ಮಾ ವಿಧಾನಸಭೆಯಲ್ಲಿ ಅವರು ನೇರವಾಗಿ ಹೇಳಿದ್ದರು. “ಇದು ಸರಳ, ಸರಳ ಕೊಲೆ ಪ್ರಕರಣವಾಗಿತ್ತು. ಆರೋಪಪಟ್ಟಿಗಳು ಎಲ್ಲರನ್ನೂ ಆಘಾತಗೊಳಿಸುತ್ತವೆ” ಎಂದು ಶರ್ಮಾ ವಿಧಾನಸಭೆಯ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಸದನದಲ್ಲಿ ಹೇಳಿದ್ದರು. 

ಗರ್ಗ್ ಸಾವಿನ ಪ್ರಕರಣ ರಾಜಕೀಯ ಆದಾಗಲೂ, ವಿರೋಧ ಪಕ್ಷ ಕಾಂಗ್ರೆಸ್ ಮತ್ತು ಇತರರು ಈ ಪ್ರಕರಣದ ಬಗ್ಗೆ ಸಿಬಿಐ ತನಿಖೆಗೆ ಒತ್ತಾಯಿಸುತ್ತಿದ್ದಾರೆ. ಕಾಂಗ್ರೆಸ್ ನಾಯಕ ಗೌರವ್ ಗೊಗೊಯ್ ಇತ್ತೀಚೆಗೆ, ಕೇಂದ್ರ ವಿದೇಶಾಂಗ ಸಚಿವಾಲಯವು ಈಶಾನ್ಯ ಭಾರತ ಉತ್ಸವವನ್ನು ಬೆಂಬಲಿಸಿದ್ದರಿಂದ ಅದನ್ನು ತನಿಖೆಯ ವ್ಯಾಪ್ತಿಗೆ ತರಬೇಕು ಎಂದು ಹೇಳಿದ್ದಾರೆ. ಅವರ ಅಭಿಮಾನಿಗಳು ಆನ್‌ಲೈನ್ ಮತ್ತು ಬೀದಿಗಳಲ್ಲಿ ಅಭಿಯಾನವನ್ನು ಪ್ರಾರಂಭಿಸಿದ್ದು, ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿದ್ದರು.

ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳಿಗೆ ಈ ಪ್ರಕರಣವು ಒಂದು ಸಮಸ್ಯೆಯಾಗಿ ಪರಿಣಮಿಸಿದೆ. ಗರ್ಗ್ ಅವರ ಸಾವು ಮತ್ತು ಪ್ರಕರಣವನ್ನು ನಿರ್ವಹಿಸುತ್ತಿರುವ ರೀತಿ ಚುನಾವಣಾ ಪ್ರಚಾರದಲ್ಲಿ ಪ್ರಾಬಲ್ಯ ಸಾಧಿಸುವ ಸಾಧ್ಯತೆಯಿರುವುದರಿಂದ, ಮೂರನೇ ಅವಧಿಗೆ ಮುಖ್ಯಮಂತ್ರಿಯಾಗುವ ನಿರೀಕ್ಷೆಯಲ್ಲಿರುವ ಆಡಳಿತಾರೂಢ ಬಿಜೆಪಿ ಒತ್ತಡದಲ್ಲಿದೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ: ಬುಡಕಟ್ಟು ವಿಶ್ವವಿದ್ಯಾಲಯ ಹಾಸ್ಟೆಲ್ ಒಳಗೆ ಅಸ್ಸಾಮಿ ವಿದ್ಯಾರ್ಥಿ ಮೇಲೆ ಗುಂಪು ಹಲ್ಲೆ

ಮಧ್ಯಪ್ರದೇಶದ ಇಂದಿರಾ ಗಾಂಧಿ ರಾಷ್ಟ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ ಹಾಸ್ಟೆಲ್ ಕೋಣೆಯೊಳಗೆ ಐದು ಜನ ವಿದ್ಯಾರ್ಥಿಗಳ ತಂಡವು ಅಸ್ಸಾಮಿ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ. ಗುಂಪು ಆತನಿಗೆ ಇಲ್ಲಿಯೇ ಸಾಯಬೇಕು ಎಂದು...

ಮಹಿಳೆಯರ ಜೊತೆ ಪುರುಷರಿಗೂ ಉಚಿತ ಬಸ್‌ ಪ್ರಯಾಣ, ಗ್ರಾಮೀಣರಿಗೆ 150 ಕೂಲಿ ದಿನ : ಮೊದಲ ಹಂತದ ಪ್ರಣಾಳಿಕೆ ಬಿಡುಗಡೆ ಮಾಡಿದ ಎಐಎಡಿಎಂಕೆ

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಶನಿವಾರ (ಜ.17) ಪಕ್ಷದ ಮೊದಲ ಹಂತದ ಪ್ರಣಾಳಿಕೆ (ಚುನಾವಣಾ ಭರವಸೆ) ಬಿಡುಗಡೆ ಮಾಡಿದ್ದಾರೆ. ಕರ್ನಾಟಕದ ಗೃಹಲಕ್ಷ್ಮಿ ಯೋಜನೆಯಂತೆ ಎಲ್ಲಾ ಪಡಿತರ...

ಛತ್ತೀಸ್‌ಗಢ| ಬಿಜಾಪುರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲರು ಸಾವು

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳೊಂದಿಗಿನ ಎನ್‌ಕೌಂಟರ್‌ನಲ್ಲಿ ಕನಿಷ್ಠ ಇಬ್ಬರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲೆಯ ವಾಯುವ್ಯ ಪ್ರದೇಶದ ಅರಣ್ಯ ಬೆಟ್ಟಗಳಲ್ಲಿ ಶನಿವಾರ ಬೆಳಿಗ್ಗೆ ಗುಂಡಿನ ಚಕಮಕಿ ನಡೆಯಿತು. ಹಿರಿಯ...

ಮಮತಾ ಬ್ಯಾನರ್ಜಿ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಸುವೇಂದು ಅಧಿಕಾರಿ

ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಶುಕ್ರವಾರ (ಜ.16) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ 100 ಕೋಟಿ ರೂ.ಗಳ ಪರಿಹಾರ ಕೋರಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಮಮತಾ...

ಕೋಮುವಾದ ಕಾರಣಕ್ಕೆ ಬಾಲಿವುಡ್‌ನಲ್ಲಿ ಅವಕಾಶ ಕಡಿಮೆ; ರೆಹಮಾನ್ ಹೇಳಿಕೆ ತಳ್ಳಿಹಾಕಿದ ಜಾವೇದ್ ಅಖ್ತರ್

ಯಶಸ್ವೀ ಸಂಗೀತಗಾರನಾಗಿ ಹಲವು ಕೊಡುಗೆ ನೀಡಿದ್ದರೂ ಕೆಲವರಿಗೆ ಹೊರಗಿನವನು ಎಂಬ ಭಾವನೆ ಹೋಗಿಲ್ಲ. ಕಳೆದ ಎಂಟು ವರ್ಷಗಳಲ್ಲಿ ಬಾಲಿವುಡ್‌ನ ಕದ ಮುಚ್ಚಿದೆ ಎಂಬ ಬಗ್ಗೆ ಎ.ಆರ್. ರೆಹಮಾನ್ ಹೇಳಿಕೆಯನ್ನು ಹಿರಿಯ ಗೀತೆ ರಚನೆಕಾರ...

14 ವರ್ಷದ ದಲಿತ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ : 16 ವರ್ಷದ ಬಾಲಕನನ್ನು ವಶಕ್ಕೆ ಪಡೆದ ಪೊಲೀಸರು

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ 14 ವರ್ಷದ ದಲಿತ ಬಾಲಕಿಯ ಭೀಕರ ಅತ್ಯಾಚಾರ, ಕೊಲೆ ನಡೆದಿದ್ದು, ಈ ಸಂಬಂಧ 16 ವರ್ಷದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗುರುವಾರ (ಜ.15) ಬೆಳಿಗ್ಗೆ ಶಾಲೆಗೆ ಹೋದ...

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮುಸ್ಲಿಮರನ್ನು ಎರಡನೇ ದರ್ಜೆಯ ನಾಗರಿಕರಂತೆ ನಡೆಸಿಕೊಳ್ಳುತ್ತದೆ: ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಬಿಜೆಪಿ ಆಡಳಿತದ ಕೇಂದ್ರ ಸರ್ಕಾರದ ವಿರುದ್ಧ ತಮ್ಮ ವಾಗ್ದಾಳಿ ನಡೆಸಿದ್ದಾರೆ. ಪೌರತ್ವ ಕಾಯ್ದೆ ಮತ್ತು ಹೊಸ ವಕ್ಫ್ ಕಾಯ್ದೆಯಂತಹ ಅದರ ವಿವಿಧ ಕಾನೂನುಗಳು ಮತ್ತು ನೀತಿಗಳು...

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: 114 ಸ್ಥಾನಗಳೊಂದಿಗೆ ಪ್ರಮುಖ ಪಕ್ಷವಾಗಿ ಹೊರಹೊಮ್ಮಿದ ಎಐಎಂಐಎಂ

ಮಹಾರಾಷ್ಟ್ರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅಖಿಲ ಭಾರತ ಮಜ್ಲಿಸ್ ಇ ಇತ್ತೆಹಾದುಲ್ ಮುಸ್ಲಿಮೀನ್ ಪಕ್ಷವು (ಎಐಎಂಐಎಂ) 114 ಸ್ಥಾನಗಳನ್ನು ಗೆದ್ದು, 2017 ರ ಸ್ಥಳೀಯ ಸಂಸ್ಥೆ ಚುನಾವಣೆಗಳಿಗಿಂತ ತನ್ನ ಸಂಖ್ಯೆಯನ್ನು ತೀವ್ರವಾಗಿ ಹೆಚ್ಚಿಸಿಕೊಂಡಿದೆ....

ವಲಸೆ ಕಾರ್ಮಿಕರ ಶೆಡ್‌ಗಳಿಗೆ ತೆರಳಿ ಅನೈತಿಕ ಪೊಲೀಸ್‌ಗಿರಿ : ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಬಂಧನ

ವಲಸೆ ಕಾರ್ಮಿಕರ ಶೆಡ್‌ಗಳಿಗೆ ತೆರಳಿ ಅವರ ಗೌಪ್ಯ ದಾಖಲೆಗಳನ್ನು ಪಡೆದು ಪೌರತ್ವ ಪರಿಶೀಲಿಸುವ ಮೂಲಕ ಅನೈತಿಕ ಪೊಲೀಸ್‌ಗಿರಿ ಮಾಡುತ್ತಿದ್ದ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿಯನ್ನು ಬನ್ನೇರುಘಟ್ಟ ಪೊಲೀಸರು ಶುಕ್ರವಾರ (ಜ.16) ತಡರಾತ್ರಿ ಬಂಧಿಸಿದ್ದಾರೆ...

ಬಳ್ಳಾರಿ| ಬಂಡಿಹಟ್ಟಿ-ದಾನಪ್ಪ ಬೀದಿ ಬಡರೈತರ ಮೇಲೆ ದೌರ್ಜನ್ಯ; ಪ್ರತಾಪರೆಡ್ಡಿ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಬಳ್ಳಾರಿ ಜಿಲ್ಲೆಯ ಬಂಡಿಹಟ್ಟಿ-ದಾನಪ್ಪ ಬೀದಿಯ ಬಡರೈತರ ಮೇಲೆ ದೌರ್ಜನ್ಯ ಎಸಗುತ್ತಿರುವ ಎನ್‌.ಪ್ರತಾಪ ರೆಡ್ಡಿ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು 'ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ' ಮುಖಂಡರು ಆಗ್ರಹಿಸಿದರು....