Homeಮುಖಪುಟಝುಬೀನ್ ಗರ್ಗ್ ಸಾವು ಆಕಸ್ಮಿಕವಲ್ಲ, ಕೊಲೆ : ಅಸ್ಸಾಂ ವಿಧಾನಸಭೆಗೆ ತಿಳಿಸಿದ ಸಿಎಂ ಹಿಮಂತ ಬಿಸ್ವಾ...

ಝುಬೀನ್ ಗರ್ಗ್ ಸಾವು ಆಕಸ್ಮಿಕವಲ್ಲ, ಕೊಲೆ : ಅಸ್ಸಾಂ ವಿಧಾನಸಭೆಗೆ ತಿಳಿಸಿದ ಸಿಎಂ ಹಿಮಂತ ಬಿಸ್ವಾ ಶರ್ಮಾ

- Advertisement -
- Advertisement -

ಸಿಂಗಾಪುರದಲ್ಲಿ ಸಂಭವಿಸಿದ ಗಾಯಕ ಝುಬೀರ್ ಗರ್ಗ್ ಸಾವು ‘ಆಕಸ್ಮಿಕವಲ್ಲ; ಅದು ಕೊಲೆ’ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ನವೆಂಬರ್ 25) ಹೇಳಿದ್ದಾರೆ.

ಇದು ಮೊದಲ ದಿನದಿಂದಲೂ ಕೊಲೆ ಪ್ರಕರಣವಾಗಿತ್ತು. ಆರೋಪಿಗಳಾದ ಶ್ಯಾಮಕಾನು ಮಹಾಂತ, ಸಿದ್ಧಾರ್ಥ್ ಶರ್ಮಾ, ಅಮೃತಪ್ರವ ಮಹಾಂತ ಮತ್ತು ಶೇಖರ್ ಜ್ಯೋತಿ ಗೋಸ್ವಾಮಿ ಅವರನ್ನು ಬಂಧಿಸಲಾಗಿದೆ ಎಂದು ಸಿಎಂ ಶರ್ಮಾ ತಿಳಿಸಿದ್ದಾರೆ.

ಅಸ್ಸಾಂ ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ, “ನಮ್ಮ ಭಾವನೆಗಳು ಝುಬೀನ್ ಜೊತೆ ಇವೆ. ಅದಕ್ಕಾಗಿಯೇ ನಾವು ಅವರ ಹತ್ಯೆಯನ್ನು ತನಿಖೆ ಮಾಡುತ್ತಿದ್ದೇವೆ” ಎಂದು ಹೇಳಿದ್ದಾರೆ.

ಝುಬೀನ್ ಗರ್ಗ್ 2025ರ ಸೆಪ್ಟೆಂಬರ್ 19ರಂದು ಸಿಂಗಾಪುರದಲ್ಲಿ ಈಜುತ್ತಿದ್ದಾಗ ಸಾವನ್ನಪ್ಪಿದ್ದರು.

ಈ ಸಾವನ್ನು ‘ಕೊಲೆ’ ಎಂದು ಏಕೆ ಹೇಳಲಾಗುತ್ತಿದೆ ಎಂಬುದನ್ನು ವಿವರಿಸಿದ ಸಿಎಂ ಶರ್ಮಾ, “ಸಾವಿನ ನಂತರ ಏನೋ ತಪ್ಪಾಗಿದೆ ಎಂದು ನಮಗೆ ಅನಿಸಿತು, ಅದಕ್ಕಾಗಿಯೇ ನಾವು ಬಿಎನ್ಎಸ್ ಸೆಕ್ಷನ್ 61 (ಕ್ರಿಮಿನಲ್ ಪಿತೂರಿ), 105 (ಶಿಕ್ಷಾರ್ಹ ನರಹತ್ಯೆ) ಮತ್ತು 106 (ದುಡುಕಿನ ಮತ್ತು ನಿರ್ಲಕ್ಷ್ಯದ ಕೃತ್ಯದಿಂದ ಸಾವಿಗೆ ಕಾರಣವಾಗುವುದು) ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದೇವೆ” ಎಂದು ತಿಳಿಸಿದ್ದಾರೆ.

ಡಿಸೆಂಬರ್ 10ರೊಳಗೆ ಚಾರ್ಜ್ ಶೀಟ್ ಸಲ್ಲಿಕೆ

ಆರಂಭಿಕ ಹಂತದಲ್ಲಿ ಅಸ್ಸಾಂ ಪೊಲೀಸರಿಗೆ ಇದು “ಸಾದಾ ಮತ್ತು ಸರಳ ಕೊಲೆ” ಎಂಬುವುದು ಖಚಿತವಾಗಿತ್ತು. ಅದಕ್ಕಾಗಿಯೇ ಎರಡು ದಿನಗಳಲ್ಲಿ, ಅಸ್ಸಾಂ ಸರ್ಕಾರವು ಇದು ಕೊಲೆ ಎಂದು ನ್ಯಾಯಾಲಯಕ್ಕೆ ತಿಳಿಸಿತು ಮತ್ತು ಆರೋಪಗಳಿಗೆ ಸೆಕ್ಷನ್ 103 (ಕೊಲೆಗೆ ಶಿಕ್ಷೆ) ಸೇರಿಸಲು ಕೋರಿತು. ಎಲ್ಲಾ ಜಾಮೀನು ಅರ್ಜಿಗಳು ಮತ್ತು ಇತರ ಪ್ರಕ್ರಿಯೆಗಳು ಸೆಕ್ಷನ್ 103 ಅನ್ನು ಆಧರಿಸಿವೆ ಎಂದು ಸಿಎಂ ಹಿಮಂತ ಬಿಸ್ವಾ ಶರ್ಮಾ ಮಾಹಿತಿ ನೀಡಿದ್ದಾರೆ.

ಇದಕ್ಕೂ ಮೊದಲು ಹಿಮಂತ ಬಿಸ್ವಾ ಶರ್ಮಾ ಅವರು, “ನಿಮಗೆ ತಿಳಿದಿರುವಂತೆ ವಿದೇಶದಲ್ಲಿ ಯಾವುದೇ ಘಟನೆ ನಡೆದರೆ ಬಿಎನ್‌ಎಸ್‌ಎಸ್‌ನ ಸೆಕ್ಷನ್ 208 ರ ಅಡಿಯಲ್ಲಿ, ಪ್ರಾಸಿಕ್ಯೂಟಿಂಗ್ ಏಜೆನ್ಸಿಯು ಗೃಹ ಸಚಿವಾಲಯ ಅಥವಾ ಕೇಂದ್ರ ಸರ್ಕಾರದ ಪೂರ್ವಾನುಮತಿ ಪಡೆಯಬೇಕಾಗುತ್ತದೆ. ಆ ಅನುಮತಿಯಿಲ್ಲದೆ, ನ್ಯಾಯಾಲಯವು ಈ ವಿಷಯವನ್ನು ಪರಿಗಣಿಸುವುದಿಲ್ಲ ಮತ್ತು ವಿಚಾರಣೆಗೆ ಮುಂದುವರಿಯುವುದಿಲ್ಲ. ಇಂದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ವಿಷಯವನ್ನು ಮುಂದುವರಿಸಲು ಅನುಮತಿ ನೀಡಿದ್ದಾರೆ ಮತ್ತು ಈ ಅನುಮತಿಯು ನಮಗೆ ಸಕಾಲದಲ್ಲಿ ಚಾರ್ಜ್‌ಶೀಟ್ ಸಲ್ಲಿಸಲು ಅನುವು ಮಾಡಿಕೊಡುತ್ತದೆ. ನಾವು 10 ರಿಂದ 15 ದಿನಗಳ ಅವಧಿಯಲ್ಲಿ ತನಿಖೆಯನ್ನು ಪೂರ್ಣಗೊಳಿಸುತ್ತೇವೆ ಮತ್ತು ಡಿಸೆಂಬರ್ 10 ರ ಮೊದಲು ನಮ್ಮ ಚಾರ್ಜ್‌ಶೀಟ್ ಸಲ್ಲಿಸುತ್ತೇವೆ” ಎಂದು ಸಿಎಂ ಶರ್ಮಾ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...