Homeಮುಖಪುಟ#भाजपा_के_आतंकवादी | ‘ಬಿಜೆಪಿ ಭಯೋತ್ಪಾದಕರು’ - ಟ್ವಿಟರ್‌‌‌ ಟ್ರೆಂಡ್

#भाजपा_के_आतंकवादी | ‘ಬಿಜೆಪಿ ಭಯೋತ್ಪಾದಕರು’ – ಟ್ವಿಟರ್‌‌‌ ಟ್ರೆಂಡ್

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್‌‌‌‌‌‌‌‌ ಖೇರಿಯಲ್ಲಿ ರೈತರ ಹತ್ಯೆಗೆ ಸಂಬಂಧಿಸಿದಂತೆ ಇಂದು ಎರಡು ವಿಡಿಯೊ ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೊ ವೈರಲ್ ಆಗುತ್ತಿದ್ದಂತೆ ಬಿಜೆಪಿ ವಿರುದ್ದ ಆಕ್ರೊಶ ಹೆಚ್ಚಿದ್ದು, ಟ್ವಿಟರ್‌ನಲ್ಲಿ ‘ಬಿಜೆಪಿ ಭಯೋತ್ಪಾದಕರು’(#भाजपा_के_आतंकवादी) ಹ್ಯಾಶ್‌‌‌ ಟ್ಯಾಗ್‌ ಟ್ರೆಂಡ್ ಆಗಿದೆ.

ಒಕ್ಕೂಟ ಸರ್ಕಾರದ ಸಚಿವನ ಮಗ ರೈತರ ಮೇಲೆ ಕಾರು ಹರಿಸಿ ನಾಲ್ವರನ್ನು ಹತ್ಯೆ ಮಾಡಿದ್ದಾನೆ ಎಂದು ಎಫ್‌ಐಆರ್‌ ದಾಖಲಾಗಿದೆ. ಈ ಘಟನೆ ಬಗ್ಗೆ ಕಳೆದ ಎರಡು ದಿನಗಳಿಂದ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿತ್ತು. ಆದರೆ ಬಿಜೆಪಿ ಬೆಂಬಲಿಗರು ಘಟನೆ ಬಗ್ಗೆ ಅನುಮಾನ ವ್ಯಕ್ತಪಡಿಸಿ, ಪಕ್ಷವನ್ನು ಸಮರ್ಥನೆ ಮಾಡುತ್ತಲೆ ಇದ್ದರು. ಆದರೆ ಇದೀಗ ಘಟನೆಯ ಎರಡು ವಿಡಿಯೋ ವೈರಲ್ ಆಗಿದೆ.

ಇದನ್ನೂ ಓದಿ: ಯುಪಿ ರೈತರ ಕೊಲೆ ಖಂಡಿಸಿ ದೇಶಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು: ಚಿತ್ರಗಳಲ್ಲಿ ನೋಡಿ

ಒಂದು ವಿಡಿಯೋದಲ್ಲಿ, ಘೋಷಣೆ ಕೂಗುತ್ತಾ ಹೊರಟಿದ್ದ ರೈತರ ಗುಂಪಿನ ಮೇಲೆ ಹಿಂದಿನಿಂದ ಎಸ್‌ಯುವಿಯೊಂದು ಹರಿಸಲಾಗಿದೆ. ಇದರಿಂದಾಗಿ  ರೈತರು ಚಲ್ಲಾಪಿಲ್ಲಿಯಾಗಿದ್ದು, ಕೆಲ ರೈತರ ಮೇಲೆ ನೇರವಾಗಿ ಕಾರು ಹರಿದಿದೆ. ಮತ್ತೊಂದು ವಿಡಿಯೊದಲ್ಲಿ ಜೀಪ್‌ನಿಂದ ಇಳಿದು ವ್ಯಕ್ತಿಯೊಬ್ಬ ಪರಾರಿಯಾಗುತ್ತಿರುವ ವಿಡಿಯೊವಾಗಿದೆ. ಈ ವಿಡಿಯೊದಲ್ಲಿ ಜೀಪ್‌ ಪಕ್ಕದಲ್ಲೇ ವ್ಯಕ್ತಿಯೊಬ್ಬರು ನರಳಾಡುತ್ತಿರುವುದು ಕೂಡಾ ಕಾಣುತ್ತದೆ.

ಈ ವಿಡಿಯೋಗಳು ಹೊರಬರುತ್ತಿದ್ದಂತೆ ಸಮಾಜಿಕ ಜಾಲತಾಣದಲ್ಲಿ ಬಿಜೆಪಿ ವಿರುದ್ದ ಆಕ್ರೋಶ ವ್ಯಕ್ತವಾಗಿದೆ. ಟ್ವಿಟರ್‌ನಲ್ಲಿ ಬಿಜೆಪಿ ಭಯೋತ್ಪಾದಕರು ಎಂಬ ಹ್ಯಾಶ್ ಟ್ಯಾಗ್ ಟ್ರೆಂಡ್ ಆಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕನ್ಹಯ್ಯ ಕುಮಾರ್‌ ಅವರು, “ಲಖಿಂಪುರದಲ್ಲಿ ಸಚಿವರ ಕಾರು ರೈತರನ್ನು ನಜ್ಜುಗುಜ್ಜಾಗಿಸಿದೆ. ಆದರೆ ಸರ್ಕಾರ ಮಾತ್ರ ಲಕ್ನೋದಲ್ಲಿ ಸಂಭ್ರಮಿಸುತ್ತಿದೆ. ಕೊಲೆಗಾರರು ಮುಕ್ತವಾಗಿ ತಿರುಗಾಡುತ್ತಿದ್ದಾರೆ ಮತ್ತು ವಿರೋಧ ಪಕ್ಷದ ನಾಯಕರನ್ನು ಬಂಧಿಸಲಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಇತ್ತ ಹತ್ಯೆಗೀಡಾದ ರೈತರಿಗಾಗಿ ಶೋಕಿಸುತ್ತಿರುವ ದೇಶ : ಅತ್ತ ಯುಪಿಯ ಕಾರ್ಯಕ್ರಮಗಳಲ್ಲಿ ಪ್ರಧಾನಿ ಭಾಗಿ

ಅವರ ಟ್ವೀಟ್‌ಗೆ ಘಟನೆಯ ಬಗ್ಗೆಗಿನ ದೀರ್ಘ ವಿಡಿಯೊವನ್ನು ಟ್ಯಾಗ್ ಮಾಡಿರುವ ಸೌರಭ್ ರಾಜ್ ಎಂಬುವವರು, “ಬಿಜೆಪಿ ಭಯೋತ್ಪಾದಕರು ಎಲ್ಲಾ ಮೂರು ಕಾರುಗಳನ್ನು ರೈತರ ಮೇಲೆ ಚಲಾಯಿಸಿದ ವೀಡಿಯೊದ ದೀರ್ಘ ಆವೃತ್ತಿ ಇಲ್ಲಿದೆ” ಎಂದು ಎಂದು ಹೇಳಿದ್ದಾರೆ.

ಜಾಜ್ಜ್‌ ಅವರು, “ಭಾರತದಲ್ಲಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರದಿಂದ ಕೊಲೆಗೆ ಯತ್ನಿಸಲಾಗಿದೆ. ಇದುವರೆಗೂ ಯಾವುದೇ ನ್ಯಾಯ ದೊರೆತಿಲ್ಲ. 6 ರೈತರನ್ನು ಕೊಂದು ಕೂಡಾ ಕ್ರಿಮಿನಲ್‌ ಮಾತ್ರ ಮುಕ್ತವಾಗಿ ತಿರುಗಾಡುತ್ತಿದ್ದಾನೆ” ಎಂದು ಬರೆದಿದ್ದಾರೆ.

ಕುಲ್ವಿಂದರ್‌ ಅವರು, “ಸಮುದಾಯದ ಸಮಸ್ಯೆಗಳನ್ನು ಪರಿಹರಿಸಲು ಈ ಮಂತ್ರಿಗಳನ್ನು ನೇಮಿಸಲಾಗಿದೆ. ಆದರೆ ಅಜಯ್ ಮಿಶ್ರಾ ಮತ್ತು ಅವರ ಮಗನಂತಹ ರೀತಿಯ ಮಂತ್ರೆಗಳು ನಮ್ಮ ದೇಶವನ್ನು ಹಾಳು ಮಾಡುತ್ತಿದ್ದಾರೆ.” ಎಂದು ಬರೆದಿದ್ದಾರೆ.

 

ಶೆರ್ನಿ ಅವರು, “ಹಾಡಹಗಲೇ ಅಮಾಯಕರ ಕೊಲೆ ಪ್ರಕರಣಗಳು ಹೆಚ್ಚಾಗುತ್ತಿದೆ, ಯಾಕೆ?” ಎಂದು ಪ್ರಶ್ನಿಸಿದ್ದಾರೆ.

 

 

 

 

 

ಇದನ್ನೂ ಓದಿ: ರೈತರ ಮೇಲೆ ಕಾರು ಹರಿಸುತ್ತಿರುವ ಎರಡು ವಿಡಿಯೋ ವೈರಲ್: ಜಾಲತಾಣಗಳಲ್ಲಿ ಭುಗಿಲೆದ್ದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...