Homeಸಿನಿಮಾಸಿನಿ ಸುದ್ದಿಅಣ್ತಮ್ಮಾ ಚುನಾವಣಾ ಪ್ರಚಾರ ಅಂದ್ರೆ...

ಅಣ್ತಮ್ಮಾ ಚುನಾವಣಾ ಪ್ರಚಾರ ಅಂದ್ರೆ…

- Advertisement -
- Advertisement -
  • ಗಿರೀಶ್ ತಾಳಿಕಟ್ಟೆ |

ಪ್ರತಿ ಎಲೆಕ್ಷನ್‍ನಂತೆ ಈ ಸಲವೂ ಸಿನಿಮಾ ಸ್ಟಾರ್‍ಗಳ ಪ್ರಚಾರ ಜೋರಾಗಿದೆ. ಅದರಲ್ಲೂ ನಟ ಯಶ್ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಮೂರೂ ಪಾರ್ಟಿಗಳಲ್ಲಿ ಪ್ರಚಾರ ಮಾಡ್ತಾ ಜನರಲ್ಲಿ ಶ್ಯಾನೆ ಗೊಂದಲ ಎಬ್ಬಿಸಿದ್ದಾರೆ. `ಎಲ್ಲಿದ್ದೀರಾ ಯಶ್, ಇದೇನ್ ಮಾಡ್ತಾ ಇದೀರಾ ಯಶ್’ ಅಂತ ಕೇಳಿದ್ರೆ, `ಪಕ್ಷ, ಸಿದ್ಧಾಂತ ನಂಗೆ ಗೊತ್ತಿಲ್ಲ. ಒಳ್ಳೇ ಅಭ್ಯರ್ಥಿ ಪರ ಪ್ರಚಾರ ಮಾಡ್ತೀನಿ’ ಅನ್ನೋ ಉತ್ತರ ಕೊಡ್ತಾರೆ. ಈ `ಒಳ್ಳೇ ಅಭ್ಯರ್ಥಿ’ `ಹತ್ತಿರದ ನೆಂಟ’ `ಒಳ್ಳೇ ಸ್ನೇಹಿತ’ ಹೀಗೆ ನೆಪ ಹೇಳಿಕೊಂಡು ಚುನಾವಣಾ ಪ್ರಚಾರ ನಡೆಸೋ ಯಶ್ ಮತ್ತು ಇನ್ನುಳಿದ ಸಿನಿ ಸಿಬ್ಬಂದಿಗಳಿಗೆ ಇಲ್ಲೊಂದು ಮಾತನ್ನು ಹೇಳಲೇಬೇಕಿದೆ.

ರಾಜಕೀಯ ಪ್ರಜ್ಞೆ ಮತ್ತು ಸಾಮಾಜಿಕ ಸನ್ನಿವೇಶಗಳ ಅರಿವಿಲ್ಲದೆ ತಮ್ಮ ಸ್ಟಾರ್‍ಗಿರಿಯನ್ನು ಮಾರ್ಕೆಟಿಂಗ್ ಸರಕುಗಳಾಗಿ ಮಾರಾಟಕ್ಕಿಡೋದು ಅಪಾಯಕಾರಿ ಮಾತ್ರವಲ್ಲ, ಜನರಿಗೆ ಎಸಗುವ ನಂಬಿಕೆ ದ್ರೋಹವೂ ಆಗಿರುತ್ತೆ. ಯಾಕೆಂದ್ರೆ ಚುನಾವಣೆಯಲ್ಲಿ ಒಬ್ಬ ವ್ಯಕ್ತಿ ಗೆದ್ದ ನಂತರ ಆತ ರಾಜಕೀಯ ಜವಾಬ್ಧಾರಿಯನ್ನು ನಿಭಾಯಿಸಬೇಕಿರುತ್ತದೆಯೇ ವಿನಾಃ ನಮ್ಮ ಜೊತೆಗಿನ ವೈಯಕ್ತಿಕ ಬಾಂಧವ್ಯವನ್ನಲ್ಲ. ಆ ರಾಜಕೀಯ ಜವಾಬ್ಧಾರಿ ಆತನ ಪಕ್ಷ, ಆ ಪಕ್ಷದ ಸಿದ್ಧಾಂತ, ನೀತಿಗಳನ್ನು ಅವಲಂಭಿಸಿರುತ್ತದೆ. ಒಂದು ಪಾರ್ಟಿ ಪ್ರಸ್ತುತ ಸನ್ನಿವೇಶದಲ್ಲಿ ಅಪಾಯಕಾರಿ ನಿಲುವುಗಳನ್ನು ತಳೆದಿದ್ದರೆ ಆ ಪಕ್ಷದ ಪರವಾಗಿ ಗೆದ್ದ ಆ `ಒಳ್ಳೆ ಅಭ್ಯರ್ಥಿ’ ಸಮಾಜದ ಜೊತೆ ಅಪಾಯಕಾರಿಯಾಗಿಯೇ ವರ್ತಿಸಬೇಕಾಗುತ್ತದೆ. ಅದನ್ನಾತ ಮೀರಲು ಸಾಧ್ಯವಿರುವುದಿಲ್ಲ.

ಮೈಸೂರಿನಲ್ಲಿ ಬಿಜೆಪಿ ಅಭ್ಯರ್ಥಿ ಪರ ಯಶ್ ಪ್ರಚಾರ

ಉದಾಹರಣೆಗೆ, ನಮ್ಮ ಒಳ್ಳೇ ಸ್ನೇಹಿತ ಅಥವಾ ಹತ್ತಿರದ ಸಂಬಂಧಿ ಒಬ್ಬ ಅಸಹಾಯಕ ಹುಡುಗಿ ಜೊತೆ ಅಸಭ್ಯವಾಗಿ ವರ್ತಿಸುತ್ತಿರುವ ಸ್ಥಿತಿಯಲ್ಲಿ ನಮ್ಮ ಕಣ್ಣಿಗೆ ಬಿದ್ದ ಎಂದಿಟ್ಟುಕೊಳ್ಳಿ. ಆತ ನಮ್ಮ ಒಳ್ಳೆಯ ಸ್ನೇಹಿತನೇ ಆಗಿದ್ದರೂ ನಾವು ಆತನ ಪರ ನಿಲ್ಲುವುದಿಲ್ಲ. ಅದು ನಮ್ಮ ಸಾಮಾಜಿಕ ಹೊಣೆಗಾರಿಕೆ. ಅಷ್ಟರಮಟ್ಟಿಗೆ ನಮಗೆ ಪರಿಸ್ಥಿತಿಯ ಆಗುಹೋಗಿನ ಪ್ರಜ್ಞೆ ಇರುತ್ತೆ, ಇರಬೇಕು. ಇನ್ನೂ ಸಿಂಪಲ್ಲಾಗಿ ಹೇಳಬೇಕಂದ್ರೆ, ಕೆಟ್ಟ ಸ್ಕ್ರಿಪ್ಟ್ ಹಿಡಿದು ಬರುವ ನಿರ್ಮಾಪಕ ಅದೆಷ್ಟೇ ಒಳ್ಳೇ ಸ್ನೇಹಿತನಾಗಿದ್ದರೂ ಆತನಿಗೆ ಯಾವ ಸ್ಟಾರ್ ನಟನೂ ಕಾಲ್‍ಶೀಟ್ ಕೊಡೋದಿಲ್ಲ!

ಹಾಗಂತ ಸಿನಿಮಾ ಮಂದಿ ಪ್ರಚಾರ ಮಾಡಬಾರದು ಅಂತೇನಲ್ಲ. ಆದರೆ ತಮ್ಮ ಆ ಪ್ರಚಾರವನ್ನು ರಾಜಕೀಯವಾಗಿಯೇ ಸಮರ್ಥಿಸಿಕೊಳ್ಳುವ ಪೊಲಿಟಿಕಲ್ ಬದ್ಧತೆ ಮತ್ತು ಅರಿವು ಅಂತವರಲ್ಲಿ ಇರಬೇಕು. ರಾಜಕೀಯೇತರ ನೆಪವಿಟ್ಟುಕೊಂಡು ರಾಜಕೀಯ ಪ್ರಚಾರ ಮಾಡಬಾರದು! ಅಂದಹಾಗೆ, ಯಶ್‍ಗೆ ಗಣಿಮಾಫಿಯಾದ ಶ್ರೀರಾಮುಲುನಲ್ಲಿ ಅದ್ಯಾವ `ಒಳ್ಳೆ ಅಭ್ಯರ್ಥಿ’ ಕಾಣಿಸಿದನೋ ದೇವರೇ ಬಲ್ಲ…..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...