Homeಸಿನಿಮಾಸಿನಿ ಸುದ್ದಿಅಣ್ತಮ್ಮಾ ಚುನಾವಣಾ ಪ್ರಚಾರ ಅಂದ್ರೆ...

ಅಣ್ತಮ್ಮಾ ಚುನಾವಣಾ ಪ್ರಚಾರ ಅಂದ್ರೆ…

- Advertisement -
- Advertisement -
  • ಗಿರೀಶ್ ತಾಳಿಕಟ್ಟೆ |

ಪ್ರತಿ ಎಲೆಕ್ಷನ್‍ನಂತೆ ಈ ಸಲವೂ ಸಿನಿಮಾ ಸ್ಟಾರ್‍ಗಳ ಪ್ರಚಾರ ಜೋರಾಗಿದೆ. ಅದರಲ್ಲೂ ನಟ ಯಶ್ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಮೂರೂ ಪಾರ್ಟಿಗಳಲ್ಲಿ ಪ್ರಚಾರ ಮಾಡ್ತಾ ಜನರಲ್ಲಿ ಶ್ಯಾನೆ ಗೊಂದಲ ಎಬ್ಬಿಸಿದ್ದಾರೆ. `ಎಲ್ಲಿದ್ದೀರಾ ಯಶ್, ಇದೇನ್ ಮಾಡ್ತಾ ಇದೀರಾ ಯಶ್’ ಅಂತ ಕೇಳಿದ್ರೆ, `ಪಕ್ಷ, ಸಿದ್ಧಾಂತ ನಂಗೆ ಗೊತ್ತಿಲ್ಲ. ಒಳ್ಳೇ ಅಭ್ಯರ್ಥಿ ಪರ ಪ್ರಚಾರ ಮಾಡ್ತೀನಿ’ ಅನ್ನೋ ಉತ್ತರ ಕೊಡ್ತಾರೆ. ಈ `ಒಳ್ಳೇ ಅಭ್ಯರ್ಥಿ’ `ಹತ್ತಿರದ ನೆಂಟ’ `ಒಳ್ಳೇ ಸ್ನೇಹಿತ’ ಹೀಗೆ ನೆಪ ಹೇಳಿಕೊಂಡು ಚುನಾವಣಾ ಪ್ರಚಾರ ನಡೆಸೋ ಯಶ್ ಮತ್ತು ಇನ್ನುಳಿದ ಸಿನಿ ಸಿಬ್ಬಂದಿಗಳಿಗೆ ಇಲ್ಲೊಂದು ಮಾತನ್ನು ಹೇಳಲೇಬೇಕಿದೆ.

ರಾಜಕೀಯ ಪ್ರಜ್ಞೆ ಮತ್ತು ಸಾಮಾಜಿಕ ಸನ್ನಿವೇಶಗಳ ಅರಿವಿಲ್ಲದೆ ತಮ್ಮ ಸ್ಟಾರ್‍ಗಿರಿಯನ್ನು ಮಾರ್ಕೆಟಿಂಗ್ ಸರಕುಗಳಾಗಿ ಮಾರಾಟಕ್ಕಿಡೋದು ಅಪಾಯಕಾರಿ ಮಾತ್ರವಲ್ಲ, ಜನರಿಗೆ ಎಸಗುವ ನಂಬಿಕೆ ದ್ರೋಹವೂ ಆಗಿರುತ್ತೆ. ಯಾಕೆಂದ್ರೆ ಚುನಾವಣೆಯಲ್ಲಿ ಒಬ್ಬ ವ್ಯಕ್ತಿ ಗೆದ್ದ ನಂತರ ಆತ ರಾಜಕೀಯ ಜವಾಬ್ಧಾರಿಯನ್ನು ನಿಭಾಯಿಸಬೇಕಿರುತ್ತದೆಯೇ ವಿನಾಃ ನಮ್ಮ ಜೊತೆಗಿನ ವೈಯಕ್ತಿಕ ಬಾಂಧವ್ಯವನ್ನಲ್ಲ. ಆ ರಾಜಕೀಯ ಜವಾಬ್ಧಾರಿ ಆತನ ಪಕ್ಷ, ಆ ಪಕ್ಷದ ಸಿದ್ಧಾಂತ, ನೀತಿಗಳನ್ನು ಅವಲಂಭಿಸಿರುತ್ತದೆ. ಒಂದು ಪಾರ್ಟಿ ಪ್ರಸ್ತುತ ಸನ್ನಿವೇಶದಲ್ಲಿ ಅಪಾಯಕಾರಿ ನಿಲುವುಗಳನ್ನು ತಳೆದಿದ್ದರೆ ಆ ಪಕ್ಷದ ಪರವಾಗಿ ಗೆದ್ದ ಆ `ಒಳ್ಳೆ ಅಭ್ಯರ್ಥಿ’ ಸಮಾಜದ ಜೊತೆ ಅಪಾಯಕಾರಿಯಾಗಿಯೇ ವರ್ತಿಸಬೇಕಾಗುತ್ತದೆ. ಅದನ್ನಾತ ಮೀರಲು ಸಾಧ್ಯವಿರುವುದಿಲ್ಲ.

ಮೈಸೂರಿನಲ್ಲಿ ಬಿಜೆಪಿ ಅಭ್ಯರ್ಥಿ ಪರ ಯಶ್ ಪ್ರಚಾರ

ಉದಾಹರಣೆಗೆ, ನಮ್ಮ ಒಳ್ಳೇ ಸ್ನೇಹಿತ ಅಥವಾ ಹತ್ತಿರದ ಸಂಬಂಧಿ ಒಬ್ಬ ಅಸಹಾಯಕ ಹುಡುಗಿ ಜೊತೆ ಅಸಭ್ಯವಾಗಿ ವರ್ತಿಸುತ್ತಿರುವ ಸ್ಥಿತಿಯಲ್ಲಿ ನಮ್ಮ ಕಣ್ಣಿಗೆ ಬಿದ್ದ ಎಂದಿಟ್ಟುಕೊಳ್ಳಿ. ಆತ ನಮ್ಮ ಒಳ್ಳೆಯ ಸ್ನೇಹಿತನೇ ಆಗಿದ್ದರೂ ನಾವು ಆತನ ಪರ ನಿಲ್ಲುವುದಿಲ್ಲ. ಅದು ನಮ್ಮ ಸಾಮಾಜಿಕ ಹೊಣೆಗಾರಿಕೆ. ಅಷ್ಟರಮಟ್ಟಿಗೆ ನಮಗೆ ಪರಿಸ್ಥಿತಿಯ ಆಗುಹೋಗಿನ ಪ್ರಜ್ಞೆ ಇರುತ್ತೆ, ಇರಬೇಕು. ಇನ್ನೂ ಸಿಂಪಲ್ಲಾಗಿ ಹೇಳಬೇಕಂದ್ರೆ, ಕೆಟ್ಟ ಸ್ಕ್ರಿಪ್ಟ್ ಹಿಡಿದು ಬರುವ ನಿರ್ಮಾಪಕ ಅದೆಷ್ಟೇ ಒಳ್ಳೇ ಸ್ನೇಹಿತನಾಗಿದ್ದರೂ ಆತನಿಗೆ ಯಾವ ಸ್ಟಾರ್ ನಟನೂ ಕಾಲ್‍ಶೀಟ್ ಕೊಡೋದಿಲ್ಲ!

ಹಾಗಂತ ಸಿನಿಮಾ ಮಂದಿ ಪ್ರಚಾರ ಮಾಡಬಾರದು ಅಂತೇನಲ್ಲ. ಆದರೆ ತಮ್ಮ ಆ ಪ್ರಚಾರವನ್ನು ರಾಜಕೀಯವಾಗಿಯೇ ಸಮರ್ಥಿಸಿಕೊಳ್ಳುವ ಪೊಲಿಟಿಕಲ್ ಬದ್ಧತೆ ಮತ್ತು ಅರಿವು ಅಂತವರಲ್ಲಿ ಇರಬೇಕು. ರಾಜಕೀಯೇತರ ನೆಪವಿಟ್ಟುಕೊಂಡು ರಾಜಕೀಯ ಪ್ರಚಾರ ಮಾಡಬಾರದು! ಅಂದಹಾಗೆ, ಯಶ್‍ಗೆ ಗಣಿಮಾಫಿಯಾದ ಶ್ರೀರಾಮುಲುನಲ್ಲಿ ಅದ್ಯಾವ `ಒಳ್ಳೆ ಅಭ್ಯರ್ಥಿ’ ಕಾಣಿಸಿದನೋ ದೇವರೇ ಬಲ್ಲ…..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...