Homeಕರ್ನಾಟಕಅತೃಪ್ತಿಗಿಂತ ಅಕ್ರಮ ದಂಧೆಗಳೇ ಪಕ್ಷಾಂತರಕ್ಕೆ ಕಾರಣ?

ಅತೃಪ್ತಿಗಿಂತ ಅಕ್ರಮ ದಂಧೆಗಳೇ ಪಕ್ಷಾಂತರಕ್ಕೆ ಕಾರಣ?

ಅಕ್ರಮ ದಂಧೆಯ ಹುಳುಕುಗಳನ್ನು ಮುಂದಿಟ್ಟೇ ಬಿಜೆಪಿಯ ಹೈಕಮ್ಯಾಂಡ್‍ನ ನೇರ ಉಸ್ತುವಾರಿಯಲ್ಲಿ ನಡೆದ ಆಪರೇಷನ್ ಇದು ಎನ್ನುವುದು ಸ್ಪಷ್ಟವಾಗುತ್ತಿದೆ.

- Advertisement -
- Advertisement -

ಯಾವ ರೀತಿಯಿಂದ ನೋಡಿದರೂ ಇಂದು ರಾಜೀನಾಮೆ ಕೊಟ್ಟಿರುವ ಶಾಸಕರ ಕಾಂಬಿನೇಷನ್ ಬಹಳ ಆಶ್ಚರ್ಯಕರವಾಗಿ ಕಾಣುತ್ತದೆ.

ಅತೃಪ್ತಿಯೇ ಕಾರಣ ಎನ್ನುವುದಾದರೆ, ಬೈರತಿ ಬಸವರಾಜ್ ಎಂದೂ ಅತೃಪ್ತಿ ವ್ಯಕ್ತಪಡಿಸಿಲ್ಲ. ಆಡಳಿತದಲ್ಲಿ ಪ್ರಮುಖ ಪಾತ್ರ ವಹಿಸಿರುವ ಎಚ್‍ಡಿಕೆ ಮತ್ತು ಡಿಕೆಶಿ ಇಬ್ಬರಿಗೂ ಮುನಿರತ್ನ ಆಪ್ತರು.

ಅಧಿಕಾರ ಸಿಕ್ಕಿಲ್ಲದಿರುವುದು ಎನ್ನುವುದಾದರೆ ಎಂ.ಟಿ.ಬಿ.ನಾಗರಾಜ್‍ರನ್ನು ಸಚಿವರನ್ನಾಗಿಸಲಾಗಿದೆ. ಸಚಿವ ಸ್ಥಾನಕ್ಕೆ ಸಮಾನವಾದ ಬಿಡಿಎ ಅಧ್ಯಕ್ಷ ಸ್ಥಾನ ಸೋಮಶೇಖರ್‍ರಿಗೆ ಮತ್ತು ಹೊಸ ಸರ್ಕಾರ ಬಂದರೂ ಕದಲಿಸಲಾಗದ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನ ಸುಧಾಕರ್‍ರಿಗೆ ಸಿಕ್ಕಿದೆ. ರಾಕೇಶ್ ಸಿಂಗ್ ಬಿಡಿಎ ಆಯುಕ್ತರಾಗಿ ಮುಂದುವರೆದರೆ ತನಗೆ ಅಡ್ಡಗಾಲು ಎಂದು ಎಸ್.ಟಿ.ಸೋಮಶೇಖರ್ ಹೇಳಿದ್ದರಿಂದ ಅವರನ್ನೂ ಬದಲಿಸಲಾಗಿದೆ.

ಜಾತಿಯೇ ಕಾರಣ, ಲಿಂಗಾಯಿತರು ಮತ್ತು ವಾಲ್ಮೀಕಿ ಸಮುದಾಯದ ಶಾಸಕರು ಹೆಚ್ಚಾಗಿ ಆ ಕಡೆಗೆ ಹೋಗಿದ್ದಾರೆ ಎನ್ನುವ ಹಾಗೂ ಇಲ್ಲ. ಎಂ.ಟಿ.ಬಿ ನಾಗರಾಜ್ ಮತ್ತು ಬೈರತಿ ಬಸವರಾಜ್ ಇಬ್ಬರೂ ಕುರುಬರು. ಉಳಿದ ಕಾಂಬಿನೇಷನ್ ಸಹಾ ಹಾಗಿಲ್ಲ. ಇನ್ನು ರೋಷನ್‍ಬೇಗ್ ಸ್ಪರ್ಧಿಸುತ್ತಿರುವುದು ಮುಸ್ಲಿಮರೇ ಅಧಿಕವಾಗಿರುವ ಶಿವಾಜಿನಗರದಿಂದ. ಸ್ವತಃ ಬೇಗ್ ವಿರೋಧಿಸಿದರೂ ಲೋಕಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್‍ರಿಗೇ ಬಹುಮತ ಸಿಕ್ಕಿದೆ.

ಇನ್ನು ಗೋಪಾಲಯ್ಯನವರು ಹಿಂದಿನ ಸಾಲಿನಲ್ಲೇ ಚೆಲುವರಾಯಸ್ವಾಮಿ ಮತ್ತಿತರರ ಜೊತೆ ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ವಿರುದ್ಧ ಮತ ಚಲಾಯಿಸಿದ್ದರು. ನಂತರ ಮತ್ತೆ ಪಕ್ಷದಲ್ಲೇ ಉಳಿದು ಜೆಡಿಎಸ್‍ನಿಂದಲೇ ಟಿಕೆಟ್ ಪಡೆದು ಪುನರಾಯ್ಕೆಯಾಗಿದ್ದಾರೆ.

ಹೀಗಿರುವಾಗ ಇವರೆಲ್ಲರನ್ನೂ ಬೆಸೆದ ಕಾರಣವೇನು? ಕೆಲವರಿಗೆ ಅತೃಪ್ತಿಯು ಅವಕಾಶವಾದವಾಗಿ ಪರಿವರ್ತನೆಯಾಗಿರುವುದು ವಾಸ್ತವ. ಅವರಲ್ಲಿ ಎಚ್.ವಿಶ್ವನಾಥ್, ರಾಮಲಿಂಗಾರೆಡ್ಡಿ ಮತ್ತು ಕೆ.ಸಿ.ನಾರಾಯಣಗೌಡರಿದ್ದಾರೆ. ಕುಮಟಳ್ಳಿಯವರು ಜಾರಕಿಹೊಳಿಯವರ ಹಿಂದೆ ಹೋಗುವವರು. ಬಿ.ಸಿ.ಪಾಟೀಲ್ ನಿಜಕ್ಕೂ ಅತೃಪ್ತರೇ. ಹಾವೇರಿ ಜಿಲ್ಲೆಯಲ್ಲಿ ಸತತವಾಗಿ ಗೆದ್ದು ಬರುತ್ತಿರುವ ಏಕೈಕ ಕಾಂಗ್ರೆಸ್ ಶಾಸಕನಾದ ತನಗೆ ಬಿಜೆಪಿಯಿಂದ ಬಂದ ಆಫರ್ ತಿರಸ್ಕರಿಸಿ ಇಲ್ಲಿ ಉಳಿದರೂ ಅಧಿಕಾರ ಸಿಕ್ಕಿಲ್ಲ ಎಂಬ ಕೊರಗು ಅವರದ್ದು. ಪ್ರತಾಪ್‍ಗೌಡ ಮತ್ತು ಶಿವರಾಮ ಹೆಬ್ಬಾರ್ ಅವರು ಮಾರಿಕೊಳ್ಳಲು ನಿಂತಿರುವುದು ಬಿಟ್ಟರೆ ಹೆಚ್ಚೇನೂ ಕಾಣುತ್ತಿಲ್ಲ. ಇಷ್ಟು ಜನರನ್ನು ಬಿಟ್ಟರೆ ಮಿಕ್ಕೆಲ್ಲರೂ ಅಕ್ರಮ ದಂಧೆಯ ಕಾರಣಕ್ಕೇ ಬಿಜೆಪಿಯಿಂದ ಬೆದರಿಕೆಗೆ ಒಳಗಾಗಿದ್ದಾರೆ ಎಂಬುದು ಹಲವು ರಾಜಕಾರಣಿಗಳ ಆಡಿಟಿಂಗ್ ನಡೆಸುವ ಚಾರ್ಟರ್ಡ್ ಅಕೌಂಟೆಂಟ್ ಒಬ್ಬರ ಅನಿಸಿಕೆ.

ಇದನ್ನೂ ಓದಿ: ಮಾನಗೇಡಿ ಶಾಸಕರು, ಹೊಣೆಗೇಡಿ ನಾಯಕರು

ಹೆಸರು ಬಹಿರಂಗಗೊಳಿಸಲು ಇಚ್ಛಿಸದ ಅವರ ಪ್ರಕಾರ ಎಂಟಿಬಿ ನಾಗರಾಜು, ಸೋಮಶೇಖರ್, ಭೈರತಿ ಮೂರೂ ಜನರೂ ರಿಯಲ್ ಎಸ್ಟೇಟ್ ಕುಳಗಳು. ಮುನಿರತ್ನರಿಗೆ ಸಕ್ರಮ ಮತ್ತು ಅಕ್ರಮ ದಂಧೆಗಳೆರಡೂ ಇವೆ. ರಮೇಶ್ ಜಾರಕಿಹೊಳಿ ಹಲವು ವ್ಯವಹಾರಗಳನ್ನು ನಡೆಸುತ್ತಾ, ದೊಡ್ಡ ಮಟ್ಟದ ಸಾಲ ಮಾಡಿಕೊಂಡಿರುವ ‘ಸಾಹುಕಾರ’. ಆನಂದ್‍ಸಿಂಗ್ ಈಗಾಗಲೇ ಒಮ್ಮೆ ಜೈಲಿಗೆ ಹೋಗಿ ಬಂದಿರುವ ಉದ್ಯಮಿ. ಇನ್ನು ಸುಧಾಕರ್ ಅವರ ದಿಢೀರ್ ಶ್ರೀಮಂತಿಕೆಯ ಹಿನ್ನೆಲೆ ಬಹಳಷ್ಟು ಜನರಿಗೆ ಗೊತ್ತಿಲ್ಲ. ರೋಷನ್‍ಬೇಗ್ ಐಎಂಎ ಕೇಸಿನಲ್ಲಿ ಯಾವಾಗ ಜೈಲಿಗೆ ಹೋಗಬೇಕಾಗಿ ಬರುತ್ತದೋ ಹೇಳಲಾಗದು.

ಹೀಗಾಗಿ ಮೂರ್ನಾಲ್ಕು ಜನರನ್ನು ಬಿಟ್ಟರೆ ಮಿಕ್ಕೆಲ್ಲರೂ ಕನಿಷ್ಠ ನೂರು ಕೋಟಿ ಕುಳಗಳು. ಒಂದಲ್ಲಾ ಒಂದು ಬಗೆಯ ಅಕ್ರಮ ದಂಧೆಗಳು ಇವರ ಹಿಂದೆ ಇದೆ ಎಂಬುದು ಆಡಿಟರ್‍ಅವರ ಅನಿಸಿಕೆ. ಹಾಗಾಗಿಯೇ ಉತ್ತರ ಕರ್ನಾಟಕದ ಅಥವಾ ಬಳ್ಳಾರಿಯ ಶಾಸಕರು ಪಕ್ಷ ಬದಲಿಸುತ್ತಾರೆ ಎಂದು ಎಲ್ಲರೂ ಕಾಯುತ್ತಿದ್ದರು, ಅದರಲ್ಲೂ ಲಿಂಗಾಯಿತ ಶಾಸಕರ ದಂಡೇ ಹೊರಹೋಗುತ್ತದೆ ಎಂಬ ನಿರೀಕ್ಷೆಗೆ ವಿರುದ್ಧವಾಗಿ ದಕ್ಷಿಣ ಕರ್ನಾಟಕದ ಶಾಸಕರು ರಾಜೀನಾಮೆ ನೀಡಿದರು. ಅದರಲ್ಲೂ ಬೆಂಗಳೂರಿನ ನಾಲ್ವರು! ಇದನ್ನು ಯಾರೂ ಊಹಿಸಿರಲಿಲ್ಲ. ಇದು ರಾಜೀನಾಮೆಯ ಅಸಲೀ ಕಾರಣ ಅತೃಪ್ತಿಯಲ್ಲ, ಅಕ್ರಮ ದಂಧೆ ಎಂಬ ಆಡಿಟರ್‍ರ ಅಭಿಪ್ರಾಯಕ್ಕೆ ಪುಷ್ಟಿ ಕೊಡುತ್ತದೆ.

ಇದನ್ನೂ ಓದಿ: ಆನಂದ್ ಸಿಂಗ್ ರಾಜೀನಾಮೆ

‘ಆಂಧ್ರದ ಮಲ್ಯರು’ ಎಂದು ಬಿಜೆಪಿಯೇ ಮೂದಲಿಸುತ್ತಿದ್ದ ಟಿಡಿಪಿಯ ರಾಜ್ಯಸಭಾ ಸದಸ್ಯರನ್ನು ಬಿಜೆಪಿಯು ಸೆಳೆದದ್ದು ಅವರ ಅಕ್ರಮ ದಂಧೆಗಳನ್ನು ಮುಂದಿಟ್ಟು ಹೆದರಿಸಿದ್ದರಿಂದ ಎಂಬುದು ದೇಶಕ್ಕೇ ಗೊತ್ತಿದೆ. 2008ರಲ್ಲಿ ಬಿಜೆಪಿಯು ಆಪರೇಷನ್ ಕಮಲ ನಡೆಸಿದ್ದೂ ಅಕ್ರಮ ಹಣದ ಮೂಲಕವೇ ಆಗಿತ್ತು. ಅಂದರೆ ತಮ್ಮ ಜೊತೆ ಇದ್ದರೆ ಎಲ್ಲಾ ಅಕ್ರಮಗಳೂ ಮಾಫ್ ಎಂಬುದು ಬಿಜೆಪಿ ಪಕ್ಷದ ನೀತಿಯಾಗಿದೆ.

ಹೀಗಾಗಿ ಅಕ್ರಮ ದಂಧೆಯ ಹುಳುಕುಗಳನ್ನು ಮುಂದಿಟ್ಟೇ ಬಿಜೆಪಿಯ ಹೈಕಮ್ಯಾಂಡ್‍ನ ನೇರ ಉಸ್ತುವಾರಿಯಲ್ಲಿ ನಡೆದ ಆಪರೇಷನ್ ಇದು ಎನ್ನುವುದು ಸ್ಪಷ್ಟವಾಗುತ್ತಿದೆ. ಈ ಶಾಸಕರು ಯಾವ ಪಕ್ಷದಲ್ಲೇ ಇದ್ದರೂ, ಇವರ ಆಸ್ತಿಪಾಸ್ತಿಗಳ ತನಿಖೆಯು ನಡೆದಾಗ ಮಾತ್ರ ಅಸಲೀ ಕಾರಣ ಬಹಿರಂಗಕ್ಕೆ ಬರುತ್ತದೆ. ಅಲ್ಲಿಯವರೆಗೆ ಇಂತಹ ಕಣ್ಣಾಮುಚ್ಚಾಲೆ ನಡೆಯುತ್ತಲೇ ಇರುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...