Homeಕರ್ನಾಟಕಅತೃಪ್ತಿಗಿಂತ ಅಕ್ರಮ ದಂಧೆಗಳೇ ಪಕ್ಷಾಂತರಕ್ಕೆ ಕಾರಣ?

ಅತೃಪ್ತಿಗಿಂತ ಅಕ್ರಮ ದಂಧೆಗಳೇ ಪಕ್ಷಾಂತರಕ್ಕೆ ಕಾರಣ?

ಅಕ್ರಮ ದಂಧೆಯ ಹುಳುಕುಗಳನ್ನು ಮುಂದಿಟ್ಟೇ ಬಿಜೆಪಿಯ ಹೈಕಮ್ಯಾಂಡ್‍ನ ನೇರ ಉಸ್ತುವಾರಿಯಲ್ಲಿ ನಡೆದ ಆಪರೇಷನ್ ಇದು ಎನ್ನುವುದು ಸ್ಪಷ್ಟವಾಗುತ್ತಿದೆ.

- Advertisement -
- Advertisement -

ಯಾವ ರೀತಿಯಿಂದ ನೋಡಿದರೂ ಇಂದು ರಾಜೀನಾಮೆ ಕೊಟ್ಟಿರುವ ಶಾಸಕರ ಕಾಂಬಿನೇಷನ್ ಬಹಳ ಆಶ್ಚರ್ಯಕರವಾಗಿ ಕಾಣುತ್ತದೆ.

ಅತೃಪ್ತಿಯೇ ಕಾರಣ ಎನ್ನುವುದಾದರೆ, ಬೈರತಿ ಬಸವರಾಜ್ ಎಂದೂ ಅತೃಪ್ತಿ ವ್ಯಕ್ತಪಡಿಸಿಲ್ಲ. ಆಡಳಿತದಲ್ಲಿ ಪ್ರಮುಖ ಪಾತ್ರ ವಹಿಸಿರುವ ಎಚ್‍ಡಿಕೆ ಮತ್ತು ಡಿಕೆಶಿ ಇಬ್ಬರಿಗೂ ಮುನಿರತ್ನ ಆಪ್ತರು.

ಅಧಿಕಾರ ಸಿಕ್ಕಿಲ್ಲದಿರುವುದು ಎನ್ನುವುದಾದರೆ ಎಂ.ಟಿ.ಬಿ.ನಾಗರಾಜ್‍ರನ್ನು ಸಚಿವರನ್ನಾಗಿಸಲಾಗಿದೆ. ಸಚಿವ ಸ್ಥಾನಕ್ಕೆ ಸಮಾನವಾದ ಬಿಡಿಎ ಅಧ್ಯಕ್ಷ ಸ್ಥಾನ ಸೋಮಶೇಖರ್‍ರಿಗೆ ಮತ್ತು ಹೊಸ ಸರ್ಕಾರ ಬಂದರೂ ಕದಲಿಸಲಾಗದ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನ ಸುಧಾಕರ್‍ರಿಗೆ ಸಿಕ್ಕಿದೆ. ರಾಕೇಶ್ ಸಿಂಗ್ ಬಿಡಿಎ ಆಯುಕ್ತರಾಗಿ ಮುಂದುವರೆದರೆ ತನಗೆ ಅಡ್ಡಗಾಲು ಎಂದು ಎಸ್.ಟಿ.ಸೋಮಶೇಖರ್ ಹೇಳಿದ್ದರಿಂದ ಅವರನ್ನೂ ಬದಲಿಸಲಾಗಿದೆ.

ಜಾತಿಯೇ ಕಾರಣ, ಲಿಂಗಾಯಿತರು ಮತ್ತು ವಾಲ್ಮೀಕಿ ಸಮುದಾಯದ ಶಾಸಕರು ಹೆಚ್ಚಾಗಿ ಆ ಕಡೆಗೆ ಹೋಗಿದ್ದಾರೆ ಎನ್ನುವ ಹಾಗೂ ಇಲ್ಲ. ಎಂ.ಟಿ.ಬಿ ನಾಗರಾಜ್ ಮತ್ತು ಬೈರತಿ ಬಸವರಾಜ್ ಇಬ್ಬರೂ ಕುರುಬರು. ಉಳಿದ ಕಾಂಬಿನೇಷನ್ ಸಹಾ ಹಾಗಿಲ್ಲ. ಇನ್ನು ರೋಷನ್‍ಬೇಗ್ ಸ್ಪರ್ಧಿಸುತ್ತಿರುವುದು ಮುಸ್ಲಿಮರೇ ಅಧಿಕವಾಗಿರುವ ಶಿವಾಜಿನಗರದಿಂದ. ಸ್ವತಃ ಬೇಗ್ ವಿರೋಧಿಸಿದರೂ ಲೋಕಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್‍ರಿಗೇ ಬಹುಮತ ಸಿಕ್ಕಿದೆ.

ಇನ್ನು ಗೋಪಾಲಯ್ಯನವರು ಹಿಂದಿನ ಸಾಲಿನಲ್ಲೇ ಚೆಲುವರಾಯಸ್ವಾಮಿ ಮತ್ತಿತರರ ಜೊತೆ ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ವಿರುದ್ಧ ಮತ ಚಲಾಯಿಸಿದ್ದರು. ನಂತರ ಮತ್ತೆ ಪಕ್ಷದಲ್ಲೇ ಉಳಿದು ಜೆಡಿಎಸ್‍ನಿಂದಲೇ ಟಿಕೆಟ್ ಪಡೆದು ಪುನರಾಯ್ಕೆಯಾಗಿದ್ದಾರೆ.

ಹೀಗಿರುವಾಗ ಇವರೆಲ್ಲರನ್ನೂ ಬೆಸೆದ ಕಾರಣವೇನು? ಕೆಲವರಿಗೆ ಅತೃಪ್ತಿಯು ಅವಕಾಶವಾದವಾಗಿ ಪರಿವರ್ತನೆಯಾಗಿರುವುದು ವಾಸ್ತವ. ಅವರಲ್ಲಿ ಎಚ್.ವಿಶ್ವನಾಥ್, ರಾಮಲಿಂಗಾರೆಡ್ಡಿ ಮತ್ತು ಕೆ.ಸಿ.ನಾರಾಯಣಗೌಡರಿದ್ದಾರೆ. ಕುಮಟಳ್ಳಿಯವರು ಜಾರಕಿಹೊಳಿಯವರ ಹಿಂದೆ ಹೋಗುವವರು. ಬಿ.ಸಿ.ಪಾಟೀಲ್ ನಿಜಕ್ಕೂ ಅತೃಪ್ತರೇ. ಹಾವೇರಿ ಜಿಲ್ಲೆಯಲ್ಲಿ ಸತತವಾಗಿ ಗೆದ್ದು ಬರುತ್ತಿರುವ ಏಕೈಕ ಕಾಂಗ್ರೆಸ್ ಶಾಸಕನಾದ ತನಗೆ ಬಿಜೆಪಿಯಿಂದ ಬಂದ ಆಫರ್ ತಿರಸ್ಕರಿಸಿ ಇಲ್ಲಿ ಉಳಿದರೂ ಅಧಿಕಾರ ಸಿಕ್ಕಿಲ್ಲ ಎಂಬ ಕೊರಗು ಅವರದ್ದು. ಪ್ರತಾಪ್‍ಗೌಡ ಮತ್ತು ಶಿವರಾಮ ಹೆಬ್ಬಾರ್ ಅವರು ಮಾರಿಕೊಳ್ಳಲು ನಿಂತಿರುವುದು ಬಿಟ್ಟರೆ ಹೆಚ್ಚೇನೂ ಕಾಣುತ್ತಿಲ್ಲ. ಇಷ್ಟು ಜನರನ್ನು ಬಿಟ್ಟರೆ ಮಿಕ್ಕೆಲ್ಲರೂ ಅಕ್ರಮ ದಂಧೆಯ ಕಾರಣಕ್ಕೇ ಬಿಜೆಪಿಯಿಂದ ಬೆದರಿಕೆಗೆ ಒಳಗಾಗಿದ್ದಾರೆ ಎಂಬುದು ಹಲವು ರಾಜಕಾರಣಿಗಳ ಆಡಿಟಿಂಗ್ ನಡೆಸುವ ಚಾರ್ಟರ್ಡ್ ಅಕೌಂಟೆಂಟ್ ಒಬ್ಬರ ಅನಿಸಿಕೆ.

ಇದನ್ನೂ ಓದಿ: ಮಾನಗೇಡಿ ಶಾಸಕರು, ಹೊಣೆಗೇಡಿ ನಾಯಕರು

ಹೆಸರು ಬಹಿರಂಗಗೊಳಿಸಲು ಇಚ್ಛಿಸದ ಅವರ ಪ್ರಕಾರ ಎಂಟಿಬಿ ನಾಗರಾಜು, ಸೋಮಶೇಖರ್, ಭೈರತಿ ಮೂರೂ ಜನರೂ ರಿಯಲ್ ಎಸ್ಟೇಟ್ ಕುಳಗಳು. ಮುನಿರತ್ನರಿಗೆ ಸಕ್ರಮ ಮತ್ತು ಅಕ್ರಮ ದಂಧೆಗಳೆರಡೂ ಇವೆ. ರಮೇಶ್ ಜಾರಕಿಹೊಳಿ ಹಲವು ವ್ಯವಹಾರಗಳನ್ನು ನಡೆಸುತ್ತಾ, ದೊಡ್ಡ ಮಟ್ಟದ ಸಾಲ ಮಾಡಿಕೊಂಡಿರುವ ‘ಸಾಹುಕಾರ’. ಆನಂದ್‍ಸಿಂಗ್ ಈಗಾಗಲೇ ಒಮ್ಮೆ ಜೈಲಿಗೆ ಹೋಗಿ ಬಂದಿರುವ ಉದ್ಯಮಿ. ಇನ್ನು ಸುಧಾಕರ್ ಅವರ ದಿಢೀರ್ ಶ್ರೀಮಂತಿಕೆಯ ಹಿನ್ನೆಲೆ ಬಹಳಷ್ಟು ಜನರಿಗೆ ಗೊತ್ತಿಲ್ಲ. ರೋಷನ್‍ಬೇಗ್ ಐಎಂಎ ಕೇಸಿನಲ್ಲಿ ಯಾವಾಗ ಜೈಲಿಗೆ ಹೋಗಬೇಕಾಗಿ ಬರುತ್ತದೋ ಹೇಳಲಾಗದು.

ಹೀಗಾಗಿ ಮೂರ್ನಾಲ್ಕು ಜನರನ್ನು ಬಿಟ್ಟರೆ ಮಿಕ್ಕೆಲ್ಲರೂ ಕನಿಷ್ಠ ನೂರು ಕೋಟಿ ಕುಳಗಳು. ಒಂದಲ್ಲಾ ಒಂದು ಬಗೆಯ ಅಕ್ರಮ ದಂಧೆಗಳು ಇವರ ಹಿಂದೆ ಇದೆ ಎಂಬುದು ಆಡಿಟರ್‍ಅವರ ಅನಿಸಿಕೆ. ಹಾಗಾಗಿಯೇ ಉತ್ತರ ಕರ್ನಾಟಕದ ಅಥವಾ ಬಳ್ಳಾರಿಯ ಶಾಸಕರು ಪಕ್ಷ ಬದಲಿಸುತ್ತಾರೆ ಎಂದು ಎಲ್ಲರೂ ಕಾಯುತ್ತಿದ್ದರು, ಅದರಲ್ಲೂ ಲಿಂಗಾಯಿತ ಶಾಸಕರ ದಂಡೇ ಹೊರಹೋಗುತ್ತದೆ ಎಂಬ ನಿರೀಕ್ಷೆಗೆ ವಿರುದ್ಧವಾಗಿ ದಕ್ಷಿಣ ಕರ್ನಾಟಕದ ಶಾಸಕರು ರಾಜೀನಾಮೆ ನೀಡಿದರು. ಅದರಲ್ಲೂ ಬೆಂಗಳೂರಿನ ನಾಲ್ವರು! ಇದನ್ನು ಯಾರೂ ಊಹಿಸಿರಲಿಲ್ಲ. ಇದು ರಾಜೀನಾಮೆಯ ಅಸಲೀ ಕಾರಣ ಅತೃಪ್ತಿಯಲ್ಲ, ಅಕ್ರಮ ದಂಧೆ ಎಂಬ ಆಡಿಟರ್‍ರ ಅಭಿಪ್ರಾಯಕ್ಕೆ ಪುಷ್ಟಿ ಕೊಡುತ್ತದೆ.

ಇದನ್ನೂ ಓದಿ: ಆನಂದ್ ಸಿಂಗ್ ರಾಜೀನಾಮೆ

‘ಆಂಧ್ರದ ಮಲ್ಯರು’ ಎಂದು ಬಿಜೆಪಿಯೇ ಮೂದಲಿಸುತ್ತಿದ್ದ ಟಿಡಿಪಿಯ ರಾಜ್ಯಸಭಾ ಸದಸ್ಯರನ್ನು ಬಿಜೆಪಿಯು ಸೆಳೆದದ್ದು ಅವರ ಅಕ್ರಮ ದಂಧೆಗಳನ್ನು ಮುಂದಿಟ್ಟು ಹೆದರಿಸಿದ್ದರಿಂದ ಎಂಬುದು ದೇಶಕ್ಕೇ ಗೊತ್ತಿದೆ. 2008ರಲ್ಲಿ ಬಿಜೆಪಿಯು ಆಪರೇಷನ್ ಕಮಲ ನಡೆಸಿದ್ದೂ ಅಕ್ರಮ ಹಣದ ಮೂಲಕವೇ ಆಗಿತ್ತು. ಅಂದರೆ ತಮ್ಮ ಜೊತೆ ಇದ್ದರೆ ಎಲ್ಲಾ ಅಕ್ರಮಗಳೂ ಮಾಫ್ ಎಂಬುದು ಬಿಜೆಪಿ ಪಕ್ಷದ ನೀತಿಯಾಗಿದೆ.

ಹೀಗಾಗಿ ಅಕ್ರಮ ದಂಧೆಯ ಹುಳುಕುಗಳನ್ನು ಮುಂದಿಟ್ಟೇ ಬಿಜೆಪಿಯ ಹೈಕಮ್ಯಾಂಡ್‍ನ ನೇರ ಉಸ್ತುವಾರಿಯಲ್ಲಿ ನಡೆದ ಆಪರೇಷನ್ ಇದು ಎನ್ನುವುದು ಸ್ಪಷ್ಟವಾಗುತ್ತಿದೆ. ಈ ಶಾಸಕರು ಯಾವ ಪಕ್ಷದಲ್ಲೇ ಇದ್ದರೂ, ಇವರ ಆಸ್ತಿಪಾಸ್ತಿಗಳ ತನಿಖೆಯು ನಡೆದಾಗ ಮಾತ್ರ ಅಸಲೀ ಕಾರಣ ಬಹಿರಂಗಕ್ಕೆ ಬರುತ್ತದೆ. ಅಲ್ಲಿಯವರೆಗೆ ಇಂತಹ ಕಣ್ಣಾಮುಚ್ಚಾಲೆ ನಡೆಯುತ್ತಲೇ ಇರುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...