Homeಕರ್ನಾಟಕಅತೃಪ್ತಿಗಿಂತ ಅಕ್ರಮ ದಂಧೆಗಳೇ ಪಕ್ಷಾಂತರಕ್ಕೆ ಕಾರಣ?

ಅತೃಪ್ತಿಗಿಂತ ಅಕ್ರಮ ದಂಧೆಗಳೇ ಪಕ್ಷಾಂತರಕ್ಕೆ ಕಾರಣ?

ಅಕ್ರಮ ದಂಧೆಯ ಹುಳುಕುಗಳನ್ನು ಮುಂದಿಟ್ಟೇ ಬಿಜೆಪಿಯ ಹೈಕಮ್ಯಾಂಡ್‍ನ ನೇರ ಉಸ್ತುವಾರಿಯಲ್ಲಿ ನಡೆದ ಆಪರೇಷನ್ ಇದು ಎನ್ನುವುದು ಸ್ಪಷ್ಟವಾಗುತ್ತಿದೆ.

- Advertisement -
- Advertisement -

ಯಾವ ರೀತಿಯಿಂದ ನೋಡಿದರೂ ಇಂದು ರಾಜೀನಾಮೆ ಕೊಟ್ಟಿರುವ ಶಾಸಕರ ಕಾಂಬಿನೇಷನ್ ಬಹಳ ಆಶ್ಚರ್ಯಕರವಾಗಿ ಕಾಣುತ್ತದೆ.

ಅತೃಪ್ತಿಯೇ ಕಾರಣ ಎನ್ನುವುದಾದರೆ, ಬೈರತಿ ಬಸವರಾಜ್ ಎಂದೂ ಅತೃಪ್ತಿ ವ್ಯಕ್ತಪಡಿಸಿಲ್ಲ. ಆಡಳಿತದಲ್ಲಿ ಪ್ರಮುಖ ಪಾತ್ರ ವಹಿಸಿರುವ ಎಚ್‍ಡಿಕೆ ಮತ್ತು ಡಿಕೆಶಿ ಇಬ್ಬರಿಗೂ ಮುನಿರತ್ನ ಆಪ್ತರು.

ಅಧಿಕಾರ ಸಿಕ್ಕಿಲ್ಲದಿರುವುದು ಎನ್ನುವುದಾದರೆ ಎಂ.ಟಿ.ಬಿ.ನಾಗರಾಜ್‍ರನ್ನು ಸಚಿವರನ್ನಾಗಿಸಲಾಗಿದೆ. ಸಚಿವ ಸ್ಥಾನಕ್ಕೆ ಸಮಾನವಾದ ಬಿಡಿಎ ಅಧ್ಯಕ್ಷ ಸ್ಥಾನ ಸೋಮಶೇಖರ್‍ರಿಗೆ ಮತ್ತು ಹೊಸ ಸರ್ಕಾರ ಬಂದರೂ ಕದಲಿಸಲಾಗದ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನ ಸುಧಾಕರ್‍ರಿಗೆ ಸಿಕ್ಕಿದೆ. ರಾಕೇಶ್ ಸಿಂಗ್ ಬಿಡಿಎ ಆಯುಕ್ತರಾಗಿ ಮುಂದುವರೆದರೆ ತನಗೆ ಅಡ್ಡಗಾಲು ಎಂದು ಎಸ್.ಟಿ.ಸೋಮಶೇಖರ್ ಹೇಳಿದ್ದರಿಂದ ಅವರನ್ನೂ ಬದಲಿಸಲಾಗಿದೆ.

ಜಾತಿಯೇ ಕಾರಣ, ಲಿಂಗಾಯಿತರು ಮತ್ತು ವಾಲ್ಮೀಕಿ ಸಮುದಾಯದ ಶಾಸಕರು ಹೆಚ್ಚಾಗಿ ಆ ಕಡೆಗೆ ಹೋಗಿದ್ದಾರೆ ಎನ್ನುವ ಹಾಗೂ ಇಲ್ಲ. ಎಂ.ಟಿ.ಬಿ ನಾಗರಾಜ್ ಮತ್ತು ಬೈರತಿ ಬಸವರಾಜ್ ಇಬ್ಬರೂ ಕುರುಬರು. ಉಳಿದ ಕಾಂಬಿನೇಷನ್ ಸಹಾ ಹಾಗಿಲ್ಲ. ಇನ್ನು ರೋಷನ್‍ಬೇಗ್ ಸ್ಪರ್ಧಿಸುತ್ತಿರುವುದು ಮುಸ್ಲಿಮರೇ ಅಧಿಕವಾಗಿರುವ ಶಿವಾಜಿನಗರದಿಂದ. ಸ್ವತಃ ಬೇಗ್ ವಿರೋಧಿಸಿದರೂ ಲೋಕಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್‍ರಿಗೇ ಬಹುಮತ ಸಿಕ್ಕಿದೆ.

ಇನ್ನು ಗೋಪಾಲಯ್ಯನವರು ಹಿಂದಿನ ಸಾಲಿನಲ್ಲೇ ಚೆಲುವರಾಯಸ್ವಾಮಿ ಮತ್ತಿತರರ ಜೊತೆ ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ವಿರುದ್ಧ ಮತ ಚಲಾಯಿಸಿದ್ದರು. ನಂತರ ಮತ್ತೆ ಪಕ್ಷದಲ್ಲೇ ಉಳಿದು ಜೆಡಿಎಸ್‍ನಿಂದಲೇ ಟಿಕೆಟ್ ಪಡೆದು ಪುನರಾಯ್ಕೆಯಾಗಿದ್ದಾರೆ.

ಹೀಗಿರುವಾಗ ಇವರೆಲ್ಲರನ್ನೂ ಬೆಸೆದ ಕಾರಣವೇನು? ಕೆಲವರಿಗೆ ಅತೃಪ್ತಿಯು ಅವಕಾಶವಾದವಾಗಿ ಪರಿವರ್ತನೆಯಾಗಿರುವುದು ವಾಸ್ತವ. ಅವರಲ್ಲಿ ಎಚ್.ವಿಶ್ವನಾಥ್, ರಾಮಲಿಂಗಾರೆಡ್ಡಿ ಮತ್ತು ಕೆ.ಸಿ.ನಾರಾಯಣಗೌಡರಿದ್ದಾರೆ. ಕುಮಟಳ್ಳಿಯವರು ಜಾರಕಿಹೊಳಿಯವರ ಹಿಂದೆ ಹೋಗುವವರು. ಬಿ.ಸಿ.ಪಾಟೀಲ್ ನಿಜಕ್ಕೂ ಅತೃಪ್ತರೇ. ಹಾವೇರಿ ಜಿಲ್ಲೆಯಲ್ಲಿ ಸತತವಾಗಿ ಗೆದ್ದು ಬರುತ್ತಿರುವ ಏಕೈಕ ಕಾಂಗ್ರೆಸ್ ಶಾಸಕನಾದ ತನಗೆ ಬಿಜೆಪಿಯಿಂದ ಬಂದ ಆಫರ್ ತಿರಸ್ಕರಿಸಿ ಇಲ್ಲಿ ಉಳಿದರೂ ಅಧಿಕಾರ ಸಿಕ್ಕಿಲ್ಲ ಎಂಬ ಕೊರಗು ಅವರದ್ದು. ಪ್ರತಾಪ್‍ಗೌಡ ಮತ್ತು ಶಿವರಾಮ ಹೆಬ್ಬಾರ್ ಅವರು ಮಾರಿಕೊಳ್ಳಲು ನಿಂತಿರುವುದು ಬಿಟ್ಟರೆ ಹೆಚ್ಚೇನೂ ಕಾಣುತ್ತಿಲ್ಲ. ಇಷ್ಟು ಜನರನ್ನು ಬಿಟ್ಟರೆ ಮಿಕ್ಕೆಲ್ಲರೂ ಅಕ್ರಮ ದಂಧೆಯ ಕಾರಣಕ್ಕೇ ಬಿಜೆಪಿಯಿಂದ ಬೆದರಿಕೆಗೆ ಒಳಗಾಗಿದ್ದಾರೆ ಎಂಬುದು ಹಲವು ರಾಜಕಾರಣಿಗಳ ಆಡಿಟಿಂಗ್ ನಡೆಸುವ ಚಾರ್ಟರ್ಡ್ ಅಕೌಂಟೆಂಟ್ ಒಬ್ಬರ ಅನಿಸಿಕೆ.

ಇದನ್ನೂ ಓದಿ: ಮಾನಗೇಡಿ ಶಾಸಕರು, ಹೊಣೆಗೇಡಿ ನಾಯಕರು

ಹೆಸರು ಬಹಿರಂಗಗೊಳಿಸಲು ಇಚ್ಛಿಸದ ಅವರ ಪ್ರಕಾರ ಎಂಟಿಬಿ ನಾಗರಾಜು, ಸೋಮಶೇಖರ್, ಭೈರತಿ ಮೂರೂ ಜನರೂ ರಿಯಲ್ ಎಸ್ಟೇಟ್ ಕುಳಗಳು. ಮುನಿರತ್ನರಿಗೆ ಸಕ್ರಮ ಮತ್ತು ಅಕ್ರಮ ದಂಧೆಗಳೆರಡೂ ಇವೆ. ರಮೇಶ್ ಜಾರಕಿಹೊಳಿ ಹಲವು ವ್ಯವಹಾರಗಳನ್ನು ನಡೆಸುತ್ತಾ, ದೊಡ್ಡ ಮಟ್ಟದ ಸಾಲ ಮಾಡಿಕೊಂಡಿರುವ ‘ಸಾಹುಕಾರ’. ಆನಂದ್‍ಸಿಂಗ್ ಈಗಾಗಲೇ ಒಮ್ಮೆ ಜೈಲಿಗೆ ಹೋಗಿ ಬಂದಿರುವ ಉದ್ಯಮಿ. ಇನ್ನು ಸುಧಾಕರ್ ಅವರ ದಿಢೀರ್ ಶ್ರೀಮಂತಿಕೆಯ ಹಿನ್ನೆಲೆ ಬಹಳಷ್ಟು ಜನರಿಗೆ ಗೊತ್ತಿಲ್ಲ. ರೋಷನ್‍ಬೇಗ್ ಐಎಂಎ ಕೇಸಿನಲ್ಲಿ ಯಾವಾಗ ಜೈಲಿಗೆ ಹೋಗಬೇಕಾಗಿ ಬರುತ್ತದೋ ಹೇಳಲಾಗದು.

ಹೀಗಾಗಿ ಮೂರ್ನಾಲ್ಕು ಜನರನ್ನು ಬಿಟ್ಟರೆ ಮಿಕ್ಕೆಲ್ಲರೂ ಕನಿಷ್ಠ ನೂರು ಕೋಟಿ ಕುಳಗಳು. ಒಂದಲ್ಲಾ ಒಂದು ಬಗೆಯ ಅಕ್ರಮ ದಂಧೆಗಳು ಇವರ ಹಿಂದೆ ಇದೆ ಎಂಬುದು ಆಡಿಟರ್‍ಅವರ ಅನಿಸಿಕೆ. ಹಾಗಾಗಿಯೇ ಉತ್ತರ ಕರ್ನಾಟಕದ ಅಥವಾ ಬಳ್ಳಾರಿಯ ಶಾಸಕರು ಪಕ್ಷ ಬದಲಿಸುತ್ತಾರೆ ಎಂದು ಎಲ್ಲರೂ ಕಾಯುತ್ತಿದ್ದರು, ಅದರಲ್ಲೂ ಲಿಂಗಾಯಿತ ಶಾಸಕರ ದಂಡೇ ಹೊರಹೋಗುತ್ತದೆ ಎಂಬ ನಿರೀಕ್ಷೆಗೆ ವಿರುದ್ಧವಾಗಿ ದಕ್ಷಿಣ ಕರ್ನಾಟಕದ ಶಾಸಕರು ರಾಜೀನಾಮೆ ನೀಡಿದರು. ಅದರಲ್ಲೂ ಬೆಂಗಳೂರಿನ ನಾಲ್ವರು! ಇದನ್ನು ಯಾರೂ ಊಹಿಸಿರಲಿಲ್ಲ. ಇದು ರಾಜೀನಾಮೆಯ ಅಸಲೀ ಕಾರಣ ಅತೃಪ್ತಿಯಲ್ಲ, ಅಕ್ರಮ ದಂಧೆ ಎಂಬ ಆಡಿಟರ್‍ರ ಅಭಿಪ್ರಾಯಕ್ಕೆ ಪುಷ್ಟಿ ಕೊಡುತ್ತದೆ.

ಇದನ್ನೂ ಓದಿ: ಆನಂದ್ ಸಿಂಗ್ ರಾಜೀನಾಮೆ

‘ಆಂಧ್ರದ ಮಲ್ಯರು’ ಎಂದು ಬಿಜೆಪಿಯೇ ಮೂದಲಿಸುತ್ತಿದ್ದ ಟಿಡಿಪಿಯ ರಾಜ್ಯಸಭಾ ಸದಸ್ಯರನ್ನು ಬಿಜೆಪಿಯು ಸೆಳೆದದ್ದು ಅವರ ಅಕ್ರಮ ದಂಧೆಗಳನ್ನು ಮುಂದಿಟ್ಟು ಹೆದರಿಸಿದ್ದರಿಂದ ಎಂಬುದು ದೇಶಕ್ಕೇ ಗೊತ್ತಿದೆ. 2008ರಲ್ಲಿ ಬಿಜೆಪಿಯು ಆಪರೇಷನ್ ಕಮಲ ನಡೆಸಿದ್ದೂ ಅಕ್ರಮ ಹಣದ ಮೂಲಕವೇ ಆಗಿತ್ತು. ಅಂದರೆ ತಮ್ಮ ಜೊತೆ ಇದ್ದರೆ ಎಲ್ಲಾ ಅಕ್ರಮಗಳೂ ಮಾಫ್ ಎಂಬುದು ಬಿಜೆಪಿ ಪಕ್ಷದ ನೀತಿಯಾಗಿದೆ.

ಹೀಗಾಗಿ ಅಕ್ರಮ ದಂಧೆಯ ಹುಳುಕುಗಳನ್ನು ಮುಂದಿಟ್ಟೇ ಬಿಜೆಪಿಯ ಹೈಕಮ್ಯಾಂಡ್‍ನ ನೇರ ಉಸ್ತುವಾರಿಯಲ್ಲಿ ನಡೆದ ಆಪರೇಷನ್ ಇದು ಎನ್ನುವುದು ಸ್ಪಷ್ಟವಾಗುತ್ತಿದೆ. ಈ ಶಾಸಕರು ಯಾವ ಪಕ್ಷದಲ್ಲೇ ಇದ್ದರೂ, ಇವರ ಆಸ್ತಿಪಾಸ್ತಿಗಳ ತನಿಖೆಯು ನಡೆದಾಗ ಮಾತ್ರ ಅಸಲೀ ಕಾರಣ ಬಹಿರಂಗಕ್ಕೆ ಬರುತ್ತದೆ. ಅಲ್ಲಿಯವರೆಗೆ ಇಂತಹ ಕಣ್ಣಾಮುಚ್ಚಾಲೆ ನಡೆಯುತ್ತಲೇ ಇರುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...