Homeಕರ್ನಾಟಕಅತೃಪ್ತಿಗಿಂತ ಅಕ್ರಮ ದಂಧೆಗಳೇ ಪಕ್ಷಾಂತರಕ್ಕೆ ಕಾರಣ?

ಅತೃಪ್ತಿಗಿಂತ ಅಕ್ರಮ ದಂಧೆಗಳೇ ಪಕ್ಷಾಂತರಕ್ಕೆ ಕಾರಣ?

ಅಕ್ರಮ ದಂಧೆಯ ಹುಳುಕುಗಳನ್ನು ಮುಂದಿಟ್ಟೇ ಬಿಜೆಪಿಯ ಹೈಕಮ್ಯಾಂಡ್‍ನ ನೇರ ಉಸ್ತುವಾರಿಯಲ್ಲಿ ನಡೆದ ಆಪರೇಷನ್ ಇದು ಎನ್ನುವುದು ಸ್ಪಷ್ಟವಾಗುತ್ತಿದೆ.

- Advertisement -
- Advertisement -

ಯಾವ ರೀತಿಯಿಂದ ನೋಡಿದರೂ ಇಂದು ರಾಜೀನಾಮೆ ಕೊಟ್ಟಿರುವ ಶಾಸಕರ ಕಾಂಬಿನೇಷನ್ ಬಹಳ ಆಶ್ಚರ್ಯಕರವಾಗಿ ಕಾಣುತ್ತದೆ.

ಅತೃಪ್ತಿಯೇ ಕಾರಣ ಎನ್ನುವುದಾದರೆ, ಬೈರತಿ ಬಸವರಾಜ್ ಎಂದೂ ಅತೃಪ್ತಿ ವ್ಯಕ್ತಪಡಿಸಿಲ್ಲ. ಆಡಳಿತದಲ್ಲಿ ಪ್ರಮುಖ ಪಾತ್ರ ವಹಿಸಿರುವ ಎಚ್‍ಡಿಕೆ ಮತ್ತು ಡಿಕೆಶಿ ಇಬ್ಬರಿಗೂ ಮುನಿರತ್ನ ಆಪ್ತರು.

ಅಧಿಕಾರ ಸಿಕ್ಕಿಲ್ಲದಿರುವುದು ಎನ್ನುವುದಾದರೆ ಎಂ.ಟಿ.ಬಿ.ನಾಗರಾಜ್‍ರನ್ನು ಸಚಿವರನ್ನಾಗಿಸಲಾಗಿದೆ. ಸಚಿವ ಸ್ಥಾನಕ್ಕೆ ಸಮಾನವಾದ ಬಿಡಿಎ ಅಧ್ಯಕ್ಷ ಸ್ಥಾನ ಸೋಮಶೇಖರ್‍ರಿಗೆ ಮತ್ತು ಹೊಸ ಸರ್ಕಾರ ಬಂದರೂ ಕದಲಿಸಲಾಗದ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನ ಸುಧಾಕರ್‍ರಿಗೆ ಸಿಕ್ಕಿದೆ. ರಾಕೇಶ್ ಸಿಂಗ್ ಬಿಡಿಎ ಆಯುಕ್ತರಾಗಿ ಮುಂದುವರೆದರೆ ತನಗೆ ಅಡ್ಡಗಾಲು ಎಂದು ಎಸ್.ಟಿ.ಸೋಮಶೇಖರ್ ಹೇಳಿದ್ದರಿಂದ ಅವರನ್ನೂ ಬದಲಿಸಲಾಗಿದೆ.

ಜಾತಿಯೇ ಕಾರಣ, ಲಿಂಗಾಯಿತರು ಮತ್ತು ವಾಲ್ಮೀಕಿ ಸಮುದಾಯದ ಶಾಸಕರು ಹೆಚ್ಚಾಗಿ ಆ ಕಡೆಗೆ ಹೋಗಿದ್ದಾರೆ ಎನ್ನುವ ಹಾಗೂ ಇಲ್ಲ. ಎಂ.ಟಿ.ಬಿ ನಾಗರಾಜ್ ಮತ್ತು ಬೈರತಿ ಬಸವರಾಜ್ ಇಬ್ಬರೂ ಕುರುಬರು. ಉಳಿದ ಕಾಂಬಿನೇಷನ್ ಸಹಾ ಹಾಗಿಲ್ಲ. ಇನ್ನು ರೋಷನ್‍ಬೇಗ್ ಸ್ಪರ್ಧಿಸುತ್ತಿರುವುದು ಮುಸ್ಲಿಮರೇ ಅಧಿಕವಾಗಿರುವ ಶಿವಾಜಿನಗರದಿಂದ. ಸ್ವತಃ ಬೇಗ್ ವಿರೋಧಿಸಿದರೂ ಲೋಕಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್‍ರಿಗೇ ಬಹುಮತ ಸಿಕ್ಕಿದೆ.

ಇನ್ನು ಗೋಪಾಲಯ್ಯನವರು ಹಿಂದಿನ ಸಾಲಿನಲ್ಲೇ ಚೆಲುವರಾಯಸ್ವಾಮಿ ಮತ್ತಿತರರ ಜೊತೆ ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ವಿರುದ್ಧ ಮತ ಚಲಾಯಿಸಿದ್ದರು. ನಂತರ ಮತ್ತೆ ಪಕ್ಷದಲ್ಲೇ ಉಳಿದು ಜೆಡಿಎಸ್‍ನಿಂದಲೇ ಟಿಕೆಟ್ ಪಡೆದು ಪುನರಾಯ್ಕೆಯಾಗಿದ್ದಾರೆ.

ಹೀಗಿರುವಾಗ ಇವರೆಲ್ಲರನ್ನೂ ಬೆಸೆದ ಕಾರಣವೇನು? ಕೆಲವರಿಗೆ ಅತೃಪ್ತಿಯು ಅವಕಾಶವಾದವಾಗಿ ಪರಿವರ್ತನೆಯಾಗಿರುವುದು ವಾಸ್ತವ. ಅವರಲ್ಲಿ ಎಚ್.ವಿಶ್ವನಾಥ್, ರಾಮಲಿಂಗಾರೆಡ್ಡಿ ಮತ್ತು ಕೆ.ಸಿ.ನಾರಾಯಣಗೌಡರಿದ್ದಾರೆ. ಕುಮಟಳ್ಳಿಯವರು ಜಾರಕಿಹೊಳಿಯವರ ಹಿಂದೆ ಹೋಗುವವರು. ಬಿ.ಸಿ.ಪಾಟೀಲ್ ನಿಜಕ್ಕೂ ಅತೃಪ್ತರೇ. ಹಾವೇರಿ ಜಿಲ್ಲೆಯಲ್ಲಿ ಸತತವಾಗಿ ಗೆದ್ದು ಬರುತ್ತಿರುವ ಏಕೈಕ ಕಾಂಗ್ರೆಸ್ ಶಾಸಕನಾದ ತನಗೆ ಬಿಜೆಪಿಯಿಂದ ಬಂದ ಆಫರ್ ತಿರಸ್ಕರಿಸಿ ಇಲ್ಲಿ ಉಳಿದರೂ ಅಧಿಕಾರ ಸಿಕ್ಕಿಲ್ಲ ಎಂಬ ಕೊರಗು ಅವರದ್ದು. ಪ್ರತಾಪ್‍ಗೌಡ ಮತ್ತು ಶಿವರಾಮ ಹೆಬ್ಬಾರ್ ಅವರು ಮಾರಿಕೊಳ್ಳಲು ನಿಂತಿರುವುದು ಬಿಟ್ಟರೆ ಹೆಚ್ಚೇನೂ ಕಾಣುತ್ತಿಲ್ಲ. ಇಷ್ಟು ಜನರನ್ನು ಬಿಟ್ಟರೆ ಮಿಕ್ಕೆಲ್ಲರೂ ಅಕ್ರಮ ದಂಧೆಯ ಕಾರಣಕ್ಕೇ ಬಿಜೆಪಿಯಿಂದ ಬೆದರಿಕೆಗೆ ಒಳಗಾಗಿದ್ದಾರೆ ಎಂಬುದು ಹಲವು ರಾಜಕಾರಣಿಗಳ ಆಡಿಟಿಂಗ್ ನಡೆಸುವ ಚಾರ್ಟರ್ಡ್ ಅಕೌಂಟೆಂಟ್ ಒಬ್ಬರ ಅನಿಸಿಕೆ.

ಇದನ್ನೂ ಓದಿ: ಮಾನಗೇಡಿ ಶಾಸಕರು, ಹೊಣೆಗೇಡಿ ನಾಯಕರು

ಹೆಸರು ಬಹಿರಂಗಗೊಳಿಸಲು ಇಚ್ಛಿಸದ ಅವರ ಪ್ರಕಾರ ಎಂಟಿಬಿ ನಾಗರಾಜು, ಸೋಮಶೇಖರ್, ಭೈರತಿ ಮೂರೂ ಜನರೂ ರಿಯಲ್ ಎಸ್ಟೇಟ್ ಕುಳಗಳು. ಮುನಿರತ್ನರಿಗೆ ಸಕ್ರಮ ಮತ್ತು ಅಕ್ರಮ ದಂಧೆಗಳೆರಡೂ ಇವೆ. ರಮೇಶ್ ಜಾರಕಿಹೊಳಿ ಹಲವು ವ್ಯವಹಾರಗಳನ್ನು ನಡೆಸುತ್ತಾ, ದೊಡ್ಡ ಮಟ್ಟದ ಸಾಲ ಮಾಡಿಕೊಂಡಿರುವ ‘ಸಾಹುಕಾರ’. ಆನಂದ್‍ಸಿಂಗ್ ಈಗಾಗಲೇ ಒಮ್ಮೆ ಜೈಲಿಗೆ ಹೋಗಿ ಬಂದಿರುವ ಉದ್ಯಮಿ. ಇನ್ನು ಸುಧಾಕರ್ ಅವರ ದಿಢೀರ್ ಶ್ರೀಮಂತಿಕೆಯ ಹಿನ್ನೆಲೆ ಬಹಳಷ್ಟು ಜನರಿಗೆ ಗೊತ್ತಿಲ್ಲ. ರೋಷನ್‍ಬೇಗ್ ಐಎಂಎ ಕೇಸಿನಲ್ಲಿ ಯಾವಾಗ ಜೈಲಿಗೆ ಹೋಗಬೇಕಾಗಿ ಬರುತ್ತದೋ ಹೇಳಲಾಗದು.

ಹೀಗಾಗಿ ಮೂರ್ನಾಲ್ಕು ಜನರನ್ನು ಬಿಟ್ಟರೆ ಮಿಕ್ಕೆಲ್ಲರೂ ಕನಿಷ್ಠ ನೂರು ಕೋಟಿ ಕುಳಗಳು. ಒಂದಲ್ಲಾ ಒಂದು ಬಗೆಯ ಅಕ್ರಮ ದಂಧೆಗಳು ಇವರ ಹಿಂದೆ ಇದೆ ಎಂಬುದು ಆಡಿಟರ್‍ಅವರ ಅನಿಸಿಕೆ. ಹಾಗಾಗಿಯೇ ಉತ್ತರ ಕರ್ನಾಟಕದ ಅಥವಾ ಬಳ್ಳಾರಿಯ ಶಾಸಕರು ಪಕ್ಷ ಬದಲಿಸುತ್ತಾರೆ ಎಂದು ಎಲ್ಲರೂ ಕಾಯುತ್ತಿದ್ದರು, ಅದರಲ್ಲೂ ಲಿಂಗಾಯಿತ ಶಾಸಕರ ದಂಡೇ ಹೊರಹೋಗುತ್ತದೆ ಎಂಬ ನಿರೀಕ್ಷೆಗೆ ವಿರುದ್ಧವಾಗಿ ದಕ್ಷಿಣ ಕರ್ನಾಟಕದ ಶಾಸಕರು ರಾಜೀನಾಮೆ ನೀಡಿದರು. ಅದರಲ್ಲೂ ಬೆಂಗಳೂರಿನ ನಾಲ್ವರು! ಇದನ್ನು ಯಾರೂ ಊಹಿಸಿರಲಿಲ್ಲ. ಇದು ರಾಜೀನಾಮೆಯ ಅಸಲೀ ಕಾರಣ ಅತೃಪ್ತಿಯಲ್ಲ, ಅಕ್ರಮ ದಂಧೆ ಎಂಬ ಆಡಿಟರ್‍ರ ಅಭಿಪ್ರಾಯಕ್ಕೆ ಪುಷ್ಟಿ ಕೊಡುತ್ತದೆ.

ಇದನ್ನೂ ಓದಿ: ಆನಂದ್ ಸಿಂಗ್ ರಾಜೀನಾಮೆ

‘ಆಂಧ್ರದ ಮಲ್ಯರು’ ಎಂದು ಬಿಜೆಪಿಯೇ ಮೂದಲಿಸುತ್ತಿದ್ದ ಟಿಡಿಪಿಯ ರಾಜ್ಯಸಭಾ ಸದಸ್ಯರನ್ನು ಬಿಜೆಪಿಯು ಸೆಳೆದದ್ದು ಅವರ ಅಕ್ರಮ ದಂಧೆಗಳನ್ನು ಮುಂದಿಟ್ಟು ಹೆದರಿಸಿದ್ದರಿಂದ ಎಂಬುದು ದೇಶಕ್ಕೇ ಗೊತ್ತಿದೆ. 2008ರಲ್ಲಿ ಬಿಜೆಪಿಯು ಆಪರೇಷನ್ ಕಮಲ ನಡೆಸಿದ್ದೂ ಅಕ್ರಮ ಹಣದ ಮೂಲಕವೇ ಆಗಿತ್ತು. ಅಂದರೆ ತಮ್ಮ ಜೊತೆ ಇದ್ದರೆ ಎಲ್ಲಾ ಅಕ್ರಮಗಳೂ ಮಾಫ್ ಎಂಬುದು ಬಿಜೆಪಿ ಪಕ್ಷದ ನೀತಿಯಾಗಿದೆ.

ಹೀಗಾಗಿ ಅಕ್ರಮ ದಂಧೆಯ ಹುಳುಕುಗಳನ್ನು ಮುಂದಿಟ್ಟೇ ಬಿಜೆಪಿಯ ಹೈಕಮ್ಯಾಂಡ್‍ನ ನೇರ ಉಸ್ತುವಾರಿಯಲ್ಲಿ ನಡೆದ ಆಪರೇಷನ್ ಇದು ಎನ್ನುವುದು ಸ್ಪಷ್ಟವಾಗುತ್ತಿದೆ. ಈ ಶಾಸಕರು ಯಾವ ಪಕ್ಷದಲ್ಲೇ ಇದ್ದರೂ, ಇವರ ಆಸ್ತಿಪಾಸ್ತಿಗಳ ತನಿಖೆಯು ನಡೆದಾಗ ಮಾತ್ರ ಅಸಲೀ ಕಾರಣ ಬಹಿರಂಗಕ್ಕೆ ಬರುತ್ತದೆ. ಅಲ್ಲಿಯವರೆಗೆ ಇಂತಹ ಕಣ್ಣಾಮುಚ್ಚಾಲೆ ನಡೆಯುತ್ತಲೇ ಇರುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...