Homeಮುಖಪುಟಅತ್ತ ಸಿನಿಮಾನೂ ಇಲ್ಲ, ಇತ್ತ ರಾಜಕೀಯದಲ್ಲೂ ಸ್ಪಷ್ಟತೆ ಇಲ್ಲ; ಎಡಬಿಡಂಗಿ ಪವನ್ ಕಲ್ಯಾಣ್ ಏನು ನಿಮ್ಮ...

ಅತ್ತ ಸಿನಿಮಾನೂ ಇಲ್ಲ, ಇತ್ತ ರಾಜಕೀಯದಲ್ಲೂ ಸ್ಪಷ್ಟತೆ ಇಲ್ಲ; ಎಡಬಿಡಂಗಿ ಪವನ್ ಕಲ್ಯಾಣ್ ಏನು ನಿಮ್ಮ ಲೀಲೆ?

ಕಳೆದ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಪಾರ್ಟಿ ಚುನಾವಣೆಗೆ ಸ್ಪರ್ಧಿಸಿತಾದರೂ ಗಳಿಸಿದ್ದು ಮಾತ್ರ ಕೇವಲ 1 ಸ್ಥಾನ. ಆದರೆ, ತನ್ನ ರಾಜಕೀಯ ಹೋರಾಟವನ್ನು ಪವನ್ ಕಲ್ಯಾಣ್ ಹೀಗೆ ನಡೆಸಿದ್ದರೂ ಸಹ ಜನರ ಪ್ರಶಂಸೆಗೆ ಪಾತ್ರರಾಗುತ್ತಿದ್ದರೇನೋ?

- Advertisement -
- Advertisement -

ಪವನ್ ಕಲ್ಯಾಣ್.. ಈತ ತೆಲುಗು ಸಿನಿಮಾ ರಂಗದ ಪವರ್ ಸ್ಟಾರ್. ಅದಕ್ಕೂ ಮೇಲಾಗಿ ಮೆಗಾ ಸ್ಟಾರ್ ಹಾಗೂ ಮಾಜಿ ಕೇಂದ್ರ ಸಚಿವ ಚಿರಂಜೀವಿ ಅವರ ಖಾಸಾ ತಮ್ಮ. ಮಾಡಿದ್ದು ಕೇವಲ 25 ಚಿತ್ರಗಳು. ಈ ಪೈಕಿ ಹಿಟ್ ಸಾಲಿಗೆ ಸೇರುವ ಚಿತ್ರಗಳ ಸಂಖ್ಯೆ ಮೂರು ಮತ್ತೊಂದು ಮಾತ್ರ. ಹೀಗಿದ್ದೂ ಈತ ಪವರ್ ಸ್ಟಾರ್ ಪಟ್ಟಕ್ಕೆ ಏರಿದ್ದು ಹೇಗೆ? ಎಂಬುದು ಈಗಲೂ ಉತ್ತರವಿಲ್ಲದ ಪ್ರಶ್ನೆಯೇ ಸರಿ.

ಆದರೆ, ಈತ ಕೇವಲ ಸಿನಿ ರಂಗದಲ್ಲೇ ಮುಂದುವರೆದಿದ್ದರೆ ಸಮಸ್ಯೆ ಇರುತ್ತಿರಲಿಲ್ಲವೇನೋ? ಆದರೆ, ರಾಜಕೀಯಕ್ಕೂ ಧುಮುಕಿರುವ ಈತನ ಕೆಲವು ಎಡಬಿಡಂಗಿ ನಿಲುವುಗಳು ಇದೀಗ ಪೇಚಿಗೆ ಸಿಲುಕುವಂತಾಗಿದೆ. ಸ್ವತಃ ಈತನ ಅಭಿಮಾನಿಗಳೇ ಗೊಂದಲದಲ್ಲಿದ್ದಾರೆ.

ಅಸಲಿಗೆ ಆಂಧ್ರಪ್ರದೇಶದಲ್ಲಿ ಪರ್ಯಾಯ ರಾಜಕೀಯ ಕಟ್ಟಬೇಕು ಎಂಬ ಮಹತ್ವಾಕಾಂಕ್ಷೆಯ ಉದ್ದೇಶದಿಂದ ನಟ ಚಿರಂಜೀವಿ 2008ರಲ್ಲಿ ತಿರುಪತಿಯಲ್ಲಿ ಮದರ್ ತೆರೆಸಾ ಅವರ ಹುಟ್ಟುಹಬ್ಬದ ದಿನವಾದ ಆಗಸ್ಟ್ 2 ರಂದು ಅದ್ದೂರಿಯಾಗಿ “ಪ್ರಜಾರಾಜ್ಯಂ” ಎಂಬ ಪಕ್ಷವನ್ನು ಸ್ಥಾಪಿಸಿ ಚುನಾವಣೆ ಎದುರಿಸಿದ್ದರು. ಈ ಸಂದರ್ಭದಲ್ಲಿ ಪವನ್ ಕಲ್ಯಾಣ್ ತನ್ನ ಅಣ್ಣನ ಬೆನ್ನಿಗೆ ನಿಂತಿದ್ದರು. ಆದರೆ, ಪ್ರಜಾರಾಜ್ಯಂ ನಿರೀಕ್ಷಿತ ಸ್ಥಾನ ಗಳಿಸುವಲ್ಲಿ ವಿಫಲವಾಗಿತ್ತು. ಪರಿಣಾಮ ಕಾಂಗ್ರೆಸ್ ಪಕ್ಷದ ಜೊತೆಗೆ ತನ್ನ ಪ್ರಜಾರಾಜ್ಯಂ ಪಕ್ಷವನ್ನು ವಿಲೀನ ಮಾಡಿದ್ದ ಜಿರಂಜೀವಿ, ಸೋನಿಯಾ ಗಾಂಧಿ ಅವರ ಕೃಪಕಟಾಕ್ಷದಿಂದ ಕೇಂದ್ರ ಸಚಿವ ಹುದ್ದೆಗೆ ಏರುವ ಮೂಲಕ ರಾಜಕೀಯವಾಗಿ ತಣ್ಣಗಾಗಿದ್ದರು.

ಆದರೆ, ಪವನ್ ಕಲ್ಯಾಣ್ ತನ್ನ ಅಣ್ಣನ ಈ ನಡೆಯನ್ನು ತೀವ್ರವಾಗಿ ವಿರೋಧಿಸಿದ್ದರು. ಅಲ್ಲದೆ, ತನ್ನ ಅಣ್ಣನಿಂದ ದೂರವಾಗಿ 2014 ಮಾರ್ಚ್ 14 ರಂದು “ಜನಸೇನಾ ಪಾರ್ಟಿ” ಎಂಬ ಮತ್ತೊಂದು ಹೊಸ ಪಕ್ಷವನ್ನು ಸ್ಥಾಪಿಸಿದರು. ರಾಜ್ಯವ್ಯಾಪಿ ಮಿಂಚಿನ ಸಂಚಾರ ನಡೆಸಿ ಪ್ರಚಾರ ನಡೆಸಿದ್ದರು. ಅಸಲಿಗೆ ಈ ಪ್ರಚಾರ ಜನಸೇನಾ ಪಕ್ಷದ ಚುನಾವಣೆಗೆ ಮಾತ್ರ ಸೀಮಿತವಾಗಿದ್ದರೆ ಸಮಸ್ಯೆ ಇರಲಿಲ್ಲ. ಆದರೆ, ಈ ಪ್ರಚಾರ ಪವನ್ ಕಲ್ಯಾಣ್ ಅವರ ರಾಜಕೀಯ ಅಪಕ್ವತೆ ಹಾಗೂ ಎಡಬಿಡಂಗಿ ತನವನ್ನು ಎದ್ದು ಕಾಣುವಂತೆ ಮಾಡಿತ್ತು.

ಪವನ್ ಕಲ್ಯಾಣ್.

ಪವನ್ ರಾಜಕೀಯ ಎಡಬಿಡಂಗಿ ತನಕ್ಕೆ ಕೊನೆ ಎಂದು?;

2014ರಲ್ಲಿ ಪವನ್ ಕಲ್ಯಾಣ್ ರಾಜಕೀಯ ಪ್ರವೇಶಿಸಿದಾಗ ಯಾವುದೇ ಪಕ್ಷದ ಜೊತೆಗೆ ಮೈತ್ರಿ ಇಲ್ಲದೆ ಸ್ವತಂತ್ರ್ಯವಾಗಿ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂದೇ ಊಹಿಸಲಾಗಿತ್ತು.

ಆದರೆ, ಈ ಸಂದರ್ಭದಲ್ಲಿ ತಮ್ಮ ದ್ವನಿ ಬದಲಿಸಿದ್ದ ಪವನ್, ನೇರಾನೇರ ಪ್ರಧಾನಿ ನರೇಂದ್ರ ಮೋದಿಯ ಪರ ಬ್ಯಾಟಿಂಗ್ ನಡೆಸಿದ್ದರು. ದೇಶದ ಅಭಿವೃದ್ಧಿಗೆ ನರೇಂದ್ರ ಮೋದಿ ಅನಿವಾರ್ಯ ಎಂದು ಹೋದಲ್ಲಿ ಬಂದಲ್ಲೆಲ್ಲಾ ಬೊಬ್ಬೆ ಹೊಡೆದಿದ್ದರು. ಹೀಗಾಗಿ ಚಿರಂಜೀವಿಯಂತೆ ಪವನ್ ಕಲ್ಯಾಣ್ ಸಹ ತಮ್ಮ ಪಕ್ಷವನ್ನು ಬಿಜೆಪಿ ಜೊತೆಗೆ ವಿಲೀನಗೊಳಿಸುವುದು ಖಚಿತ ಎನ್ನುವ ಮಾತು ಚಾಲ್ತಿಗೆ ಬರಲಾರಂಭಿಸಿತು.

2019ರ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಜನಸೇನಾ ಪಕ್ಷ ಚುನಾವಣೆಗೆ ಸ್ಪರ್ಧಿಸಲಿದೆ ಎಂದೇ ಬಿಂಬಿಸಲಾಗಿತ್ತು. ಆದರೆ, ಈ ವೇಳೆ ಉಲ್ಟಾ ಹೊಡೆದಿದ್ದ ಪವನ್ ಕಲ್ಯಾಣ್, “ಬಿಜೆಪಿ ದೇಶಕ್ಕೆ ಮಾರಕ. ಇವರಿಗೆ ಮತ ಹಾಕಬೇಡಿ. ಕೆಲವು ಬಿಜೆಪಿ ನಾಯಕರು ಚುನಾವಣೆ ಸಂದರ್ಭದಲ್ಲಿ ಯುದ್ಧ ಘೋಷಣೆ ಮಾಡುವ ಮೂಲಕ ಮತಗಳನ್ನು ಸೆಳೆಯುತ್ತೇವೆ ಎಂದು ಸ್ವತಃ ನನ್ನ ಬಳಿಯೇ ಹೇಳಿದ್ದಾರೆ. ಇವರು ಗೆಲ್ಲುವುದಕ್ಕಾಗಿ ಏನುಬೇಕಾದರೂ ಮಾಡಿಯಾರು. ಹೀಗಾಗಿ ಎರಡನೇ ಅವಧಿಗೂ ಬಿಜೆಪಿ ಗೆಲುವು ಸಾಧಿಸಿದರೆ ಭಾರತವನ್ನು ಯಾರಿಂದಲೂ ಕಾಪಾಡಲು ಸಾಧ್ಯವಿಲ್ಲ” ಎಂದು ಹೇಳುವ ಮೂಲಕ ಇಡೀ ದೇಶವನ್ನೇ ಅಚ್ಚರಿಗೆ ದೂಡಿದ್ದರು.

ಅಲ್ಲದೆ, ನಮ್ಮ ಪಕ್ಷ ನೇರವಾಗಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಬದಲಾಗಿ ಯಾರೂ ಬಿಜೆಪಿ ಮತಹಾಕಬೇಡಿ ಎಂದು ಪ್ರಚಾರ ನಡೆಸುತ್ತೇವೆ ಎಂದು ಹೇಳುವ ಮೂಲಕ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಗುರಿಯಾಗಿದ್ದರು.

ನಂತರ ನಡೆದ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಪಾರ್ಟಿ ಚುನಾವಣೆಗೆ ಸ್ಪರ್ಧಿಸಿತಾದರೂ ಗಳಿಸಿದ್ದು ಮಾತ್ರ ಕೇವಲ 1 ಸ್ಥಾನ. ಆದರೆ, ತನ್ನ ರಾಜಕೀಯ ಹೋರಾಟವನ್ನು ಪವನ್ ಕಲ್ಯಾಣ್ ಹೀಗೆ ನಡೆಸಿದ್ದರೂ ಸಹ ಜನರ ಪ್ರಶಂಸೆಗೆ ಪಾತ್ರರಾಗುತ್ತಿದ್ದರೇನೋ?

ಪವನ್ ಕಲ್ಯಾಣ್.

ಆದರೆ, ಕಳೆದ ಎರಡು ವರ್ಷದಿಂದ ಪವನ್ ಕಲ್ಯಾಣ್ ಯಾವ ಪಕ್ಷದ ನಾಯಕರ ವಿರುದ್ಧ ಹೋರಾಟ ನಡೆಸಿದ್ದರೋ ಇದೀಗ ಮತ್ತೆ ಅದೇ ಬಿಜೆಪಿ ನಾಯಕರ ಜೊತೆಗೆ ಕೈಜೋಡಿಸಿದ್ದಾರೆ. ಬಿಜೆಪಿ ಪರ ಬ್ಯಾಟ್ ಬೀಸುವ ಕೆಲಸವನ್ನು ಶಿರಸಾವಹಿಸಿ ಪಾಲಿಸುತ್ತಿದ್ದಾರೆ. ಅಲ್ಲದೆ, ಬಿಜೆಪಿ ಪಕ್ಷದ ನೂತನ ರಾಷ್ಟ್ರಾಧ್ಯಕ್ಷರಾಗಿ ಆಯ್ಕೆಯಾಗಿರುವ ಜೆ.ಪಿ. ನಡ್ಡಾ ಅವರನ್ನು ಇಂದು ಖುದ್ದು ಭೇಟಿ ಮಾಡಿ ಅಭಿನಂದನೆಗಳನ್ನೂ ಸಲ್ಲಿಸಿದ್ದಾರೆ.

ಅತ್ತ ಒಳ್ಳೆಯ ಚಿತ್ರಗಳನ್ನೂ ನೀಡದ ಪವನ್ ಕಲ್ಯಾಣ್, ಇತ್ತ ರಾಜಕೀಯವಾಗಿಯೂ ಸರಿಯಾದ ಗುರಿ ಹಾಗೂ ನಿಲುವುಗಳಿಲ್ಲದ ಇಲ್ಲದ ರಾಜಕೀಯ ಎಡಬಿಡಂಗಿ ತನವನ್ನು ಕಂಡು ಸ್ವತಃ ಆಂಧ್ರಪ್ರದೇಶದ ಅವರ ಅಭಿಮಾನಿ ಬಳಗವೇ ಪವನ್ ಕಲ್ಯಾಣ್ ಏನಪ್ಪಾ ನಿನ್ನ ಲೀಲೆ? ಎಂದು ಪ್ರಶ್ನಿಸುವಂತಾಗಿರುವುದು ಮಾತ್ರ ವಿಪರ್ಯಾಸ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...