Homeಮುಖಪುಟಅತ್ಯಾಚಾರ, ಕೊಲೆ ಪ್ರಕರಣ | ಮರಣದಂಡನೆಗೆ ಗುರಿಯಾಗಿದ್ದ ವ್ಯಕ್ತಿಯನ್ನು ಖುಲಾಸೆಗೊಳಿಸಿದ ಸುಪ್ರೀಂ ಕೋರ್ಟ್

ಅತ್ಯಾಚಾರ, ಕೊಲೆ ಪ್ರಕರಣ | ಮರಣದಂಡನೆಗೆ ಗುರಿಯಾಗಿದ್ದ ವ್ಯಕ್ತಿಯನ್ನು ಖುಲಾಸೆಗೊಳಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಪ್ರಕರಣದಲ್ಲಿ ಮರಣದಂಡನೆ ಘೋಷಣೆಯಾಗಿದ್ದ ವ್ಯಕ್ತಿಯೊಬ್ಬರನ್ನು ಸುಪ್ರೀಂ ಕೋರ್ಟ್ ಖುಲಾಸೆಗೊಳಿಸಿದೆ. ‘ಪ್ರಕರಣದ ವಿಚಾರಣೆ ಸರಿಯಾದ ರೀತಿಯಲ್ಲಿ ನಡೆದಿಲ್ಲ’ ಎಂದು ತೀರ್ಪು ಪ್ರಕಟಿಸುವ ವೇಳೆ ಸರ್ವೋಚ್ಚ ನ್ಯಾಯಾಲಯ ಹೇಳಿದೆ.

ವಿಚಾರಣಾ ನ್ಯಾಯಾಧೀಶರು ತನಿಖಾಧಿಕಾರಿಗೆ ಆರೋಪಿಯ ತಪ್ಪೊಪ್ಪಿಗೆ ಹೇಳಿಕೆಗಳನ್ನು ಮುಖ್ಯ ವಿಚಾರಣೆಯ ಸಮಯದಲ್ಲಿ ಹೇಳಲು ನಿಯಮ ಮೀರಿ ಅವಕಾಶ ಕೊಟ್ಟಿದ್ದಾರೆ ಮತ್ತು ಆ ಹೇಳಿಕೆಗಳನ್ನು ಸಾಕ್ಷಿಯಾಗಿ ಒಪ್ಪಿಕೊಂಡಿದ್ದಾರೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದ ವ್ಯಕ್ತಿಗೆ ಐಪಿಸಿ ಸೆಕ್ಷನ್ 376ಎ (ಅತ್ಯಾಚಾರ ಸಾವಿಗೆ ಕಾರಣವಾಗುವುದು), 302 (ಕೊಲೆ), 366 (ಅಪಹರಣ), 363 (ಅಪ್ರಾಪ್ತ ವಯಸ್ಕರನ್ನು ಅಪಹರಿಸುವುದು), 201 (ಸಾಕ್ಷ್ಯ ನಾಶ) ಮತ್ತು ಪೋಕ್ಸೊ ಕಾಯ್ದೆಯ ಸೆಕ್ಷನ್ 5/6 ರ ಅಡಿಯಲ್ಲಿ ಮರಣದಂಡನೆ ವಿಧಿಸಲಾಗಿತ್ತು.

ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂಜಯ್ ಕರೋಲ್ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠವು ಕೆಳ ನ್ಯಾಯಾಲಯದ ವಿಚಾರಣೆ ಪ್ರಕ್ರಿಯೆಯನ್ನು ಪ್ರಶ್ನಿಸಿದ್ದು, ತನಿಖಾಧಿಕಾರಿಯಿಂದ ನಿರೂಪಿಸಲ್ಪಟ್ಟ ಆರೋಪಿಯ ತಪ್ಪೊಪ್ಪಿಗೆ ಹೇಳಿಕೆಗಳನ್ನು ಸಾಕ್ಷ್ಯವಾಗಿ ಸ್ವೀಕರಿಸಿದ ವಿಚಾರಣಾ ನ್ಯಾಯಾಧೀಶರ ನಿರ್ಧಾರವು ಸಾಕ್ಷ್ಯ ಕಾನೂನಿನ ಉಲ್ಲಂಘನೆಯಾಗಿದೆ. ಏಕೆಂದರೆ ಸಿಆರ್‌ಪಿಸಿ ಸೆಕ್ಷನ್ 164ರ ಅಡಿಯಲ್ಲಿ, ಪೊಲೀಸರ ಸಮ್ಮುಖದಲ್ಲಿಯೂ ಕೂಡ ಮ್ಯಾಜಿಸ್ಟ್ರೇಟ್ ದಾಖಲಿಸಿದ ತಪ್ಪೊಪ್ಪಿಗೆ ಹೇಳಿಕೆಗಳು ಮಾತ್ರ ಕಾನೂನುಬದ್ಧವಾಗಿ ಸ್ವೀಕಾರಾರ್ಹವಾಗಿವೆ ಎಂದು ಹೇಳಿದೆ.

ಡಿಎನ್‌ಎ ಪರೀಕ್ಷೆ ನಡೆಸಿದ ವೈಜ್ಞಾನಿಕ ತಜ್ಞರ ಬಗ್ಗೆ ಮಾಹಿತಿ ಒದಗಿಸಲು ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ನ್ಯಾಯಾಲಯವು ಎತ್ತಿ ತೋರಿಸಿದೆ. ತಜ್ಞರು ಡಿಎನ್‌ಎ ಪರೀಕ್ಷೆ ವೇಳೆ ಅನುಸರಿಸಿದ ವಿಧಾನದ ಬಗ್ಗೆ ಪರೀಶಿಲನೆ ನಡೆಸದ ಕಾರಣ ಡಿಎನ್‌ಎ ವರದಿ ಸ್ವೀಕಾರಾರ್ಹವಲ್ಲ ಎಂದು ಹೇಳಿದೆ. ಇದು ಸಾಕ್ಷ್ಯ ಕಾಯ್ದೆಯ ಸೆಕ್ಷನ್ 45 ಮತ್ತು ರಾಹುಲ್ vs ದೆಹಲಿ ಸರ್ಕಾರ ಪ್ರಕರಣದಲ್ಲಿ ನೀಡಿದ ತೀರ್ಪಿನ ಉಲ್ಲಂಘನೆ ಎಂದಿದೆ.

ರಾಹುಲ್ vs ದೆಹಲಿ ಸರ್ಕಾರ ಪ್ರಕರಣದಲ್ಲಿ, ಡಿಎನ್‌ಎ ಪರೀಕ್ಷೆ ವೇಳೆ ತಜ್ಞರು ವೈಜ್ಞಾನಿಕ ವಿಧಾನಗಳನ್ನು ವಿಶ್ವಾಸಾರ್ಹವಾಗಿ ಅನ್ವಯಿಸಿದ್ದಾರೆ ಎಂದು ಪ್ರಾಸಿಕ್ಯೂಷನ್ ಸಾಬೀತುಪಡಿಸುವುದು ಅವಶ್ಯಕ, ಇಲ್ಲದಿದ್ದರೆ ಸೆಕ್ಷನ್ 293 ಸಿಆರ್‌ಪಿಸಿ ಪ್ರಕಾರ ಡಿಎನ್‌ಎ ವರದಿಯನ್ನು ಸಾಕ್ಷ್ಯವಾಗಿ ಒಪ್ಪಿಕೊಳ್ಳಲು ಸಾಧ್ಯವಿಲ್ಲ ನ್ಯಾಯಾಲಯ ಹೇಳಿತ್ತು.

ಡಿಎನ್‌ಎ ವರದಿಯನ್ನು ಸಿದ್ಧಪಡಿಸುವಲ್ಲಿ ವೈಜ್ಞಾನಿಕ ತಜ್ಞರು ಬಳಸಿದ ವಿಧಾನಗಳ ಬಗ್ಗೆ ಸ್ಪಷ್ಟತೆ ಇಲ್ಲದಿರುವಾಗ, ಅಂತಹ ಪುರಾವೆಗಳನ್ನು ಅವಲಂಬಿಸುವುದು ಅಸುರಕ್ಷಿತ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಏಕೆಂದರೆ, ಸಂಗ್ರಹಿಸಿದ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸುವ ಮೊದಲು ಅದನ್ನು ಪೊಲೀಸರ ವಶದಲ್ಲಿ ಇರಿಸಿದಾಗ ಅವುಗಳನ್ನು ತಿರುಚುವ ಸಾಧ್ಯತೆಯನ್ನು ತಳ್ಳಿಹಾಕಲಾಗುವುದಿಲ್ಲ ಎಂದಿದೆ.

ವಿಧಿವಿಜ್ಞಾನ ಮಾದರಿಗಳ ಸಮಗ್ರತೆಯನ್ನು ಸ್ಥಾಪಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ಹೇಳಿದೆ ನಂತರ, ವೈದ್ಯಕೀಯ ಅಧಿಕಾರಿ ಸೀಲಿಂಗ್ ಮಾದರಿಗಳನ್ನು ದೃಢೀಕರಿಸಿಲ್ಲ ಮತ್ತು ಪೊಲೀಸ್ ಸಾಕ್ಷಿಗಳನ್ನು ಎಫ್‌ಎಸ್‌ಎಲ್‌ಗೆ ಸುರಕ್ಷಿತವಾಗಿ ತಲುಪಿಸಲಾಗಿದೆ ಎಂಬುವುದನ್ನು ಸಾಬೀತುಪಡಿಸಿಲ್ಲ ಎಂದು ನ್ಯಾಯಾಲಯ ತಿಳಿಸಿದೆ.

ಮೇಲಿನ ಎಲ್ಲಾ ಅಂಶಗಳನ್ನು ಉಲ್ಲೇಖಿಸಿದ ನ್ಯಾಯಾಲಯ ಮರಣದಂಡನೆಗೆ ಗುರಿಯಾಗಿದ್ದ ವ್ಯಕ್ತಿಯನ್ನು ದೋಷಮುಕ್ತಗೊಳಿಸಿ ಮಹತ್ವದ ತೀರ್ಪು ನೀಡಿದೆ.

ಏನಿದು ಪ್ರಕರಣ?

ಉತ್ತರಾಖಂಡದ ಉಧಾಂಸಿಂಗ್ ನಗರ ಜಿಲ್ಲೆಯಲ್ಲಿ 2016ರ ಜೂನ್‌ನಲ್ಲಿ ಈ ಘಟನೆ ನಡೆದಿದ್ದು, ಜಾಗರಣೆ ವೇಳೆ ಬಾಲಕಿಯೊಬ್ಬಳು ನಾಪತ್ತೆಯಾಗಿದ್ದಳು. ಬಳಿಕ ಆಕೆಯ ಮೃತದೇಹ ಪಕ್ಕದ ಹೊಲದಲ್ಲಿ ಪತ್ತೆಯಾಗಿತ್ತು. ಒಂದು ದಿನದ ಬಳಿಕ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿದ್ದರು. ಎಫ್ಐಆರ್ ದಾಖಲಿಸುವ ವೇಳೆ, ಬಾಲಕಿಯನ್ನು ಆರೋಪಿಯ ಜೊತೆ ನೋಡಿದ್ದಾಗಿ ಹೇಳುವ ಯಾವ ಸಾಕ್ಷಿಯೂ ಪೊಲೀಸರ ಬಳಿ ಇರಲಿಲ್ಲ. ಆತ ಜಾಗರಣ ಕಾರ್ಯಕ್ರಮದ ಧ್ವನಿ ಮತ್ತು ಬೆಳಕಿನ ವ್ಯವಸ್ಥೆಯ ಜವಾಬ್ದಾರಿ ಹೊತ್ತಿದ್ದ. ಆದರೆ ಪೊಲೀಸರು ಆತನ ವಿರುದ್ಧ ಆರೋಪ ಹೊರಿಸಿದ್ದರು.

ಬಾಲಕಿಯ ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರನ್ನು ಪಾಟೀಸವಾಲಿಗೆ ಗುರಿಪಡಿಸಿಲ್ಲ ಮತ್ತು ಯಾವ ಪೊಲೀಸ್‌ಗೆ ಮಾದರಿಗಳನ್ನು ಹಸ್ತಾಂತರಿಸಲಾಗಿದೆ ಎಂಬ ಮಾಹಿತಿಯನ್ನೂ ಬಹಿರಂಗಪಡಿಸಿಲ್ಲ. ಮಾದರಿಗಳನ್ನು ಮುಚ್ಚಿದ ಲಕೋಟೆಯಲ್ಲಿ ಸುರಕ್ಷಿತವಾಗಿ ನೀಡಲಾಗಿದೆ ಎಂದೂ ಹೇಳಿಲ್ಲ. ಆರೋಪಿಯಿಂದ ತಪ್ಪೊಪ್ಪಿಗೆ ಹೇಳಿಕೆ ಪಡೆದ ಪೊಲೀಸರು ಅದಕ್ಕೇ ಅಂಟಿಕೊಂಡರು ಎಂದು ನ್ಯಾಯಾಲಯ ವಿಶ್ಲೇಷಿಸಿದೆ.

ಪೊಲೀಸರು ನೀಡಿರುವ ಪುರಾವೆ ಸಂಪೂರ್ಣ ನಂಬಲಸಾಧ್ಯ. ಸಂಗ್ರಹಿಸಿದ ಪುರಾವೆಗಳು ಕೂಡಾ ಸುಳ್ಳು. ಅರ್ಜಿದಾರನಿಗೆ ಸಾಕ್ಷಿಗಳನ್ನು ನಾಶಪಡಿಸುವ ಎಲ್ಲ ಅವಕಾಶವೂ ಇತ್ತು. ಘಟನೆ ನಡೆದ ಎರಡು ದಿನಗಳ ಬಳಿಕವೂ ಪೊಲೀಸರು ವಶಪಡಿಸಿಕೊಂಡ ಬಟ್ಟೆಗಳನ್ನು ಇಟ್ಟುಕೊಳ್ಳುವ ಅಗತ್ಯವಿರಲಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಎಲ್‌ಪಿಜಿ ಸಿಲಿಂಡರ್‌ ಬೆಲೆ 50 ರೂ. ಹೆಚ್ಚಿಸಿದ ಕೇಂದ್ರದ ಬಿಜೆಪಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ನಡೆದ 2021 ರ "ಬಟ್ಟೆ ಚೀಲ ಹಗರಣ"ಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡುವಂತೆ...

‘ಯುದ್ಧ ಸೃಷ್ಟಿಸಿದ್ದು ನೀವೇ’: ಹಾರ್ಮುಜ್ ಅಡ್ಡಿಗೆ ಅಮೆರಿಕವನ್ನು ದೂಷಿಸಿದ ಚೀನಾ, ಟ್ರಂಪ್ ಅವರ ‘ಧೈರ್ಯದ ಕೊರತೆ’ ಹೇಳಿಕೆಗೆ ತಿರುಗೇಟು

ಚೀನಾ ಮತ್ತು ಜಪಾನ್‌ನಂತಹ ದೇಶಗಳು ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು "ಧೈರ್ಯ" ಹೊಂದಿಲ್ಲ ಎಂದು ಹೇಳಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳನ್ನು ಚೀನಾ ಬಲವಾಗಿ ವಿರೋಧಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಚೀನಾದ ವಿದೇಶಾಂಗ...

ಮೂರನೇ ಅತ್ಯಾಚಾರ ಪ್ರಕರಣ: ಸ್ವ-ಘೋಷಿತ ‘ದೇವಮಾನವ’ ಖರತ್‌ಗೆ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನಾಸಿಕ್ ನ್ಯಾಯಾಲಯ

ನಾಸಿಕ್: ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿರುವ ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರನ್ನು ಮಹಾರಾಷ್ಟ್ರದ ನಾಸಿಕ್ ನ್ಯಾಯಾಲಯ ಸೋಮವಾರ ಏಪ್ರಿಲ್...

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...