Homeಮುಖಪುಟಅತ್ಯಾಚಾರ, ಕೊಲೆ ಪ್ರಕರಣ | ಮರಣದಂಡನೆಗೆ ಗುರಿಯಾಗಿದ್ದ ವ್ಯಕ್ತಿಯನ್ನು ಖುಲಾಸೆಗೊಳಿಸಿದ ಸುಪ್ರೀಂ ಕೋರ್ಟ್

ಅತ್ಯಾಚಾರ, ಕೊಲೆ ಪ್ರಕರಣ | ಮರಣದಂಡನೆಗೆ ಗುರಿಯಾಗಿದ್ದ ವ್ಯಕ್ತಿಯನ್ನು ಖುಲಾಸೆಗೊಳಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಪ್ರಕರಣದಲ್ಲಿ ಮರಣದಂಡನೆ ಘೋಷಣೆಯಾಗಿದ್ದ ವ್ಯಕ್ತಿಯೊಬ್ಬರನ್ನು ಸುಪ್ರೀಂ ಕೋರ್ಟ್ ಖುಲಾಸೆಗೊಳಿಸಿದೆ. ‘ಪ್ರಕರಣದ ವಿಚಾರಣೆ ಸರಿಯಾದ ರೀತಿಯಲ್ಲಿ ನಡೆದಿಲ್ಲ’ ಎಂದು ತೀರ್ಪು ಪ್ರಕಟಿಸುವ ವೇಳೆ ಸರ್ವೋಚ್ಚ ನ್ಯಾಯಾಲಯ ಹೇಳಿದೆ.

ವಿಚಾರಣಾ ನ್ಯಾಯಾಧೀಶರು ತನಿಖಾಧಿಕಾರಿಗೆ ಆರೋಪಿಯ ತಪ್ಪೊಪ್ಪಿಗೆ ಹೇಳಿಕೆಗಳನ್ನು ಮುಖ್ಯ ವಿಚಾರಣೆಯ ಸಮಯದಲ್ಲಿ ಹೇಳಲು ನಿಯಮ ಮೀರಿ ಅವಕಾಶ ಕೊಟ್ಟಿದ್ದಾರೆ ಮತ್ತು ಆ ಹೇಳಿಕೆಗಳನ್ನು ಸಾಕ್ಷಿಯಾಗಿ ಒಪ್ಪಿಕೊಂಡಿದ್ದಾರೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದ ವ್ಯಕ್ತಿಗೆ ಐಪಿಸಿ ಸೆಕ್ಷನ್ 376ಎ (ಅತ್ಯಾಚಾರ ಸಾವಿಗೆ ಕಾರಣವಾಗುವುದು), 302 (ಕೊಲೆ), 366 (ಅಪಹರಣ), 363 (ಅಪ್ರಾಪ್ತ ವಯಸ್ಕರನ್ನು ಅಪಹರಿಸುವುದು), 201 (ಸಾಕ್ಷ್ಯ ನಾಶ) ಮತ್ತು ಪೋಕ್ಸೊ ಕಾಯ್ದೆಯ ಸೆಕ್ಷನ್ 5/6 ರ ಅಡಿಯಲ್ಲಿ ಮರಣದಂಡನೆ ವಿಧಿಸಲಾಗಿತ್ತು.

ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂಜಯ್ ಕರೋಲ್ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠವು ಕೆಳ ನ್ಯಾಯಾಲಯದ ವಿಚಾರಣೆ ಪ್ರಕ್ರಿಯೆಯನ್ನು ಪ್ರಶ್ನಿಸಿದ್ದು, ತನಿಖಾಧಿಕಾರಿಯಿಂದ ನಿರೂಪಿಸಲ್ಪಟ್ಟ ಆರೋಪಿಯ ತಪ್ಪೊಪ್ಪಿಗೆ ಹೇಳಿಕೆಗಳನ್ನು ಸಾಕ್ಷ್ಯವಾಗಿ ಸ್ವೀಕರಿಸಿದ ವಿಚಾರಣಾ ನ್ಯಾಯಾಧೀಶರ ನಿರ್ಧಾರವು ಸಾಕ್ಷ್ಯ ಕಾನೂನಿನ ಉಲ್ಲಂಘನೆಯಾಗಿದೆ. ಏಕೆಂದರೆ ಸಿಆರ್‌ಪಿಸಿ ಸೆಕ್ಷನ್ 164ರ ಅಡಿಯಲ್ಲಿ, ಪೊಲೀಸರ ಸಮ್ಮುಖದಲ್ಲಿಯೂ ಕೂಡ ಮ್ಯಾಜಿಸ್ಟ್ರೇಟ್ ದಾಖಲಿಸಿದ ತಪ್ಪೊಪ್ಪಿಗೆ ಹೇಳಿಕೆಗಳು ಮಾತ್ರ ಕಾನೂನುಬದ್ಧವಾಗಿ ಸ್ವೀಕಾರಾರ್ಹವಾಗಿವೆ ಎಂದು ಹೇಳಿದೆ.

ಡಿಎನ್‌ಎ ಪರೀಕ್ಷೆ ನಡೆಸಿದ ವೈಜ್ಞಾನಿಕ ತಜ್ಞರ ಬಗ್ಗೆ ಮಾಹಿತಿ ಒದಗಿಸಲು ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ನ್ಯಾಯಾಲಯವು ಎತ್ತಿ ತೋರಿಸಿದೆ. ತಜ್ಞರು ಡಿಎನ್‌ಎ ಪರೀಕ್ಷೆ ವೇಳೆ ಅನುಸರಿಸಿದ ವಿಧಾನದ ಬಗ್ಗೆ ಪರೀಶಿಲನೆ ನಡೆಸದ ಕಾರಣ ಡಿಎನ್‌ಎ ವರದಿ ಸ್ವೀಕಾರಾರ್ಹವಲ್ಲ ಎಂದು ಹೇಳಿದೆ. ಇದು ಸಾಕ್ಷ್ಯ ಕಾಯ್ದೆಯ ಸೆಕ್ಷನ್ 45 ಮತ್ತು ರಾಹುಲ್ vs ದೆಹಲಿ ಸರ್ಕಾರ ಪ್ರಕರಣದಲ್ಲಿ ನೀಡಿದ ತೀರ್ಪಿನ ಉಲ್ಲಂಘನೆ ಎಂದಿದೆ.

ರಾಹುಲ್ vs ದೆಹಲಿ ಸರ್ಕಾರ ಪ್ರಕರಣದಲ್ಲಿ, ಡಿಎನ್‌ಎ ಪರೀಕ್ಷೆ ವೇಳೆ ತಜ್ಞರು ವೈಜ್ಞಾನಿಕ ವಿಧಾನಗಳನ್ನು ವಿಶ್ವಾಸಾರ್ಹವಾಗಿ ಅನ್ವಯಿಸಿದ್ದಾರೆ ಎಂದು ಪ್ರಾಸಿಕ್ಯೂಷನ್ ಸಾಬೀತುಪಡಿಸುವುದು ಅವಶ್ಯಕ, ಇಲ್ಲದಿದ್ದರೆ ಸೆಕ್ಷನ್ 293 ಸಿಆರ್‌ಪಿಸಿ ಪ್ರಕಾರ ಡಿಎನ್‌ಎ ವರದಿಯನ್ನು ಸಾಕ್ಷ್ಯವಾಗಿ ಒಪ್ಪಿಕೊಳ್ಳಲು ಸಾಧ್ಯವಿಲ್ಲ ನ್ಯಾಯಾಲಯ ಹೇಳಿತ್ತು.

ಡಿಎನ್‌ಎ ವರದಿಯನ್ನು ಸಿದ್ಧಪಡಿಸುವಲ್ಲಿ ವೈಜ್ಞಾನಿಕ ತಜ್ಞರು ಬಳಸಿದ ವಿಧಾನಗಳ ಬಗ್ಗೆ ಸ್ಪಷ್ಟತೆ ಇಲ್ಲದಿರುವಾಗ, ಅಂತಹ ಪುರಾವೆಗಳನ್ನು ಅವಲಂಬಿಸುವುದು ಅಸುರಕ್ಷಿತ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಏಕೆಂದರೆ, ಸಂಗ್ರಹಿಸಿದ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸುವ ಮೊದಲು ಅದನ್ನು ಪೊಲೀಸರ ವಶದಲ್ಲಿ ಇರಿಸಿದಾಗ ಅವುಗಳನ್ನು ತಿರುಚುವ ಸಾಧ್ಯತೆಯನ್ನು ತಳ್ಳಿಹಾಕಲಾಗುವುದಿಲ್ಲ ಎಂದಿದೆ.

ವಿಧಿವಿಜ್ಞಾನ ಮಾದರಿಗಳ ಸಮಗ್ರತೆಯನ್ನು ಸ್ಥಾಪಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ಹೇಳಿದೆ ನಂತರ, ವೈದ್ಯಕೀಯ ಅಧಿಕಾರಿ ಸೀಲಿಂಗ್ ಮಾದರಿಗಳನ್ನು ದೃಢೀಕರಿಸಿಲ್ಲ ಮತ್ತು ಪೊಲೀಸ್ ಸಾಕ್ಷಿಗಳನ್ನು ಎಫ್‌ಎಸ್‌ಎಲ್‌ಗೆ ಸುರಕ್ಷಿತವಾಗಿ ತಲುಪಿಸಲಾಗಿದೆ ಎಂಬುವುದನ್ನು ಸಾಬೀತುಪಡಿಸಿಲ್ಲ ಎಂದು ನ್ಯಾಯಾಲಯ ತಿಳಿಸಿದೆ.

ಮೇಲಿನ ಎಲ್ಲಾ ಅಂಶಗಳನ್ನು ಉಲ್ಲೇಖಿಸಿದ ನ್ಯಾಯಾಲಯ ಮರಣದಂಡನೆಗೆ ಗುರಿಯಾಗಿದ್ದ ವ್ಯಕ್ತಿಯನ್ನು ದೋಷಮುಕ್ತಗೊಳಿಸಿ ಮಹತ್ವದ ತೀರ್ಪು ನೀಡಿದೆ.

ಏನಿದು ಪ್ರಕರಣ?

ಉತ್ತರಾಖಂಡದ ಉಧಾಂಸಿಂಗ್ ನಗರ ಜಿಲ್ಲೆಯಲ್ಲಿ 2016ರ ಜೂನ್‌ನಲ್ಲಿ ಈ ಘಟನೆ ನಡೆದಿದ್ದು, ಜಾಗರಣೆ ವೇಳೆ ಬಾಲಕಿಯೊಬ್ಬಳು ನಾಪತ್ತೆಯಾಗಿದ್ದಳು. ಬಳಿಕ ಆಕೆಯ ಮೃತದೇಹ ಪಕ್ಕದ ಹೊಲದಲ್ಲಿ ಪತ್ತೆಯಾಗಿತ್ತು. ಒಂದು ದಿನದ ಬಳಿಕ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿದ್ದರು. ಎಫ್ಐಆರ್ ದಾಖಲಿಸುವ ವೇಳೆ, ಬಾಲಕಿಯನ್ನು ಆರೋಪಿಯ ಜೊತೆ ನೋಡಿದ್ದಾಗಿ ಹೇಳುವ ಯಾವ ಸಾಕ್ಷಿಯೂ ಪೊಲೀಸರ ಬಳಿ ಇರಲಿಲ್ಲ. ಆತ ಜಾಗರಣ ಕಾರ್ಯಕ್ರಮದ ಧ್ವನಿ ಮತ್ತು ಬೆಳಕಿನ ವ್ಯವಸ್ಥೆಯ ಜವಾಬ್ದಾರಿ ಹೊತ್ತಿದ್ದ. ಆದರೆ ಪೊಲೀಸರು ಆತನ ವಿರುದ್ಧ ಆರೋಪ ಹೊರಿಸಿದ್ದರು.

ಬಾಲಕಿಯ ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರನ್ನು ಪಾಟೀಸವಾಲಿಗೆ ಗುರಿಪಡಿಸಿಲ್ಲ ಮತ್ತು ಯಾವ ಪೊಲೀಸ್‌ಗೆ ಮಾದರಿಗಳನ್ನು ಹಸ್ತಾಂತರಿಸಲಾಗಿದೆ ಎಂಬ ಮಾಹಿತಿಯನ್ನೂ ಬಹಿರಂಗಪಡಿಸಿಲ್ಲ. ಮಾದರಿಗಳನ್ನು ಮುಚ್ಚಿದ ಲಕೋಟೆಯಲ್ಲಿ ಸುರಕ್ಷಿತವಾಗಿ ನೀಡಲಾಗಿದೆ ಎಂದೂ ಹೇಳಿಲ್ಲ. ಆರೋಪಿಯಿಂದ ತಪ್ಪೊಪ್ಪಿಗೆ ಹೇಳಿಕೆ ಪಡೆದ ಪೊಲೀಸರು ಅದಕ್ಕೇ ಅಂಟಿಕೊಂಡರು ಎಂದು ನ್ಯಾಯಾಲಯ ವಿಶ್ಲೇಷಿಸಿದೆ.

ಪೊಲೀಸರು ನೀಡಿರುವ ಪುರಾವೆ ಸಂಪೂರ್ಣ ನಂಬಲಸಾಧ್ಯ. ಸಂಗ್ರಹಿಸಿದ ಪುರಾವೆಗಳು ಕೂಡಾ ಸುಳ್ಳು. ಅರ್ಜಿದಾರನಿಗೆ ಸಾಕ್ಷಿಗಳನ್ನು ನಾಶಪಡಿಸುವ ಎಲ್ಲ ಅವಕಾಶವೂ ಇತ್ತು. ಘಟನೆ ನಡೆದ ಎರಡು ದಿನಗಳ ಬಳಿಕವೂ ಪೊಲೀಸರು ವಶಪಡಿಸಿಕೊಂಡ ಬಟ್ಟೆಗಳನ್ನು ಇಟ್ಟುಕೊಳ್ಳುವ ಅಗತ್ಯವಿರಲಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಎಲ್‌ಪಿಜಿ ಸಿಲಿಂಡರ್‌ ಬೆಲೆ 50 ರೂ. ಹೆಚ್ಚಿಸಿದ ಕೇಂದ್ರದ ಬಿಜೆಪಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...