Homeಮುಖಪುಟಅತ್ಯಾಚಾರ, ಕೊಲೆ ಪ್ರಕರಣ | ಮರಣದಂಡನೆಗೆ ಗುರಿಯಾಗಿದ್ದ ವ್ಯಕ್ತಿಯನ್ನು ಖುಲಾಸೆಗೊಳಿಸಿದ ಸುಪ್ರೀಂ ಕೋರ್ಟ್

ಅತ್ಯಾಚಾರ, ಕೊಲೆ ಪ್ರಕರಣ | ಮರಣದಂಡನೆಗೆ ಗುರಿಯಾಗಿದ್ದ ವ್ಯಕ್ತಿಯನ್ನು ಖುಲಾಸೆಗೊಳಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಪ್ರಕರಣದಲ್ಲಿ ಮರಣದಂಡನೆ ಘೋಷಣೆಯಾಗಿದ್ದ ವ್ಯಕ್ತಿಯೊಬ್ಬರನ್ನು ಸುಪ್ರೀಂ ಕೋರ್ಟ್ ಖುಲಾಸೆಗೊಳಿಸಿದೆ. ‘ಪ್ರಕರಣದ ವಿಚಾರಣೆ ಸರಿಯಾದ ರೀತಿಯಲ್ಲಿ ನಡೆದಿಲ್ಲ’ ಎಂದು ತೀರ್ಪು ಪ್ರಕಟಿಸುವ ವೇಳೆ ಸರ್ವೋಚ್ಚ ನ್ಯಾಯಾಲಯ ಹೇಳಿದೆ.

ವಿಚಾರಣಾ ನ್ಯಾಯಾಧೀಶರು ತನಿಖಾಧಿಕಾರಿಗೆ ಆರೋಪಿಯ ತಪ್ಪೊಪ್ಪಿಗೆ ಹೇಳಿಕೆಗಳನ್ನು ಮುಖ್ಯ ವಿಚಾರಣೆಯ ಸಮಯದಲ್ಲಿ ಹೇಳಲು ನಿಯಮ ಮೀರಿ ಅವಕಾಶ ಕೊಟ್ಟಿದ್ದಾರೆ ಮತ್ತು ಆ ಹೇಳಿಕೆಗಳನ್ನು ಸಾಕ್ಷಿಯಾಗಿ ಒಪ್ಪಿಕೊಂಡಿದ್ದಾರೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದ ವ್ಯಕ್ತಿಗೆ ಐಪಿಸಿ ಸೆಕ್ಷನ್ 376ಎ (ಅತ್ಯಾಚಾರ ಸಾವಿಗೆ ಕಾರಣವಾಗುವುದು), 302 (ಕೊಲೆ), 366 (ಅಪಹರಣ), 363 (ಅಪ್ರಾಪ್ತ ವಯಸ್ಕರನ್ನು ಅಪಹರಿಸುವುದು), 201 (ಸಾಕ್ಷ್ಯ ನಾಶ) ಮತ್ತು ಪೋಕ್ಸೊ ಕಾಯ್ದೆಯ ಸೆಕ್ಷನ್ 5/6 ರ ಅಡಿಯಲ್ಲಿ ಮರಣದಂಡನೆ ವಿಧಿಸಲಾಗಿತ್ತು.

ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂಜಯ್ ಕರೋಲ್ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠವು ಕೆಳ ನ್ಯಾಯಾಲಯದ ವಿಚಾರಣೆ ಪ್ರಕ್ರಿಯೆಯನ್ನು ಪ್ರಶ್ನಿಸಿದ್ದು, ತನಿಖಾಧಿಕಾರಿಯಿಂದ ನಿರೂಪಿಸಲ್ಪಟ್ಟ ಆರೋಪಿಯ ತಪ್ಪೊಪ್ಪಿಗೆ ಹೇಳಿಕೆಗಳನ್ನು ಸಾಕ್ಷ್ಯವಾಗಿ ಸ್ವೀಕರಿಸಿದ ವಿಚಾರಣಾ ನ್ಯಾಯಾಧೀಶರ ನಿರ್ಧಾರವು ಸಾಕ್ಷ್ಯ ಕಾನೂನಿನ ಉಲ್ಲಂಘನೆಯಾಗಿದೆ. ಏಕೆಂದರೆ ಸಿಆರ್‌ಪಿಸಿ ಸೆಕ್ಷನ್ 164ರ ಅಡಿಯಲ್ಲಿ, ಪೊಲೀಸರ ಸಮ್ಮುಖದಲ್ಲಿಯೂ ಕೂಡ ಮ್ಯಾಜಿಸ್ಟ್ರೇಟ್ ದಾಖಲಿಸಿದ ತಪ್ಪೊಪ್ಪಿಗೆ ಹೇಳಿಕೆಗಳು ಮಾತ್ರ ಕಾನೂನುಬದ್ಧವಾಗಿ ಸ್ವೀಕಾರಾರ್ಹವಾಗಿವೆ ಎಂದು ಹೇಳಿದೆ.

ಡಿಎನ್‌ಎ ಪರೀಕ್ಷೆ ನಡೆಸಿದ ವೈಜ್ಞಾನಿಕ ತಜ್ಞರ ಬಗ್ಗೆ ಮಾಹಿತಿ ಒದಗಿಸಲು ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ನ್ಯಾಯಾಲಯವು ಎತ್ತಿ ತೋರಿಸಿದೆ. ತಜ್ಞರು ಡಿಎನ್‌ಎ ಪರೀಕ್ಷೆ ವೇಳೆ ಅನುಸರಿಸಿದ ವಿಧಾನದ ಬಗ್ಗೆ ಪರೀಶಿಲನೆ ನಡೆಸದ ಕಾರಣ ಡಿಎನ್‌ಎ ವರದಿ ಸ್ವೀಕಾರಾರ್ಹವಲ್ಲ ಎಂದು ಹೇಳಿದೆ. ಇದು ಸಾಕ್ಷ್ಯ ಕಾಯ್ದೆಯ ಸೆಕ್ಷನ್ 45 ಮತ್ತು ರಾಹುಲ್ vs ದೆಹಲಿ ಸರ್ಕಾರ ಪ್ರಕರಣದಲ್ಲಿ ನೀಡಿದ ತೀರ್ಪಿನ ಉಲ್ಲಂಘನೆ ಎಂದಿದೆ.

ರಾಹುಲ್ vs ದೆಹಲಿ ಸರ್ಕಾರ ಪ್ರಕರಣದಲ್ಲಿ, ಡಿಎನ್‌ಎ ಪರೀಕ್ಷೆ ವೇಳೆ ತಜ್ಞರು ವೈಜ್ಞಾನಿಕ ವಿಧಾನಗಳನ್ನು ವಿಶ್ವಾಸಾರ್ಹವಾಗಿ ಅನ್ವಯಿಸಿದ್ದಾರೆ ಎಂದು ಪ್ರಾಸಿಕ್ಯೂಷನ್ ಸಾಬೀತುಪಡಿಸುವುದು ಅವಶ್ಯಕ, ಇಲ್ಲದಿದ್ದರೆ ಸೆಕ್ಷನ್ 293 ಸಿಆರ್‌ಪಿಸಿ ಪ್ರಕಾರ ಡಿಎನ್‌ಎ ವರದಿಯನ್ನು ಸಾಕ್ಷ್ಯವಾಗಿ ಒಪ್ಪಿಕೊಳ್ಳಲು ಸಾಧ್ಯವಿಲ್ಲ ನ್ಯಾಯಾಲಯ ಹೇಳಿತ್ತು.

ಡಿಎನ್‌ಎ ವರದಿಯನ್ನು ಸಿದ್ಧಪಡಿಸುವಲ್ಲಿ ವೈಜ್ಞಾನಿಕ ತಜ್ಞರು ಬಳಸಿದ ವಿಧಾನಗಳ ಬಗ್ಗೆ ಸ್ಪಷ್ಟತೆ ಇಲ್ಲದಿರುವಾಗ, ಅಂತಹ ಪುರಾವೆಗಳನ್ನು ಅವಲಂಬಿಸುವುದು ಅಸುರಕ್ಷಿತ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಏಕೆಂದರೆ, ಸಂಗ್ರಹಿಸಿದ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸುವ ಮೊದಲು ಅದನ್ನು ಪೊಲೀಸರ ವಶದಲ್ಲಿ ಇರಿಸಿದಾಗ ಅವುಗಳನ್ನು ತಿರುಚುವ ಸಾಧ್ಯತೆಯನ್ನು ತಳ್ಳಿಹಾಕಲಾಗುವುದಿಲ್ಲ ಎಂದಿದೆ.

ವಿಧಿವಿಜ್ಞಾನ ಮಾದರಿಗಳ ಸಮಗ್ರತೆಯನ್ನು ಸ್ಥಾಪಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ಹೇಳಿದೆ ನಂತರ, ವೈದ್ಯಕೀಯ ಅಧಿಕಾರಿ ಸೀಲಿಂಗ್ ಮಾದರಿಗಳನ್ನು ದೃಢೀಕರಿಸಿಲ್ಲ ಮತ್ತು ಪೊಲೀಸ್ ಸಾಕ್ಷಿಗಳನ್ನು ಎಫ್‌ಎಸ್‌ಎಲ್‌ಗೆ ಸುರಕ್ಷಿತವಾಗಿ ತಲುಪಿಸಲಾಗಿದೆ ಎಂಬುವುದನ್ನು ಸಾಬೀತುಪಡಿಸಿಲ್ಲ ಎಂದು ನ್ಯಾಯಾಲಯ ತಿಳಿಸಿದೆ.

ಮೇಲಿನ ಎಲ್ಲಾ ಅಂಶಗಳನ್ನು ಉಲ್ಲೇಖಿಸಿದ ನ್ಯಾಯಾಲಯ ಮರಣದಂಡನೆಗೆ ಗುರಿಯಾಗಿದ್ದ ವ್ಯಕ್ತಿಯನ್ನು ದೋಷಮುಕ್ತಗೊಳಿಸಿ ಮಹತ್ವದ ತೀರ್ಪು ನೀಡಿದೆ.

ಏನಿದು ಪ್ರಕರಣ?

ಉತ್ತರಾಖಂಡದ ಉಧಾಂಸಿಂಗ್ ನಗರ ಜಿಲ್ಲೆಯಲ್ಲಿ 2016ರ ಜೂನ್‌ನಲ್ಲಿ ಈ ಘಟನೆ ನಡೆದಿದ್ದು, ಜಾಗರಣೆ ವೇಳೆ ಬಾಲಕಿಯೊಬ್ಬಳು ನಾಪತ್ತೆಯಾಗಿದ್ದಳು. ಬಳಿಕ ಆಕೆಯ ಮೃತದೇಹ ಪಕ್ಕದ ಹೊಲದಲ್ಲಿ ಪತ್ತೆಯಾಗಿತ್ತು. ಒಂದು ದಿನದ ಬಳಿಕ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿದ್ದರು. ಎಫ್ಐಆರ್ ದಾಖಲಿಸುವ ವೇಳೆ, ಬಾಲಕಿಯನ್ನು ಆರೋಪಿಯ ಜೊತೆ ನೋಡಿದ್ದಾಗಿ ಹೇಳುವ ಯಾವ ಸಾಕ್ಷಿಯೂ ಪೊಲೀಸರ ಬಳಿ ಇರಲಿಲ್ಲ. ಆತ ಜಾಗರಣ ಕಾರ್ಯಕ್ರಮದ ಧ್ವನಿ ಮತ್ತು ಬೆಳಕಿನ ವ್ಯವಸ್ಥೆಯ ಜವಾಬ್ದಾರಿ ಹೊತ್ತಿದ್ದ. ಆದರೆ ಪೊಲೀಸರು ಆತನ ವಿರುದ್ಧ ಆರೋಪ ಹೊರಿಸಿದ್ದರು.

ಬಾಲಕಿಯ ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರನ್ನು ಪಾಟೀಸವಾಲಿಗೆ ಗುರಿಪಡಿಸಿಲ್ಲ ಮತ್ತು ಯಾವ ಪೊಲೀಸ್‌ಗೆ ಮಾದರಿಗಳನ್ನು ಹಸ್ತಾಂತರಿಸಲಾಗಿದೆ ಎಂಬ ಮಾಹಿತಿಯನ್ನೂ ಬಹಿರಂಗಪಡಿಸಿಲ್ಲ. ಮಾದರಿಗಳನ್ನು ಮುಚ್ಚಿದ ಲಕೋಟೆಯಲ್ಲಿ ಸುರಕ್ಷಿತವಾಗಿ ನೀಡಲಾಗಿದೆ ಎಂದೂ ಹೇಳಿಲ್ಲ. ಆರೋಪಿಯಿಂದ ತಪ್ಪೊಪ್ಪಿಗೆ ಹೇಳಿಕೆ ಪಡೆದ ಪೊಲೀಸರು ಅದಕ್ಕೇ ಅಂಟಿಕೊಂಡರು ಎಂದು ನ್ಯಾಯಾಲಯ ವಿಶ್ಲೇಷಿಸಿದೆ.

ಪೊಲೀಸರು ನೀಡಿರುವ ಪುರಾವೆ ಸಂಪೂರ್ಣ ನಂಬಲಸಾಧ್ಯ. ಸಂಗ್ರಹಿಸಿದ ಪುರಾವೆಗಳು ಕೂಡಾ ಸುಳ್ಳು. ಅರ್ಜಿದಾರನಿಗೆ ಸಾಕ್ಷಿಗಳನ್ನು ನಾಶಪಡಿಸುವ ಎಲ್ಲ ಅವಕಾಶವೂ ಇತ್ತು. ಘಟನೆ ನಡೆದ ಎರಡು ದಿನಗಳ ಬಳಿಕವೂ ಪೊಲೀಸರು ವಶಪಡಿಸಿಕೊಂಡ ಬಟ್ಟೆಗಳನ್ನು ಇಟ್ಟುಕೊಳ್ಳುವ ಅಗತ್ಯವಿರಲಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಎಲ್‌ಪಿಜಿ ಸಿಲಿಂಡರ್‌ ಬೆಲೆ 50 ರೂ. ಹೆಚ್ಚಿಸಿದ ಕೇಂದ್ರದ ಬಿಜೆಪಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...