Homeಮುಖಪುಟಅತ್ಯಾಚಾರ, ಕೊಲೆ ಪ್ರಕರಣ | ಮರಣದಂಡನೆಗೆ ಗುರಿಯಾಗಿದ್ದ ವ್ಯಕ್ತಿಯನ್ನು ಖುಲಾಸೆಗೊಳಿಸಿದ ಸುಪ್ರೀಂ ಕೋರ್ಟ್

ಅತ್ಯಾಚಾರ, ಕೊಲೆ ಪ್ರಕರಣ | ಮರಣದಂಡನೆಗೆ ಗುರಿಯಾಗಿದ್ದ ವ್ಯಕ್ತಿಯನ್ನು ಖುಲಾಸೆಗೊಳಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಪ್ರಕರಣದಲ್ಲಿ ಮರಣದಂಡನೆ ಘೋಷಣೆಯಾಗಿದ್ದ ವ್ಯಕ್ತಿಯೊಬ್ಬರನ್ನು ಸುಪ್ರೀಂ ಕೋರ್ಟ್ ಖುಲಾಸೆಗೊಳಿಸಿದೆ. ‘ಪ್ರಕರಣದ ವಿಚಾರಣೆ ಸರಿಯಾದ ರೀತಿಯಲ್ಲಿ ನಡೆದಿಲ್ಲ’ ಎಂದು ತೀರ್ಪು ಪ್ರಕಟಿಸುವ ವೇಳೆ ಸರ್ವೋಚ್ಚ ನ್ಯಾಯಾಲಯ ಹೇಳಿದೆ.

ವಿಚಾರಣಾ ನ್ಯಾಯಾಧೀಶರು ತನಿಖಾಧಿಕಾರಿಗೆ ಆರೋಪಿಯ ತಪ್ಪೊಪ್ಪಿಗೆ ಹೇಳಿಕೆಗಳನ್ನು ಮುಖ್ಯ ವಿಚಾರಣೆಯ ಸಮಯದಲ್ಲಿ ಹೇಳಲು ನಿಯಮ ಮೀರಿ ಅವಕಾಶ ಕೊಟ್ಟಿದ್ದಾರೆ ಮತ್ತು ಆ ಹೇಳಿಕೆಗಳನ್ನು ಸಾಕ್ಷಿಯಾಗಿ ಒಪ್ಪಿಕೊಂಡಿದ್ದಾರೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದ ವ್ಯಕ್ತಿಗೆ ಐಪಿಸಿ ಸೆಕ್ಷನ್ 376ಎ (ಅತ್ಯಾಚಾರ ಸಾವಿಗೆ ಕಾರಣವಾಗುವುದು), 302 (ಕೊಲೆ), 366 (ಅಪಹರಣ), 363 (ಅಪ್ರಾಪ್ತ ವಯಸ್ಕರನ್ನು ಅಪಹರಿಸುವುದು), 201 (ಸಾಕ್ಷ್ಯ ನಾಶ) ಮತ್ತು ಪೋಕ್ಸೊ ಕಾಯ್ದೆಯ ಸೆಕ್ಷನ್ 5/6 ರ ಅಡಿಯಲ್ಲಿ ಮರಣದಂಡನೆ ವಿಧಿಸಲಾಗಿತ್ತು.

ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂಜಯ್ ಕರೋಲ್ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠವು ಕೆಳ ನ್ಯಾಯಾಲಯದ ವಿಚಾರಣೆ ಪ್ರಕ್ರಿಯೆಯನ್ನು ಪ್ರಶ್ನಿಸಿದ್ದು, ತನಿಖಾಧಿಕಾರಿಯಿಂದ ನಿರೂಪಿಸಲ್ಪಟ್ಟ ಆರೋಪಿಯ ತಪ್ಪೊಪ್ಪಿಗೆ ಹೇಳಿಕೆಗಳನ್ನು ಸಾಕ್ಷ್ಯವಾಗಿ ಸ್ವೀಕರಿಸಿದ ವಿಚಾರಣಾ ನ್ಯಾಯಾಧೀಶರ ನಿರ್ಧಾರವು ಸಾಕ್ಷ್ಯ ಕಾನೂನಿನ ಉಲ್ಲಂಘನೆಯಾಗಿದೆ. ಏಕೆಂದರೆ ಸಿಆರ್‌ಪಿಸಿ ಸೆಕ್ಷನ್ 164ರ ಅಡಿಯಲ್ಲಿ, ಪೊಲೀಸರ ಸಮ್ಮುಖದಲ್ಲಿಯೂ ಕೂಡ ಮ್ಯಾಜಿಸ್ಟ್ರೇಟ್ ದಾಖಲಿಸಿದ ತಪ್ಪೊಪ್ಪಿಗೆ ಹೇಳಿಕೆಗಳು ಮಾತ್ರ ಕಾನೂನುಬದ್ಧವಾಗಿ ಸ್ವೀಕಾರಾರ್ಹವಾಗಿವೆ ಎಂದು ಹೇಳಿದೆ.

ಡಿಎನ್‌ಎ ಪರೀಕ್ಷೆ ನಡೆಸಿದ ವೈಜ್ಞಾನಿಕ ತಜ್ಞರ ಬಗ್ಗೆ ಮಾಹಿತಿ ಒದಗಿಸಲು ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ನ್ಯಾಯಾಲಯವು ಎತ್ತಿ ತೋರಿಸಿದೆ. ತಜ್ಞರು ಡಿಎನ್‌ಎ ಪರೀಕ್ಷೆ ವೇಳೆ ಅನುಸರಿಸಿದ ವಿಧಾನದ ಬಗ್ಗೆ ಪರೀಶಿಲನೆ ನಡೆಸದ ಕಾರಣ ಡಿಎನ್‌ಎ ವರದಿ ಸ್ವೀಕಾರಾರ್ಹವಲ್ಲ ಎಂದು ಹೇಳಿದೆ. ಇದು ಸಾಕ್ಷ್ಯ ಕಾಯ್ದೆಯ ಸೆಕ್ಷನ್ 45 ಮತ್ತು ರಾಹುಲ್ vs ದೆಹಲಿ ಸರ್ಕಾರ ಪ್ರಕರಣದಲ್ಲಿ ನೀಡಿದ ತೀರ್ಪಿನ ಉಲ್ಲಂಘನೆ ಎಂದಿದೆ.

ರಾಹುಲ್ vs ದೆಹಲಿ ಸರ್ಕಾರ ಪ್ರಕರಣದಲ್ಲಿ, ಡಿಎನ್‌ಎ ಪರೀಕ್ಷೆ ವೇಳೆ ತಜ್ಞರು ವೈಜ್ಞಾನಿಕ ವಿಧಾನಗಳನ್ನು ವಿಶ್ವಾಸಾರ್ಹವಾಗಿ ಅನ್ವಯಿಸಿದ್ದಾರೆ ಎಂದು ಪ್ರಾಸಿಕ್ಯೂಷನ್ ಸಾಬೀತುಪಡಿಸುವುದು ಅವಶ್ಯಕ, ಇಲ್ಲದಿದ್ದರೆ ಸೆಕ್ಷನ್ 293 ಸಿಆರ್‌ಪಿಸಿ ಪ್ರಕಾರ ಡಿಎನ್‌ಎ ವರದಿಯನ್ನು ಸಾಕ್ಷ್ಯವಾಗಿ ಒಪ್ಪಿಕೊಳ್ಳಲು ಸಾಧ್ಯವಿಲ್ಲ ನ್ಯಾಯಾಲಯ ಹೇಳಿತ್ತು.

ಡಿಎನ್‌ಎ ವರದಿಯನ್ನು ಸಿದ್ಧಪಡಿಸುವಲ್ಲಿ ವೈಜ್ಞಾನಿಕ ತಜ್ಞರು ಬಳಸಿದ ವಿಧಾನಗಳ ಬಗ್ಗೆ ಸ್ಪಷ್ಟತೆ ಇಲ್ಲದಿರುವಾಗ, ಅಂತಹ ಪುರಾವೆಗಳನ್ನು ಅವಲಂಬಿಸುವುದು ಅಸುರಕ್ಷಿತ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಏಕೆಂದರೆ, ಸಂಗ್ರಹಿಸಿದ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸುವ ಮೊದಲು ಅದನ್ನು ಪೊಲೀಸರ ವಶದಲ್ಲಿ ಇರಿಸಿದಾಗ ಅವುಗಳನ್ನು ತಿರುಚುವ ಸಾಧ್ಯತೆಯನ್ನು ತಳ್ಳಿಹಾಕಲಾಗುವುದಿಲ್ಲ ಎಂದಿದೆ.

ವಿಧಿವಿಜ್ಞಾನ ಮಾದರಿಗಳ ಸಮಗ್ರತೆಯನ್ನು ಸ್ಥಾಪಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ಹೇಳಿದೆ ನಂತರ, ವೈದ್ಯಕೀಯ ಅಧಿಕಾರಿ ಸೀಲಿಂಗ್ ಮಾದರಿಗಳನ್ನು ದೃಢೀಕರಿಸಿಲ್ಲ ಮತ್ತು ಪೊಲೀಸ್ ಸಾಕ್ಷಿಗಳನ್ನು ಎಫ್‌ಎಸ್‌ಎಲ್‌ಗೆ ಸುರಕ್ಷಿತವಾಗಿ ತಲುಪಿಸಲಾಗಿದೆ ಎಂಬುವುದನ್ನು ಸಾಬೀತುಪಡಿಸಿಲ್ಲ ಎಂದು ನ್ಯಾಯಾಲಯ ತಿಳಿಸಿದೆ.

ಮೇಲಿನ ಎಲ್ಲಾ ಅಂಶಗಳನ್ನು ಉಲ್ಲೇಖಿಸಿದ ನ್ಯಾಯಾಲಯ ಮರಣದಂಡನೆಗೆ ಗುರಿಯಾಗಿದ್ದ ವ್ಯಕ್ತಿಯನ್ನು ದೋಷಮುಕ್ತಗೊಳಿಸಿ ಮಹತ್ವದ ತೀರ್ಪು ನೀಡಿದೆ.

ಏನಿದು ಪ್ರಕರಣ?

ಉತ್ತರಾಖಂಡದ ಉಧಾಂಸಿಂಗ್ ನಗರ ಜಿಲ್ಲೆಯಲ್ಲಿ 2016ರ ಜೂನ್‌ನಲ್ಲಿ ಈ ಘಟನೆ ನಡೆದಿದ್ದು, ಜಾಗರಣೆ ವೇಳೆ ಬಾಲಕಿಯೊಬ್ಬಳು ನಾಪತ್ತೆಯಾಗಿದ್ದಳು. ಬಳಿಕ ಆಕೆಯ ಮೃತದೇಹ ಪಕ್ಕದ ಹೊಲದಲ್ಲಿ ಪತ್ತೆಯಾಗಿತ್ತು. ಒಂದು ದಿನದ ಬಳಿಕ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿದ್ದರು. ಎಫ್ಐಆರ್ ದಾಖಲಿಸುವ ವೇಳೆ, ಬಾಲಕಿಯನ್ನು ಆರೋಪಿಯ ಜೊತೆ ನೋಡಿದ್ದಾಗಿ ಹೇಳುವ ಯಾವ ಸಾಕ್ಷಿಯೂ ಪೊಲೀಸರ ಬಳಿ ಇರಲಿಲ್ಲ. ಆತ ಜಾಗರಣ ಕಾರ್ಯಕ್ರಮದ ಧ್ವನಿ ಮತ್ತು ಬೆಳಕಿನ ವ್ಯವಸ್ಥೆಯ ಜವಾಬ್ದಾರಿ ಹೊತ್ತಿದ್ದ. ಆದರೆ ಪೊಲೀಸರು ಆತನ ವಿರುದ್ಧ ಆರೋಪ ಹೊರಿಸಿದ್ದರು.

ಬಾಲಕಿಯ ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರನ್ನು ಪಾಟೀಸವಾಲಿಗೆ ಗುರಿಪಡಿಸಿಲ್ಲ ಮತ್ತು ಯಾವ ಪೊಲೀಸ್‌ಗೆ ಮಾದರಿಗಳನ್ನು ಹಸ್ತಾಂತರಿಸಲಾಗಿದೆ ಎಂಬ ಮಾಹಿತಿಯನ್ನೂ ಬಹಿರಂಗಪಡಿಸಿಲ್ಲ. ಮಾದರಿಗಳನ್ನು ಮುಚ್ಚಿದ ಲಕೋಟೆಯಲ್ಲಿ ಸುರಕ್ಷಿತವಾಗಿ ನೀಡಲಾಗಿದೆ ಎಂದೂ ಹೇಳಿಲ್ಲ. ಆರೋಪಿಯಿಂದ ತಪ್ಪೊಪ್ಪಿಗೆ ಹೇಳಿಕೆ ಪಡೆದ ಪೊಲೀಸರು ಅದಕ್ಕೇ ಅಂಟಿಕೊಂಡರು ಎಂದು ನ್ಯಾಯಾಲಯ ವಿಶ್ಲೇಷಿಸಿದೆ.

ಪೊಲೀಸರು ನೀಡಿರುವ ಪುರಾವೆ ಸಂಪೂರ್ಣ ನಂಬಲಸಾಧ್ಯ. ಸಂಗ್ರಹಿಸಿದ ಪುರಾವೆಗಳು ಕೂಡಾ ಸುಳ್ಳು. ಅರ್ಜಿದಾರನಿಗೆ ಸಾಕ್ಷಿಗಳನ್ನು ನಾಶಪಡಿಸುವ ಎಲ್ಲ ಅವಕಾಶವೂ ಇತ್ತು. ಘಟನೆ ನಡೆದ ಎರಡು ದಿನಗಳ ಬಳಿಕವೂ ಪೊಲೀಸರು ವಶಪಡಿಸಿಕೊಂಡ ಬಟ್ಟೆಗಳನ್ನು ಇಟ್ಟುಕೊಳ್ಳುವ ಅಗತ್ಯವಿರಲಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಎಲ್‌ಪಿಜಿ ಸಿಲಿಂಡರ್‌ ಬೆಲೆ 50 ರೂ. ಹೆಚ್ಚಿಸಿದ ಕೇಂದ್ರದ ಬಿಜೆಪಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...