*ನೀರು* (ಪುಟ್ಕತೆ)

- Advertisement -
- Advertisement -

‘ಬೇಕೇ ಬೇಕು ನೀರೂ ಬೇಕು’ ಹೀಗೆ ಸುತ್ತ ಎಂಬತ್ತಾರು ಹಳ್ಳಿ ಜನ ಘೋಷಣೆ ಕೂಗುತ್ತ ಸತ್ಯಾಗ್ರಹಕ್ಕೆ ಕುಳಿತಿದ್ದರು. ಕುಡಿಯೊ ನೀರಿಗಾಗಿ ಎಂಟು ವರ್ಷದಿಂದ ಅರ್ಜಿ ಕೊಟ್ಟು ಸಾಕಾಗಿ ಹೋಗಿತ್ತು. ಇನ್ನೆರಡು ತಿಂಗಳಲ್ಲಿ ಚುನಾವಣೆ. ನೂರನೇ ದಿನದ ಸತ್ಯಾಗ್ರಹಕ್ಕೆ ಮಿನಿಸ್ಟರ್, ಅಧಿಕಾರಿಗಳು ಬಂದರು. ಜನರ ಗದ್ದಲ ಹೆಚ್ಚಾಯಿತು. ಯಾರೋ ‘ಭಾರತ್ ಮಾತಾಕಿ’ ಅಂದರು. ಜನ ‘ಜೈ’ ಅಂದು ನಿಶ್ಯಬ್ಧರಾದರು.

ಮಿನಿಸ್ಟರ್ ಮೈಕ್ ಹಿಡಿದು ‘ಮಹಾಜನಗಳೇ, ನಿಮ್ಮ ನೋವು ನನಗರ್ಥವಾಗತ್ತೆ. ಈ ಮಣ್ಣಿಗೆ ನೀರು ತರದೆ ನಾನು ಸಾಯಲಾರೆ’ ಎಂದು ಸ್ವಲ್ಪ ಹೊತ್ತು ಸುಮ್ಮನಾದರು. ಮಿನಿಸ್ಟರ್ ಹಿಂಬಾಲಕರು, ಅಧಿಕಾರಿಗಳನ್ನು ಬಿಟ್ಟು ಯಾರೂ ಚಪ್ಪಾಳೆ ತಟ್ಟಲಿಲ್ಲ. ‘ಇನ್ನೆರಡೇ ತಿಂಗಳು. ನನಗೆ ಮತ್ತೆ ಅಧಿಕಾರ ಕೊಡಿ. ನಿಮ್ಮ ಋಣ ತೀರಿಸದೇ ಸಾಯೋದಿಲ್ಲ’ ಎಂದರು. ಅಷ್ಟರಲ್ಲಿ ಮದ್ಯೆ ಬಾಯಿ ಹಾಕಿದ ಜನತೆ.

‘ಸಾಯೆಬ್ರೆ ಎಂಟು ವರ್ಷದಿಂದ ಒಂದು ಹನಿ ಮಳೆ ಬಿದ್ದಿಲ್ಲ’

‘ಸಾಯೆಬ್ರೆ ಕುಡಿಯೋ ನೀರಿಗೆ ಏಳು ಮೈಲಿ ನಡಿಬೇಕಾಗ್ಯದ’

‘ಸಾಯೆಬ್ರೆ ಮಕ್ಕಳು ಸಾಲಿ ಬಿಟ್ಟು ನೀರು ಹೊರಾಕತ್ತೇರ’

‘ಸಾಯೆಬ್ರೆ ಎಂಟು ವರ್ಷ ಆತ್ರಿ. ನಿಮ್ಮನ್ನ ಎರಡು ಸಲ ಗೆಲ್ಸಿವಿ ನೆಪ್ಪಿರ್ಲಿ’

ಪೊಲೀಸ್ ಎಲ್ಲರನ್ನು ಗದರಿಸಿ ಕೂರಿಸಿದರು.
ಮಿನಿಸ್ಟರ್ : ಮಹಾಜನಗಳೆ 100 ಕಿಲೋಮೀಟರಿಂದ ನದಿ ನೀರು ತರಬೇಕಂದ್ರೆ ಅಷ್ಟು ಸುಲಭವಲ್ಲ. ಆದ್ರೂ ನಾನು ಪ್ರಾಮಾಣಿಕ ಪ್ರಯತ್ನ ಮಾಡಿ ಫೈಲ್ ಮೂವ್ ಮಾಡ್ಸಿದಿನಿ. ಸರ್ಕಾರ ಹಣ ಬಿಡುಗಡೆ ಮಾಡಿದ ತಕ್ಷಣ ಕಾಮಗಾರಿ ಚಾಲೂ ಮಾಡ್ತಿನಿ’

ಜನತೆ : ಅಲ್ಲಿಮಟ ನಮ್ಕತಿ? ಸಾಯೆಬ್ರೆ ಅಂತರ್ಜಲ ಇಲ್ಲದಂಗಾಗ್ಯದ. ಬೋರ್ ಬಾವಿ ಬರಿದಾಗ್ಯವ. ಕೆರೆ, ಕುಂಟೆ ಬಾಯ್ಬಿಟ್ಕಂಡ್ ನೀರು ನೀರು ಅಂತಾವೆ. ದನಕರುಗಳಿಗಾದ್ರೂ ಕುಡಿಯೋ ನೀರು ವ್ಯವಸ್ಥೆ ಮಾಡ್ರಿ

ಮಿನಿಸ್ಟರ್: ಅದಕ್ಕೆ ಇನ್ನೂರು ಕೋಟಿ ಬೇಕು. ಸರ್ಕಾರ ಸಾಲದಲ್ಲಿದೆ. ಯಾವ್ದುಕ್ಕೂ ಎರಡು ತಿಂಗಳು ಸಮಯ ಕೊಡಿ ದಯಮಾಡಿ

ಜನತೆ ಮಾತಾಡಬೇಕೆಂದುಕೊಂಡರೂ ಪೊಲೀಸ್ ಬಿಡಲಿಲ್ಲ. ಅಧಿಕಾರಿಗಳು ಮಿನಿಸ್ಟರ್ ಕಿವಿಲಿ ಏನೋ ಹೇಳಿದಾಗ
ಮಿನಿಸ್ಟರ್: ಮಹಾಜನಗಳೇ ನಿಮಗೊಂದು ಸಂತಸದ ಸುದ್ಧಿ.

ಮಿನಿಸ್ಟರ್ ಮಾತು ಕೇಳಿ ಅಲ್ಲಿದ್ದ ರೈತರಿಗೆ ಬೆಳೆ ಕಂಡಂಗಾಯ್ತು. ಕೂಲಿ ಜನಗಳಿಗೆ ಕೆಲಸ ಕಂಡಂಗಾಯ್ತು. ಮಹಿಳೆಯರಿಗೆ ಮೋಡ ಕಟ್ಟಿದಂಗಾಯ್ತು. ಮಕ್ಕಳಿಗೆ ಬರಿಮೈಲಿ ಈಜು ಹೊಡೆದಂಗಾಯ್ತು. ಜನರ ಕಿವಿಗಳೆಲ್ಲ ನೆಟ್ಟಗಾದವು.

ಮಿನಿಸ್ಟರ್: ಈ ಸಾಧನೆ ಅಮೆರಿಕಾ, ಚೀನಾ, ರಷ್ಯಾ ಅಷ್ಟೇ ಮಾಡಿದ್ದು. ಈಗ ಆ ಸಾಧನೇನ ನಮ್ಮ ದೇಶ ಮಾಡುತ್ತಿದೆ. ಇವತ್ತು ರಾತ್ರಿ ಚಂದ್ರನ ಮೇಲೆ ಉಪಗ್ರಹ ಕಳಿಸುತ್ತಿದ್ದಾರೆ. ಸಾವಿರ ಕೋಟಿ ಪ್ರಾಜೆಕ್ಟ್ ಈ ಚಂದ್ರಯಾನ. ಎಲ್ಲರೂ ನೋಡಿ ಹಾರೈಸಿ. ದೇಶದ ಕೀರ್ತಿ ಪ್ರಚಾರ ಮಾಡಿ.

ಮಿನಿಸ್ಟರ್ ಮಾತು ಕೇಳಿ ಜನತೆಯಲ್ಲೊಬ್ಬ ‘ಸಾಯೆಬ್ರೆ ಸಾವ್ರ ಕೋಟಿಯಾ’ ಎಂದೊಡನೆ ಅದ್ಯಾರೋ ‘ಭಾರತ್ ಮಾತಾಕಿ’ ಅಂದರು. ಜನ ‘ಜೈ’ ಅಂದರು. ಮಿನಿಸ್ಟರ್ ಕಾರು ಹತ್ತುವವರೆಗೆ ಘೋಷಣೆ ಮೊಳಗುತ್ತಲೇ ಇತ್ತು. ಅಲ್ಲೆ ಸಂದಿಯಲ್ಲಿ ನುಗ್ಗಿ ಸೂಟು ತೊಟ್ಟ ಅಧಿಕಾರಿಯೊಬ್ಬರ ಕೈ ಹಿಡಿದುಕೊಂಡ ಶಾಲೆ ಯೂನಿಪಾರ್ಮ್ ತೊಟ್ಟ ಹುಡುಗಿ ‘ಸಾರ್ ಚಂದ್ರಯಾನ ಯಾಕೆ’ ಎಂದು ಕೇಳಿದಳು. ಅಧಿಕಾರಿ ಹೆಮ್ಮೆಯಿಂದ ಹೇಳಿದ ‘ ಚಂದ್ರನಲ್ಲಿ ನೀರು ಹುಡುಕೋಕೆ ಪುಟ್ಟ’.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...