Homeಕರ್ನಾಟಕ'ವಿರೋಧ ಪಕ್ಷದ ಧ್ವನಿ ಅಡಗಿಸಲು ಚಾನೆಲ್‍ಗಳಿಗೆ ನಿರ್ಬಂಧ ಹೇರಿದ್ದಾರೆಂಬುದು ಸ್ಪಷ್ಟ': ಸ್ಪೀಕರ್ ಕ್ರಮಕ್ಕೆ ಸಿದ್ದರಾಮಯ್ಯ ಆಕ್ರೋಶ

‘ವಿರೋಧ ಪಕ್ಷದ ಧ್ವನಿ ಅಡಗಿಸಲು ಚಾನೆಲ್‍ಗಳಿಗೆ ನಿರ್ಬಂಧ ಹೇರಿದ್ದಾರೆಂಬುದು ಸ್ಪಷ್ಟ’: ಸ್ಪೀಕರ್ ಕ್ರಮಕ್ಕೆ ಸಿದ್ದರಾಮಯ್ಯ ಆಕ್ರೋಶ

- Advertisement -
- Advertisement -

ಅಧಿವೇಶನದಲ್ಲಿ ಸುದ್ದಿ ಮಾಧ್ಯಮಗಳಿಗೆ ನಿರ್ಬಂಧ ಕ್ರಮವನ್ನು ವಿರೋಧಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಖಂಡಿಸಿದ್ದು, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಧಿವೇಶನದ ಸುದ್ದಿ ಪ್ರಸಾರ ಮಾಡುತ್ತಿದ್ದ ಖಾಸಗಿ ವಾಹಿನಿಗಳಿಗೆ ನಿಷೇಧ ಹೇರಿರುವ ಕ್ರಮ ಖಂಡನೀಯ. ವಿರೋಧ ಪಕ್ಷಗಳ ದನಿಯನ್ನು ದಮನಿಸಿ, ಆಡಳಿತ ಪಕ್ಷಕ್ಕೆ ನೆರವಾಗುವ ಉದ್ದೇಶದಿಂದಲೇ ಸ್ಪೀಕರ್ ಅವರು ಟಿವಿ ಚಾನೆಲ‌್‌ಗಳ ಕ್ಯಾಮೆರಾಗಳಿಗೆ ನಿರ್ಬಂಧ ಹೇರಿರುವುದು ಕಳೆದೆರಡು ದಿನಗಳ ಕಲಾಪದಿಂದ ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ.

ವಿಧಾನಸಭಾ ಕಲಾಪದಲ್ಲಿ ಪಾಲ್ಗೊಂಡ ಆಡಳಿತ ಪಕ್ಷದ ಸದಸ್ಯರು, ಸರ್ಕಾರದ ವೈಫಲ್ಯದ ಬಗ್ಗೆ ಆಡಿದ ಮಾತುಗಳು ಮತ್ತು ಅವರ ಮುಖಗಳನ್ನು ಸರ್ಕಾರಿ ಕೃಪಾಪೋಷಿತ ಡಿಡಿ ಚಂದನ ಸುದ್ದಿವಾಹಿನಿ ಸೆನ್ಸಾರ್ ಮಾಡಿ ಬಿತ್ತರಿಸುತ್ತಿರುವುದು ಖಂಡನೀಯ.
ಸ್ಪೀಕರ್ ಅವರು ಕ್ಲಾಸ್ ಟೀಚರ್ ಅಲ್ಲ, ನಾವು ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳೂ ಅಲ್ಲ. ಸ್ಪೀಕರ್ ಸದನದಲ್ಲಿ ಅಂಪೈರ್ ರೀತಿ ಇರಬೇಕು, ಅವರೇ ಆಟಗಾರರ ರೀತಿಯಲ್ಲಿ ಮೈದಾನಕ್ಕೆ ಇಳಿದರೆ ನಾವು ಆಟಗಾರರ ರೀತಿಯಲ್ಲಿಯೇ ಎದುರಿಸುತ್ತೇವೆ ಎಂದು ಚಾಟಿ ಬೀಸಿದರು.

ಸ್ಪೀಕರ್ ಕಾಗೇರಿಯವರ ಜತೆ ನನಗೆ ವೈಯಕ್ತಿಕ ಜಗಳವೇನಿಲ್ಲ. ವಿಧಾನಮಂಡಲದ ಶಿಷ್ಟಾಚಾರ-ನಡವಳಿಕೆಗಳ ಬಗ್ಗೆ ನನಗೂ ತಿಳಿದಿದೆ. ಆದರೆ ಅಧಿಕಾರ ವಹಿಸಿಕೊಂಡ ಕೂಡಲೇ ಮಾಧ್ಯಮಗಳ ಅಭಿವ್ಯಕ್ತಿ ಸ್ವಾತಂತ್ರ್ಯ ದಮನ ಮಾಡಿದ ಸ್ಪೀಕರ್, ಮೊದಲ ದಿನದಿಂದಲೇ ಬಿಜೆಪಿ ಸದಸ್ಯರ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿರುವುದು ಖಂಡನೀಯ ಎಂದು ಗುಡುಗಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಾಧ್ಯಮದ ಮೇಲೆ ನಿರ್ಬಂಧ ಹೇರುವುದು, ಈ ದೇಶದ ಪ್ರಜೆಗಳಿಗೆ ನಮ್ಮ ಸಂವಿಧಾನವು ನೀಡಿರುವ ಹಕ್ಕುಗಳ ಉಲ್ಲಂಘನೆ. ಇದರ ವಿರುದ್ಧ ವಿರೋಧ ಪಕ್ಷಗಳು ಮತ್ತು ಮಾಧ್ಯಮಗಳು ಇನ್ನೂ ಉಗ್ರವಾದ ಪ್ರತಿಭಟನೆಯನ್ನು ಹಮ್ಮಿಕೊಳ್ಳಬೇಕು.ಮಾಧ್ಯಮದ ಕೆಲವರು ಬಿ.ಜೆ.ಪಿ.ಯ ವಕ್ತಾರರಂತೆ ಮಾತನಾಡುತ್ತಿದ್ದರು. ಅಂತಹ ಕೆಲವರಿಗೆ ಬಿಜೆಪಿಯ ನಿಜವಾದ ಬಣ್ಣ ಈಗ ಗೊತ್ತಾಗಿರಬೇಕು.

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...