Homeರಾಜಕೀಯಅಧ್ಯಕ್ಷ ಮ್ಯಾಕ್ರೋನ್ ವಿರುದ್ಧ ಫ್ರಾನ್ಸ್ ನಲ್ಲಿ ಪ್ರತಿರೋಧದ ಅಲೆ

ಅಧ್ಯಕ್ಷ ಮ್ಯಾಕ್ರೋನ್ ವಿರುದ್ಧ ಫ್ರಾನ್ಸ್ ನಲ್ಲಿ ಪ್ರತಿರೋಧದ ಅಲೆ

- Advertisement -
- Advertisement -
  • ಡಾ. ಸ್ವಾತಿ ಶುಕ್ಲಾ |

ಮೇ 25ರ ಶನಿವಾರ, ಫ್ರಾನ್ಸ್‍ನ ಬೀದಿಗಳಲ್ಲಿ ಲಕ್ಷಾಂತರ ಜನರ ‘ಜನಪ್ರಿಯ ಅಲೆ’ಯ ಪ್ರತಿರೋಧ. ಫ್ರಾನ್ಸ್‍ನ ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರೋನ್‍ರ ಕಾರ್ಮಿಕ ವಿರೋಧಿ ಸುಧಾರಣೆಗಳು ಆ ಜನರನ್ನು ಬೀದಿಗೆ ತಂದಿದ್ದವು. ಸಿಜಿಟಿ ಎಂಬ ಅಲ್ಲಿನ ಅತೀ ದೊಡ್ಡ ಕಾರ್ಮಿಕ ಸಂಘಟನೆಗಳ ಒಕ್ಕೂಟವು ಈ ಪ್ರತಿಭಟನೆಗೆ ಕರೆ ಕೊಟ್ಟಿತ್ತು. ಅಧ್ಯಕ್ಷರ ಪ್ರಸ್ತಾಪಿತ ಜನವಿರೋಧಿ ಆರ್ಥಿಕ ಸುಧಾರಣೆಗಳ ವಿರುದ್ಧ ಶಿಕ್ಷಕರು, ಪೊಲೀಸ್ ಅಧಿಕಾರಿಗಳು ಮತ್ತು ಸಾರಿಗೆ ನೌಕರರು ಪ್ರತಿಭಟಿಸುತ್ತಲೇ ಇದ್ದಾರೆ. ಕಳೆದ ಮೇನಲ್ಲಿ ಮ್ಯಾಕ್ರೋನ್ ಅಧಿಕಾರಕ್ಕೆ ಬಂದ ನಂತರ ಸರ್ಕಾರೀ ಸೇವೆಯಲ್ಲಿನ ನೌಕರರ ಮೂರನೇ ಅತೀ ದೊಡ್ಡ ಮುಷ್ಕರ ಇದಾಗಿದೆ.

ವಿಶ್ವವಿದ್ಯಾಲಯಕ್ಕೆ ಪ್ರವೇಶ ಪಡೆಯಲು ತಂದಿರುವ ಹೊಸ ನಿಯಮಗಳು, ವಲಸೆ ಕುರಿತ ಕಾನೂನುಗಳು ಮತ್ತು ಪೊಲೀಸರಿಗೆ ಹೆಚ್ಚು ಅಧಿಕಾರವನ್ನು ನೀಡುವ ನೀತಿಯ ವಿರುದ್ಧ ಶನಿವಾರದ ಪ್ರತಿಭಟನೆ ದನಿಯೆತ್ತಿತ್ತು. ವಿದ್ಯಾರ್ಥಿಗಳು ತಮ್ಮ ಆಯ್ಕೆಯ ಸರ್ಕಾರೀ ವಿಶ್ವವಿದ್ಯಾಲಯಕ್ಕೆ ಪ್ರವೇಶ ಪಡೆಯುವುದಕ್ಕೆ ಹೊಸ ನಿಯಮಗಳು ಅಡ್ಡಿಯಾಗಿದ್ದವು ಮತ್ತು ಪೊಲೀಸರಿಗೆ ನೀಡಲಾದ ಹೆಚ್ಚಿನ ಅಧಿಕಾರವು ಅಲ್ಲಿನ ಶೋಷಿತ ಸಮುದಾಯಗಳ ವಸತಿ ಪ್ರದೇಶಗಳಲ್ಲಿ ಪೊಲೀಸ್ ದೌರ್ಜನ್ಯವನ್ನು ಹೆಚ್ಚಿಸುವ ಸಾಧ್ಯತೆ ಇದೆ. ಇದುವರೆಗಿನ ಕಾರ್ಮಿಕ ಕಾನೂನುಗಳು ಮತ್ತು ಕಾರ್ಮಿಕ ಸಂಘಗಳಿಂದ ಕಾರ್ಮಿಕರಿಗೆ ಸಿಗುವ ರಕ್ಷಣೆಯ ಕಾರಣದಿಂದಲೇ ಫ್ರಾನ್ಸ್‍ನಲ್ಲಿ ಹೆಚ್ಚು ಆರ್ಥಿಕ ವ್ಯವಹಾರವೂ ನಡೆಯುತ್ತಿಲ್ಲ ಮತ್ತು ಉದ್ಯೋಗ ಸೃಷ್ಟಿಯೂ ಆಗುತ್ತಿಲ್ಲವೆಂದು ಹೇಳುವ ಮ್ಯಾಕ್ರೋನ್ ಕಾರ್ಮಿಕಪರ ಕಾನೂನುಗಳನ್ನು ಕಿತ್ತುಹಾಕುವ ‘ಮಹತ್ವದ’ ಕ್ರಮಕ್ಕೆ ಮುಂದಾಗಿದ್ದಾರೆ. ಹೊಸ ನೀತಿಯ ಪ್ರಕಾರ, ಕಂಪೆನಿಗಳು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಇದುವರೆಗೆ ಇರುವ ಒಪ್ಪಂದಗಳನ್ನು ಪಾಲಿಸಬೇಕಿಲ್ಲ; ಹೊಸ ಆರ್ಥಿಕ ನೀತಿಯ ವಿಧಾನಗಳಾದ ಹೈರ್ & ಫೈರ್ – ಬೇಕೆಂದಾಗ ತೆಗೆದುಕೋ ಇಲ್ಲವಾದರೆ ಮನೆಗೆ ಕಳಿಸು – ನೀತಿಯನ್ನೂ, ಕೆಲಸದ ಸ್ಥಳದ ಸೌಲಭ್ಯಗಳನ್ನೂ ಮತ್ತು ಕೆಲಸದ ಅವಧಿಯನ್ನೂ ತಮಗೆ ಇಷ್ಟಬಂದ ರೀತಿಯಲ್ಲಿ ಬದಲಾಯಿಸಬಹುದು. ಏಕಪಕ್ಷೀಯವಾಗಿ ಕೆಲಸದಿಂದ ಕಿತ್ತು ಹಾಕಿದಾಗ ಕೊಡಬೇಕಿದ್ದ ಪರಿಹಾರದ ಮೊತ್ತವನ್ನೂ ಕಡಿಮೆ ಮಾಡಿರುವುದು ಯೂನಿಯನ್ನುಗಳಲ್ಲಿ ಆಕ್ರೋಶ ಮೂಡಿಸಿದೆ. ವಿದೇಶೀ ನೆಲೆಯ ಕಂಪೆನಿಗಳಲ್ಲೂ ಕಾರ್ಮಿಕರನ್ನು ಬೇಕಾಬಿಟ್ಟಿ ಕಿತ್ತು ಹಾಕುವುದಕ್ಕೆ ಇದು ಅವಕಾಶ ಮಾಡಿಕೊಟ್ಟಿದೆ. ಮ್ಯಾಕ್ರೋನ್ ಪ್ರಕಾರ ಇವೆಲ್ಲದರಿಂದ ಫ್ರಾನ್ಸ್‍ನ ಜಾಗತಿಕ ಸ್ಪರ್ಧಾ ಸಾಮಥ್ರ್ಯ ಹೆಚ್ಚಲಿದೆ.

ಪ್ಯಾರಿಸ್, ಮರ್ಸೆಲ್ಲಿ ಮತ್ತು ನ್ಯಾಂಟೆಸ್ ಒಳಗೊಂಡಂತೆ 160 ಕಡೆಗಳಲ್ಲಿ ಪ್ರತಿಭಟನೆಗಳು ನಡೆದವು. ಪ್ಯಾರಿಸ್ ಒಂದರಲ್ಲೇ 80,000 ಜನರು ಪಾಲ್ಗೊಂಡರು. ಪ್ರತಿಭಟನಾಕಾರರು ಹಿಂಸೆಗಿಳಿಯಬಹುದೆಂಬ ಸಂಶಯದ ಮೇಲೆ ಪೊಲೀಸರು ಬಲಪ್ರಯೋಗ ನಡೆಸಿದರು ಮತ್ತು ಅಶ್ರುವಾಯು ಸಿಡಿಸಿದರು. 43 ಜನರನ್ನು ಬಂಧಿಸಿ, 26 ಜನರನ್ನು ಇನ್ನೂ ತಮ್ಮ ವಶದಲ್ಲೇ ಇರಿಸಿಕೊಂಡಿದ್ದಾರೆ.

ಫ್ರಾನ್ಸ್‍ನ ಎಡ ಪಕ್ಷದ ನಾಯಕ ಜ್ಚಾನ್ -ಲು ಮೆಲೆನ್ಕೋ ದಕ್ಷಿಣದ ಬಂದರು ನಗರ ಮರ್ಸೆಲ್ಲಿಯಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಹೇಳಿದ ಮಾತುಗಳು ಹೀಗಿವೆ. ‘ಬಡವರ, ಶೋಷಿತರ, ಸೂರು ರಹಿತರ ಮತ್ತು ನಿರುದ್ಯೋಗಿಗಳ ಪರವಾಗಿ ನಾವಿಂದು ಹೇಳುವ ಮಾತು ಒಂದೇ. ಸಾಕು, ಸಾಕು, ಸಾಕು. ಈ ರೀತಿಯ ಜಗತ್ತು ನಮಗೆ ಸಾಕಾಗಿದೆ’.

ಈ ಮಧ್ಯೆ ಸರ್ಕಾರದ ನೀತಿಯ ವಿರುದ್ಧ ಫ್ರಾನ್ಸ್‍ನ ರೈಲು ಚಾಲಕರ ಮುಷ್ಕರ ಮೂರನೆಯ ತಿಂಗಳಿಗೆ ಕಾಲಿಟ್ಟಿದೆ. ಅವರ ಸೇವಾ ನಿಯಮಗಳನ್ನು ಬದಲಿಸುವ, ಬದುಕಿರುವ ಕಾಲ ಭದ್ರತೆ ಕಲ್ಪಿಸುತ್ತಿದ್ದ ಅನುಕೂಲ ಕಿತ್ತು ಹಾಕುವ ಮತ್ತು ಅವಧಿಪೂರ್ವವಾಗಿ ನಿವೃತ್ತಗೊಳಿಸುವ ನೀಯ ವಿರುದ್ಧ ಅವರು ಮುಷ್ಕರ ಹೂಡಿದ್ದಾರೆ. ಇತ್ತೀಚೆಗಿನ ಪ್ರತಿಭಟನೆಗಳಲ್ಲಿ ಅವರ ಜೊತೆ ಏರ್‍ಫ್ರಾನ್ಸ್‍ನ ಸಿಬ್ಬಂದಿ ವಿದ್ಯಾರ್ಥಿಗಳು ಮತ್ತು ಮ್ಯಾಕ್ರೋನ್‍ರ ನೀತಿಯನ್ನು ವಿರೋಧಿಸುವ ಇತರ ಕಾರ್ಮಿಕರೂ ಸಹಾ ಸೇರಿಕೊಂಡಿದ್ದಾರೆ.

ಫ್ರಾನ್ಸ್‍ನ ಇತಿಹಾಸದಲ್ಲೇ ಅತೀ ಕಿರಿಯ ಅಧ್ಯಕ್ಷರಾಗಿರುವ ಇಮ್ಯಾನ್ಯುಯಲ್ ಮ್ಯಾಕ್ರೋನ್ ಅವರಿಗೆ 40 ವರ್ಷ ವಯಸ್ಸು. ನಡುಪಂಥೀಯರಾದ ಅವರು, ಈ ಹಿಂದೆ ಬ್ಯಾಂಕಿಂಗ್ ಉದ್ದಿಮೆಯಲ್ಲಿದ್ದರು. ‘ಎಲ್ಲರಿಗೂ ಉದ್ಯೋಗ’ದ ಭರವಸೆ ಮತ್ತು ಆರ್ಥಿಕತೆಯ ಪುನಶ್ಚೇತನದ ಘೋಷಣೆಯೊಂದಿಗೆ ಅವರು ಅಧಿಕಾರಕ್ಕೆ ಬಂದರು. ಪ್ರಪಂಚದ ಮಟ್ಟದಲ್ಲಿ ಒಬ್ಬ ಪ್ರಮುಖ ನಾಯಕನಾಗಿ ಗುರುತಿಸಲ್ಪಡುತ್ತಿರುವ ಆತ, ಆಗಾಗ್ಗೆ ಇತರ ವಿಶ್ವ ನಾಯಕರೊಂದಿಗೆ ಕಾಣಿಸಿಕೊಳ್ಳುತ್ತಿರುತ್ತಾರೆ. ಆದರೆ, ತನ್ನ ತವರಿನಲ್ಲೇ ದೊಡ್ಡ ಸವಾಲನ್ನು ಎದುರಿಸಬೇಕಾಗಿ ಬಂದಿದೆ. ನಿವೃತ್ತಿ ವೇತನ ಪಡೆಯುತ್ತಿರುವವರಿಗೆ ತೆರಿಗೆ ಹಾಕಿ ಸರ್ಕಾರೀ ಸಾಲವನ್ನು ತೀರಿಸಬೇಕೆಂದು ಹೇಳುವ ಆತ, ಶ್ರೀಮಂತರಿಗೆ ತೆರಿಗೆ ಕಡಿಮೆ ಮಾಡಬೇಕೆಂಬ ನೀತಿಯನ್ನು ಪ್ರತಿಪಾದಿಸುತ್ತಾರೆ. ಇವೆಲ್ಲದರಿಂದ ಆತನನ್ನು ‘ಶ್ರೀಮಂತರ ಅಧ್ಯಕ್ಷ’ ಎಂದು ಕರೆಯಲಾಗುತ್ತದೆ. ಕಾರ್ಮಿಕ ವಿರೋಧಿ ನೀತಿಗಳು ಮತ್ತು ವಿಶ್ವವಿದ್ಯಾಲಯಗಳಿಗೆ ದಾಖಲಾತಿಯನ್ನು ಕಷ್ಟವಾಗಿಸಿರುವುದರಿಂದ, ವಯಸ್ಸಾದವರು ಮತ್ತು ಯುವಜನರೆಲ್ಲರಿಂದ ವಿರೋಧ ಎದುರಿಸಬೇಕಾಗಿ ಬಂದಿದ್ದು, ಆತನ ಮಾನ್ಯತೆ ಕಡಿಮೆಯಾಗುತ್ತಿದೆ.

ಫ್ರಾನ್ಸ್‍ನ ಕಾರ್ಮಿಕ ಸಂಘಗಳೆಂದರೆ ಯಾರೂ ಮುಟ್ಟಲಾಗದ ಶಕ್ತಿಶಾಲಿ ಸಂಘಗಳಾಗಿ ದಶಕಗಳಿಂದ ಸ್ಥಾಪಿತವಾಗಿವೆ. 1995ರಲ್ಲಿ ಸಂಪ್ರದಾಯವಾದಿ ನಾಯಕತ್ವವು ತರಲು ಹೊರಟಿದ್ದ ಇದೇ ಬಗೆಯ ಜನವಿರೋಧಿ ನೀತಿಗಳನ್ನು ರಾಷ್ಟ್ರವ್ಯಾಪಿ ಮುಷ್ಕರಗಳು ಹಿಮ್ಮೆಟ್ಟಿಸಿದ್ದವು. 1968ರ ನಂತರ ನಡೆದ ಅತೀ ದೊಡ್ಡ ಸಾಮಾಜಿಕ ಹೋರಾಟ ಅದಾಗಿದ್ದು, ಕಾರ್ಮಿಕರು ಮತ್ತು ವಿದ್ಯಾರ್ಥಿಗಳು ಒಟ್ಟು ಸೇರಿ ಸರ್ಕಾರವನ್ನೇ ಕೆಳಗಿಳಿಸುವ ಮಟ್ಟ ತಲುಪಿದ್ದವು.

ಆದರೆ, ಈ ಸಾರಿಯ ಗೆಲುವಿನ ತಕ್ಕಡಿ ಮ್ಯಾಕ್ರೋನ್ ಕಡೆಗೇ ಬಾಗುವ ಸಾಧ್ಯತೆ ಇದೆ. ಏಕೆಂದರೆ, ಸತತ ಮುಷ್ಕರಗಳಿಂದ ಇತರ ಸಾರ್ವಜನಿಕರ ಬೆಂಬಲವು ಕಡಿಮೆಯಾಗುತ್ತಿದೆ ಮತ್ತು ಈಗಲೂ ಮ್ಯಾಕ್ರೋನ್ ಒಬ್ಬ ಒಳ್ಳೆಯ ಸುಧಾರಣಾವಾದಿ ಎಂದು ನಂಬುವವರ ಸಂಖ್ಯೆಯೂ ಸಾಕಷ್ಟಿದೆ. ಕಾರ್ಮಿಕ ಸಂಘಗಳೂ ಈ ಹಿಂದಿನಷ್ಟು ಸದೃಢವಾಗಿಲ್ಲ. 60 ವರ್ಷಗಳ ಹಿಂದೆ ಒಟ್ಟು ಕಾರ್ಮಿಕರಲ್ಲಿ ಮೂರನೇ ಒಂದು ಭಾಗದಷ್ಟು ಕಾರ್ಮಿಕ ಸಂಘಗಳ ಸದಸ್ಯತ್ವ ಪಡೆದುಕೊಂಡಿದ್ದರೆ, ಈಗದು ಬಹಳ ಕಡಿಮೆಯಾಗಿದೆ.

ಮ್ಯಾಕ್ರೋನ್ ಇವೆಲ್ಲದರಿಂದ ಅಲುಗಾಡಿದಂತಿಲ್ಲ ಮತ್ತು ‘ಈ ಆಂದೋಲನಗಳು ನನ್ನನ್ನು ತಡೆಯಲು ಸಾಧ್ಯವಿಲ್ಲ’ ಎಂದು ಘೋಷಿಸಿದ್ದಾರೆ. ಏನಾಗಬಹುದು ಎಂಬುದಕ್ಕೆ ಕಾಲವೇ ಉತ್ತರವನ್ನು ಹೇಳಬಲ್ಲದು….

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...