Homeಕರ್ನಾಟಕಅನಂತ್ಮಾಣಿ v/s ಸೂಲಿಬೆಲೆ, ಇದು ಟಿಕೆಟ್ ಕೈತಪ್ಪಿದ ಕದನ

ಅನಂತ್ಮಾಣಿ v/s ಸೂಲಿಬೆಲೆ, ಇದು ಟಿಕೆಟ್ ಕೈತಪ್ಪಿದ ಕದನ

- Advertisement -
- Advertisement -

| ಶುದ್ಧೋದನ |

ಉತ್ತರಕನ್ನಡದ ಸೋಶಿಯಲ್ ಮೀಡಿಯಾದಲ್ಲೀಗ ಕೇಸರಿ ಕುಮಾರರಿಬ್ಬರ ಗುದಮುರಗಿ ಜೋರು ಸದ್ದು ಮಾಡುತ್ತಿದೆ. ಬಿಜೆಪಿ ಸಂಸದ ಅನಂತ್‍ಕುಮಾರ್ ಹೆಗ್ಡೆ ಮತ್ತು ಕೇಸರಿ ಭಾಷಣ`ಕೋರ’ ಚಕ್ರವರ್ತಿ ಸೂಲಿಬೆಲೆ ಒಬ್ಬರಿಗೊಬ್ಬರು ಕೆಸರು ಎರಚಿಕೊಳ್ಳುತ್ತಿರೋದು ರೋಚಕವಿದೆ. ಹಾಗೆ ನೋಡಿದರೆ ಮೊನ್ನೆ ಮುಗಿದ ಇಲೆಕ್ಷನ್ ಸಂದರ್ಭದಲ್ಲೇ ಮಾಣಿಗೆ ಟಿಕೆಟ್ ಕೊಡಬಾರದೆಂದು ದೊಡ್ಡ ಕೂಗೆದ್ದಿತ್ತು. ಆತನ ಬದಲಿಗೆ ನಮೋ ಬ್ರಿಗೇಡ್‍ನ ಪ್ರೊಪ್ರೇಟರ್ ಚಕ್ರವರ್ತಿ ಸೂಲಿಬೆಲೆ ಹೆಸರು ತೇಲಿ ಬಂದಿತ್ತು. ಸ್ಥಳೀಯ ಆರೆಸ್ಸೆಸ್-ಹಿಂಜಾವೇ ಪಡೆಯೇ ಮಾಣಿ ವಿರುದ್ಧ ಮುರಕೊಂಡು ಬಿದ್ದಿತ್ತು. ಮತದಾರರು ಮತ್ತು ಬಿಜೆಪಿ ಕಾರ್ಯಕರ್ತರ ತಿರಸ್ಕಾರ, ತಾತ್ಸಾರಕ್ಕೆ ತುತ್ತಾಗಿರುವ ಮಾಣಿಗೆ ಟಿಕೆಟ್ ಕೊಡಬಾರದೆಂದು ಉತ್ತರ ಕನ್ನಡದ ಆರೆಸ್ಸೆಸ್‍ನ ಒಂದು ತಂಡ ಪ್ರಬಲ ಹೋರಾಟ ಮಾಡಿತ್ತು. ಉತ್ತರ ಕನ್ನಡ ಸಂಘಪರಿವಾರದ ಕಲ್ಲಡ್ಕ, ಹನ್ಮಂತ ಶಾನಭಾಗ್ ಎರಡೂ ಕಡೆ “ಆಟ” ಆಡಿದ್ದರು.

ಅಂತಿಮವಾಗಿ ಮಾಣಿಗೇ ಟಿಕೆಟ್ ಸಿಕ್ಕಿತು. ಆತ ಗೆದ್ದೂ ಬಿಟ್ಟ. ಆದರೆ ಬಿಜೆಪಿ ಒಳಮನೆಯ ಬೇಗುದಿ ಕಮ್ಮಿ ಆಗಲಿಲ್ಲ. ಸೂಲಿಬೆಲೆ ಟೀಮಂತೂ ಮೋದಿ ಮತ ಭಿಕ್ಷೆಯಿಂದ ಗೆದ್ದಿರುವ ಮಾಣಿ ಧೀಮಾಕಿಂದ ಬೀಗುವುದು ಬೇಕಾಗಿಲ್ಲ ಎಂಬ ರಹಸ್ಯ ಅಭಿಯಾನವನ್ನೇ ಹುಟ್ಟುಹಾಕಿತು! ಮಾಣಿ ಮಾಡಿದ ಜನದ್ರೋಹದ ಪಾಪಕ್ಕೇ ಮಂತ್ರಿಯಾಗದೆ ಮೂಲೆ ಪಾಲಾಗಿದ್ದಾನೆಂದು ಆತನ ವಿರೋಧಿ ಬಳಗ ತಿವಿಯತೊಡಗಿತ್ತು. ಇದೆಲ್ಲದರಿಂದ ಮಾಣಿ ಕೊತಕೊತ ಕುದಿಯುತ್ತಲೇ ಇದ್ದ. ತನಗೆ ಅಡ್ಡಗಾಲು ಹಾಕಿದವರನ್ನೆಲ್ಲಾ ಒಬ್ಬೊಬ್ಬರಾಗಿ ಸಂಹರಿಸಲು ಆತ ಸ್ಕೆಚ್ ರೆಡಿಮಾಡಿಕೊಂಡಿದ್ದ. ಸಂಘಪರಿವಾರದಲ್ಲಿ ತನಗಿರುವ ಸಂಪರ್ಕ ಬಳಸಿಕೊಂಡು ಮಾಣಿ ಈಗ ಜಿಲ್ಲಾ ಚೆಡ್ಡಿ ಪಡೆಯಲ್ಲಿ ಅಲ್ಲೋಲಕಲ್ಲೋಲ ಎಬ್ಬಿಸುತ್ತಿದ್ದಾನೆ. ತನಗೆ ವಿರೋಧ ಮಾಡಿದ ಜಿಲ್ಲಾ ಆರೆಸ್ಸೆಸ್, ಹಿಂಜಾವೇ ಮುಖಂಡರನ್ನು ಸಂಘಟನೆಯ ಹುದ್ದೆಗಳಿಂದ ಕಿತ್ತುಹಾಕಿಸುತ್ತಿದ್ದಾನೆ. ಈಗಾಗಲೇ ಜಿಲ್ಲಾಮಟ್ಟದ ಒಬ್ಬ ಕಾರ್ಯವಾಹಕ ಮತ್ತು ಭಟ್ಕಳದ ಆರೆಸ್ಸೆಸ್ ಲೀಡರ್‍ಗೆ ಸ್ಥಾನ ಚ್ಯುತಿ ಮಾಡಲಾಗಿದೆ. ಎಲ್ಲಾ ತಾಲ್ಲೂಕಿನ ಬಿಜೆಪಿ-ಆರೆಸ್ಸೆಸ್‍ನಲ್ಲಿ ಮಾಣಿ ಮಾರಿಹಬ್ಬ ನಡೆಯಲಿದೆ!

ಇನ್ನೊಂದೆಡೆ ಮಾಣಿ ಬಂಡವಾಳ ಬಯಲು ಮಾಡುವ ಆನ್‍ಲೈನ್ ಕಸರತ್ತು ನಡೆಯಲಾರಂಭಿಸಿದೆ. ಚಕ್ರವರ್ತಿ ಸೂಲಿಬೆಲೆ, ಮಾಣಿ ಅಯೋಗ್ಯತೆಯನ್ನು ವ್ಯವಸ್ಥಿತವಾಗಿ ಜಗಜ್ಜಾಹೀರು ಮಾಡುತ್ತಿದ್ದಾನೆ. ಉತ್ತರ ಕನ್ನಡದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಬೇಡಿಕೆಯ ಸೋಷಿಯಲ್ ಮೀಡಿಯಾ ಅಭಿಯಾನ ತನ್ನ ತೇಜೋವಧೆ ಮಾಡುವ ಹಿಕಮತ್ತೆಂಬ ಭಾವನೆ ಮಾಣಿಯದು. ಆಸ್ಪತ್ರೆ ಆಗದಿರುವುದು ಸಂಸದನ ಅಸಾಮಥ್ರ್ಯ ಬಿಂಬಿಸುತ್ತಿದೆ ಎಂಬಂತೆ ಪ್ರಚಾರ ಮಾಡಲಾಗಿತ್ತು. ಇದರ ಹಿಂದೆ ತನ್ನ ಹಿತಶತೃ ಸೂಲಿಬೆಲೆ ಇದ್ದಾನೆಂಬ ಖಚಿತ ನಂಬಿಕೆ ಮಾಣಿಯದು. ಹಾಗಾಗಿ ಆತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬೇಡಿಕೆ ಇಡುವವರನ್ನೇ ತನ್ನ ಟ್ವಿಟರ್ ಖಾತೆಗೆ ಪ್ರವೇಶಿಸದಂತೆ ನಿಷೇಧ ಹೇರಿದ್ದರು. ಅಷ್ಟೇ ಅಲ್ಲ, ಆಸ್ಪತ್ರೆಗಾಗಿ ಮನವಿ ಹಿಡಿದುಕೊಂಡು ಬಂದ ಹುಡುಗರಿಗೆ ರೇಗಿ ಸೋಷಿಯಲ್ ಮೀಡಿಯಾದವರಿಂದಲೇ ಆಸ್ಪತ್ರೆ ಮಾಡಿಸಿಕೊಳ್ಳಿ ಎಂದಬ್ಬರಿಸಿದ್ದ.

ಈ ಜಗಳ ಸೂಲಿಬೆಲೆ ಮತ್ತು ಅನಂತ್ಮಾಣಿ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ವಾಚಾಮಗೋಚರವಾಗಿ ಬೈದಾಡಿಕೊಳ್ಳುವ ಮಟ್ಟಕ್ಕೆ ಹೋಗಿದೆ. ಇವರ ಕಾಲೆಳೆದಾಟ ಫೇಸ್ಬುಕ್, ವಾಟ್ಸಾಪ್‍ನಲ್ಲಿ ಕದನ ಕುತೂಹಲ ಕೆರಳಿಸಿದೆ. ಗೆದ್ದವರ ಈ ಗದ್ದಲ ವಿರೋಧ ಪಕ್ಷಗಳಿಗೆ ಮಜಾ ನೀಡುತ್ತಿದ್ದರೆ, ಬಿಜೆಪಿಯಲ್ಲಿ ಮುಜುಗರ ಮೂಡಿಸಿದೆ.

ಇದೆಲ್ಲದರಿಂದ ಒಂದು ಹಂತದಲ್ಲಿ ತಬ್ಬಿಬ್ಬಾದ ಸೂಲಿಬೆಲೆ ಜಗಳ ಸಾಕು, ಕೆಲಸ ಮಾಡೋಣ ಎಂಬ ಟ್ವೀಟ್ ಮಾಡಿದರೂ ಆರೋಪ-ಪ್ರತ್ಯಾರೋಪದ ಬಯಲಾಟ ಮಾತ್ರ ನಿಂತಿಲ್ಲ. ಮೋದಿ ಮತ ಭಿಕ್ಷೆಯಿಂದ ಗೆದ್ದ ಸಂಸದರು ಧಿಮಾಕು ತೋರಿಸದೆ ಕೆಲಸ ಮಾಡಬೇಕು ಎಂದು ಸೂಲಿಬೆಲೆ ಟ್ವಿಟಿಸಿದ್ದೇ ಬಿಜೆಪಿಯಲ್ಲಿ ಕಂಪನ ಸೃಷ್ಠಿಯಾಗಲು ಮೂಲಕಾರಣ. ಸದಾನಂದ ಗೌಡ, ಶೋಭಾ ಕರಂದ್ಲಾಜೆಯಂಥ ದೊಡ್ಡವರೆ ಸೂಲಿಬೆಲೆ ಮಾತಿಂದ ಕೆರಳಿ ಕೆಂಡವಾದರು. ನಮಗೆ ಬುದ್ಧಿ ಹೇಳಲು ಚಕ್ರವರ್ತಿ ಯಾರು? ಎಂದು ಎಗರಾಡಿದರು.

ತನಗೆ ಟಿಕೆಟ್ ತಪ್ಪಲು ಕಾರಣವಾದ ನಾಯಕರನ್ನು ನಿರ್ದಿಷ್ಟವಾಗಿ ಗುರಿಮಾಡಿಕೊಂಡೇ ಸೂಲಿಬೆಲೆ ಸಂಸದರ ಬಣ್ಣ ಬಯಲಾಗಿಸುತ್ತಿದ್ದಾನೆ. ಇದು ಬಿಜೆಪಿಯ ಅಧಿಕಾರಸ್ಥರ ಚೇಲಾಗಳನ್ನು ಕೆರಳಿಸಿದೆ. ಜನಪ್ರತಿನಿಧಿಗಳು ಕೆಲಸ ಮಾಡಲಿ ಎಂದು ಹೇಳೋದು ತಪ್ಪೇನಲ್ಲ. ಆದರೆ ಹಾಗೆ ಹೇಳಿದ್ದು ಸೂಲಿಬೆಲೆಯಾದ್ದರಿಂದ ಬಿಜೆಪಿಯಲ್ಲಿ ಬೆಂಕಿಹೊತ್ತಿಕೊಂಡಿತು. ತನ್ನಿಂದಾಗಿಯೇ ಕರ್ನಾಟಕದಲ್ಲಿ ಬಿಜೆಪಿಯ 25 ಸಂಸದರು ಗೆದ್ದಿದ್ದಾರೆಂದು ಸೂಲಿಬೆಲೆ ಹೇಳಿದ್ದಾನೆಂದು ಕಿಡಿ ಹೊತ್ತಿಸಲಾಯಿತು. ಸೂಲಿಬೆಲೆ ಹಾಗೆ ಹೇಳಿಯೇ ಇಲ್ಲವೆಂದು ಆತನ ಬೆಂಬಲಿಗ ನೆಟ್ಟಿಗರ ವಾದ. ಅಸಲಿಗೆ ಆತ ಹಾಗೆ ಹೇಳಿಯೂ ಇರಲಿಲ್ಲ, ಅಂಥ ಸಂದೇಶವೂ ಲಭ್ಯವಿಲ್ಲ. ಆರು ಸಲ ಸಂಸದರಾದವರಿಗೆ, ಎಂಟು ಸಲ ಮಂತ್ರಿಯಾದವರಿಗೆ ಜನಸಾಮಾನ್ಯರ ಅಳಲಿಗೆ ಸ್ಪಂದಿಸಲಾಗದಾ? ಎಂದಾತ ಟ್ವಿಟಿಸಿದ್ದನಷ್ಟೇ. ಇದು ಮಾಣಿಗೆ ಚೆಡ್ಡಿಯೊಳಗೆ ಇರುವೆ ಕಡಿದಂತೆ ಚಡಪಡಿಕೆ ತಂದಿದೆ.

ಇದರ ಬೆನ್ನಿಗೇ ಕೊಡಗಿನಲ್ಲೂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಾಗಿ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಶುರುವಾಗಿತ್ತು. ಅದಕ್ಕೆ ಅಲ್ಲಿಯ ಸಂಸದ ತಕ್ಷಣ ಸ್ಪಂದಿಸಿದ್ದಾರೆ. ಉ.ಕನ್ನಡದ ಎಂಪಿ ಒಣ ರುಬಾಬು ಮಾಡುತ್ತ ತಲೆ ತಪ್ಪಿಸಿಕೊಳ್ಳುತ್ತಿದ್ದ. ಈ ಹೊತ್ತಲ್ಲಿ ಸೂಲಿಬೆಲೆ ಮಾಡಿದ ಟ್ವೀಟ್ ಮಾಣಿ ಬೆಂಬಲಿಗರಲ್ಲಿ ಆಕ್ರೋಶ ಮೂಡಿಸಿದೆ. ಈಗ ಟ್ರೋಲ್‍ಗಳು ಬರಪೂರ ನಡೆಯುತ್ತಿದೆ. ಬಿಜೆಪಿಯೊಳಗಿನ ಬಡಿದಾಟ ದಿನಕ್ಕೊಂದು ಆಯಾಮ ಪಡೆಯುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...