Homeಕರ್ನಾಟಕಅನರ್ಹ ಶಾಸಕರ ರಾಜಕೀಯ ಭವಿಷ್ಯ ಮುಂದೇನು?

ಅನರ್ಹ ಶಾಸಕರ ರಾಜಕೀಯ ಭವಿಷ್ಯ ಮುಂದೇನು?

- Advertisement -
- Advertisement -

| ಅಶೋಕ್ |

ಬಿಜೆಪಿ ತವರೂರು ಗುಜರಾತ್‍ನಲ್ಲೇ 6 ಕ್ಷೇತ್ರಗಳ ಪೈಕಿ 3 ಕ್ಷೇತ್ರಗಳನ್ನು ಕಳೆದುಕೊಂಡಿದೆ. ಇನ್ನು ಈ ಚುನಾವಣೆಯಲ್ಲಿ ಬೇರೆ ಪಕ್ಷಗಳಿಂದ ಬಿಜೆಪಿಗೆ ಪಕ್ಷಾಂತರ ಮಾಡಿದ್ದ ಗುಜರಾತ್‍ನ ಹಿಂದುಳಿದ ವರ್ಗಗಳ ನಾಯಕ ಅಲ್ಪೇಶ್ ಠಾಕೂರ್, ಮಹಾರಾಷ್ಟ್ರದ ರಾಜ ವಂಶಸ್ಥ ಉದಯನ್ರಾಜೆ ಬೋಸಲೆ ಹಾಗೂ ಹರಿಯಾಣದ ಸೊನಾಲಿ ಪೋಗಟ್ ಸೋಲು ಕಂಡಿರುವುದು ಪಕ್ಷಾಂತರಿಗಳಲ್ಲಿ ಭಯಕ್ಕೆ ಕಾರಣವಾಗಿದೆ.

ನಾವು ಆಮಿಷಗಳಿಗೆ ಒಳಗಾಗಿಲ್ಲ ಎಂದು ಹೇಳುತ್ತಲೇ 17 ಶಾಸಕರು ಸಾಮೂಹಿಕ ರಾಜೀನಾಮೆ ಕೊಟ್ಟು ಮಹಾರಾಷ್ಟ್ರ ಸರ್ಕಾರದ ಪ್ರಾಯೋಜಕತ್ವದಲ್ಲಿ ಅಲ್ಲಿನ ಐಶಾರಾಮಿ ಹೋಟೆಲ್‍ನಲ್ಲಿ ಉಳಿದುಕೊಂಡದ್ದು ಮತ್ತು ಈ ಎಲ್ಲಾ ಶಾಸಕರನ್ನು ಮುಲಾಜಿಲ್ಲದೆ ಸ್ಪೀಕರ್ ಅನರ್ಹಗೊಳಿಸಿದ್ದು ಈಗ ಹಳೆಯ ವಿಷಯ.

ಮೈತ್ರಿ ಸರ್ಕಾರದ ವಿರುದ್ಧ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ನೇರವಾಗಿ ಬಿಜೆಪಿ ಸರ್ಕಾರದ ರಚನೆಗೆ ಕಾರಣವಾಗಿದ್ದ ಅನರ್ಹ ಶಾಸಕರಿಗೆ ಆ ಎಲ್ಲಾ ಕ್ಷೇತ್ರದಲ್ಲೂ ಶತಾಯಗತಾಯ ಟಿಕೆಟ್ ನೀಡುವುದಾಗಿ ಬಿಜೆಪಿ ನಾಯಕರು ಮಾತು ಕೊಟ್ಟಿದ್ದಾರೆ. ಮೊನ್ನೆ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅನರ್ಹರಿಗೆ ಟಿಕೆಟ್ ನೀಡುವ ಕುರಿತು ಸಿಎಂ ಯಡಿಯೂರಪ್ಪ ಮತ್ತು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒಮ್ಮತದ ನಿರ್ಣಯ ತೆಗೆದುಕೊಳ್ಳುವ ಮೂಲಕ ಅನರ್ಹರ ಪರ ಬ್ಯಾಟ್ ಬೀಸಿದ್ದಾರೆ.

ಆದರೆ, ಬಿಜೆಪಿ ಟಿಕೆಟ್ ನೀಡಿದ ಮಾತ್ರಕ್ಕೆ ಅನರ್ಹರ ಗೆಲುವು ನಿಶ್ಚಿತ ಎಂದು ಹೇಳಲು ಸಾಧ್ಯವಿಲ್ಲ. ಹಾಗಾದರೆ ಇದೀಗ ಅನರ್ಹರ ಮುಂದಿರುವ ಸವಾಲುಗಳೇನು? ಮಹಾರಾಷ್ಟ್ರ-ಹರಿಯಾಣ ಚುನಾವಣೆಯು ರಾಜ್ಯದ ಉಪಚುನಾವಣೆ ಮೇಲೆ ಬೀರುವ ಪ್ರಭಾವವೇನು? ಸುಪ್ರೀಂ ತೀರ್ಪು ಕಂಟಕವಾದರೆ ಅನರ್ಹರ ಗತಿ ಏನು? ಅನರ್ಹರು ರಾಜೀನಾಮೆ ನೀಡಿರುವ 17 ಕ್ಷೇತ್ರದಲ್ಲೂ ಬಂಡಾಯ ಅಭ್ಯರ್ಥಿಗಳ ನಡೆ ಏನು? ನಿಜಕ್ಕೂ ರಾಜ್ಯದ ಉಪಚುನಾವಣೆಯಲ್ಲಿ ಅನರ್ಹ ಶಾಸಕರು ಗೆಲ್ಲುವ ವಾತಾವರಣ ಇದೆಯೇ? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್.

ಅನರ್ಹರಿಗೆ ಮುಹೂರ್ತವಿಟ್ಟ ಸುಪ್ರೀಂ; ಏನಾಗಲಿದೆ ತೀರ್ಪು?

ಮೈತ್ರಿ ಸರ್ಕಾರದ ವಿರುದ್ಧ ಬಂಡಾಯವೆದ್ದು ಸಾಮೂಹಿಕ ರಾಜೀನಾಮೆ ನೀಡಿದ್ದ 14 ಕಾಂಗ್ರೆಸ್ ಹಾಗೂ 3 ಜೆಡಿಎಸ್ ಶಾಸಕರನ್ನು ಸ್ಪೀಕರ್ ರಮೇಶ್‍ಕುಮಾರ್ ಪಕ್ಷಾಂತರ ನಿಷೇಧ ಕಾಯ್ದೆ ಶೆಡ್ಯೂಲ್ 10ರ ಅನ್ವಯ ಕಳೆದ ಜುಲೈ 28ರಂದು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ಆದೇಶ ನೀಡಿದ್ದರು. ಜೊತೆಗೆ ಈ ವಿಧಾನಸಭೆ ಚಾಲ್ತಿಯಲ್ಲಿರುವವರೆಗೆ ಯಾವುದೇ ಉಪಚುನಾವಣೆಯಲ್ಲಿ ಸ್ಪರ್ಧೆ ನಡೆಸುವಂತಿಲ್ಲ ಎಂಬುದೂ ಆದೇಶದ ಭಾಗವಾಗಿತ್ತು.

ಇದೇ ಕಾರಣಕ್ಕೆ ಸ್ಪೀಕರ್ ತೀರ್ಪನ್ನು ವಿರೋಧಿಸಿ ಅನರ್ಹ ಶಾಸಕರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಕಳೆದ ಎರಡು ವಾರದಿಂದ ವಾದ-ಪ್ರತಿವಾದವನ್ನು ಆಲಿಸಿರುವ ಸುಪ್ರೀಂಕೋರ್ಟ್ ತೀರ್ಪನ್ನು ನವೆಂಬರ್ 4ಕ್ಕೆ ಕಾಯ್ದಿರಿಸಿದೆ. ಆದರೆ, ತೀರ್ಪು ಅನರ್ಹ ಶಾಸಕರ ಪರವಾಗಿಯೇ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ.

ಏಕೆಂದರೆ ಕಾಂಗ್ರೆಸ್ ಪರ ವಾದ ಮಂಡಿಸಿರುವ ಹಿರಿಯ ನ್ಯಾಯವಾದಿ ಕಪಿಲ್ ಸಿಬಲ್ “ಪಕ್ಷಾಂತರ ಒಂದು ಸಾಮೂಹಿಕ ಪಿಡುಗಾಗಿ ಬದಲಾಗಿದ್ದು, ಇದಕ್ಕೆ ನ್ಯಾಯಾಲಯದ ತೀರ್ಪು ಔಷಧಿಯಾಗಬೇಕು. ಹೀಗೆ ಆಮಿಷಗಳಿಗೆ ಬಲಿಯಾಗಿ ಪಕ್ಷದ್ರೋಹ ಮಾಡುವವರಿಗೆ ತಕ್ಕ ಪಾಠವಾಗಬೇಕು ಎಂದು ನ್ಯಾಯಮೂರ್ತಿಗಳ ಒತ್ತಾಯಿಸಿದ್ದಾರೆ. ಅಲ್ಲದೆ, ಈ ಪ್ರಕರಣವನ್ನು ಸುಪ್ರೀಂಕೋರ್ಟ್‍ನ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಬೇಕು” ಎಂದು ಮನವಿ ಮಾಡಿದ್ದಾರೆ.

ಅಕಸ್ಮಾತ್ ನ್ಯಾಯಾಲಯ ಇವರ ವಾದಕ್ಕೆ ಮನ್ನಣೆ ನೀಡಿ ಈ ಪ್ರಕರಣವನ್ನು ಸಾಂವಿಧಾನಿಕ ಪೀಠಕ್ಕೆ ವರ್ಗಾವಣೆ ಮಾಡಿದರೆ ಅನರ್ಹರು ಉಪಚುನಾವಣೆ ಆಸೆಯನ್ನು ಬಿಡಲೇಬೇಕಾದ ಪರಿಸ್ಥಿತಿ ಎದುರಾಗುತ್ತದೆ. ಒಂದುವೇಳೆ ತೀರ್ಪು ಅನರ್ಹರ ಪರ ಹೊರ ಬಿದ್ದರೂ ಸಹ ಖುಷಿ ಪಡಲು ಕಾರಣವಿಲ್ಲ. ಏಕೆಂದರೆ ಅನರ್ಹರ ಸೋಲಿಗೆ ಉದಾಹರಣೆಯಾಗಿ ಕಣ್ಣ ಮುಂದಿದೆ ತಮಿಳುನಾಡು ರಾಜಕಾರಣ. ಅನರ್ಹರಾದರೂ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಪಡೆದುಕೊಂಡ ಶಾಸಕರು ಚುನಾವಣೆಯಲ್ಲಿ ಸೋಲನುಭವಿಸಿದ್ದರು.

ಕರ್ನಾಟಕದಲ್ಲೂ ಅನರ್ಹ ಶಾಸಕರ ವಿರುದ್ಧ ಇದೇ ರೀತಿಯ ವ್ಯಾಪಕ ಜನಾಭಿಪ್ರಾಯ ಇದೆ. ಅಕಸ್ಮಾತ್ ಇವರು ಚುನಾವಣೆಯಲ್ಲಿ ಸ್ಪರ್ಧೆ ನಡೆಸಿದರೂ ಗೆಲ್ಲಲು ಬೇಕಾದ ಪೂರಕ ವಾತಾವರಣ ಕ್ಷೇತ್ರದಲ್ಲಿ ಇಲ್ಲ. ಅಲ್ಲದೆ, ಸ್ಪೀಕರ್ ರಮೇಶ್‍ಕುಮಾರ್ ಸಾಮೂಹಿಕ ರಾಜೀನಾಮೆ ಪ್ರಕರಣವನ್ನು ಸಂಪೂರ್ಣ ವಿಚಾರಣೆ ನಡೆಸಿ ಕಾನೂನುತಜ್ಞರ ಅಭಿಪ್ರಾಯ ಪಡೆದೇ ತೀರ್ಪು ನೀಡಿದ್ದಾರೆ. ಹೀಗಾಗಿ ಸುಪ್ರೀಂಕೋರ್ಟ್ ಬಹುತೇಕ ಸ್ಪೀಕರ್ ತೀರ್ಪನ್ನು ಎತ್ತಿಹಿಡಿಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಒಂದುವೇಳೆ ಇದು ಸಾಧ್ಯವಾದರೆ ಅನರ್ಹ ಶಾಸಕರ ರಾಜಕೀಯ ಭವಿಷ್ಯ ಬಹುತೇಕ
ಅಂತ್ಯವಾದಂತೆಯೇ ಸರಿ.

ಬಿಜೆಪಿಗೆ ಪೂರಕವಲ್ಲದ ಮಹಾರಾಷ್ಟ್ರ-ಹರಿಯಾಣ ಚುನಾವಣೆ ಫಲಿತಾಂಶ

ಪ್ರಸ್ತುತ ದೇಶದೆಲ್ಲೆಡೆ ಪ್ರಧಾನಿ ಮೋದಿ ಅಲೆ ಇದೆ ಎಂಬ ಸಂದೇಶವನ್ನು ನೀಡಲಾಯಿತಾದರೂ, ರಾಜ್ಯ ವಿಧಾನಸಭಾ ಚುನಾವಣೆಗಳಲ್ಲಿ ತೀರ್ಪು ಬಿಜೆಪಿಗೆ ಪೂರಕವಾಗಿಯೇನೂ ಬಂದಿರಲಿಲ್ಲ. ಅದರಲ್ಲೂ ಉಪಚುನಾವಣೆಗಳಲ್ಲಿ ಬಿಜೆಪಿಯ ಯಶಸ್ಸಿನ ದರ ಕಡಿಮೆಯೇ. ಹರಿಯಾಣ ಮತ್ತು ಮಹಾರಾಷ್ಟ್ರ ಚುನಾವಣೆ ಫಲಿತಾಂಶವೂ ಇದನ್ನೇ ತೋರಿಸಿದೆ.
ಬಿಜೆಪಿ ಈ ಬಾರಿ ಮಹಾರಾಷ್ಟ್ರದಲ್ಲಿ ಏಕಾಂಗಿಯಾಗಿ 140 ಕ್ಷೇತ್ರದಲ್ಲಿ ಗೆಲ್ಲುವ ನಿರೀಕ್ಷೆ ಹೊಂದಿದ್ದರೆ, ಹರಿಯಾಣದಲ್ಲಿ ಮತ್ತೊಂದು ಅವಧಿಗೆ ಬಹುಮತ ಸರ್ಕಾರ ರಚನೆ ಮಾಡುವ ಮಹತ್ವಾಕಾಂಕ್ಷೆಯಲ್ಲಿತ್ತು. ಆದರೆ, ಮಹಾರಾಷ್ಟ್ರದಲ್ಲಿ ಬಿಜೆಪಿ ಕೇವಲ 104 ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದರೆ, ಹರಿಯಾಣದಲ್ಲಿ ಬಹುಮತ ಗಳಿಸಲು ಎಡವಿ ಮುಖಭಂಗ ಅನುಭವಿಸಿತ್ತು.

ಅಲ್ಲದೆ, ಮಹಾರಾಷ್ಟ್ರ-ಹರಿಯಾಣ ವಿಧಾನಸಭೆ ಚುನಾವಣೆ ಜೊತೆಗೆ 17 ರಾಜ್ಯದ 51 ವಿಧಾನಸಭೆ ಹಾಗೂ 2 ಲೋಕಸಭೆಗೂ ಉಪಚುನಾವಣೆ ನಡೆದಿತ್ತು. ಈ ಚುನಾವಣೆಯಲ್ಲೂ ಬಿಜೆಪಿ ಶೇ.70 ಕ್ಷೇತ್ರಗಳನ್ನು ಕಳೆದುಕೊಂಡಿದೆ. ಬಿಜೆಪಿ ತವರೂರು ಗುಜರಾತ್‍ನಲ್ಲೇ 6 ಕ್ಷೇತ್ರಗಳ ಪೈಕಿ 3 ಕ್ಷೇತ್ರಗಳನ್ನು ಕಳೆದುಕೊಂಡಿದೆ. ಇನ್ನು ಈ ಚುನಾವಣೆಯಲ್ಲಿ ಬೇರೆ ಪಕ್ಷಗಳಿಂದ ಬಿಜೆಪಿಗೆ ಪಕ್ಷಾಂತರ ಮಾಡಿದ್ದ ಗುಜರಾತ್‍ನ ಹಿಂದುಳಿದ ವರ್ಗಗಳ ನಾಯಕ ಅಲ್ಪೇಶ್ ಠಾಕೂರ್, ಮಹಾರಾಷ್ಟ್ರದ ರಾಜ ವಂಶಸ್ಥ ಉದಯನ್ರಾಜೆ ಬೋಸಲೆ ಹಾಗೂ ಹರಿಯಾಣದ ಸೊನಾಲಿ ಪೋಗಟ್ ಸೋಲು ಕಂಡಿರುವುದು ಪಕ್ಷಾಂತರಿಗಳಲ್ಲಿ ಭಯಕ್ಕೆ ಕಾರಣವಾಗಿದೆ.

ಅಸಲಿಗೆ ಆರ್ಥಿಕ ಹಿಂಜರಿತ, ರೂಪಾಯಿ ಮೌಲ್ಯದ ಕುಸಿತ, ಬ್ಯಾಂಕ್‍ಗಳು ದಿವಾಳಿಯಾಗಿರುವುದು, ಪೆಟ್ರೋಲ್ ಸೇರಿದಂತೆ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಸೇರಿದಂತೆ ಅನೇಕ ವಿಚಾರಗಳು ಸಾಮಾನ್ಯವಾಗಿ ಬಿಜೆಪಿ ವಿರೋಧಿ ಅಲೆಗೆ ಕಾರಣವಾಗಿದೆ. ಹೀಗಾಗಿ ಈ ಚುನಾವಣೆಯ ಫಲಿತಾಂಶ ರಾಜ್ಯದ ಉಪಚುನಾವಣೆಯ ಮೇಲೂ ಪ್ರಭಾವ ಬೀರಲಿದೆ. ಅಲ್ಲದೆ, ರಾಜ್ಯದ ಅನರ್ಹ ಶಾಸಕರ ವಿರುದ್ಧ 17 ಕ್ಷೇತ್ರದಲ್ಲೂ ಜನಾಭಿಪ್ರಾಯವು ಪಕ್ಷಾಂತರಿಗಳ ಪರ ಇರುತ್ತದೆಂದು ಭಾವಿಸಲಾಗದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...