Homeಅಂಕಣಗಳುಅಭಯೋತ್ಪಾದಕ ಮಸೂತಿ, ದರ್ಗಾ ಮತ್ತು ಮೌಲ್ವಿಗಳು

ಅಭಯೋತ್ಪಾದಕ ಮಸೂತಿ, ದರ್ಗಾ ಮತ್ತು ಮೌಲ್ವಿಗಳು

ಎಲ್ಲಾ ಸಂಗತಿಗಳು ಭಯೋತ್ಪಾದನೆಗೆ ಸಂಬಂಧಿಸಿವೆ ಎಂದು ಕತೆಕಟ್ಟಿ ಜನರಲ್ಲಿ ಭಯವನ್ನು ಉತ್ಪಾದಿಸುವ ಮೂಲಭೂತವಾದಿಗಳೂ ಇದ್ದಾರೆ

- Advertisement -
- Advertisement -

| ಅರುಣ್ ಜೋಳದಕೂಡ್ಲಿಗಿ |

ಈಚೆಗೆ ಕೊಟ್ಟೂರಿನಲ್ಲಿ ನನ್ನ ಹೈಸ್ಕೂಲ್ ಮಿತ್ರನೊಬ್ಬ ಮಾತನಾಡುತ್ತಾ `ಗೆಳೆಯಾ ನಿನಗೆ ಗೊತ್ತಿಲ್ಲ ಈ ಮಸೂತಿ, ದರ್ಗಾ, ಮೌಲ್ವಿಗಳೆಲ್ಲಾ ಭಯೋತ್ಪಾದಕ ಚಟುವಟಿಕೆಯಲ್ಲಿ ತೊಡಗಿದ್ದಾರೆ’ ಎಂದ. ನಾನು ಅದು ಹೇಗೆ ಹೇಳ್ತೀಯ, ಬಾ ಕೊಟ್ಟೂರಲ್ಲಿರುವ ಎಲ್ಲಾ ಮಸೂತಿಗಳನ್ನು ಒಮ್ಮೆ ಸುತ್ತಾಕಿಕೊಂಡು ಬರೋಣ, ನಿನ್ನ ಮಾತಿಗೆ ಸಾಕ್ಷಿ ತೋರಿಸು ಅಂದೆ. ಆತ ತಡವರಿಸುತ್ತ `ಹಂಗಲ್ಲ ಕೆಲವು ಮಸೀತಿಗಳು ಹಂಗೆ ಇದಾವೆ ಅಂದ’ ಆಗ ನಾನು ಮತ್ತೆ `ಸರಿ ನೀನು ಹೇಳೋವಂತ ಮಸೀತಿಗಳನ್ನಾದರೂ ತೋರಿಸು’ ಅಂದೆ. ಕೊನೆಗೆ ಆತ ಮತ್ತಷ್ಟು ಗಲಿಬಿಲಿಗೊಂಡು `ನನಗೆ ಪಕ್ಕ ಗೊತ್ತಿಲ್ಲ, ಆದ್ರ ನಾನು ಹೇಳೋ ಮಾತಂತು ಸತ್ಯ’ ಅಂದ. ನಾನು `ಅರೆ ನಿನ್ನ ಮಾತಿಗೆ ಒಂದಾದ್ರೂ ಸಾಕ್ಷಿ ತೋರಿಸೋಕೆ ರೆಡಿ ಇಲ್ಲ, ಆದ್ರೆ `ನಾನೇಳೋ ಮಾತು ಮಾತ್ರ ಸತ್ಯ’ ಅಂದ್ರೆ ಹೇಗೆ ಅಂದೆ. ಗೆಳೆಯ ಸ್ವಲ್ಪ ವಿಚಲಿತನಾದಂತೆ `ಇಲ್ಲ ಇಲ್ಲ ನಮ್ಮ ಭಾಗದ ಮುಸ್ಲಿಮರು ಒಳ್ಳೇರಿದಾರ, ಆದರೆ ಬೇರೆ ಕಡೆ ಮುಸ್ಲೀಮರು ಹಾಗಲ್ಲ’ ಎಂದ. ನಾನು ಮತ್ತೆ `ಅಲ್ಲಪ್ಪ ಬೇರೆ ಭಾಗದವರು ಇದೇ ಮಾತು ಹೇಳ್ತಾರೆ ಅಂತಿಟ್ಕೋ, ಹಾಗಾದ್ರೆ ಯಾವ ಭಾಗದ ಮುಸ್ಲೀಮರು ಒಳ್ಳೇರಲ್ಲ ಹೇಳು’ ಅಂದೆ. ಆತ ತಡವರಿಸುತ್ತಾ ಮಾತು ಬದಲಿಸಿ ಬೇರೆ ಖಾಸಗಿ ಸಂಗತಿಗಳಿಗೆ ತಿರುಗಿದ.
ನಾನು ಗೆಳೆಯನಿಗೆ ಮತ್ತೆ ಅದೆ ವಿಷಯ ಕೆದಕಿ `ಈಗ ಟೈಮಿದ್ರೆ ನೀನು ನನ್ನ ಜತೆ ಬಾ, ಇದೇ ಕೊಟ್ಟೂರ ಮಸೀದಿಯೊಂದರ ಹತ್ತಿರ ಕೂರೋಣ. ಹೆದರಿದ ಮಕ್ಕಳಿಗೆ ತಾಯತ ಕಟ್ಟಿಸಲಿಕ್ಕೋ, ಸಕ್ಕರೆ ಓದಿಸಲಿಕ್ಕೋ ಒಬ್ರು ಇಬ್ರಾದ್ರೂ ಬಂದೇ ಬರ್ತಾರೆ. ನೀನು ಹೇಳಿದ ಮಸೀದಿ ದರ್ಗಾಗಳೇ ಜನರಲ್ಲಿ ಹೇಗೆ ಭಯವನ್ನು ನಿವಾರಿಸುವ ನಂಬಿಕೆ ಹುಟ್ಟಿಸುತ್ತವೆಯೆಂದು ನೋಡೋಣ. ಇದನ್ನು ಇನ್ನಷ್ಟು ಖಚಿತಪಡಿಸಿಕೊಳ್ಳಲು ಮಸೂತಿಗೆ ಬಂದ ಜನರ ಬಳಿ ಮಾತಾಡೋಣ. ನೀನು ನನ್ನ ಜತೆ ಬರುವುದಾದರೆ ನನ್ನ ಮಾತಿಗೆ ಇಂತಹ ಸಾವಿರಾರು ದರ್ಗಾ ಮಸೂತಿಗಳನ್ನು ಸಾಕ್ಷಿಯಾಗಿ ತೋರಿಸಲು ಸಿದ್ಧನಿದ್ದೇನೆ’ ಎಂದೆ. ಗೆಳೆಯ `ಹೌದು ನೀನು ಹೇಳೋದ್ರಲ್ಲಿ ನಿಜವಿದೆ. ನನ್ನ ಮಗಳಿಗೂ ನಮ್ಮವ್ವ ನಮ್ಮೂರ ಮುಜಾವರನ ಬಳಿ ತಾಯಿತ ಕಟ್ಟಿಸಿದ್ಲು’ ಎಂದು ದಿಢೀರ್ ನನ್ನ ದಾರಿಗೆ ಬಂದು ನಿಂತ. ಗೆಳೆಯನ ಈ ಗೊಂದಲದ ಸ್ಥಿತಿ ನೋಡಿ ಏನು ಹೇಳುವುದೋ ತಿಳಿಯದಾಯಿತು. ಆದರೆ ಹಲವರು ಇಂತಹ ಗೊಂದಲದಲ್ಲಿದ್ದಾರೆ ಎನ್ನುವುದಕ್ಕೆ ಈತ ಸಂಕೇತದಂತಿದ್ದ.
ಕಳೆದ ವರ್ಷ ನಮ್ಮೂರಲ್ಲಿ ನಡೆದ ಒಂದು ಘಟನೆ. ಆ ರಾತ್ರಿ ನನ್ನ ಮಗ ವಿಪರೀತ ಅಳುವುದಕ್ಕೆ ಶುರು ಮಾಡಿದ, ನಾವು ಮಗನನ್ನು ಸಂತೈಸಲು ಪ್ರಯತ್ನಿಸುತ್ತಿದ್ದೆವು. ನನ್ನವ್ವ ಮೊಮ್ಮಗ ಹೆದರಿಕೊಂಡಂತಿದೆ ಎಂದರಿತು ನಮ್ಮೂರ ಅಲಾವಿ ದೇವರಿಗೆ ಬೆಲ್ಲದ ತೂಕದ ಹರಕೆ ಹೊತ್ತಳು. ಕಾಕತಾಳೀಯವೆಂಬಂತೆ ಮಗನ ಅಳು ನಿಂತಿತು. ಅವ್ವನ ಮುಖದಲ್ಲಿ ಸಂತಸ ಮೂಡಿ `ನೋಡು ದೇವ್ರಿಲ್ಲ ದೇವ್ರಿಲ್ಲ ಅಂತ ನೀನು ಮೊಂಡುವಾದ ಮಾಡ್ತಿ, ಅಲಾವಿ ದೇವ್ರು ಹುಸೇನಪ್ಪ ಹ್ಯಂಗ ಮಗೂನ ಹೆದ್ರಿಕಿನ ಹೋಗಿಸ್ತು’ ಎಂದು ನನ್ನನ್ನು ದುರುಗುಟ್ಟಿ ನೋಡಿದಳು. ನಾನೀಗ ಏನಾದರೂ ಮಾತನಾಡಿದರೆ, ಮನಸ್ಸಿಗೆ ನೋವಾಗುವುದೆಂದು ಭಾವಿಸಿ ಮೌನ ವಹಿಸಿದೆ. ಮಗ ಅಳುವುದನ್ನು ನಿಲ್ಲಿಸಿ ನಿದ್ದೆಗೆ ಜಾರಿದ್ದಕ್ಕೆ ನಿರಾಳವಾದೆವು. ಇದರ ತಾರ್ಕಿಕತೆಯ ಬಗ್ಗೆ ವಿಚಾರ ಮಾಡದೆ ನನ್ನವ್ವನ ನಂಬಿಕೆಯಲ್ಲಿ ಮಸೂತಿ, ಅಲಾವಿ ದೇವ್ರು ಭಯನಿವಾರಕ ಶಕ್ತಿಗಳಾಗಿ ಉಳಿದದ್ದು ನನ್ನ ಮನದಲ್ಲಿ ಉಳಿಯಿತು.
ಮೇಲಿನ ಎರಡೂ ಸಂಗತಿಗಳೂ ಒಂದಕ್ಕೊಂದು ವಿರುದ್ಧವಾಗಿವೆ. ಒಂದೆಡೆ ಭಾರತದಾದ್ಯಂತ ಗ್ರಾಮೀಣ ಭಾಗದಲ್ಲಿ ಮಸೂತಿ, ದರ್ಗಾ, ಮೌಲ್ವಿ ಎಂದರೆ ಭಯನಿವಾರಕ ಸ್ಥಳಗಳೆಂದು ಭಾವಿಸಿದ ದೊಡ್ಡ ಜನವರ್ಗವಿದೆ. ಮತ್ತೊಂದೆಡೆ ಭಯವನ್ನು ಉತ್ಪಾದಿಸುವ ನೆರೆಯ ಮುಸ್ಲಿಂ ದೇಶಗಳನ್ನು ಆಧರಿಸಿ ಇಡಿಯಾಗಿ ಮುಸ್ಲಿಮರ ಎಲ್ಲಾ ಸಂಗತಿಗಳು ಭಯೋತ್ಪಾದನೆಗೆ ಸಂಬಂಧಿಸಿವೆ ಎಂದು ಕತೆಕಟ್ಟಿ ಜನರಲ್ಲಿ ಭಯವನ್ನು ಉತ್ಪಾದಿಸುವ ಮೂಲಭೂತವಾದಿಗಳೂ ಇದ್ದಾರೆ. ಈ ಎರಡೂ ನೆಲೆಗಳ ಆಚೆ ವಾಸ್ತವ ಸಂಕೀರ್ಣವಾಗಿದೆ. ಬಹುಸಂಖ್ಯಾತ ಧರ್ಮಿಯರು ಅಹಮ್ಮಿನಿಂದ ಹುಟ್ಟಿಸುವ ಭಯದ ಕಾರಣಕ್ಕೆ ಮುಸ್ಲೀಮರಲ್ಲಿ ಅನಿವಾರ್ಯ ಆತಂಕದಿಂದ ಸ್ವರಕ್ಷಣೆಯ ಸಂಘಟಿತ ಚಟುವಟಿಕೆಗಳು ಕೆಲವೆಡೆ ನಡೆದಿರಬಹುದು. ಅದನ್ನು ಅಲ್ಲಗಳೆಯಲಾಗದು. ಆದರೆ ಬಹುಪಾಲು ಮಸೂತಿ, ದರ್ಗಾ, ಮೌಲ್ವಿಗಳು ಅಭಯೋತ್ಪಾದಕ ಅಥವಾ ಭಯಮುಕ್ತಗೊಳಿಸುವ ಚಟುವಟಿಕೆಗಳಲ್ಲಿ ಸಕ್ರಿಯವಾಗಿವೆ ಎನ್ನುವುದು ವಾಸ್ತವ. ಹೀಗೆ ಭಯಮುಕ್ತ ಕೇಂದ್ರಗಳಾಗಿರುವ ಮಸೂತಿ ಮತ್ತು ದರ್ಗಾಗಳು ಬಹುಪಾಲು ಸೂಫಿ ಸಂತರವು ಎನ್ನುವುದನ್ನೂ ಗಮನಿಸಬೇಕಿದೆ. ಹಾಗಾಗಿಯೇ ಸೂಫಿ ಸಂತರ ಬಗ್ಗೆ `ರೋಗನಿವಾರಕ’ ಪವಾಡ ಕತೆಗಳು ಹೆಚ್ಚಿವೆ.
ಕರ್ನಾಟಕದಾದ್ಯಂತ ಇರುವ ಮೊಹರಂ ಮಸೀತಿಗಳು ಮತ್ತು ಸೂಫಿ ಸಂತರ ದರ್ಗಾಗಳು ಈಗಲೂ ಭಯ ನಿವಾರಕ ಕೇಂದ್ರಗಳಂತೆ ಕೆಲಸ ಮಾಡುತ್ತವೆ. ಬೆಂಗಳೂರಿನ ತವಕ್ಕಲ್ ಮಸ್ತಾನ್ ಸಾಹೇಬನು ಎಳೆಮಕ್ಕಳನ್ನು ರಕ್ಷಿಸುವ ದೈವವಾಗಿದೆ. ನವಲಗುಂದದ ಯಮನೂರಪ್ಪನ ಉರುಸನ್ನು ಜನರು `ಜಡ್ಡಿನ ಜಾತ್ರೆ’ ಎಂದು ಕರೆಯುವ ವಾಡಿಕೆಯಿದೆ. ಕಾಯಿಲೆಗೆ ಬಿದ್ದ ಗಂಡನನ್ನು ಉಳಿಸಿಕೊಂಡು ಭಯ ನಿವಾರಿಸಿಕೊಳ್ಳಲು ಸವಣೂರಿನ ಬ್ರಹ್ಮಚಾರಿ ಸಂತ ಕಮಲ್ ಭಾಷಾನ ದರ್ಗಾದಲ್ಲಿ ಮಹಿಳೆಯರ ರಾಶಿಗಟ್ಟಲೆ ಹರಕೆಯ ಬಳೆಗಳಿವೆ. ದನಗಳಿಗೆ ರೋಗ ಬಂದಾಗ, ಅವು ಕಳೆದು ಹೋದಾಗ ಉಳಿಸುವ ಮತ್ತು ಹುಡುಕಿಕೊಡುವ ಕೆಲಸವನ್ನು ಬೈದೊಡ್ಡಿಯ ಹುಜೂರಸಾಬ, ಕುಸುನೂರಿನ ಗೋಕುರಸಾಬ, ಅಂಬತ್ತಿಯ ಶೇಕಮಾರ ಮುಂತಾದವರಿಗೆ ವಹಿಸಿ ಭಯಮುಕ್ತರಾಗುವುದಿದೆ. ಮೈನರೆದ ಹುಡುಗಿ ನೀರುಹಾಕಿಕೊಂಡ ಮೇಲೆ, ಮದುಮಕ್ಕಳು ಪ್ರಸ್ತಕ್ಕೆ ಮೊದಲು ‘ಓದಿಕೆ’ ಮಾಡಿಸುವುದು, ಮಕ್ಕಳಿಲ್ಲದವರು ಹರಸಿಕೊಳ್ಳುವುದು, ಸರಾಗವಾಗಿ ಹೆರಿಗೆಯಾಗಲೆಂದು ಗಬಿರ್sಣಿಯ ಕೈಗೆ ಗೋರಿ ಮೇಲಿನ ಬಟ್ಟೆತುಂಡು ಕಟ್ಟುವುದು, ಹುಟ್ಟಿದ ಕೂಸನ್ನು ಅಥವಾ ಕರುವನ್ನು ತಂದು ದರ್ಗಾಕ್ಕೆ ‘ಸಣ’ ಮಾಡಿಸುವುದು, ಫಸಲಿನ ಮೊದಲ ಕಟಾವನ್ನು ತಂದೊಪ್ಪಿಸುವುದು-ಇವೇ ಮುಂತಾದ ಫಲವಂತಿಕೆಗೆ ಸಂಬಂದಿsಸಿದ ಆಚರಣೆಗಳು ದರ್ಗಾ ಸಂಸ್ಕøತಿಯ ಭಾಗವಾಗಿ ಬೆಳೆದುಬಿಟ್ಟಿವೆ. ರಹಮತ್ ತರೀಕೆರೆಯವರು `ಕರ್ನಾಟಕದ ಸೂಫಿಗಳು’ ಕೃತಿಯಲ್ಲಿ ಇಂತಹ ದರ್ಗಾ ಮಸೂತಿಗಳ ಬಗೆಗೆ ವಿಶ್ಲೇಷಿಸಿದ್ದಾರೆ.
ಜನರು ದೆವ್ವ ಬಂದಿದೆ ಎಂದು ನಂಬುವ `ಗಾಳಿ’ ಬಿಡಿಸುವ ದರ್ಗಾಗಳಾದ ಲಕ್ಷ್ಮೇಶ್ವರದ ದೂದಪೀರಾ, ಕರೋಶಿಯ ಶಾನೂರುಬಾಬಾ, ಬಿಜಾಪುರದ ಅಬ್ದುಲ್ ರಜಾಕ್ ಖಾದ್ರಿ, ಮುರುಗಾಮಲೈನ ಅಮ್ಮಾಜಾನ್ ಬಾವಾಜಾನ್ ಹಾಗೂ ಎಳ್ಳಾರತಿಯ ಶೇಕ್ ಶಾವಲಿ ಮುಂತಾದವುಗಳನ್ನು ನೋಡಬಹುದು. ಇವೂ ಕೂಡ ದೆವ್ವವೆಂಬ ಭಯವನ್ನು ಸಮುದಾಯದ ಮನಸ್ಸಿನಿಂದ ಹೋಗಲಾಡಿಸಿ ಭಯಮುಕ್ತಗೊಳಿಸುವ ಕೆಲಸವೇ ಆಗಿದೆ. ಹೀಗೆ ಮೂಢನಂಬಿಕೆಯ ಕಾರಣಕ್ಕೋ, ಅರಿವಿನ ಕೊರತೆಯ ಕಾರಣಕ್ಕೋ, ಅಸಹಾಯಕತೆಯ ಕಾರಣಕ್ಕೋ ಜನರನ್ನು ಆವರಿಸಿರುವ ಹಲವು ಬಗೆಯ `ಭಯ’ಗಳನ್ನು ಹೋಗಲಾಡಿಸಿ `ಅಭಯೋತ್ಪಾದಕ’ ಕೇಂದ್ರಗಳಾದ ಮಸೂತಿ, ದರ್ಗಾ, ಮುಜಾವರ ಮುಂತಾದ ಸಂಗತಿಗಳನ್ನು ಭಯೋತ್ಪಾದಕ ಚಟುವಟಿಕೆಗಳ ಜತೆ ಹೆಣೆಯುವು ಎಷ್ಟು ಅಮಾನವೀಯ ಎನ್ನುವುದನ್ನು ಅರಿಯಬೇಕಿದೆ. ಜನಸಾಮಾನ್ಯರಿಗೆ ಅವರದೇ ಆದ `ಜನತೆಯ ಧರ್ಮವಿದೆ’ ಆ ಜನತೆಯ ಧರ್ಮದಲ್ಲಿ ಹಿಂದು ಮುಸ್ಲಿಂ ಜೈನ ಬೌದ್ಧ ಮತಗಳೆಲ್ಲಾ ಬೆರೆತು ಹೊಸ ಆಕಾರವನ್ನು ಪಡೆಯುತ್ತವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಜ ಅರುಣ್… ಜನತೆಯ ಧರ್ಮವೇ ಬೇರೆ.. ಅದಕ್ಕೆ ಮುಕ್ತ ಪ್ರಜ್ಞೆ ಇದೆ… ಹೀಗಾಗಿ ದೂರದಲ್ಲಿ ನಿಂತು ಕನ್ನಡಕಗಳನ್ನು ಹಾಕಿ ನೋಡುವವರ ಗರ ಬಿಡಿಸಲಾಗದು…. ಹತ್ತಿರ ಹೋಗಿ ಸಣ ಮಾಡಿದರೆ ಸಾಕು… ಈಗಲೂ ಎಷ್ಟೋ ಮಠಗಳು ಅಂತ್ರ ತಾಯಿತ ಕಟ್ಟುತ್ತಿವೆ… ಬೂದಿ ಹಚ್ಚಿ ದೆವ್ವ ಬಿಡಿಸುತ್ತಿವೆ….

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...