Homeಸಿನಿಮಾಅಮ್ಮನ ಪ್ರೀತಿಯಲ್ಲಿ ಬದುಕಿನ ಬಿಚ್ಚುನೋಟ....

ಅಮ್ಮನ ಪ್ರೀತಿಯಲ್ಲಿ ಬದುಕಿನ ಬಿಚ್ಚುನೋಟ….

- Advertisement -
- Advertisement -
ಕನ್ನಡಿಗರು ಭಾವನಾ ಜೀವಿಗಳು, ಕರ್ನಾಟಕದಲ್ಲಿ ಭಾವನೆಗಳಿಗೆ ಬೆಲೆ ಜಾಸ್ತಿ ಎಂಬ ಮಾತುಗಳು ಚಿತ್ರರಂಗದಲ್ಲಿ ಬಹಳ ಕಾಲದಿಂದಲೂ ಕೇಳಿಬರುತ್ತಿದೆ. ಅಂತೆಯೇ ಕೆಲವು ಸಿನಿಮಾಗಳಲ್ಲಿ ಕನ್ನಡಿಗರು ಸೆಂಟಿಮೆಂಟಲ್ ಫೂಲ್ಸ್ ಎಂದೂ ಸಹ ನಯವಾಗಿ ಬೈಸಿಕೊಂಡಿರುವುದೂ ಇದೆ. ಕನ್ನಡ ಚಿತ್ರರಂಗವು ಸೆಂಟಿಮೆಂಟ್‍ಗೆ ಹೆಚ್ಚು ಹೊತ್ತು ಕೊಡುತ್ತಾ ಬಂದಿದೆ, ಸಂಬಂಧಗಳ ಭಾವನೆಗಳನ್ನಿಟ್ಟುಕೊಂಡು ಮಾಡಿದ ಸಿನಿಮಾಗಳು ಫೈಲ್ ಆಗಿದ್ದೇ ಇಲ್ಲ.
ಅದರಲ್ಲೂ ತಾಯಿಯ ಪ್ರೀತಿ ವಾತ್ಸಲ್ಯಕ್ಕೆ ಬೆಲೆ ಕಟ್ಟಲಾಗದಷ್ಟು ಅನುಕಂಪ. ಅಮ್ಮ ಎಂದರೆ ಸ್ಥೈರ್ಯ, ಅಮ್ಮಾ ಎಂದರೆ ಅನುಕಂಪ, ತಾಯಿಯೇ ಸ್ಫೂರ್ತಿ ಎಂಬ ಹೆಗ್ಗಳಿಕೆ ಕನ್ನಡಿಗರದು. ಹೆತ್ತವಳು ಕಣ್ಣೆದುರೇ ಮರೆಯಾಗುತ್ತಾಳೆಂದಾಗ ಅವಳನ್ನು ಉಳಿಸಿಕೊಳ್ಳಲು ಮಗನ ಒದ್ದಾಟ ಹಾಗೂ ತಳಮಳವನ್ನು ಕಥೆಯನ್ನಾಗಿಟ್ಟುಕೊಂಡು ನಿರ್ದೇಶಕ ಕೆ.ಎಂ.ಚೈತನ್ಯ ‘ಅಮ್ಮ ಐ ಲವ್ ಯೂ’ ಸಿನಿಮಾ ಮಾಡಿದ್ದಾರೆ.
ಪ್ರೀತಿಯ ಪ್ರಜ್ಞೆಯನ್ನು ಕೇಂದ್ರವಾಗಿಟ್ಟುಕೊಂಡಿರುವ ಈ ಚಿತ್ರ ಅಮ್ಮ ಮಗನ ಸೆಂಟಿಮೆಂಟ್ ಅಷ್ಟೇ ಅಲ್ಲದೆ ಸಮಾಜದ ಹಲವು ಸಂಬಂಧಗಳನ್ನು ಬೆಸೆಯುವ ಮಾನವೀಯ ಮೌಲ್ಯಗಳನ್ನು ಒಳಗೊಂಡಿದೆ. ಭಿಕ್ಷುಕರ ಬದುಕಿನ ತೊಳಲಾಟದೊಂದಿಗೆ ಬದುಕಿನ ಅರ್ಥವನ್ನು ಕಟ್ಟಿಕೊಟ್ಟಿದೆ.
ಸಿದ್ದಾರ್ಥ್ ತನ್ನ ಹೆತ್ತ ತಾಯಿ ಸಾವು ಬದುಕಿನ ನಡುವೆ ಹೋರಾಟ ಮಾಡುವಾಗ ಅವಳನ್ನು ಉಳಿಸಿಕೊಳ್ಳಲು ಹಲವು ಆಸ್ಪತ್ರೆಗಳನ್ನು ಸುತ್ತಿದರು ತಾಯಿ ಗುಣಮುಖಳಾಗದಿದ್ದ ಚಿಂತೆಯಲ್ಲಿದ್ದವನು ಒಬ್ಬ ಸನ್ಯಾಸಿಯ ಮಾತು ಕೇಳಿ ತನ್ನ ವೈಚಾರಿಕತೆಯನ್ನು ಬದಿಗೊತ್ತಿ ಶ್ರೀಮಂತಿಯ ವೇಷ ಮರೆಸಿ ಭಿಕ್ಷುಕನ ವೇಷ ಧರಿಸಿ ಭಿಕ್ಷಾಟನೆಯ ಅಜ್ಞಾತವಾಸಕ್ಕೆ ತೆರಳುತ್ತಾನೆ, ಇಲ್ಲಿ ತಾಯಿಯ ಮೇಲಿನ ಮಮತೆ ಔಷಧಿಗಳಿಂದ ಸಾಧ್ಯವಾಗದ್ದು ಹರಕೆಯಿಂದ ಸಾಧ್ಯವೇ ಎಂಬ ಪ್ರಶ್ನೆಯನ್ನೂ ಹುಟ್ಟುಹಾಕಲಾರದು. ಇಂತಹ ಸಂದರ್ಭಗಳು ಜನರು ಮೌಢ್ಯದ ಮೊರೆಹೊಗುವ ಪರಿಸ್ಥಿತಿಗೆ ಕನ್ನಡಿ ಇಟ್ಟಂತೆ ತಿಳಿಸುತ್ತವೆ.
ಆ ದಿನಗಳಲ್ಲಿ ಭಿಕ್ಷುಕರ ನೋವು-ನಲಿವು, ಅವರು ಎದುರಿಸುವ ಮಾನಸಿಕ ದೈಹಿಕ ಹಿಂಸೆಗಳನ್ನು ಬಿಡಿಸಿಟ್ಟಿರುವ ಚಿತ್ರ, ಭಿಕ್ಷುಕರೆಂದರೆ ಅಸಹ್ಯ ಪಡುವ ಜನರು ಹಾಗೂ ಕೆಲವು ಸಿನಿಮಾಗಳನ್ನು ನೋಡಿ ಭಿಕ್ಷುಕರು ಭಾರಿ ಸಂಪಾದಿಸುತ್ತಾರೆಂದು ಅವರನ್ನು ದೂಷಿಸುವ ಜನರಿಗೆ ಭಿಕ್ಷುಕರನ್ನು ಕಾಮೆಡಿ ಸೀನ್‍ಗಳಾಗಿ ತೋರುವ ಬೇರೆಲ್ಲ ಸಿನಿಮಾಗಳಿಗಿಂತ ಭಿಕ್ಷುಕರ ಬದುಕಿನ ನೈಜತೆಯನ್ನು ಚಿತ್ರಿಸಿದೆ. ಭಿಕ್ಷುಕರೂ ಮನುಷ್ಯರೇ ಅವರಿಗೂ ಒಂದು ಬದುಕಿದೆ, ಉಳ್ಳವರ ಮಧ್ಯೆ ಅವರ ದೌರ್ಜನ್ಯಗಳಿಂದ ತೊಳಲಾಡುವ ಇಲ್ಲದವರ ಬದುಕಿನ ಪ್ರತಿಬಿಂಬವಾಗಿ ಭಿಕ್ಷುಕರ ಬದುಕು ಕಾಣದೆ ಇರಲಾರದು.
ಮಾಲೀಕನ ಕೈ ಕೆಳಗೆ ದುಡಿದು ಕಷ್ಟದ ದಿನಗಳಲ್ಲಿ ಎದುರಿಸಿ ಉದ್ಯಮಿಯಾಗಿ ಬೆಳೆದುಬಂದ ಸಿದ್ದಾರ್ಥನ ತಾಯಿ, ಕಂಪನಿಯ ಮಾಲಕಿಯಾಗಿ, ದುಡಿಯುವ ಜನರ ಸ್ನೇಹಿತೆಯಾಗಿದ್ದು, ನೌಕರರನ್ನು ರೋಬೋಟ್‍ಗಳಂತೆ ದುಡಿಸಿಕೊಳ್ಳುವ ವ್ಯವಸ್ಥೆಯೊಳಗೆ ಕಷ್ಟದ ಅರಿವಿರುವ ತಾಯಿ ತನ್ನ ಕಂಪನಿಯಲ್ಲಿ ದುಡಿಯುವ ಶ್ರಮಿಕರ ಹಿತವನ್ನೂ ಕಾಯುವ, ಅವರ ಬದುಕಿನಲ್ಲಿ ನೆರವಾಗುತ್ತಾ ಎಲ್ಲರನ್ನೂ ನಿಸ್ವಾರ್ಥವಾಗಿ ಒಳಗೊಳ್ಳುವಳು, ಈ ಒಳಗೊಳ್ಳುವಿಕೆ ಇಲ್ಲದವರ ಶ್ರಮದಿಂದ ಉಳ್ಳವರು ಕಟ್ಟಿಕೊಳ್ಳುವ ಮೊಹಲ್ಲಗಳ ಮಧ್ಯೆ ಸದೃಢ ಸಮಾಜದಲ್ಲಿ ದುಡಿಯುವ ಕೈಗಳಿಸಿ ತಮ್ಮ ಶ್ರಮಕ್ಕೆ ಸಿಗಬೇಕಾದ ಪಾಲಿನ ಸಂಕೇತವಾಗಿದೆ. ತಮ್ಮ ದುಡಿವ ಕೈಗಳಿಗೆ ಕೆಲಸಕೊಟ್ಟ ಅವಳ ಉಳಿವಿಗಾಗಿ ಪ್ರಾರ್ಥಿಸುವ ಸಿಬ್ಬಂದಿಗಳು, ಮಾಲಿಕ ಮತ್ತು ಶ್ರಮಿಕರ ಹೊಂದಾಣಿಕೆಗೆ ಸ್ಪೂರ್ತಿ ತುಂಬುತ್ತದೆ.
ಮತ್ತೊಂದೆಡೆ ಇಂದಿನ ಯುವಜನರು ಸಮಾಜದಲ್ಲಿ ಮಾಡಬೇಕಾದ ಸಹಾಯಾಸ್ತದ ಕನಿಷ್ಟ ಮೌಲ್ಯವನ್ನು ತೋರಿಸುವ ನಾಯಕಿಯ ಪಾತ್ರ, ತಾಯಿಗಾಗಿ ಭಿಕ್ಷೆ ಬೇಡುವ ಪ್ರೇಮಿಯ ಪ್ರೀತಿ ಬಯಸುವ ಪ್ರೇಯಸಿ. ಈ ಎಲ್ಲಾ ಪಾತ್ರಗಳೂ ಜೀವನ ಸಂಗ್ರಾಮದ ಹಲವು ದಿಕ್ಕುಗಳನ್ನು ತೋರುತ್ತವೆ.

ಪ್ರೀತಿ, ಮಮತೆಯ ಹುಡುಕಾಟದೊಂದಿಗೆ ಸಾಗುವ ಚಿತ್ರ ನೋಡುಗರ ಮನತಟ್ಟುವ ಕಥಾಹಂದರವನ್ನು ಒಳಗೊಂಡಿದೆ. ಆದರೆ ಇಂತಹ ಕತೆಯನ್ನು ತೆರೆಯ ಮೇಲೆ ನಿರೂಪಿಸುವಾಗ ಪ್ರೇಕ್ಷಕರ ಮನಸಲ್ಲಿ ಕ್ಯೂರಿಯಾಸಿಟಿಯನ್ನಾಗಲಿ ಅಥವಾ ನೋಡುಗರ ಗಮನ ಮತ್ತೊಂದೆಡೆಗೆ ಜಾರದಂತೆ ತನ್ನತ್ತ ಸೆಳೆದಿಟ್ಟುಕೊಳ್ಳುವಲ್ಲಿ ತಂಡ ಕೊಂಚ ಎಡವಿದೆಯಾದರೂ, ಭಿಕ್ಷುಕನ ಪಾತ್ರದಲ್ಲಿ ಚಿರು, ಹಾಗೂ ನಾಯಕಿಯಾಗಿ ಹೊಸ ನಟಿ ನಿಶ್ಚಿಕಾ ಸೌಂದರ್ಯ ಉತ್ತಮ ಅಭಿನಯ ನೀಡಿದ್ದಾರೆ.


ಕಳೆದುಹೋದ ಖಳನಾಯಕ

ವಿಷ್ಣುವರ್ಧನ್, ಅಂಬರೀಶ್, ಶಿವರಾಜ್‍ಕುಮಾರ್‍ರಂಥಹ ಕನ್ನಡ ಚಿತ್ರರಂಗದ ದಿಗ್ಗಜರೊಂದಿಗೆ ಖಳನಾಯಕನಾಗಿ ಅಭಿನಯಿಸುತ್ತಿದ್ದ ಧೀಮಂತ ಕಲಾವಿದ, ಖ್ಯಾತ ನಾಟಕಕಾರ ಸದಾಶಿವ ಸಾಲ್ಯನ್ ಇಹಲೋಕ ತ್ಯಜಿಸಿದ್ದಾರೆ. 1988ರಲ್ಲಿ ತುಳು ಭಾಷೆಯ ‘ಭಾಗ್ಯವಂತೆದಿ” ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟಿದ್ದ ಸಾಲ್ಯನ್ ಕನ್ನಡ, ತುಳು, ಹಿಂದಿ, ಮರಾಠಿ ಭಾಷೆಯಲ್ಲಿ ಸುಮಾರು 50 ಚಿತ್ರಗಳಲ್ಲಿ ಅಭಿನಯಿಸಿದ್ದರು, 500ಕ್ಕೂ ಹೆಚ್ಚು ರಂಗ ಪ್ರಯೋಗಗಳಲ್ಲ್ಲಿ ಅಭಿನಯಿಸಿದ ಮುಂಬೈ-ಕರ್ನಾಟಕದ ಏಕೈಕ ರಂಗಕಲಾವಿದನೆಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದರು. ಮುಂಬೈನಲ್ಲಿ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಉದ್ಯೋಗಿಯೂ ಆಗಿದ್ದ ಇವರು 2004ಅಲ್ಲಿ ಸಂಭವಿಸಿದ ಅಪಘಾತದಲ್ಲಿ ಕಾಲಿನ ಸ್ವಾಧಿನ ಕಳೆದುಕೊಂಡು ಕಷ್ಟದ ಜೀವನ ಸಾಗಿಸುತ್ತಿದ್ದವರು.


ಕುಂಬಳಕಾಯಿ ಕಳ್ಳ ಕೋಕಿಲ?
ಸಿನಿಮಾ ರಂಗದ ಸ್ಟಾರ್‍ಗಳು, ನಿರ್ದೇಶಕರು, ನಿರ್ಮಾಪಕರಿಗಾಗಲೀ ಭೂಗತ ಪಾತಕಿಗಳೊಂದಿಗಿನ ಒಡನಾಟ ಮಾಮೂಲಿಯಾದದ್ದು. ಎಷ್ಟೋ ನಿರ್ಮಾಪಕರೇ ರೌಡಿ ಶೀಟರ್ ಬ್ಯಾಗ್ರೌಂಡ್ ಹೊಂದಿರುತ್ತಾರೆ. ಇದಕ್ಕೆ ಕನ್ನಡ ಚಿತ್ರರಂಗವೂ ಹೊರತಲ್ಲ. ಅಂತೆಯೇ ಬೆಂಗಳೂರಿನ ಕುಖ್ಯಾತ ರೌಡಿ ಶೀಟರ್ ಸೈಕಲ್ ರವಿಯನ್ನು ಬಹಳ ದಿನಗಳಿಂದ ಹುಡುಕುತ್ತಿದ್ದ ಸಿಸಿಬಿ ಪೊಲೀಸರು ಆತನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆಯಲ್ಲಿ ರೌಡಿ ರವಿ ಜತೆ ಹಾಸ್ಯನಟ ಸಾಧುಕೋಕಿಲ ಒಡನಾಟ ಇಟ್ಟುಕೊಂಡಿದ್ದರೆಂದು ಯಾರೋ ಹಬ್ಬಿಸಿದ
ಗಾಳಿಸುದ್ದಿಯನ್ನು ಕೇಳಿ ಹೆದರಿದ ಸಾಧು ಸಿಸಿಬಿ ಕಚೇರಿಗೆ ದೌಡಾಯಿಸಿದ್ದಾರೆ. ನನಗೂ ರೌಡಿಗೂ ಯಾವ ಸಂಬಂಧವೂ ಇಲ್ಲ, ಈ ಪ್ರಕರಣದಲ್ಲಿ ನನ್ನ ಹೆಸರು ಬರುತ್ತಿದೆಯಂತೆ ಎಂದು ಅಧಿಕಾರಿಯ ಎದುರು ಕುಂಯ್ಯೋಮರ್ರೋ ಎಂದರಂತೆ. ಅದಕ್ಕೆ ಆ ಅಧಿಕಾರಿ ನಿನಗೆ ರೌಡಿಯ ಜತೆ ಒಡನಾಟವಿದೆ ಎಂದು ನಾವು ಎಲ್ಲಿಯೂ ಹೇಳಿಲ್ಲ, ಹೇಳೋಕೆ ಯಾವ ಪುರಾವೆಯೂ ಇಲ್ಲ, ‘ಕುಂಬಳಕಾಯಿ ಕಳ್ಳ ಅಂದ್ರೆ ನೀನ್ಯಾಕೆ ಹೆಗಲು ಮುಟ್ಟಿ ನೋಡ್ಕೋತೀಯಾ’, ಹಾಗೇನಾದರೂ ಇದ್ದರೆ ನಾವೆ ಕರೆಯುತ್ತಿದ್ದೆವು ಎಂದು ಮಂಗಳಾರತಿ ಮಾಡಿ ಕಳಿಸಿದ್ದಾರೆ. ಸಾಧುವಿನ ಈ ಅತಿಗಾಬರಿಯ ವರ್ತನೆ ಅದ್ಯಾವುದೋ ಕೆಟ್ಟ ಕ್ಷಣಗಳ ಮುನ್ಸೂಚನೆಯಂತೆ ಕಾಣುತ್ತಿದೆ. ಹಾಗೇನಾದರೂ ಸಾಧು ಇಂತಹ ಕ್ರಿಮಿನಲ್‍ಗಳ ಒಡನಾಟ ಇಟ್ಟುಕೊಂಡಿದ್ದರೆ, ಅಂತಹವುಗಳನ್ನು ಕತ್ತರಿಸಿಕೊಂಡು ಹೊರಬರಲಿ. ಯಾಕೆಂದರೆ, ಅವರ ಪ್ರತಿಭೆಗೆ ಈ ಬಗೆಯ ಮಸಿ ಹತ್ತಿಕೊಂಡು ಮಂಕಾಗುವುದು ಯಾರಿಗೂ ಇಷ್ಟವಿಲ್ಲ.
– ಸೋಮಶೇಖರ್ ಚಲ್ಯ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...