Homeಸಿನಿಮಾಅಮ್ಮನ ಪ್ರೀತಿಯಲ್ಲಿ ಬದುಕಿನ ಬಿಚ್ಚುನೋಟ....

ಅಮ್ಮನ ಪ್ರೀತಿಯಲ್ಲಿ ಬದುಕಿನ ಬಿಚ್ಚುನೋಟ….

- Advertisement -
- Advertisement -
ಕನ್ನಡಿಗರು ಭಾವನಾ ಜೀವಿಗಳು, ಕರ್ನಾಟಕದಲ್ಲಿ ಭಾವನೆಗಳಿಗೆ ಬೆಲೆ ಜಾಸ್ತಿ ಎಂಬ ಮಾತುಗಳು ಚಿತ್ರರಂಗದಲ್ಲಿ ಬಹಳ ಕಾಲದಿಂದಲೂ ಕೇಳಿಬರುತ್ತಿದೆ. ಅಂತೆಯೇ ಕೆಲವು ಸಿನಿಮಾಗಳಲ್ಲಿ ಕನ್ನಡಿಗರು ಸೆಂಟಿಮೆಂಟಲ್ ಫೂಲ್ಸ್ ಎಂದೂ ಸಹ ನಯವಾಗಿ ಬೈಸಿಕೊಂಡಿರುವುದೂ ಇದೆ. ಕನ್ನಡ ಚಿತ್ರರಂಗವು ಸೆಂಟಿಮೆಂಟ್‍ಗೆ ಹೆಚ್ಚು ಹೊತ್ತು ಕೊಡುತ್ತಾ ಬಂದಿದೆ, ಸಂಬಂಧಗಳ ಭಾವನೆಗಳನ್ನಿಟ್ಟುಕೊಂಡು ಮಾಡಿದ ಸಿನಿಮಾಗಳು ಫೈಲ್ ಆಗಿದ್ದೇ ಇಲ್ಲ.
ಅದರಲ್ಲೂ ತಾಯಿಯ ಪ್ರೀತಿ ವಾತ್ಸಲ್ಯಕ್ಕೆ ಬೆಲೆ ಕಟ್ಟಲಾಗದಷ್ಟು ಅನುಕಂಪ. ಅಮ್ಮ ಎಂದರೆ ಸ್ಥೈರ್ಯ, ಅಮ್ಮಾ ಎಂದರೆ ಅನುಕಂಪ, ತಾಯಿಯೇ ಸ್ಫೂರ್ತಿ ಎಂಬ ಹೆಗ್ಗಳಿಕೆ ಕನ್ನಡಿಗರದು. ಹೆತ್ತವಳು ಕಣ್ಣೆದುರೇ ಮರೆಯಾಗುತ್ತಾಳೆಂದಾಗ ಅವಳನ್ನು ಉಳಿಸಿಕೊಳ್ಳಲು ಮಗನ ಒದ್ದಾಟ ಹಾಗೂ ತಳಮಳವನ್ನು ಕಥೆಯನ್ನಾಗಿಟ್ಟುಕೊಂಡು ನಿರ್ದೇಶಕ ಕೆ.ಎಂ.ಚೈತನ್ಯ ‘ಅಮ್ಮ ಐ ಲವ್ ಯೂ’ ಸಿನಿಮಾ ಮಾಡಿದ್ದಾರೆ.
ಪ್ರೀತಿಯ ಪ್ರಜ್ಞೆಯನ್ನು ಕೇಂದ್ರವಾಗಿಟ್ಟುಕೊಂಡಿರುವ ಈ ಚಿತ್ರ ಅಮ್ಮ ಮಗನ ಸೆಂಟಿಮೆಂಟ್ ಅಷ್ಟೇ ಅಲ್ಲದೆ ಸಮಾಜದ ಹಲವು ಸಂಬಂಧಗಳನ್ನು ಬೆಸೆಯುವ ಮಾನವೀಯ ಮೌಲ್ಯಗಳನ್ನು ಒಳಗೊಂಡಿದೆ. ಭಿಕ್ಷುಕರ ಬದುಕಿನ ತೊಳಲಾಟದೊಂದಿಗೆ ಬದುಕಿನ ಅರ್ಥವನ್ನು ಕಟ್ಟಿಕೊಟ್ಟಿದೆ.
ಸಿದ್ದಾರ್ಥ್ ತನ್ನ ಹೆತ್ತ ತಾಯಿ ಸಾವು ಬದುಕಿನ ನಡುವೆ ಹೋರಾಟ ಮಾಡುವಾಗ ಅವಳನ್ನು ಉಳಿಸಿಕೊಳ್ಳಲು ಹಲವು ಆಸ್ಪತ್ರೆಗಳನ್ನು ಸುತ್ತಿದರು ತಾಯಿ ಗುಣಮುಖಳಾಗದಿದ್ದ ಚಿಂತೆಯಲ್ಲಿದ್ದವನು ಒಬ್ಬ ಸನ್ಯಾಸಿಯ ಮಾತು ಕೇಳಿ ತನ್ನ ವೈಚಾರಿಕತೆಯನ್ನು ಬದಿಗೊತ್ತಿ ಶ್ರೀಮಂತಿಯ ವೇಷ ಮರೆಸಿ ಭಿಕ್ಷುಕನ ವೇಷ ಧರಿಸಿ ಭಿಕ್ಷಾಟನೆಯ ಅಜ್ಞಾತವಾಸಕ್ಕೆ ತೆರಳುತ್ತಾನೆ, ಇಲ್ಲಿ ತಾಯಿಯ ಮೇಲಿನ ಮಮತೆ ಔಷಧಿಗಳಿಂದ ಸಾಧ್ಯವಾಗದ್ದು ಹರಕೆಯಿಂದ ಸಾಧ್ಯವೇ ಎಂಬ ಪ್ರಶ್ನೆಯನ್ನೂ ಹುಟ್ಟುಹಾಕಲಾರದು. ಇಂತಹ ಸಂದರ್ಭಗಳು ಜನರು ಮೌಢ್ಯದ ಮೊರೆಹೊಗುವ ಪರಿಸ್ಥಿತಿಗೆ ಕನ್ನಡಿ ಇಟ್ಟಂತೆ ತಿಳಿಸುತ್ತವೆ.
ಆ ದಿನಗಳಲ್ಲಿ ಭಿಕ್ಷುಕರ ನೋವು-ನಲಿವು, ಅವರು ಎದುರಿಸುವ ಮಾನಸಿಕ ದೈಹಿಕ ಹಿಂಸೆಗಳನ್ನು ಬಿಡಿಸಿಟ್ಟಿರುವ ಚಿತ್ರ, ಭಿಕ್ಷುಕರೆಂದರೆ ಅಸಹ್ಯ ಪಡುವ ಜನರು ಹಾಗೂ ಕೆಲವು ಸಿನಿಮಾಗಳನ್ನು ನೋಡಿ ಭಿಕ್ಷುಕರು ಭಾರಿ ಸಂಪಾದಿಸುತ್ತಾರೆಂದು ಅವರನ್ನು ದೂಷಿಸುವ ಜನರಿಗೆ ಭಿಕ್ಷುಕರನ್ನು ಕಾಮೆಡಿ ಸೀನ್‍ಗಳಾಗಿ ತೋರುವ ಬೇರೆಲ್ಲ ಸಿನಿಮಾಗಳಿಗಿಂತ ಭಿಕ್ಷುಕರ ಬದುಕಿನ ನೈಜತೆಯನ್ನು ಚಿತ್ರಿಸಿದೆ. ಭಿಕ್ಷುಕರೂ ಮನುಷ್ಯರೇ ಅವರಿಗೂ ಒಂದು ಬದುಕಿದೆ, ಉಳ್ಳವರ ಮಧ್ಯೆ ಅವರ ದೌರ್ಜನ್ಯಗಳಿಂದ ತೊಳಲಾಡುವ ಇಲ್ಲದವರ ಬದುಕಿನ ಪ್ರತಿಬಿಂಬವಾಗಿ ಭಿಕ್ಷುಕರ ಬದುಕು ಕಾಣದೆ ಇರಲಾರದು.
ಮಾಲೀಕನ ಕೈ ಕೆಳಗೆ ದುಡಿದು ಕಷ್ಟದ ದಿನಗಳಲ್ಲಿ ಎದುರಿಸಿ ಉದ್ಯಮಿಯಾಗಿ ಬೆಳೆದುಬಂದ ಸಿದ್ದಾರ್ಥನ ತಾಯಿ, ಕಂಪನಿಯ ಮಾಲಕಿಯಾಗಿ, ದುಡಿಯುವ ಜನರ ಸ್ನೇಹಿತೆಯಾಗಿದ್ದು, ನೌಕರರನ್ನು ರೋಬೋಟ್‍ಗಳಂತೆ ದುಡಿಸಿಕೊಳ್ಳುವ ವ್ಯವಸ್ಥೆಯೊಳಗೆ ಕಷ್ಟದ ಅರಿವಿರುವ ತಾಯಿ ತನ್ನ ಕಂಪನಿಯಲ್ಲಿ ದುಡಿಯುವ ಶ್ರಮಿಕರ ಹಿತವನ್ನೂ ಕಾಯುವ, ಅವರ ಬದುಕಿನಲ್ಲಿ ನೆರವಾಗುತ್ತಾ ಎಲ್ಲರನ್ನೂ ನಿಸ್ವಾರ್ಥವಾಗಿ ಒಳಗೊಳ್ಳುವಳು, ಈ ಒಳಗೊಳ್ಳುವಿಕೆ ಇಲ್ಲದವರ ಶ್ರಮದಿಂದ ಉಳ್ಳವರು ಕಟ್ಟಿಕೊಳ್ಳುವ ಮೊಹಲ್ಲಗಳ ಮಧ್ಯೆ ಸದೃಢ ಸಮಾಜದಲ್ಲಿ ದುಡಿಯುವ ಕೈಗಳಿಸಿ ತಮ್ಮ ಶ್ರಮಕ್ಕೆ ಸಿಗಬೇಕಾದ ಪಾಲಿನ ಸಂಕೇತವಾಗಿದೆ. ತಮ್ಮ ದುಡಿವ ಕೈಗಳಿಗೆ ಕೆಲಸಕೊಟ್ಟ ಅವಳ ಉಳಿವಿಗಾಗಿ ಪ್ರಾರ್ಥಿಸುವ ಸಿಬ್ಬಂದಿಗಳು, ಮಾಲಿಕ ಮತ್ತು ಶ್ರಮಿಕರ ಹೊಂದಾಣಿಕೆಗೆ ಸ್ಪೂರ್ತಿ ತುಂಬುತ್ತದೆ.
ಮತ್ತೊಂದೆಡೆ ಇಂದಿನ ಯುವಜನರು ಸಮಾಜದಲ್ಲಿ ಮಾಡಬೇಕಾದ ಸಹಾಯಾಸ್ತದ ಕನಿಷ್ಟ ಮೌಲ್ಯವನ್ನು ತೋರಿಸುವ ನಾಯಕಿಯ ಪಾತ್ರ, ತಾಯಿಗಾಗಿ ಭಿಕ್ಷೆ ಬೇಡುವ ಪ್ರೇಮಿಯ ಪ್ರೀತಿ ಬಯಸುವ ಪ್ರೇಯಸಿ. ಈ ಎಲ್ಲಾ ಪಾತ್ರಗಳೂ ಜೀವನ ಸಂಗ್ರಾಮದ ಹಲವು ದಿಕ್ಕುಗಳನ್ನು ತೋರುತ್ತವೆ.

ಪ್ರೀತಿ, ಮಮತೆಯ ಹುಡುಕಾಟದೊಂದಿಗೆ ಸಾಗುವ ಚಿತ್ರ ನೋಡುಗರ ಮನತಟ್ಟುವ ಕಥಾಹಂದರವನ್ನು ಒಳಗೊಂಡಿದೆ. ಆದರೆ ಇಂತಹ ಕತೆಯನ್ನು ತೆರೆಯ ಮೇಲೆ ನಿರೂಪಿಸುವಾಗ ಪ್ರೇಕ್ಷಕರ ಮನಸಲ್ಲಿ ಕ್ಯೂರಿಯಾಸಿಟಿಯನ್ನಾಗಲಿ ಅಥವಾ ನೋಡುಗರ ಗಮನ ಮತ್ತೊಂದೆಡೆಗೆ ಜಾರದಂತೆ ತನ್ನತ್ತ ಸೆಳೆದಿಟ್ಟುಕೊಳ್ಳುವಲ್ಲಿ ತಂಡ ಕೊಂಚ ಎಡವಿದೆಯಾದರೂ, ಭಿಕ್ಷುಕನ ಪಾತ್ರದಲ್ಲಿ ಚಿರು, ಹಾಗೂ ನಾಯಕಿಯಾಗಿ ಹೊಸ ನಟಿ ನಿಶ್ಚಿಕಾ ಸೌಂದರ್ಯ ಉತ್ತಮ ಅಭಿನಯ ನೀಡಿದ್ದಾರೆ.


ಕಳೆದುಹೋದ ಖಳನಾಯಕ

ವಿಷ್ಣುವರ್ಧನ್, ಅಂಬರೀಶ್, ಶಿವರಾಜ್‍ಕುಮಾರ್‍ರಂಥಹ ಕನ್ನಡ ಚಿತ್ರರಂಗದ ದಿಗ್ಗಜರೊಂದಿಗೆ ಖಳನಾಯಕನಾಗಿ ಅಭಿನಯಿಸುತ್ತಿದ್ದ ಧೀಮಂತ ಕಲಾವಿದ, ಖ್ಯಾತ ನಾಟಕಕಾರ ಸದಾಶಿವ ಸಾಲ್ಯನ್ ಇಹಲೋಕ ತ್ಯಜಿಸಿದ್ದಾರೆ. 1988ರಲ್ಲಿ ತುಳು ಭಾಷೆಯ ‘ಭಾಗ್ಯವಂತೆದಿ” ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟಿದ್ದ ಸಾಲ್ಯನ್ ಕನ್ನಡ, ತುಳು, ಹಿಂದಿ, ಮರಾಠಿ ಭಾಷೆಯಲ್ಲಿ ಸುಮಾರು 50 ಚಿತ್ರಗಳಲ್ಲಿ ಅಭಿನಯಿಸಿದ್ದರು, 500ಕ್ಕೂ ಹೆಚ್ಚು ರಂಗ ಪ್ರಯೋಗಗಳಲ್ಲ್ಲಿ ಅಭಿನಯಿಸಿದ ಮುಂಬೈ-ಕರ್ನಾಟಕದ ಏಕೈಕ ರಂಗಕಲಾವಿದನೆಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದರು. ಮುಂಬೈನಲ್ಲಿ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಉದ್ಯೋಗಿಯೂ ಆಗಿದ್ದ ಇವರು 2004ಅಲ್ಲಿ ಸಂಭವಿಸಿದ ಅಪಘಾತದಲ್ಲಿ ಕಾಲಿನ ಸ್ವಾಧಿನ ಕಳೆದುಕೊಂಡು ಕಷ್ಟದ ಜೀವನ ಸಾಗಿಸುತ್ತಿದ್ದವರು.


ಕುಂಬಳಕಾಯಿ ಕಳ್ಳ ಕೋಕಿಲ?
ಸಿನಿಮಾ ರಂಗದ ಸ್ಟಾರ್‍ಗಳು, ನಿರ್ದೇಶಕರು, ನಿರ್ಮಾಪಕರಿಗಾಗಲೀ ಭೂಗತ ಪಾತಕಿಗಳೊಂದಿಗಿನ ಒಡನಾಟ ಮಾಮೂಲಿಯಾದದ್ದು. ಎಷ್ಟೋ ನಿರ್ಮಾಪಕರೇ ರೌಡಿ ಶೀಟರ್ ಬ್ಯಾಗ್ರೌಂಡ್ ಹೊಂದಿರುತ್ತಾರೆ. ಇದಕ್ಕೆ ಕನ್ನಡ ಚಿತ್ರರಂಗವೂ ಹೊರತಲ್ಲ. ಅಂತೆಯೇ ಬೆಂಗಳೂರಿನ ಕುಖ್ಯಾತ ರೌಡಿ ಶೀಟರ್ ಸೈಕಲ್ ರವಿಯನ್ನು ಬಹಳ ದಿನಗಳಿಂದ ಹುಡುಕುತ್ತಿದ್ದ ಸಿಸಿಬಿ ಪೊಲೀಸರು ಆತನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆಯಲ್ಲಿ ರೌಡಿ ರವಿ ಜತೆ ಹಾಸ್ಯನಟ ಸಾಧುಕೋಕಿಲ ಒಡನಾಟ ಇಟ್ಟುಕೊಂಡಿದ್ದರೆಂದು ಯಾರೋ ಹಬ್ಬಿಸಿದ
ಗಾಳಿಸುದ್ದಿಯನ್ನು ಕೇಳಿ ಹೆದರಿದ ಸಾಧು ಸಿಸಿಬಿ ಕಚೇರಿಗೆ ದೌಡಾಯಿಸಿದ್ದಾರೆ. ನನಗೂ ರೌಡಿಗೂ ಯಾವ ಸಂಬಂಧವೂ ಇಲ್ಲ, ಈ ಪ್ರಕರಣದಲ್ಲಿ ನನ್ನ ಹೆಸರು ಬರುತ್ತಿದೆಯಂತೆ ಎಂದು ಅಧಿಕಾರಿಯ ಎದುರು ಕುಂಯ್ಯೋಮರ್ರೋ ಎಂದರಂತೆ. ಅದಕ್ಕೆ ಆ ಅಧಿಕಾರಿ ನಿನಗೆ ರೌಡಿಯ ಜತೆ ಒಡನಾಟವಿದೆ ಎಂದು ನಾವು ಎಲ್ಲಿಯೂ ಹೇಳಿಲ್ಲ, ಹೇಳೋಕೆ ಯಾವ ಪುರಾವೆಯೂ ಇಲ್ಲ, ‘ಕುಂಬಳಕಾಯಿ ಕಳ್ಳ ಅಂದ್ರೆ ನೀನ್ಯಾಕೆ ಹೆಗಲು ಮುಟ್ಟಿ ನೋಡ್ಕೋತೀಯಾ’, ಹಾಗೇನಾದರೂ ಇದ್ದರೆ ನಾವೆ ಕರೆಯುತ್ತಿದ್ದೆವು ಎಂದು ಮಂಗಳಾರತಿ ಮಾಡಿ ಕಳಿಸಿದ್ದಾರೆ. ಸಾಧುವಿನ ಈ ಅತಿಗಾಬರಿಯ ವರ್ತನೆ ಅದ್ಯಾವುದೋ ಕೆಟ್ಟ ಕ್ಷಣಗಳ ಮುನ್ಸೂಚನೆಯಂತೆ ಕಾಣುತ್ತಿದೆ. ಹಾಗೇನಾದರೂ ಸಾಧು ಇಂತಹ ಕ್ರಿಮಿನಲ್‍ಗಳ ಒಡನಾಟ ಇಟ್ಟುಕೊಂಡಿದ್ದರೆ, ಅಂತಹವುಗಳನ್ನು ಕತ್ತರಿಸಿಕೊಂಡು ಹೊರಬರಲಿ. ಯಾಕೆಂದರೆ, ಅವರ ಪ್ರತಿಭೆಗೆ ಈ ಬಗೆಯ ಮಸಿ ಹತ್ತಿಕೊಂಡು ಮಂಕಾಗುವುದು ಯಾರಿಗೂ ಇಷ್ಟವಿಲ್ಲ.
– ಸೋಮಶೇಖರ್ ಚಲ್ಯ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...