Homeಅಂಕಣಗಳುಅಮ್ಮನ ದಿನದಂದು ಅಮ್ಮಿ

ಅಮ್ಮನ ದಿನದಂದು ಅಮ್ಮಿ

- Advertisement -
- Advertisement -

2017ರವರೆಗೂ ಪ್ರತಿ ವರ್ಷ ಮಾರ್ಚ್ 08 ಅಥವಾ ಅದರ ಸುತ್ತಾಮುತ್ತಾ ಪಿ.ಲಂಕೇಶ್‌ರ ಜನ್ಮದಿನದ ನೆನಪಿನಲ್ಲಿ ಅರ್ಥಪೂರ್ಣ ಕಾರ್ಯಕ್ರಮ ನಡೆಯುತ್ತಿತ್ತು. ನಾಡಿನ ಹಿರಿಯ ಚಿಂತಕರು, ಹೋರಾಟಗಾರರು ಮತ್ತು ಸಾಹಿತಿ ಕಲಾವಿದರನ್ನು ಕರೆಸಿ ಇಡೀ ದಿನ ಸಮಾಜದ ಆಗುಹೋಗುಗಳ ಬಗ್ಗೆ ಚರ್ಚೆ, ಪುಸ್ತಕ ಬಿಡುಗಡೆ, ಸಿನಿಮಾ ವೀಕ್ಷಣೆ ರೀತಿಯ ಹತ್ತು ಹಲವು ಕಾರ್ಯಕ್ರಮಗಳು ನಡೆಸಿಕೊಂಡು ಬಂದಿದ್ದವು. ಗೌರಿ ಲಂಕೇಶ್ ಇದರ ಜವಾಬ್ದಾರಿ ವಹಿಸಿಕೊಳ್ಳುತ್ತಿದ್ದರು.

ಆದರೆ 2017ರಲ್ಲಿ ಮತಾಂಧ ಶಕ್ತಿಗಳ ಗುಂಡಿಗೆ ಎದೆಯೊಡ್ಡಿ ಗೌರಿ ಅಮ್ಮ ಹುತಾತ್ಮರಾದ ನಂತರ, ಲಂಕೇಶ್ ನೆನಪು ಕಾರ್ಯಕ್ರಮ ನಿಂತುಹೋಯಿತು. ಆದರೆ ಅಪ್ಪನ ಹಾದಿಯಲ್ಲಿಯೇ ನಡೆದ, ಆಕ್ಟಿವಿಸ್ಟ್ ಜರ್ನಲಿಸ್ಟ್ ಆಗಿ ಅಪ್ಪನನ್ನುಮೀರಿಸಿದ ನಮ್ಮ ಗೌರಿ ಅಮ್ಮನನ್ನು ನೆನೆಯುವ ಜವಾಬ್ದಾರಿ ನಮ್ಮ ಮೇಲಿತ್ತು. ಹಾಗಾಗಿ ಅಮ್ಮನ ಜನ್ಮದಿನವಾದ ಜನವರಿ 29ನ್ನು ಕಳೆದ ವರ್ಷದಿಂದ ಗೌರಿದಿನವನ್ನಾಗಿ ಆಚರಿಸಲು ನಿರ್ಧರಿಸಲಾಗಿದೆ. ಈ ಬಾರಿ ಜನವರಿ 29ರಂದು ಅಮ್ಮನ ದಿನದಂದು ಅಮ್ಮಿ ಎಂಬ ಭಾವಪೂರ್ಣ ಸಿನಿಮಾ ನೋಡಿದ್ದಲ್ಲದೇ, ಅಮ್ಮಿಯನ್ನೇ ಇದಕ್ಕೆ ಕರೆಸಲಾಗಿತ್ತು.

ಗೌರಿ ಅಮ್ಮ ನಮ್ಮನ್ನೆಲ್ಲಾ ಮಕ್ಕಳೆಂದು ಭಾವಿಸಿ ಪೋಷಿಸಿದವರು. ಮರಿ ಎಂದು ಕರೆದು ಪ್ರೀತಿ ಕೊಟ್ಟವರು. ಹೋರಾಟಗಾರ ಮಕ್ಕಳಿಗಾಗಿ ಹಂಬಲಿಸುತ್ತಿದ್ದ, ಈ ಮಕ್ಕಳು ದೊಡ್ಡ ನಾಯಕರಾಗಿ ದೇಶ ಕಟ್ಟಬೇಕೆಂದು ಪರಿತಪಿಸುತ್ತಿದ್ದ ತಾಯಿಹೃದಯ ಗೌರಿ ಅಮ್ಮ. ದೇಶ ಕಟ್ಟುವ ಮತ್ತು ದೇಶ ಬದಲಿಸುವ ನಾಯಕರು ಹಾಗೂ ವಿದ್ವಾಂಸರನ್ನು ರೂಪಿಸುವ ಜೆಎನ್‌ಯು ವಿಶ್ವವಿದ್ಯಾಲಯಕ್ಕೆ ಓದಲು ಕಳಿಸಿದ ಮಗ ನಜೀಬ್‌ನನ್ನು ಕಳೆದುಕೊಂಡ ಅಮ್ಮಿ ನಫೀಸ್‌ರವರು ಅಂದು ನಮ್ಮ ಕಾರ್ಯಕ್ರಮದಲ್ಲಿದ್ದರು.

ಈ ಮತಾಂಧರು ಮಾನವೀಯತೆ ಇಲ್ಲದವರು ಎಂಬುದಕ್ಕೆ ಉದಾಹರಣೆಯಾಗಿ ನಜೀಬ್ ಪ್ರಕರಣವಿದೆ. ಗೌರಿ ಅಮ್ಮನನ್ನು ಕಳೆದು ಮಕ್ಕಳು ನಾವು ಅಲ್ಲಿ ಕುದಿಯುತ್ತಿದ್ದರೆ, ತನ್ನ ಮಗ ನಜೀಬ್‌ನನ್ನು ಕಳೆದುಕೊಂಡ ಕಿಚ್ಚು ನಫೀಸಾ ಅಮ್ಮಿಯಲ್ಲಿತ್ತು. ಇದರ ಕುರಿತಾಗಿಯೇ ಪೆಡೆಸ್ಟ್ರಿಯನ್ ಪಿಕ್ಚರ್ಸ್ ನಿರ್ಮಿಸಿರುವ ಅಮ್ಮಿ ಸಾಕ್ಷ್ಯಚಿತ್ರ ಮೊದಲು ಪ್ರದರ್ಶನಗೊಂಡಿತು. ನಜೀಬ್ ಎಂಬ ಅತ್ಯಂತ ಒಳ್ಳೆಯ ಹುಡುಗನ ವ್ಯಕ್ತಿತ್ವ, ಬಿಜೆಪಿ ಸಂಘಪರಿವಾರದ ಎಬಿವಿಪಿಯ ಹೊಲಸು ರಾಜಕೀಯವನ್ನು ಚಿತ್ರ ಬಿಚ್ಚಿಟ್ಟಿತು. ಜಡಗೊಂಡಿರುವ ವ್ಯವಸ್ಥೆಯನ್ನು ಬಡಿದೆಚ್ಚರಿಸಿ ನಜೀಬ್‌ನನ್ನು ವಾಪಸ್ ತರುವ ಸಂಕಲ್ಪದೊಂದಿಗೆ ಚಿತ್ರ ಮುಕ್ತಾಯವಾಗಿತ್ತು. ಅಮ್ಮನ ದಿನಕ್ಕೆ ಅಮ್ಮಿ ನಮ್ಮೆಲ್ಲರ ಹೋರಾಟದ ಕಿಚ್ಚನ್ನು ಎಚ್ಚರಿಸಿದರು. ಈಗ ಅವರು ತಾಯಿಯ ಮಮತೆ, ಮಗನನ್ನು ಹುಡುಕುತ್ತಿರುವ ದುಃಖತಪ್ತೆಯಾಗಿ ಮಾತ್ರವಲ್ಲದೇ, ಅದರ ಕಾರಣವನ್ನು ದೇಶದ ಪ್ರಸಕ್ತ ರಾಜಕೀಯ ಪರಿಸ್ಥಿತಿಯಲ್ಲಿ ಕಂಡುಕೊಂಡಿರುವ ಒಬ್ಬ ಚಿಂತಕಿಯಾಗಿ ರೂಪುಗೊಂಡಿದ್ದಾರೆ. ಅಷ್ಟು ಖಚಿತವಾಗಿ ಅವರು ಇಡೀ ದೇಶದ ಪರಿಸ್ಥಿತಿಯನ್ನು ವಿಶ್ಲೇಷಣಾತ್ಮಕವಾಗಿ ಮುಂದಿಟ್ಟರು.

ಅಮ್ಮಿ ನಫೀಸಾರವರ ಮಾತುಗಳು ನಮ್ಮೆದೆಯೊಕ್ಕ ಗುಂಡುಗಳಂತಾಗಿದ್ದವು. ಅಷ್ಟು ಸ್ಪಷ್ಟ ಮತ್ತು ಆವೇಗದಲ್ಲಿ ಮಾತಾಡಿದರು. ಅವರ ಧೈರ್ಯಕ್ಕೆ ಗೌರಿ ಸ್ಮಾರಕ ಟ್ರಸ್ಟ್ ವತಿಯಿಂದ ಪ್ರೊ. ಬಾಬು ಮ್ಯಾಥ್ಯೂ ಅಭಿನಂದನಾ ಮಾತುಗಳನ್ನಾಡಿದರು.
ಕನ್ನಡ ದಿನಪತ್ರಿಕೆ ವಾರ್ತಾಭಾರತಿಯ ಸಂಪಾದಕರಾದ ಅಬ್ದುಲ್ ಸಲಾಂ ಪುತ್ತಿಗೆಯವರು ಗೌರಿ ನೆನಪಿನ ಉಪನ್ಯಾಸ ನೀಡಿದರು. ಜಾತೀಯತೆ, ಬಂಡವಾಳಶಾಹಿ ಶೋಷಣೆ ಮತ್ತು ಮತಾಂಧತೆಯೇ ಭಾರತದ ಪ್ರಮುಖ ಶತ್ರುಗಳಾಗಿದ್ದು ಇಂದಿನ ಪ್ರಧಾನ ಶತ್ರುಗಳಾಗಿದ್ದು ಇವುಗಳನ್ನು ನಿರ್ಮೂಲನೆ ಮಾಡುವ ಶಪಥ ಮಾಡಬೇಕಾಗಿದೆ ಎಂದರು.

ಅಮ್ಮನ ದಿನದಂದು ಅವರ ಕನಸಿನ ನೂತನ www.naanugauri.com ವೆಬ್‌ಪೋರ್ಟಲ್‌ಅನ್ನು ಅವರ ತಂಗಿ ಕವಿತಾ ಲಂಕೇಶ್ ಲೋಕಾರ್ಪಣೆ ಮಾಡಿದರು. ಈ ಮೂಲಕ ಗೌರಿ ಸ್ಮಾರಕ ಟ್ರಸ್ಟ್ ಮುಖಾಂತರ ನಾವೆಲ್ಲರೂ ಒಂದು ಸಣ್ಣ ಗಿಫ್ಟ್ಅನ್ನು ಅಮ್ಮನಿಗೆ ನೀಡುತ್ತಿದ್ದೇವೆ. ನ್ಯಾಯಪಥ ಮುದ್ರಿತ ವಾರಪತ್ರಿಕೆ ಯಥಾಪ್ರಕಾರ ಮುಂದುವರೆಯುತ್ತದೆ. ಜೊತೆಗೆ ಈ ವೆಬ್ ಪೋರ್ಟಲ್ ಪ್ರತಿದಿನವೂ ಸತ್ಯಸುದ್ದಿಗಳನ್ನು ನಿಮ್ಮಲ್ಲಿಗೆ ತಲುಪಿಸುವ ಕೆಲಸ ಮಾಡಲಿದೆ. ಇದಕ್ಕಾಗಿ ನೂರು ಜನ

ನಜೀಬ್

ಬರಹಗಾರರು ನಮ್ಮೊಡನಿದ್ದಾರೆ.

ನಂತರ ಮದ್ಯ ನಿಷೇಧಕ್ಕೆ ಒತ್ತಾಯಿಸಿ ಪಾದಯಾತ್ರೆ ಬರುತ್ತಿದ್ದ ಮಹಿಳೆಯರ ಹೋರಾಟಕ್ಕೆ ಬೆಂಬಲ ಸೂಚಿಸಿ ಅಲ್ಲೆ ಒಂದಷ್ಟು ಹಣ ಸಂಗ್ರಹ ಮಾಡಿ ತಲುಪಿಸಲಾಯಿತು. ಈ ರೀತಿಯಾಗಿ ಅಮ್ಮನ ಹೋರಾಟದ ಸ್ಫೂರ್ತಿಯನ್ನು ಮತ್ತಷ್ಟು ಗಟ್ಟಿಗೊಳಿಸಲು ಅಮ್ಮನ ದಿನ ಅರ್ಥಪೂರ್ಣವಾಗಿ ಆಚರಿಸಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...