Homeಅಂಕಣಗಳುಅಮ್ಮನ ದಿನದಂದು ಅಮ್ಮಿ

ಅಮ್ಮನ ದಿನದಂದು ಅಮ್ಮಿ

- Advertisement -
- Advertisement -

2017ರವರೆಗೂ ಪ್ರತಿ ವರ್ಷ ಮಾರ್ಚ್ 08 ಅಥವಾ ಅದರ ಸುತ್ತಾಮುತ್ತಾ ಪಿ.ಲಂಕೇಶ್‌ರ ಜನ್ಮದಿನದ ನೆನಪಿನಲ್ಲಿ ಅರ್ಥಪೂರ್ಣ ಕಾರ್ಯಕ್ರಮ ನಡೆಯುತ್ತಿತ್ತು. ನಾಡಿನ ಹಿರಿಯ ಚಿಂತಕರು, ಹೋರಾಟಗಾರರು ಮತ್ತು ಸಾಹಿತಿ ಕಲಾವಿದರನ್ನು ಕರೆಸಿ ಇಡೀ ದಿನ ಸಮಾಜದ ಆಗುಹೋಗುಗಳ ಬಗ್ಗೆ ಚರ್ಚೆ, ಪುಸ್ತಕ ಬಿಡುಗಡೆ, ಸಿನಿಮಾ ವೀಕ್ಷಣೆ ರೀತಿಯ ಹತ್ತು ಹಲವು ಕಾರ್ಯಕ್ರಮಗಳು ನಡೆಸಿಕೊಂಡು ಬಂದಿದ್ದವು. ಗೌರಿ ಲಂಕೇಶ್ ಇದರ ಜವಾಬ್ದಾರಿ ವಹಿಸಿಕೊಳ್ಳುತ್ತಿದ್ದರು.

ಆದರೆ 2017ರಲ್ಲಿ ಮತಾಂಧ ಶಕ್ತಿಗಳ ಗುಂಡಿಗೆ ಎದೆಯೊಡ್ಡಿ ಗೌರಿ ಅಮ್ಮ ಹುತಾತ್ಮರಾದ ನಂತರ, ಲಂಕೇಶ್ ನೆನಪು ಕಾರ್ಯಕ್ರಮ ನಿಂತುಹೋಯಿತು. ಆದರೆ ಅಪ್ಪನ ಹಾದಿಯಲ್ಲಿಯೇ ನಡೆದ, ಆಕ್ಟಿವಿಸ್ಟ್ ಜರ್ನಲಿಸ್ಟ್ ಆಗಿ ಅಪ್ಪನನ್ನುಮೀರಿಸಿದ ನಮ್ಮ ಗೌರಿ ಅಮ್ಮನನ್ನು ನೆನೆಯುವ ಜವಾಬ್ದಾರಿ ನಮ್ಮ ಮೇಲಿತ್ತು. ಹಾಗಾಗಿ ಅಮ್ಮನ ಜನ್ಮದಿನವಾದ ಜನವರಿ 29ನ್ನು ಕಳೆದ ವರ್ಷದಿಂದ ಗೌರಿದಿನವನ್ನಾಗಿ ಆಚರಿಸಲು ನಿರ್ಧರಿಸಲಾಗಿದೆ. ಈ ಬಾರಿ ಜನವರಿ 29ರಂದು ಅಮ್ಮನ ದಿನದಂದು ಅಮ್ಮಿ ಎಂಬ ಭಾವಪೂರ್ಣ ಸಿನಿಮಾ ನೋಡಿದ್ದಲ್ಲದೇ, ಅಮ್ಮಿಯನ್ನೇ ಇದಕ್ಕೆ ಕರೆಸಲಾಗಿತ್ತು.

ಗೌರಿ ಅಮ್ಮ ನಮ್ಮನ್ನೆಲ್ಲಾ ಮಕ್ಕಳೆಂದು ಭಾವಿಸಿ ಪೋಷಿಸಿದವರು. ಮರಿ ಎಂದು ಕರೆದು ಪ್ರೀತಿ ಕೊಟ್ಟವರು. ಹೋರಾಟಗಾರ ಮಕ್ಕಳಿಗಾಗಿ ಹಂಬಲಿಸುತ್ತಿದ್ದ, ಈ ಮಕ್ಕಳು ದೊಡ್ಡ ನಾಯಕರಾಗಿ ದೇಶ ಕಟ್ಟಬೇಕೆಂದು ಪರಿತಪಿಸುತ್ತಿದ್ದ ತಾಯಿಹೃದಯ ಗೌರಿ ಅಮ್ಮ. ದೇಶ ಕಟ್ಟುವ ಮತ್ತು ದೇಶ ಬದಲಿಸುವ ನಾಯಕರು ಹಾಗೂ ವಿದ್ವಾಂಸರನ್ನು ರೂಪಿಸುವ ಜೆಎನ್‌ಯು ವಿಶ್ವವಿದ್ಯಾಲಯಕ್ಕೆ ಓದಲು ಕಳಿಸಿದ ಮಗ ನಜೀಬ್‌ನನ್ನು ಕಳೆದುಕೊಂಡ ಅಮ್ಮಿ ನಫೀಸ್‌ರವರು ಅಂದು ನಮ್ಮ ಕಾರ್ಯಕ್ರಮದಲ್ಲಿದ್ದರು.

ಈ ಮತಾಂಧರು ಮಾನವೀಯತೆ ಇಲ್ಲದವರು ಎಂಬುದಕ್ಕೆ ಉದಾಹರಣೆಯಾಗಿ ನಜೀಬ್ ಪ್ರಕರಣವಿದೆ. ಗೌರಿ ಅಮ್ಮನನ್ನು ಕಳೆದು ಮಕ್ಕಳು ನಾವು ಅಲ್ಲಿ ಕುದಿಯುತ್ತಿದ್ದರೆ, ತನ್ನ ಮಗ ನಜೀಬ್‌ನನ್ನು ಕಳೆದುಕೊಂಡ ಕಿಚ್ಚು ನಫೀಸಾ ಅಮ್ಮಿಯಲ್ಲಿತ್ತು. ಇದರ ಕುರಿತಾಗಿಯೇ ಪೆಡೆಸ್ಟ್ರಿಯನ್ ಪಿಕ್ಚರ್ಸ್ ನಿರ್ಮಿಸಿರುವ ಅಮ್ಮಿ ಸಾಕ್ಷ್ಯಚಿತ್ರ ಮೊದಲು ಪ್ರದರ್ಶನಗೊಂಡಿತು. ನಜೀಬ್ ಎಂಬ ಅತ್ಯಂತ ಒಳ್ಳೆಯ ಹುಡುಗನ ವ್ಯಕ್ತಿತ್ವ, ಬಿಜೆಪಿ ಸಂಘಪರಿವಾರದ ಎಬಿವಿಪಿಯ ಹೊಲಸು ರಾಜಕೀಯವನ್ನು ಚಿತ್ರ ಬಿಚ್ಚಿಟ್ಟಿತು. ಜಡಗೊಂಡಿರುವ ವ್ಯವಸ್ಥೆಯನ್ನು ಬಡಿದೆಚ್ಚರಿಸಿ ನಜೀಬ್‌ನನ್ನು ವಾಪಸ್ ತರುವ ಸಂಕಲ್ಪದೊಂದಿಗೆ ಚಿತ್ರ ಮುಕ್ತಾಯವಾಗಿತ್ತು. ಅಮ್ಮನ ದಿನಕ್ಕೆ ಅಮ್ಮಿ ನಮ್ಮೆಲ್ಲರ ಹೋರಾಟದ ಕಿಚ್ಚನ್ನು ಎಚ್ಚರಿಸಿದರು. ಈಗ ಅವರು ತಾಯಿಯ ಮಮತೆ, ಮಗನನ್ನು ಹುಡುಕುತ್ತಿರುವ ದುಃಖತಪ್ತೆಯಾಗಿ ಮಾತ್ರವಲ್ಲದೇ, ಅದರ ಕಾರಣವನ್ನು ದೇಶದ ಪ್ರಸಕ್ತ ರಾಜಕೀಯ ಪರಿಸ್ಥಿತಿಯಲ್ಲಿ ಕಂಡುಕೊಂಡಿರುವ ಒಬ್ಬ ಚಿಂತಕಿಯಾಗಿ ರೂಪುಗೊಂಡಿದ್ದಾರೆ. ಅಷ್ಟು ಖಚಿತವಾಗಿ ಅವರು ಇಡೀ ದೇಶದ ಪರಿಸ್ಥಿತಿಯನ್ನು ವಿಶ್ಲೇಷಣಾತ್ಮಕವಾಗಿ ಮುಂದಿಟ್ಟರು.

ಅಮ್ಮಿ ನಫೀಸಾರವರ ಮಾತುಗಳು ನಮ್ಮೆದೆಯೊಕ್ಕ ಗುಂಡುಗಳಂತಾಗಿದ್ದವು. ಅಷ್ಟು ಸ್ಪಷ್ಟ ಮತ್ತು ಆವೇಗದಲ್ಲಿ ಮಾತಾಡಿದರು. ಅವರ ಧೈರ್ಯಕ್ಕೆ ಗೌರಿ ಸ್ಮಾರಕ ಟ್ರಸ್ಟ್ ವತಿಯಿಂದ ಪ್ರೊ. ಬಾಬು ಮ್ಯಾಥ್ಯೂ ಅಭಿನಂದನಾ ಮಾತುಗಳನ್ನಾಡಿದರು.
ಕನ್ನಡ ದಿನಪತ್ರಿಕೆ ವಾರ್ತಾಭಾರತಿಯ ಸಂಪಾದಕರಾದ ಅಬ್ದುಲ್ ಸಲಾಂ ಪುತ್ತಿಗೆಯವರು ಗೌರಿ ನೆನಪಿನ ಉಪನ್ಯಾಸ ನೀಡಿದರು. ಜಾತೀಯತೆ, ಬಂಡವಾಳಶಾಹಿ ಶೋಷಣೆ ಮತ್ತು ಮತಾಂಧತೆಯೇ ಭಾರತದ ಪ್ರಮುಖ ಶತ್ರುಗಳಾಗಿದ್ದು ಇಂದಿನ ಪ್ರಧಾನ ಶತ್ರುಗಳಾಗಿದ್ದು ಇವುಗಳನ್ನು ನಿರ್ಮೂಲನೆ ಮಾಡುವ ಶಪಥ ಮಾಡಬೇಕಾಗಿದೆ ಎಂದರು.

ಅಮ್ಮನ ದಿನದಂದು ಅವರ ಕನಸಿನ ನೂತನ www.naanugauri.com ವೆಬ್‌ಪೋರ್ಟಲ್‌ಅನ್ನು ಅವರ ತಂಗಿ ಕವಿತಾ ಲಂಕೇಶ್ ಲೋಕಾರ್ಪಣೆ ಮಾಡಿದರು. ಈ ಮೂಲಕ ಗೌರಿ ಸ್ಮಾರಕ ಟ್ರಸ್ಟ್ ಮುಖಾಂತರ ನಾವೆಲ್ಲರೂ ಒಂದು ಸಣ್ಣ ಗಿಫ್ಟ್ಅನ್ನು ಅಮ್ಮನಿಗೆ ನೀಡುತ್ತಿದ್ದೇವೆ. ನ್ಯಾಯಪಥ ಮುದ್ರಿತ ವಾರಪತ್ರಿಕೆ ಯಥಾಪ್ರಕಾರ ಮುಂದುವರೆಯುತ್ತದೆ. ಜೊತೆಗೆ ಈ ವೆಬ್ ಪೋರ್ಟಲ್ ಪ್ರತಿದಿನವೂ ಸತ್ಯಸುದ್ದಿಗಳನ್ನು ನಿಮ್ಮಲ್ಲಿಗೆ ತಲುಪಿಸುವ ಕೆಲಸ ಮಾಡಲಿದೆ. ಇದಕ್ಕಾಗಿ ನೂರು ಜನ

ನಜೀಬ್

ಬರಹಗಾರರು ನಮ್ಮೊಡನಿದ್ದಾರೆ.

ನಂತರ ಮದ್ಯ ನಿಷೇಧಕ್ಕೆ ಒತ್ತಾಯಿಸಿ ಪಾದಯಾತ್ರೆ ಬರುತ್ತಿದ್ದ ಮಹಿಳೆಯರ ಹೋರಾಟಕ್ಕೆ ಬೆಂಬಲ ಸೂಚಿಸಿ ಅಲ್ಲೆ ಒಂದಷ್ಟು ಹಣ ಸಂಗ್ರಹ ಮಾಡಿ ತಲುಪಿಸಲಾಯಿತು. ಈ ರೀತಿಯಾಗಿ ಅಮ್ಮನ ಹೋರಾಟದ ಸ್ಫೂರ್ತಿಯನ್ನು ಮತ್ತಷ್ಟು ಗಟ್ಟಿಗೊಳಿಸಲು ಅಮ್ಮನ ದಿನ ಅರ್ಥಪೂರ್ಣವಾಗಿ ಆಚರಿಸಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...