Homeಅಂಕಣಗಳುಅರ್ಜೆಂಟೀನಾ ವಸಾಹತು ಮತ್ತು ಆಧುನಿಕ ಇತಿಹಾಸದ ಪರಿಚಯ

ಅರ್ಜೆಂಟೀನಾ ವಸಾಹತು ಮತ್ತು ಆಧುನಿಕ ಇತಿಹಾಸದ ಪರಿಚಯ

- Advertisement -
- Advertisement -

ಹದಿನಾರನೇ ಶತಮಾನದಲ್ಲಿ ಫರ್ಡಿನ್ಯಾಂಡ್ ಮೆಗೆಲ್ಲಾನ್ ಎಂಬ ಪೋರ್ಚುಗೀಸ್ ಜಲಮಾರ್ಗ ಅನ್ವೇಷಕ, ಪ್ರಪಂಚದ ಕೊನೆ ಎಂದು ಕರೆಯಲ್ಪಡುವ ಅರ್ಜೆಂಟೀನ ಮತ್ತು ಚಿಲಿಯ ದೇಶಗಳ ದಕ್ಷಿಣದ ತುದಿ ಟಿಯೆರಾ ಡೆಲ್ ಫ್ಯೂಗೊ ದ್ವೀಪಸಮೂಹಗಳನ್ನು ತಲುಪಿದಾಗ, ಅಲ್ಲಿ ತಾನು ಕಂಡ ಮನುಷ್ಯರನ್ನು ಆಗಿನ ಯುರೋಪಿಯನ್ ಜನರಿಗಿಂತ ಎತ್ತರಕ್ಕಿರುವ ಜನರು ಎಂದು ದಾಖಲಿಸಿದ್ದ. ನಂತರ, ಈ ಪ್ರದೇಶ ಇತಿಹಾಸದ ಅನ್ವೇಷಣೆಯಲ್ಲಿ, ಇದು ಪೂರ್ವ ಶಿಲಾಯುಗದ (ಸುಮಾರು 13000 ವರ್ಷಗಳ ಹಿಂದಿನ) ಕಲೆ ಮತ್ತು ಜನರ ನಾಗರೀಕತೆಯ ಪಳೆಯುಳಿಕೆಯುಳ್ಳ ಪ್ರದೇಶವೆಂದು ಪತ್ತೆಯಾಗಿತ್ತು. ಅದಕ್ಕೆ ಪ್ಯಾಟಗೋನಿಯಾ ಎಂದು ಹೆಸರು ನೀಡಲಾಗಿತ್ತು. ಈಗಿನ ಅರ್ಜೆಂಟೀನದ ಗಡಿಗಳು ಉತ್ತರಕ್ಕೆ ಬೊಲಿವಿಯ, ಪೆರಾಗ್ವೆ ಹಾಗೂ ಬ್ರೆಸಿಲ್, ಪೂರ್ವಕ್ಕೆ ಉರುಗ್ವೆ ಮತ್ತು ಅಟ್ಲ್ಯಾಂಟಿಕ್ ಮಹಾಸಾಗರ, ದಕ್ಷಿಣಕ್ಕೆ ದೊಡ್ಡ ದೊಡ್ಡ ಹಿಮನದಿಗಳು ಹಾಗೂ ಅಂಟಾರ್ಟಿಕ, ಪಶ್ಚಿಮದ ಉದ್ದಗಲಕ್ಕೂ ಪೆಸಿಫಿಕ್ ಮಹಾಸಾಗರವನ್ನು ಬೇರ್ಪಡಿಸುವ ಸಣ್ಣ ಪಟ್ಟಿಯಂತಿರುವ ಚಿಲಿ ದೇಶ ಹಾಗೂ ಅದರ ಮಧ್ಯೆ ಆಂಡೀಸ್ ಪರ್ವತಗಳು.
ಇದು ಇಡೀ ದಕ್ಷಿಣ ಅಮೆರಿಕಾದ ಎರಡನೇ ದೊಡ್ಡ ಪ್ರದೇಶವುಳ್ಳ ಅತ್ಯಂತ ವೈವಿದ್ಯಮಯ ಪ್ರದೇಶ. ನವೋದಯದ ಗುಂಗಿನಲ್ಲಿ ಹೊಸ ಪ್ರಪಂಚವನ್ನು ಹುಡುಕುತ್ತಾ ಹೊರಟ ಯುರೋಪಿನ ವಸಾಹತುಶಾಹಿ ರಾಷ್ಟ್ರಗಳಿಂದ ತನ್ನ ಸ್ವಂತ ನೈಜ ಇತಿಹಾಸ ಕಳೆದುಕೊಂಡ ಒಂದು ಉಪಖಂಡ. “ಅಜೆರ್ಂಟಿನ” ಎಂಬ ಹೆಸರೇ ಒಂದು ವಸಾಹುತುಶಾಹಿ ಮೂಲ ಕಲ್ಪನೆಯ ಸಂಕೇತ. ಲ್ಯಾಟಿನ್ ಭಾಷೆಯಲ್ಲಿ ಬೆಳ್ಳಕ್ಕಿರುವ ಹೊಳೆಯುವ ಬೆಳ್ಳಿಯನ್ನು “ಅಜೆರ್ಂಟುಂ” ಎಂದು ಕರೆಯುತ್ತಾರೆ. ವಸಾಹತುಶಾಹಿ ಶಕ್ತಿಗಳು ಬೆಳ್ಳಿಯನ್ನು ಹುಡುಕಲು ಬಂದ ಪ್ರದೇಶವೇ ಈಗಿನ ಅರ್ಜೆಂಟೀನ. ಆದರೆ ವಿಪರ್ಯಾಸವೆಂದರೆ ಅವರಿಗೆ ಬೆಳ್ಳಿ ಬಿಟ್ಟು ಬೇರೆಲ್ಲ ಖನಿಜಗಳು ಇಲ್ಲಿ ಅವರಿಗೆ ಸಿಗುತ್ತದೆ. ಆದರೆ ಅರ್ಜೆಂಟೀನ ಹೆಸರು ಮಾತ್ರ ಉಳಿದುಕೊಳ್ಳುತ್ತದೆ.
ಜಗತ್ತಿನಾದ್ಯಂತ ವಸಾಹತುಶಾಹಿ ಪರಂಪರೆಯು, ಸ್ಥಳೀಯ ಇತಿಹಾಸವನ್ನು ಅಳಿಸಿ ಅತ್ಯಂತ ಕ್ರೂರ ಹಾಗೂ ವಿಚಿತ್ರ ಇತಿಹಾಸವನ್ನು ನಿರ್ಮಿಸುತ್ತಾ ಬಂದಿದೆ. ಆದರೆ ಅದು ಅಮೆರಿಕಾ ಖಂಡದಲ್ಲಿ ಮತ್ತು ಆಸ್ಟ್ರೇಲಿಯ ಖಂಡದಲ್ಲಿ ನಡೆಸಿದ ಮೂಲನಿವಾಸಿಗಳ ಮಾರಣಹೋಮ, ಸ್ಥಳೀಯ ಇತಿಹಾಸದ ಕಗ್ಗೊಲೆಗಳು ಬೇರೆ ಯಾವುದೇ ಇತಿಹಾಸದ ಪುಟಗಳಲ್ಲಿ ಕಂಡುಬರುವುದಿಲ್ಲ. ಜನಪ್ರಿಯ ಕಲ್ಪನೆಯಲ್ಲಿ ಭಾರತೀಯರಿಗೆ ಅರ್ಜೆಂಟೀನ ಎಂದೊಡನೆ ಬಂಡಾಯ ಮತ್ತು ಚಿರಕ್ರಾಂತಿಯ ಪ್ರತೀಕವಾಗಿರುವ ಚೆ ಗುವೆರಾ ಹುಟ್ಟಿದ ನಾಡು. ಬ್ರೆಜಿóಲ್‍ನ್ ಪೆಲೆ ನಂತರ ಫುಟ್ಬಾಲ್ ಮಾಂತ್ರಿಕ ಎಂದೇ ಪ್ರಸಿದ್ಧಿಯಾಗಿರುವ ಡಿಯಾಗೊ ಮಾರೋಡೋನ ಹಾಗೂ ಈಗಿನ ಲಿಯೋನೆಲ್ ಮೆಸ್ಸಿ ಹೆಸರುಗಳು ಮೊದಲಿಗೆ ಬರುತ್ತವೆ. ಆದರೆ ಇದರ ವಸಾಹತು ವಾಸ್ತವಿಕ ಇತಿಹಾಸ ನಮ್ಮದೇ ದೇಶದ ದಲಿತ, ಆದಿವಾಸಿ, ಹಾಗೂ ಪ್ರಪಂಚದ ಎಲ್ಲಾ ಮೂಲನಿವಾಸಿ, ಆದಿವಾಸಿ, ಬುಡಕಟ್ಟು ಇತಿಹಾಸಗಳ ಕಗ್ಗೊಲೆಗಳ ಹಾಗೆ ನಮ್ಮನ್ನು ಸದಾ ಕಾಡುವ ದುಃಸ್ವಪ್ನದಂತಿದೆ.
ಇಲ್ಲಿ ಸ್ಥಳೀಯವಾಗಿ ಒಂದು ಪ್ರಸಿದ್ದ ಮಾತಿದೆ. “ಅಜೆರ್ಂಟೆನೀಯರು ಬೋಟು ಹಾಗೂ ಹಡಗುಗಳ ವಂಶಸ್ಥರು” ಎಂದು. ಏಕೆಂದರೆ ಇಲ್ಲಿನ ಇತಿಹಾಸವು ಯುರೋಪಿಯನ್ ವಸಾಹತುಶಾಹಿಗಳಿಂದ ಆಕ್ರಮಣ, ಸ್ವಾತಂತ್ರ್ಯದ ಹೋರಾಟಗಳು, ಒಂದು ವಸಾಹತು ಶಕ್ತಿಯಿಂದ ಇನ್ನೊಂದು ವಸಾಹತು ಶಕ್ತಿಗೆ ಅಧಿಕಾರದ ಹಸ್ತಾಂತರ ಇವೆಲ್ಲವನ್ನೂ ಒಳಗೊಂಡಿರುವಂಥದ್ದು. ಪೋರ್ಚುಗೀಸ್, ಸ್ಪೇನ್, ಫ್ರೆಂಚ್, ಬ್ರಿಟಿಷ್ ಹಾಗೂ ಇನ್ನಿತರೆ ಯುರೋಪ್ ರಾಷ್ಟ್ರಗಳು ಆಳುತ್ತಾ ಬಂದು ಈಗ ದಕ್ಷಿಣ ಅಮೆರಿಕಾದಲ್ಲೇ ಅತ್ಯಂತ ಹೆಚ್ಚು ಬಿಳಿಯ ಜನಸಂಖ್ಯೆ ಉಳ್ಳ ದೇಶವಾಗಿದೆ. 62% ಜನಸಂಖ್ಯೆ ಇಟಲಿ ಮೂಲದಿಂದ ಬಂದವರಾದರೆ, 17% ಫ್ರೆಂಚ್, 8% ಜರ್ಮನ್ ಹಾಗೂ ಮಿಕ್ಕವರು ಯೂರೋಪಿನಿಂದ ವಲಸೆ ಬಂದವರಾಗಿದ್ದಾರೆ. ಬ್ಯೂನಸ್ ಐರಿಸ್ ಇದರ ರಾಜಧಾನಿ ಹಾಗೂ ಇದರ ಒಟ್ಟು ಜನಸಂಖ್ಯೆ – 2011ರ ಪ್ರಕಾರ – 4.4 ಕೋಟಿ, ದಕ್ಷಿಣ ಅಮೆರಿಕಾದಲ್ಲೇ, ಬ್ರೆಜಿಲ್ ನಂತರ ಎರಡನೇ ದೊಡ್ಡ ಜನಸಂಖ್ಯೆಯುಳ್ಳ ದೇಶ. 16ನೇ ಶತಮಾನದಿಂದ 19ನೇ ಶತಮಾನದವರೆಗೂ ಮೂರನೇ ಒಂದರಷ್ಟು ಇದ್ದ ಗುಲಾಮಿ ಕರಿಯರ ಜನಸಂಖ್ಯೆ ಇತ್ತು. ಆದರೆ ಸ್ವಾತಂತ್ರದ ನಂತರ ಇವರು ಬ್ರೆಜಿಲ್‍ಗೆ ವಲಸೆ ಹೋಗುವಂತಾಯಿತು. ಈಗ ಆದಿವಾಸಿ, ಕಪ್ಪು ವರ್ಣೀಯರ ಸಂಖ್ಯೆ 3%ರಷ್ಟಿದೆ. ಆದರೂ ಕಪ್ಪು ಜನರ ಕಲೆ ಹಾಗೂ ಟ್ಯಾಂಗೊ ಅರ್ಜೆಂಟೀನಗೆ ತನ್ನದೇ ಮಹತ್ವವನ್ನು ನೀಡಿದೆ. ಫುಟ್ಬಾಲ್ ಮತ್ತು ಬ್ಯಾಸ್ಕೆಟ್ಬಾಲ್ ಇಲ್ಲಿಯ ಜನಪ್ರಿಯ ಆಟಗಳು. ಬೀಫ್, ವೈನ್ ಹಾಗೂ ಬೊರೊನ್ ಇಲ್ಲಿಂದ ಹೆಚ್ಚಾಗಿ ರಫ್ತಾಗುವ ಸರಕುಗಳು.

ಆಧುನಿಕ ಅರ್ಜೆಂಟೀನಾ ಮತ್ತು ಅದರ ‘ಸುವರ್ಣ ಯುಗ’
ಅಜೆರ್ಂಟೀನಾದ ಆಧುನಿಕ ಇತಿಹಾಸವೇ ಒಂದು ಬಿಕ್ಕಟ್ಟಿನಿಂದ ಇನ್ನೊಂದು ಬಿಕ್ಕಟ್ಟಿನೆಡೆಗೆ ಹೊರಳಿಕೊಳ್ಳುವುದಾಗಿದೆ. ಜೊತೆಗೆ ಕಬ್ಬಿಣದ ಕಟ್ಟಳೆಯ ಆರ್ಥಿಕ ವ್ಯವಸ್ಥೆಯಿಂದ ಆಳುತ್ತಿರುವ ಆಳುವ ವರ್ಗ ಹಾಗೂ ತನ್ನ ವಿಮೋಚನಾ ಹಕ್ಕುಗಳಿಗಾಗಿ ಹೋರಾಟ ಮಾಡುವ ದುಡಿಯುವ ವರ್ಗ. ಅರ್ಜೆಂಟೀನದ ಮುಖ್ಯ ವಹಿವಾಟು ಕೃಷಿ ಮತ್ತು ದನದ ಮಾಂಸದ ರಫ್ತು. ಇಲ್ಲಿನ ಆಳುವ ವರ್ಗವೆಂದರೆ ವಸಾಹತು ಮತ್ತು ಸಾಮ್ರಾಜ್ಯಶಾಹಿ ಬೆಂಬಲಿತ ದೊಡ್ಡ ದೊಡ್ಡ ಭೂಮಾಲೀಕರು ಮತ್ತು ದಯನೀಯವಾಗಿ ಬದುಕುತ್ತಿದ್ದ ಅಸಂಘಟಿತ ಕೃಷಿ ಕೂಲಿಕಾರ್ಮಿಕರು. ಇದು 1914ರ ವೇಳೆಗೆ ಪೂರ್ಣವಾಗಿ ವಿಸ್ತಾರಗೊಂಡು ಕೃಷಿ ಪೂರಕ ಮಾಂಸ ಸಂಸ್ಕರಣಾ ಘಟಕಗಳು, ಸರಕು ಸಾಗಣೆ, ರೈಲು ಮಾರ್ಗಗಳು, ಬಂದರುಗಳ ಕೈಗಾರಿಕೆಗಳು ಸ್ಥಾಪನೆಯಾಗಿದ್ದವು. ಇದರಿಂದ ಕರಾವಳಿ ಮತ್ತು ಕೆಲವು ನಗರಗಳಲ್ಲಿ ಯಥಾಸ್ಥಿತಿವಾದವನ್ನು ಪ್ರಶ್ನಿಸುವ ಮಧ್ಯಮವರ್ಗ ಮತ್ತು ಬಿಡಿ ಬಿಡಿಯಾದ ಸಂಘಟಿತ ಕಾರ್ಮಿಕ ವರ್ಗಗಳು ಹುಟ್ಟಿಕೊಂಡವು. ಇವು ಮುಂದೆ ಆಳುವ ವರ್ಗ ಮತ್ತು ದುಡಿಯುವ ವರ್ಗದ ಸಂಘರ್ಷಕ್ಕೆ ನಾಂದಿಯಾಯಿತು. ಅರ್ಜೆಂಟೀನದ ಆಧುನಿಕ ಇತಿಹಾಸ ಶುರುವಾಗುವುದೇ ಇಲ್ಲಿಂದ. ಇಲ್ಲಿ ಹಳೆಯ ಬಲಿಷ್ಟ ವಸಾಹತು ಕೃಷಿ ಕೇಂದ್ರಿತ ಭೂಮಾಲೀಕ ವ್ಯಾಪಾರಿ ಆಳುವ ವರ್ಗ ಮತ್ತು ಕೈಗಾರಿಕೆಗಳನ್ನು ಉತ್ತೇಜಿಸುವ ಹೊಸ ಆಳುವ ವರ್ಗವಿದೆ. ದುಡಿಯುವ ವರ್ಗ ರೂಪುಗೊಂಡಿರುವುದು ಹೀಗೆ. 1914ರ ಹೊತ್ತಿಗೆ ಇನ್ನು ಸಾಧ್ಯವಿಲ್ಲದಷ್ಟು ವಿಸ್ತಾರಗೊಂಡಿದ್ದ ಕೃಷಿ ವ್ಯವಹಾರದಲ್ಲಿದ್ದವರು ಮತ್ತು ಅಸಂಘಟಿತ ಕೂಲಿಕಾರ್ಮಿಕರಿಂದ ಸಂಘಟಿತ ಕಾರ್ಮಿಕರಾಗುತ್ತಿದ್ದ ವiಧ್ಯಮ ದುಡಿಯುವ ವರ್ಗ.
ಇದೇ ಸಮಯದಲ್ಲಿ ಮೊದಲನೇ ಮಹಾಯುದ್ಧದ ಸಂದರ್ಭದಲ್ಲಿ ಕೃಷಿ ಉತ್ಪನ್ನಗಳಿಗೆ ಭಾರೀ ಬೇಡಿಕೆಯುಂಟಾಗಿ, ರಫ್ತು ಹೆಚ್ಚಾಗಿ ಭೂಮಾಲೀಕರ ಸಂಪತ್ತನ್ನು ಹೆಚ್ಚಿಸಿತು ಮತ್ತು ಹೊಸದಾಗಿ ಸ್ಥಾಪನೆಯಾಗುತ್ತಿದ್ದ ಕೈಗಾರಿಕೆಗಳಿಗೆ ಕಚ್ಛಾ ವಸ್ತುಗಳು ಮತ್ತು ಬಂಡವಾಳದ ಸರಕುಗಳ ಆಮದು ಇಳಿಕೆಯಿಂದ ಹೊಸ ಬಿಕ್ಕಟ್ಟನ್ನು ತೀವ್ರಗೊಳಿಸಿತು. ನಿರುದ್ಯೋಗ ಹೆಚ್ಚಾಯಿತು, ಸಂಬಳ ಕುಸಿಯಿತು ಮತ್ತು ಕಾರ್ಮಿಕರ ಪರಿಸ್ಥಿತಿ ಬಿಗಡಾಯಿಸಿತು. ಸರಣಿ ಮುಷ್ಕರಗಳು, ಅರ್ಜೆಂಟೀನಾದ ಸಾರಿಗೆ ಮತ್ತು ಪಟ್ಟಣಗಳ ಸೇವಾ ಕ್ಷೇತ್ರಗಳನ್ನು ಆವರಿಸಿದವು. ಇದೆ ಸಮಯದಲ್ಲಿ ಕಾರ್ಮಿಕರನ್ನು ಪ್ರತಿನಿಧಿಸುವ ನಾಯಕತ್ವದಲ್ಲೂ ಬದಲಾವಣೆಗಳಾಗುತ್ತಿದ್ದವು. 1905ರಲ್ಲಿ ತನ್ನ 5ನೇ ಮಹಾಧಿವೇಶನದಲ್ಲಿ ತನ್ನನ್ನು ತಾನೇ ಅರಾಜಕವಾದಿ-ಕಮ್ಯೂನಿಸ್ಟ್ ಎಂದು ಘೋಷಿಸಿಕೊಂಡಿದ್ದ ಕಾರ್ಮಿಕ ಸಂಘಟನೆಗಳ ಒಕ್ಕೂಟವಾಗಿದ್ದ ಫೋರ (ಫೆಡರೇಶನ್ ಒಬ್ರೆರ ರೀಜನಲ್ ಅರ್ಜೆಂಟೀನ) 1915ರ ಹೊತ್ತಿಗೆ ತನ್ನ ಕ್ರಾಂತಿಕಾರಿ ನಿಲುವುಗಳನ್ನು ತ್ಯಜಿಸಿತು.
ಇನ್ನೂ ಕ್ರಾಂತಿಕಾರಿ ನಿಲುವುಗಳಲ್ಲಿ ನಂಬಿಕೆ ಇಟ್ಟಿದ್ದ ಕಾರ್ಮಿಕ ಒಕ್ಕೂಟಗಳು ತಮ್ಮನ್ನು ತಾವೇ ಫೋರ 5 ಎಂಬ ಹೆಸರನ್ನು ಮುಂದುವರೆಸಿಕೊಂಡು ಬಂದವು. ಕಾರ್ಮಿಕರ ಬಿಕ್ಕಟ್ಟು ಉಲ್ಬಣಗೊಳ್ಳುತ್ತಿರುವಾಗಲೇ ರಶಿಯ ಕ್ರಾಂತಿಯ ಸುದ್ದಿ, ಫೋರ 5ಅನ್ನು ಮುಷ್ಕರಗಳು ಮತ್ತು ಹೋರಾಟಗಳಲ್ಲಿ ಮುಂಚೂಣಿಗೆ ತಂದು ನಿಲ್ಲಿಸಿತ್ತು. 1919 ಜನವರಿ ತಿಂಗಳಲ್ಲಿ ದೊಡ್ಡ ದಂಗೆ ರಾಜಧಾನಿ ಬ್ಯೂನಸ್ ಐರಿಸ್‍ನಲ್ಲಿ ಸ್ಪೋಟಗೊಂಡಿತ್ತು. ಪೋಲೀಸ್ ಹಾಗೂ ಲೋಹ ಕಾರ್ಖಾನೆಯಲ್ಲಿನ ಕಾರ್ಮಿಕರ ನಡುವೆ ಆದ ಸಂಘರ್ಷದಿಂದ ಕಾರ್ಮಿಕರ ಸಾವು ಸಂಭವಿಸಿತ್ತು. ಫೋರ-5 ಜನವರಿ 9ಕ್ಕೆ ಸಾರ್ವತ್ರಿಕ ಮುಷ್ಕರಕ್ಕೆ ಕರೆ ಕೊಟ್ಟಿತ್ತು. ರಾಜಧಾನಿಯಲ್ಲಿ 2 ಲಕ್ಷ ಶಸ್ತ್ರಸಜ್ಜಿತ ಕಾರ್ಮಿಕರು, ನಾಗರಿಕರು, ಪೋಲೀಸ್ ಹಾಗೂ ವ್ಯವಸ್ಥೆಯನ್ನು ಒಂದು ವಾರಗಳ ಕಾಲ ಬುಡಮೇಲು ಮಾಡಿದ್ದರು. ಇದು ಒಂದು ಕಾರ್ಖಾನೆಯಲ್ಲಿ ನಡೆದ ಘಟನೆಗಿಂತ ಇಡೀ ಅರ್ಜೆಂಟೀನಾದ ಕಾರ್ಮಿಕರ ಅಸಮಾಧಾನ ಹೊರಗೆ ಬಂದಿತ್ತು. ಸೇನೆಯ ಮೂಲಕ ಇದನ್ನು ಹತ್ತಿಕ್ಕಲಾಯಿತು. ಇದೆ ರೀತಿ ಕಾರ್ಮಿಕರ ದಂಗೆಗಳು ಅರ್ಜೆಂಟೀನ ದೇಶದಾದ್ಯಂತ 2 ವರ್ಷಗಳ ಕಾಲ ಸ್ಫೋಟಗೊಂಡವು. ಇದನ್ನು ಪ್ರಭುತ್ವ ದಮನಕಾರಿ ರೀತಿಯಲ್ಲಿ ಹತ್ತಿಕ್ಕಿತು. ಮತ್ತೆ 1921ರ ಜನವರಿಯಲ್ಲಿ ಕಾರ್ಮಿಕ ಸಂಘಟನೆಗಳು ಸಾರ್ವತ್ರಿಕ ಮುಷ್ಕರಕ್ಕೆ ಕರೆ ಕೊಟ್ಟಾಗ ಅದನ್ನು ಪ್ರಭುತ್ವ ಕೊಲೆಗಾರನ ಹೀನ ರೀತಿಯಲ್ಲಿ ದಮನಿಸಿತು. ಗ್ರಾಮೀಣ ಪ್ರದೇಶದಲ್ಲಿ ತನ್ನ ಭೂಮಿ ಮತ್ತು ಶಕ್ತಿ ಕಳೆದುಕೊಂಡಿದ್ದ ವಸಾಹತುಷಾಹಿ ಬ್ರಿಟಿಷ್ & ಜರ್ಮನ್ನರು ಹಾಗೂ ಅರ್ಜೆಂಟೀನ ಆಳುವ ವರ್ಗದ ಜನ ನಿಟ್ಟುಸಿರು ಬಿಟ್ಟರು. 1900 ರಿಂದ 1930ರವರೆಗೆ ಅರ್ಜೆಂಟೀನ ಆರ್ಥಿಕತೆ ಚೇತರಿಸಿಕೊಂಡಿತು ಮತ್ತು 1929ರಲ್ಲಲಿ ಜಾಗತಿಕ ಆರ್ಥಿಕತೆ ಬೀಳುವವರೆಗೂ ಅರ್ಜೆಂಟೀನ ಪ್ರಪಂಚದ 10 ಶ್ರೀಮಂತ ರಾಷ್ಟ್ರಗಳಲ್ಲಿ ಒಂದಾಗಿತ್ತು. ಇದನ್ನು ಅರ್ಜೆಂಟೀನ ಪ್ರಭುತ್ವ ಸುವರ್ಣ ಯುಗ ಎಂದು ಕರೆಯುತ್ತದೆ.

ಮುಂದಿನ ಸಂಚಿಕೆಯಲ್ಲಿ: ಪೆರನಿಸಮ್ ಮತ್ತು ಮಿಲಿಟರೀ ಸರ್ವಾಧಿಕಾರ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...