Homeಅಂತರಾಷ್ಟ್ರೀಯಅರ್ನಾಬ್ ಗೋಸ್ವಾಮಿ boycott Pakistana ಅಂದ್ರೆ, ಸೌದಿ ರಾಜಕುಮಾರನ ಮುಂದೆ friendship Pakistana ಅಂದ್ರು ಮೋದಿ!

ಅರ್ನಾಬ್ ಗೋಸ್ವಾಮಿ boycott Pakistana ಅಂದ್ರೆ, ಸೌದಿ ರಾಜಕುಮಾರನ ಮುಂದೆ friendship Pakistana ಅಂದ್ರು ಮೋದಿ!

- Advertisement -
- Advertisement -

ಪುಲ್ವಾಮಾ ಭಯೋತ್ಪಾದಾಕ ದಾಳಿ ನಡೆದು ಸರಿಯಾಗಿ ಆರು ದಿನಗಳ ನಂತರ ಫೆಬ್ರವರಿ 20ರಂದು ಪ್ರಧಾನಿ ಮೋದಿಯವರು ಮತ್ತು ಸೌದಿ ಅರೇಬಿಯಾದ ರಾಜಕುಮಾರ ಅಬ್ದುಲ್ಲಾ (ಎಂಬಿಎಸ್) ಜೊತೆಯಾಗಿ ಬಿಡುಗಡೆ ಮಾಡಿದ ಉಭಯ ದೇಶಗಳ ಜಂಟಿ ಹೇಳಿಕೆ ಮೋದಿಯವರ ಸಮರ್ಥಕರಿಗೆ, ಮುಖ್ಯವಾಗಿ ಮೀಡಿಯಾದಲ್ಲಿ ಅವರ ಪರ ಚಿಯರ್ ಮಾಡುವ ಅರ್ನಾಬ್ ಗೋಸ್ವಾಮಿಯಂತಹ ಆಂಕರುಗಳಿಗೆ ಭಾರೀ ನಿರಾಸೆ ಉಂಟುಮಾಡಿತ್ತು. ಯಾಕೆಂದರೆ ಪುಲ್ವಾಮಾ ದಾಳಿಗೆ ಪಾಕಿಸ್ತಾನವನ್ನು ಖಂಡಿಸುವಂತ ಒಂದೇಒಂದು ಸಾಲೂ ಅದರಲ್ಲಿ ಇರಲಿಲ್ಲ. ಅರ್ಥಾತ್, ಸೌದಿ ರಾಜಕುಮಾರನಿಗೆ ಪಾಕಿಸ್ತಾನದ ಡಬಲ್ ಸ್ಟಾಂಡರ್ಡ್ ಅರ್ಥ ಮಾಡಿಸುವ ವಿಚಾರದಲ್ಲಿ ಮೋದಿ ಸಂಪೂರ್ಣವಾಗಿ ಸೋತುಹೋಗಿದ್ದರು. ಬದಲಿಗೆ ಆ ಹೇಳಿಕೆಯಲ್ಲಿ ಭಾರತ-ಪಾಕಿಸ್ತಾನದ ನಡುವೆ ಸಂಬಂಧ ವೃದ್ಧಿಯಾಗಬೇಕು ಎಂಬ ಆಶಯವಿತ್ತು. ದಾಯಾದಿ ದೇಶಗಳ ನಡುವೆ ಸಂಬಂಧ ಸುಧಾರಿಸಬೇಕು ಎನ್ನುವುದೇನೊ ಒಪ್ಪಬಹುದಾದ ಸಂಗತಿ, ಆದರೆ ಇಂಥಾ ಭಯೋತ್ಪಾದನೆ ದಾಳಿ ನಡೆದ ಸಂದರ್ಭದಲ್ಲಿ ಹೇಳುವ ಮಾತಾ ಇದು. ಅದರಲ್ಲು, ಪುಲ್ವಾಮಾ ದಾಳಿಯ ಸುದ್ದಿ ತಿಳಿದ ಮೇಲೆ ಝಾನ್ಸಿ ರ್ಯಾಲಿಯಲ್ಲಿ ಸ್ವತಃ ಮೋದಿಯವರೇ `ಮೋದಿಯ ಆಳ್ವಿಕೆಯಲ್ಲಿ ಭಾರತ ಏಳಿಗೆ ಆಗುತ್ತಿರೋದನ್ನು ಸಹಿಸದ ಹೊಟ್ಟೆಕಿಚ್ಚಿನ ದೇಶದವಾದ ಪಾಕಿಸ್ತಾನ ಇಂಥಾ ದಾಳಿ ನಡೆಸಿದೆ’ ಎಂದು ದೂರಿದ್ದರು. ಹಾಗಿರುವಾಗ ಇಂಡಿಯಾ-ಸೌದಿ ಜಂಟಿ ಹೇಳಿಕೆಯಲ್ಲಿ ಪಾಕಿಸ್ತಾನವನ್ನು ಖಂಡಿಸದೆ ಅದರ ಜೊತೆ ಸಂಬಂಧ ವೃದ್ಧಿಯ ಪ್ರಸ್ತಾಪ ಬಂದಿದೆಯೆಂದರೆ ಮೋದಿ ಜಾಗತಿಕ ವೇದಿಕೆಯಲ್ಲಿ ಸೋತಿದ್ದಾರೆ ಅಂತ ತಾನೇ ಅರ್ಥ!

ಜಂಟಿ ಹೇಳಿಕೆಯಲ್ಲಿ ಪುಲ್ವಾಮ ದಾಳಿಯನ್ನು ಖಂಡಿಸಲಾಗಿದೆಯಾದರು, ಅದಕ್ಕೆ ಪಾಕಿಸ್ತಾನವನ್ನು ಹೊಣೆ ಎಂದು ಎಲ್ಲೂ ಕರೆದಿಲ್ಲ. “ಜಮ್ಮು ಮತ್ತು ಕಾಶ್ಮೀರಾದ ಪುಲ್ವಾಮಾದಲ್ಲಿ 14 ಫೆಬ್ರವರಿ 2019ರಂದು ಭಾರತ ಭದ್ರತಾ ಪಡೆಗಳ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ಪ್ರಧಾನ ಮಂತ್ರಿಗಳು ಮತ್ತು ಘನತೆವೆತ್ತ ದೊರೆಗಳು ಖಂಡಿಸುತ್ತಾರೆ” ಎಂದಷ್ಟೇ ಅದರಲ್ಲಿದೆ.

ಇದೇ ಜಂಟಿ ಹೇಳಿಕೆಯಲ್ಲಿ ಭಯೋತ್ಪಾದನೆಗೆ ಪ್ರೋತ್ಸಾಹ ನೀಡುತ್ತಿರುವ ರಾಷ್ಟ್ರಗಳ ಬಗ್ಗೆ ಮಾತಾಡುವಾಗಲೂ ಪಾಕಿಸ್ತಾನದ ಹೆಸರನ್ನು ಪ್ರಸ್ತಾಪಿಸಿಲ್ಲ! “ಭಯೋತ್ಪಾದನೆಯನ್ನು ತಮ್ಮ ಆಡಳಿತ ನೀತಿಯ ಒಂದು ಅಸ್ತ್ರವನ್ನಾಗಿ ಮಾಡಿಕೊಂಡ ಎಲ್ಲಾ ರಾಷ್ಟ್ರಗಳು ಅದನ್ನು ತ್ಯಜಿಸಬೇಕು ಎಂದು ಉಭಯ ದೇಶಗಳು ಕರೆಕೊಡುತ್ತವೆ. ಬೇರೆ ದೇಶಗಳ ಮೇಲೆ ಭಯೋತ್ಪಾದಕ ದಾಳಿಗಳನ್ನು ನಡೆಸಲು ಮಿಸೈಲ್ ಮತ್ತು ಡ್ರೋಣ್ ಗಳನ್ನು ಒಳಗೊಂಡಂತೆ ಯಾವ ಶಸ್ತ್ರಾಸ್ತ್ರಗಳನ್ನೂ ಪೂರೈಕೆ ಮಾಡಬಾರದು ಎಂಬುದಾಗಿಯೂ ನಾವು ಕರೆಕೊಡುತ್ತೇವೆ”.

ಹೀಗೆ ಮುಂದುವರೆಯುವ ಹೇಳಿಕೆಯು, “ಉಗ್ರವಾದ ಮತ್ತು ಭಯೋತ್ಪಾದನೆಗಳು ಎಲ್ಲಾ ದೇಶಗಳು ಮತ್ತು ಸಮಾಜಗಳಿಗೆ ಕಂಟಕ ಪ್ರಾಯವಾದವು ಎಂಬುದನ್ನು ದೃಢಪಡಿಸುತ್ತಲೇ, ಈ ಜಾಗತಿಕ ಪಿಡುಗನ್ನು ಯಾವುದೇ ನಿರ್ದಿಷ್ಟ ಜನಾಂಗ, ಧರ್ಮ ಅಥವಾ ಸಂಸ್ಕೃತಿಗೆ ತಳುಕು ಹಾಕುವ ಯಾವುದೇ ಪ್ರಯತ್ನವನ್ನು ಉಭಯ ರಾಷ್ಟ್ರಗಳು ತಿರಸ್ಕರಿಸುತ್ತವೆ. ಇತರೆ ದೇಶಗಳ ಮೇಲೆ ಭಯೋತ್ಪಾದನೆಯನ್ನು ಒಂದು ಅಸ್ತ್ರವಾಗಿ ಪ್ರಯೋಗಿಸದಂತೆ; ಈಗಾಗಲೇ ತಮ್ಮ ಒಳಗೆ ಭಯೋತ್ಪಾದಕ ಸಂಘಟನೆಗಳು ಇದ್ದರೆ ಅವುಗಳನ್ನು ನಾಶ ಮಾಡುವಂತೆ ಮತ್ತು ಬೇರೆ ರಾಷ್ಟ್ರಗಳ ಮೇಲೆ ಭಯೋತ್ಪಾದನಾ ದಾಳಿಗೆ ಯಾವುದೇ ರೀತಿಯ ನೆರವು, ಹಣಕಾಸು ನೀಡದಂತೆ; ಮತ್ತು ಭಯೋತ್ಪಾದಕ ಕೃತ್ಯಗಳನ್ನು ನಡೆಸುವ ಸಮಾಜಘಾತುಕರನ್ನು ನ್ಯಾಯಾಲಯದ ವ್ಯಾಪ್ತಿಗೆ ತರುವಂತೆ ಎಲ್ಲಾ ದೇಶಗಳಿಗೆ ಉಭಯ ದೇಶಗಳು ಕರೆಕೊಡುತ್ತೇವೆ.”

ಇಲ್ಲು ಸಹಾ ಎಲ್ಲೂ ಪಾಕಿಸ್ತಾನದ ಹೆಸರನ್ನೇ ತರಲಾಗಿಲ್ಲ. ಪುಲ್ವಾಮಾ ದಾಳಿ ನಡೆಯುತ್ತಿದ್ದಂತೆಯೇ ಸ್ವತಃ ಪ್ರಧಾನಿ ಮೋದಿಯವರಲ್ಲದೆ ಅವರ ಹಿಂಬಾಲಕರೆಲ್ಲ ಪಾಕಿಸ್ತಾನವೇ ಇದನ್ನು ಮಾಡಿಸಿರುವುದಾಗಿ ಬಹಳ ಸ್ಪಷ್ಟವಾಗಿ ಹೇಳುತ್ತಾ ಬಂದಿದ್ದಾರೆ. ಈಗಲೂ ಬಿಜೆಪಿಯ ಸಂಬಂಧಿತ ಸೋಶಿಯಲ್ ನೆಟ್ ವರ್ಕ್ ಗಳು ಪಾಕಿಸ್ತಾನವನ್ನು ಮುಂದಿಟ್ಟುಕೊಂಡು ದೇಶಪ್ರೇಮದ ಹೆಸರಲ್ಲಿ ಲೋಡುಗಟ್ಟಲೆ ಮೆಸೇಜುಗಳನ್ನು ಹರಿಬಿಡುತ್ತಿವೆ. ಆದರೆ ಸ್ವತಃ ಮೋದಿಯವರೇ ಸೌದಿ ಅರೇಬಿಯಾದ ರಾಜನಿಗೆ ಇದನ್ನು ಮನವರಿಕೆ ಮಾಡಿಕೊಡಲು ಸೋತು ಹೋಗಿದ್ದಾರೆ.

ಇಡೀ ಜಂಟಿ ಹೇಳಿಕೆಯಲ್ಲಿ ಪಾಕಿಸ್ತಾನದ ಹೆಸರು ಕಾಣಿಸಿಕೊಂಡಿರುವುದು ಒಂದೇ ಕಡೆ, ಅದೂ `ಭಾರತ-ಪಾಕಿಸ್ತಾನ’ ನಡುವೆ ಮತ್ತೆ ಮಾತುಕತೆ ಶುರುವಾಗಬೇಕೆಂಬ ಫ್ರೆಂಡ್ಲಿ ಅಡ್ವೈಸಿಂಗ್ ನ ಬಿಟ್ಟಿ ಸಲಹೆಯಲ್ಲಿ. “ಉಭಯ ದೇಶಗಳು ಪ್ರಾದೇಶಿಕ ಸ್ಥಿರತೆ ಮತ್ತು ನೆರೆ ರಾಷ್ಟ್ರಗಳ ಜೊತೆ ಸೌಹಾರ್ದಯುತ ಸಂಬಂಧದ ಪ್ರಾಮುಖ್ಯತೆಗೆ ಒತ್ತು ನೀಡುತ್ತವೆ. ಈ ನಿಟ್ಟಿನಲ್ಲಿ ಪಾಕಿಸ್ತಾನದ ಜೊತೆ ಸ್ನೇಹವನ್ನು ವೃದ್ಧಿಸಲು ಮೇ 2014ರಲ್ಲಿ ತಾವು ಅಧಿಕಾರ ವಹಿಸಿಕೊಂಡ  ನಂತರ ಪ್ರಧಾನಿ ಮೋದಿಯವರು   ಕೈಗೊಂಡಿರುವ ನಿರಂತರ ಪ್ರಯತ್ನಗಳನ್ನು ಘನತೆವೆತ್ತ ರಾಜಕುಮಾರರು ಪ್ರಶಂಸಿಸುತ್ತಾರೆ. ಇದಕ್ಕೆ ಸಂಬಂಧಿಸಿದಂತೆ, ಭಾರತ ಮತ್ತು ಪಾಕಿಸ್ತಾನಗಳ ನಡುವೆ ಸಮಗ್ರ ಮಾತುಕತೆಗಳು ಪುನರಾರಂಭಗೊಳ್ಳುವಂತಹ ವಾತಾವರಣ ನಿರ್ಮಿಸಲು ಉಭಯ ರಾಷ್ಟ್ರಗಳು ಬಯಸುತ್ತವೆ”.

ಒಟ್ಟಿನಲ್ಲಿ ಮೋದಿ ಪರ ಮೀಡಿಯಾ ಚಿಯರ್ ಆಂಕರುಗಳು ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲು `ಸಮರ್ಥ ನಾಯಕ’ ಭಾರತಕ್ಕೆ ಬೇಕಾಗಿದೆ ಅಂತ ಮೋದಿಯನ್ನೇ ಮತ್ತೊಮ್ಮೆ ಕದ್ದುಮುಚ್ಚಿ ಪ್ರೊಜೆಕ್ಟ್ ಮಾಡಲು ಹೆಣಗಾಡುತ್ತಿರುವಾಗಲೇ, ಹಿಂದೊಮ್ಮೆ (ಪ್ರಧಾನಿಯಾಗುವುದಕ್ಕೂ ಮುನ್ನ) `ಪಾಕಿಸ್ತಾನಕ್ಕೆ ಅದರದೇ ಭಾಷೆಯಲ್ಲಿ ಉತ್ತರ ಕೊಡಬೇಕು’ ಎಂದು ಗುಡುಗಿದ್ದ ಮೋದಿ, ಭಾರತದ ಪ್ರಧಾನಿಯ ಹುದ್ದೆಯಲ್ಲಿ ಕೂತುಕೊಂಡು ­ದೇಶದ ಮೇಲೆ ಮತ್ತೊಂದು ಡಿಪ್ಲೊಮ್ಯಾಟಿಕ್ ದುರಂತವನ್ನು ಎಳೆದುಬಿಟ್ಟಿದ್ದಾರೆ! ಪಾಪಾ, ಪುಲ್ವಾಮ ಘಟನೆಯಲ್ಲಿ ಮಡಿದ ನಮ್ಮ 45 ಸೈನಿಕರ ಜೀವಗಳನ್ನೇ ಬಂಡವಾಳ ಮಾಡಿಕೊಂಡು #boycottpakistan ಅನ್ನೋ ಹ್ಯಾಷ್‌ಟ್ಯಾಗ್ ಓಡಿಸುತ್ತಿದ್ದ ಅರ್ನಾಬ್ ಗೋಸ್ವಾಮಿ ಥರದ ಚಿಯರ್ ಆಂಕರುಗಳು ಮೋದಿಯ ಜಂಟಿ ಹೇಳಿಕೆಯಿಂದ ಗಪ್.ಚುಪ್ ಆಗಿದ್ದಾರೆ.

ಆಧಾರ: janta ka reporter

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...