Homeಅಂತರಾಷ್ಟ್ರೀಯಅರ್ನಾಬ್ ಗೋಸ್ವಾಮಿ boycott Pakistana ಅಂದ್ರೆ, ಸೌದಿ ರಾಜಕುಮಾರನ ಮುಂದೆ friendship Pakistana ಅಂದ್ರು ಮೋದಿ!

ಅರ್ನಾಬ್ ಗೋಸ್ವಾಮಿ boycott Pakistana ಅಂದ್ರೆ, ಸೌದಿ ರಾಜಕುಮಾರನ ಮುಂದೆ friendship Pakistana ಅಂದ್ರು ಮೋದಿ!

- Advertisement -
- Advertisement -

ಪುಲ್ವಾಮಾ ಭಯೋತ್ಪಾದಾಕ ದಾಳಿ ನಡೆದು ಸರಿಯಾಗಿ ಆರು ದಿನಗಳ ನಂತರ ಫೆಬ್ರವರಿ 20ರಂದು ಪ್ರಧಾನಿ ಮೋದಿಯವರು ಮತ್ತು ಸೌದಿ ಅರೇಬಿಯಾದ ರಾಜಕುಮಾರ ಅಬ್ದುಲ್ಲಾ (ಎಂಬಿಎಸ್) ಜೊತೆಯಾಗಿ ಬಿಡುಗಡೆ ಮಾಡಿದ ಉಭಯ ದೇಶಗಳ ಜಂಟಿ ಹೇಳಿಕೆ ಮೋದಿಯವರ ಸಮರ್ಥಕರಿಗೆ, ಮುಖ್ಯವಾಗಿ ಮೀಡಿಯಾದಲ್ಲಿ ಅವರ ಪರ ಚಿಯರ್ ಮಾಡುವ ಅರ್ನಾಬ್ ಗೋಸ್ವಾಮಿಯಂತಹ ಆಂಕರುಗಳಿಗೆ ಭಾರೀ ನಿರಾಸೆ ಉಂಟುಮಾಡಿತ್ತು. ಯಾಕೆಂದರೆ ಪುಲ್ವಾಮಾ ದಾಳಿಗೆ ಪಾಕಿಸ್ತಾನವನ್ನು ಖಂಡಿಸುವಂತ ಒಂದೇಒಂದು ಸಾಲೂ ಅದರಲ್ಲಿ ಇರಲಿಲ್ಲ. ಅರ್ಥಾತ್, ಸೌದಿ ರಾಜಕುಮಾರನಿಗೆ ಪಾಕಿಸ್ತಾನದ ಡಬಲ್ ಸ್ಟಾಂಡರ್ಡ್ ಅರ್ಥ ಮಾಡಿಸುವ ವಿಚಾರದಲ್ಲಿ ಮೋದಿ ಸಂಪೂರ್ಣವಾಗಿ ಸೋತುಹೋಗಿದ್ದರು. ಬದಲಿಗೆ ಆ ಹೇಳಿಕೆಯಲ್ಲಿ ಭಾರತ-ಪಾಕಿಸ್ತಾನದ ನಡುವೆ ಸಂಬಂಧ ವೃದ್ಧಿಯಾಗಬೇಕು ಎಂಬ ಆಶಯವಿತ್ತು. ದಾಯಾದಿ ದೇಶಗಳ ನಡುವೆ ಸಂಬಂಧ ಸುಧಾರಿಸಬೇಕು ಎನ್ನುವುದೇನೊ ಒಪ್ಪಬಹುದಾದ ಸಂಗತಿ, ಆದರೆ ಇಂಥಾ ಭಯೋತ್ಪಾದನೆ ದಾಳಿ ನಡೆದ ಸಂದರ್ಭದಲ್ಲಿ ಹೇಳುವ ಮಾತಾ ಇದು. ಅದರಲ್ಲು, ಪುಲ್ವಾಮಾ ದಾಳಿಯ ಸುದ್ದಿ ತಿಳಿದ ಮೇಲೆ ಝಾನ್ಸಿ ರ್ಯಾಲಿಯಲ್ಲಿ ಸ್ವತಃ ಮೋದಿಯವರೇ `ಮೋದಿಯ ಆಳ್ವಿಕೆಯಲ್ಲಿ ಭಾರತ ಏಳಿಗೆ ಆಗುತ್ತಿರೋದನ್ನು ಸಹಿಸದ ಹೊಟ್ಟೆಕಿಚ್ಚಿನ ದೇಶದವಾದ ಪಾಕಿಸ್ತಾನ ಇಂಥಾ ದಾಳಿ ನಡೆಸಿದೆ’ ಎಂದು ದೂರಿದ್ದರು. ಹಾಗಿರುವಾಗ ಇಂಡಿಯಾ-ಸೌದಿ ಜಂಟಿ ಹೇಳಿಕೆಯಲ್ಲಿ ಪಾಕಿಸ್ತಾನವನ್ನು ಖಂಡಿಸದೆ ಅದರ ಜೊತೆ ಸಂಬಂಧ ವೃದ್ಧಿಯ ಪ್ರಸ್ತಾಪ ಬಂದಿದೆಯೆಂದರೆ ಮೋದಿ ಜಾಗತಿಕ ವೇದಿಕೆಯಲ್ಲಿ ಸೋತಿದ್ದಾರೆ ಅಂತ ತಾನೇ ಅರ್ಥ!

ಜಂಟಿ ಹೇಳಿಕೆಯಲ್ಲಿ ಪುಲ್ವಾಮ ದಾಳಿಯನ್ನು ಖಂಡಿಸಲಾಗಿದೆಯಾದರು, ಅದಕ್ಕೆ ಪಾಕಿಸ್ತಾನವನ್ನು ಹೊಣೆ ಎಂದು ಎಲ್ಲೂ ಕರೆದಿಲ್ಲ. “ಜಮ್ಮು ಮತ್ತು ಕಾಶ್ಮೀರಾದ ಪುಲ್ವಾಮಾದಲ್ಲಿ 14 ಫೆಬ್ರವರಿ 2019ರಂದು ಭಾರತ ಭದ್ರತಾ ಪಡೆಗಳ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ಪ್ರಧಾನ ಮಂತ್ರಿಗಳು ಮತ್ತು ಘನತೆವೆತ್ತ ದೊರೆಗಳು ಖಂಡಿಸುತ್ತಾರೆ” ಎಂದಷ್ಟೇ ಅದರಲ್ಲಿದೆ.

ಇದೇ ಜಂಟಿ ಹೇಳಿಕೆಯಲ್ಲಿ ಭಯೋತ್ಪಾದನೆಗೆ ಪ್ರೋತ್ಸಾಹ ನೀಡುತ್ತಿರುವ ರಾಷ್ಟ್ರಗಳ ಬಗ್ಗೆ ಮಾತಾಡುವಾಗಲೂ ಪಾಕಿಸ್ತಾನದ ಹೆಸರನ್ನು ಪ್ರಸ್ತಾಪಿಸಿಲ್ಲ! “ಭಯೋತ್ಪಾದನೆಯನ್ನು ತಮ್ಮ ಆಡಳಿತ ನೀತಿಯ ಒಂದು ಅಸ್ತ್ರವನ್ನಾಗಿ ಮಾಡಿಕೊಂಡ ಎಲ್ಲಾ ರಾಷ್ಟ್ರಗಳು ಅದನ್ನು ತ್ಯಜಿಸಬೇಕು ಎಂದು ಉಭಯ ದೇಶಗಳು ಕರೆಕೊಡುತ್ತವೆ. ಬೇರೆ ದೇಶಗಳ ಮೇಲೆ ಭಯೋತ್ಪಾದಕ ದಾಳಿಗಳನ್ನು ನಡೆಸಲು ಮಿಸೈಲ್ ಮತ್ತು ಡ್ರೋಣ್ ಗಳನ್ನು ಒಳಗೊಂಡಂತೆ ಯಾವ ಶಸ್ತ್ರಾಸ್ತ್ರಗಳನ್ನೂ ಪೂರೈಕೆ ಮಾಡಬಾರದು ಎಂಬುದಾಗಿಯೂ ನಾವು ಕರೆಕೊಡುತ್ತೇವೆ”.

ಹೀಗೆ ಮುಂದುವರೆಯುವ ಹೇಳಿಕೆಯು, “ಉಗ್ರವಾದ ಮತ್ತು ಭಯೋತ್ಪಾದನೆಗಳು ಎಲ್ಲಾ ದೇಶಗಳು ಮತ್ತು ಸಮಾಜಗಳಿಗೆ ಕಂಟಕ ಪ್ರಾಯವಾದವು ಎಂಬುದನ್ನು ದೃಢಪಡಿಸುತ್ತಲೇ, ಈ ಜಾಗತಿಕ ಪಿಡುಗನ್ನು ಯಾವುದೇ ನಿರ್ದಿಷ್ಟ ಜನಾಂಗ, ಧರ್ಮ ಅಥವಾ ಸಂಸ್ಕೃತಿಗೆ ತಳುಕು ಹಾಕುವ ಯಾವುದೇ ಪ್ರಯತ್ನವನ್ನು ಉಭಯ ರಾಷ್ಟ್ರಗಳು ತಿರಸ್ಕರಿಸುತ್ತವೆ. ಇತರೆ ದೇಶಗಳ ಮೇಲೆ ಭಯೋತ್ಪಾದನೆಯನ್ನು ಒಂದು ಅಸ್ತ್ರವಾಗಿ ಪ್ರಯೋಗಿಸದಂತೆ; ಈಗಾಗಲೇ ತಮ್ಮ ಒಳಗೆ ಭಯೋತ್ಪಾದಕ ಸಂಘಟನೆಗಳು ಇದ್ದರೆ ಅವುಗಳನ್ನು ನಾಶ ಮಾಡುವಂತೆ ಮತ್ತು ಬೇರೆ ರಾಷ್ಟ್ರಗಳ ಮೇಲೆ ಭಯೋತ್ಪಾದನಾ ದಾಳಿಗೆ ಯಾವುದೇ ರೀತಿಯ ನೆರವು, ಹಣಕಾಸು ನೀಡದಂತೆ; ಮತ್ತು ಭಯೋತ್ಪಾದಕ ಕೃತ್ಯಗಳನ್ನು ನಡೆಸುವ ಸಮಾಜಘಾತುಕರನ್ನು ನ್ಯಾಯಾಲಯದ ವ್ಯಾಪ್ತಿಗೆ ತರುವಂತೆ ಎಲ್ಲಾ ದೇಶಗಳಿಗೆ ಉಭಯ ದೇಶಗಳು ಕರೆಕೊಡುತ್ತೇವೆ.”

ಇಲ್ಲು ಸಹಾ ಎಲ್ಲೂ ಪಾಕಿಸ್ತಾನದ ಹೆಸರನ್ನೇ ತರಲಾಗಿಲ್ಲ. ಪುಲ್ವಾಮಾ ದಾಳಿ ನಡೆಯುತ್ತಿದ್ದಂತೆಯೇ ಸ್ವತಃ ಪ್ರಧಾನಿ ಮೋದಿಯವರಲ್ಲದೆ ಅವರ ಹಿಂಬಾಲಕರೆಲ್ಲ ಪಾಕಿಸ್ತಾನವೇ ಇದನ್ನು ಮಾಡಿಸಿರುವುದಾಗಿ ಬಹಳ ಸ್ಪಷ್ಟವಾಗಿ ಹೇಳುತ್ತಾ ಬಂದಿದ್ದಾರೆ. ಈಗಲೂ ಬಿಜೆಪಿಯ ಸಂಬಂಧಿತ ಸೋಶಿಯಲ್ ನೆಟ್ ವರ್ಕ್ ಗಳು ಪಾಕಿಸ್ತಾನವನ್ನು ಮುಂದಿಟ್ಟುಕೊಂಡು ದೇಶಪ್ರೇಮದ ಹೆಸರಲ್ಲಿ ಲೋಡುಗಟ್ಟಲೆ ಮೆಸೇಜುಗಳನ್ನು ಹರಿಬಿಡುತ್ತಿವೆ. ಆದರೆ ಸ್ವತಃ ಮೋದಿಯವರೇ ಸೌದಿ ಅರೇಬಿಯಾದ ರಾಜನಿಗೆ ಇದನ್ನು ಮನವರಿಕೆ ಮಾಡಿಕೊಡಲು ಸೋತು ಹೋಗಿದ್ದಾರೆ.

ಇಡೀ ಜಂಟಿ ಹೇಳಿಕೆಯಲ್ಲಿ ಪಾಕಿಸ್ತಾನದ ಹೆಸರು ಕಾಣಿಸಿಕೊಂಡಿರುವುದು ಒಂದೇ ಕಡೆ, ಅದೂ `ಭಾರತ-ಪಾಕಿಸ್ತಾನ’ ನಡುವೆ ಮತ್ತೆ ಮಾತುಕತೆ ಶುರುವಾಗಬೇಕೆಂಬ ಫ್ರೆಂಡ್ಲಿ ಅಡ್ವೈಸಿಂಗ್ ನ ಬಿಟ್ಟಿ ಸಲಹೆಯಲ್ಲಿ. “ಉಭಯ ದೇಶಗಳು ಪ್ರಾದೇಶಿಕ ಸ್ಥಿರತೆ ಮತ್ತು ನೆರೆ ರಾಷ್ಟ್ರಗಳ ಜೊತೆ ಸೌಹಾರ್ದಯುತ ಸಂಬಂಧದ ಪ್ರಾಮುಖ್ಯತೆಗೆ ಒತ್ತು ನೀಡುತ್ತವೆ. ಈ ನಿಟ್ಟಿನಲ್ಲಿ ಪಾಕಿಸ್ತಾನದ ಜೊತೆ ಸ್ನೇಹವನ್ನು ವೃದ್ಧಿಸಲು ಮೇ 2014ರಲ್ಲಿ ತಾವು ಅಧಿಕಾರ ವಹಿಸಿಕೊಂಡ  ನಂತರ ಪ್ರಧಾನಿ ಮೋದಿಯವರು   ಕೈಗೊಂಡಿರುವ ನಿರಂತರ ಪ್ರಯತ್ನಗಳನ್ನು ಘನತೆವೆತ್ತ ರಾಜಕುಮಾರರು ಪ್ರಶಂಸಿಸುತ್ತಾರೆ. ಇದಕ್ಕೆ ಸಂಬಂಧಿಸಿದಂತೆ, ಭಾರತ ಮತ್ತು ಪಾಕಿಸ್ತಾನಗಳ ನಡುವೆ ಸಮಗ್ರ ಮಾತುಕತೆಗಳು ಪುನರಾರಂಭಗೊಳ್ಳುವಂತಹ ವಾತಾವರಣ ನಿರ್ಮಿಸಲು ಉಭಯ ರಾಷ್ಟ್ರಗಳು ಬಯಸುತ್ತವೆ”.

ಒಟ್ಟಿನಲ್ಲಿ ಮೋದಿ ಪರ ಮೀಡಿಯಾ ಚಿಯರ್ ಆಂಕರುಗಳು ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲು `ಸಮರ್ಥ ನಾಯಕ’ ಭಾರತಕ್ಕೆ ಬೇಕಾಗಿದೆ ಅಂತ ಮೋದಿಯನ್ನೇ ಮತ್ತೊಮ್ಮೆ ಕದ್ದುಮುಚ್ಚಿ ಪ್ರೊಜೆಕ್ಟ್ ಮಾಡಲು ಹೆಣಗಾಡುತ್ತಿರುವಾಗಲೇ, ಹಿಂದೊಮ್ಮೆ (ಪ್ರಧಾನಿಯಾಗುವುದಕ್ಕೂ ಮುನ್ನ) `ಪಾಕಿಸ್ತಾನಕ್ಕೆ ಅದರದೇ ಭಾಷೆಯಲ್ಲಿ ಉತ್ತರ ಕೊಡಬೇಕು’ ಎಂದು ಗುಡುಗಿದ್ದ ಮೋದಿ, ಭಾರತದ ಪ್ರಧಾನಿಯ ಹುದ್ದೆಯಲ್ಲಿ ಕೂತುಕೊಂಡು ­ದೇಶದ ಮೇಲೆ ಮತ್ತೊಂದು ಡಿಪ್ಲೊಮ್ಯಾಟಿಕ್ ದುರಂತವನ್ನು ಎಳೆದುಬಿಟ್ಟಿದ್ದಾರೆ! ಪಾಪಾ, ಪುಲ್ವಾಮ ಘಟನೆಯಲ್ಲಿ ಮಡಿದ ನಮ್ಮ 45 ಸೈನಿಕರ ಜೀವಗಳನ್ನೇ ಬಂಡವಾಳ ಮಾಡಿಕೊಂಡು #boycottpakistan ಅನ್ನೋ ಹ್ಯಾಷ್‌ಟ್ಯಾಗ್ ಓಡಿಸುತ್ತಿದ್ದ ಅರ್ನಾಬ್ ಗೋಸ್ವಾಮಿ ಥರದ ಚಿಯರ್ ಆಂಕರುಗಳು ಮೋದಿಯ ಜಂಟಿ ಹೇಳಿಕೆಯಿಂದ ಗಪ್.ಚುಪ್ ಆಗಿದ್ದಾರೆ.

ಆಧಾರ: janta ka reporter

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...