Homeಕರ್ನಾಟಕಅವಧಿ ಮುಗಿಯುವವರೆಗೂ ಮೂರು ಶಾಸಕರು ಅನರ್ಹರು. ಉಳಿದವರ ಕುರಿತು ಕೆಲವೇ ದಿನಗಳಲ್ಲಿ ತೀರ್ಮಾನ

ಅವಧಿ ಮುಗಿಯುವವರೆಗೂ ಮೂರು ಶಾಸಕರು ಅನರ್ಹರು. ಉಳಿದವರ ಕುರಿತು ಕೆಲವೇ ದಿನಗಳಲ್ಲಿ ತೀರ್ಮಾನ

ಅನರ್ಹಗೊಂಡ ಶಾಸಕರು ಉಪಚುನಾವಣೆಗಳಲ್ಲೂ ಸ್ಪರ್ಧೆ ಮಾಡುವಂತಿಲ್ಲ

- Advertisement -
- Advertisement -

ಮೂವರು ಶಾಸಕರು ವಿಧಾನಸಭೆಯ ಈ ಅವಧಿ ಮುಗಿಯುವವರೆಗೂ ಅನರ್ಹರು ಎಂದು ಸ್ಪೀಕರ್ ರಮೇಶ್ ಕುಮಾರ್ ಅವರು ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಸರ್ಕಾರ ಬಿದ್ದು ಹೋಗುತ್ತದೆ ಎಂಬುದು ಸ್ಪಷ್ವವಾದ ಕ್ಷಣದಿಂದ ಇದ್ದ ಕುತೂಹಲಗಳು ಎರಡು. ಒಂದು, ಸ್ಪೀಕರ್ ಅವರ ನಡೆ ಏನಾಗಿರುತ್ತದೆ ಎಂಬುದು, ಅಂದರೆ ಯಾವ್ಯಾವ ಶಾಸಕರನ್ನು ಅನರ್ಹಗೊಳಿಸುತ್ತಾರೆ ಎಂಬ ವಿಚಾರ. ಎರಡನೆಯದ್ದು ಯಡಿಯೂರಪ್ಪನವರು ಕೂಡಲೇ ಮುಖ್ಯಮಂತ್ರಿಯಾಗುತ್ತಾರಾ ಇಲ್ಲವಾ ಎಂಬುದು.

ಇದೀಗ ಮೊದಲನೆಯ ವಿಚಾರಕ್ಕೆ ಪಾಕ್ಷಿಕವಾಗಿ ತೆರೆ ಬಿದ್ದಿದೆ. ಸ್ಪೀಕರ್ ರಮೇಶ್ ಕುಮಾರ್ ಅವರು ಇಂದು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮೂವರು ಶಾಸಕರ ಅನರ್ಹತೆಯ ಕುರಿತಾದ ತಮ್ಮ ತೀರ್ಮಾನಗಳನ್ನು ವಿವರವಾಗಿ ಬಿಡಿಸಿಟ್ಟರು.

ರಾಣಿಬೆನ್ನೂರಿನ ಶಾಸಕ ಶಂಕರ್ ಅವರು ಕೆಪಿಜೆಪಿಯಿಂದ ಆಯ್ಕೆಯಾಗಿದ್ದು, ಎರಡನೆಯ ಸಾರಿ ಮಂತ್ರಿಯಾದಾಗ ಕಾಂಗ್ರೆಸ್ ಪಕ್ಷದೊಂದಿಗೆ (ಜೂನ್ 14ರಂದು) ತನ್ನ ಪಕ್ಷವನ್ನು ವಿಲೀನ ಮಾಡಿದ್ದೇನೆಂದು ಸ್ಪೀಕರ್ ಅವರಿಗೆ ತಿಳಿಸಿದ್ದರು. ಆ ನಂತರ ತಾನು ಬಿಜೆಪಿಗೆ ಬೆಂಬಲಿಸುತ್ತಿದ್ದೇನೆಂದು ತಾನೇ ತಿಳಿಸಿರುವುದರಿಂದ ಸಂದೇಹಕ್ಕೆ ಆಸ್ಪದವಿಲ್ಲದೇ ಪಕ್ಷಾಂತರ ಮಾಡಿರುವುದರಿಂದ ಅವರು ಅನರ್ಹರು ಎಂದು ಘೋಷಿಸಲಾಗಿದೆ.

ವಿಪ್ ಉಲ್ಲಂಘನೆ ಕಾರಣಕ್ಕೆ ರಮೇಶ್ ಜಾರಕಿಹೊಳಿ ಹಾಗೂ ಮಹೇಶ್ ಕುಮಟಳ್ಳಿ ಅವರ ಮೇಲೆ ಕ್ರಮ ತೆಗೆದುಕೊಳ್ಳಬೇಕೆಂದು ಫೆಬ್ರವರಿಯಲ್ಲೇ ದೂರು ನೀಡಲಾಗಿತ್ತು.  ಅವರು ಏನೇನು ಮಾಡಿದರೆಂಬುದನ್ನು ವಿವರಿಸಿ ಅವರನ್ನೂ ಅನರ್ಹರೆಂದು ಘೋಷಿಸಲಾಗಿದೆ.

ಇನ್ನು ಉಳಿದ ಶಾಸಕರುಗಳ ರಾಜೀನಾಮೆ ಪ್ರಕರಣಗಳ ಕುರಿತು ತೀರ್ಮಾನ ಮಾಡಲು ತಾನಿನ್ನೂ ಅಧ್ಯಯನ ಮಾಡಬೇಕಿದೆ. ಹಲವಾರು ಕೋರ್ಟ್ ತೀರ್ಪುಗಳನ್ನು ನೋಡಬೇಕಿದೆ. ಅವರುಗಳ  ರಾಜೀನಾಮೆಯ ಕುರಿತೂ ನನಗಿನ್ನೂ ಮನವರಿಕೆಯಾಗಿಲ್ಲ, ಅವರುಗಳ ರಾಜೀನಾಮೆಯು ಕ್ರಮಬದ್ಧವಾಗಿಲ್ಲ. ಆದರೆ ಅದರ ಕುರಿತು ತೀರ್ಪು ನೀಡಲು ಸಮಯ ಬೇಕಿದೆ ಎಂದರು.

ಈ ತೀರ್ಮಾನ ಕೈಗೊಳ್ಳಲು ಕಾರಣವಾದ ನೈತಿಕ ಹಾಗೂ ಕಾನೂನಿನ ವಿಚಾರಗಳನ್ನೂ ರಮೇಶ್ ಕುಮಾರ್ ವಿವರಿಸಿದ್ದಲ್ಲದೇ, ಶಾಸಕರ ಅನೈತಿಕ ರೀತಿ-ನೀತಿಗಳ ಕುರಿತು ಖಾರವಾಗಿ ಮಾತನಾಡಿದರು.

ಸುಪ್ರೀಂಕೋರ್ಟ್.ಗೆ ಹೋಗುವ ಸಾಧ್ಯತೆ

ಅನರ್ಹಗೊಂಡ ಶಾಸಕರು ಸುಪ್ರೀಂಕೋರ್ಟಿಗೆ ಹೋಗುವ ಎಲ್ಲಾ ಸಾಧ್ಯತೆಗಳೂ ಇವೆ. ಅದನ್ನು ಗಮನದಲ್ಲಿಟ್ಟುಕೊಂಡೇ ರಮೇಶ್ ಕುಮಾರ್ ವಿವರಗಳನ್ನು ತಿಳಿಸಿದರು. ಈ ಮೂರೂ ಶಾಸಕರ ವಿಚಾರದಲ್ಲಿ ತಾಂತ್ರಿಕ ಅಂಶಗಳೂ ಸ್ಪಷ್ಟವಿದ್ದುದರಿಂದ ಸ್ಪಷ್ಟವಾದ ಕ್ರಮ ತೆಗೆದುಕೊಳ್ಳಲು ಹಿಂಜರಿದಿಲ್ಲ ಎಂಬುದು ಗೊತ್ತಾಗಿದೆ. ಅದರಲ್ಲೂ ಶಂಕರ್, ತಾನು ಕಾಂಗ್ರೆಸ್.ನಲ್ಲಿ ವಿಲೀನವಾಗಿದ್ದೆನೆಂದು ಹೇಳಿ ನಂತರ ಬಿಜೆಪಿಗೆ ಬೆಂಬಲ ಕೊಡುತ್ತೇನೆಂದು ಲಿಖಿತವಾಗಿ ತಿಳಿಸಿದ್ದರಿಂದ ಅವರನ್ನು ಅನರ್ಹಗೊಳಿಸಲು ಯಾವುದೇ ಅಡ್ಡಿಗಳಿರಲಿಲ್ಲ.

ಆದರೂ ಸದರಿ ಶಾಸಕರು ಸುಪ್ರೀಂಕೋರ್ಟಿಗೆ ಹೋಗುವ ಎಲ್ಲಾ ಸಾಧ್ಯತೆಗಳೂ ಇವೆ.

ಸ್ಪೀಕರ್ ಅವರು ವಹಿಸಿದ ಎಚ್ಚರಿಕೆ

ಪ್ರತಿಯೊಬ್ಬರ ವಿಚಾರದಲ್ಲೂ ನಡೆದ ಘಟನಾವಳಿಗಳನ್ನು ದಿನಾಂಕವಾರು ವಿವರಿಸಿದ್ದಲ್ಲದೇ, ಅದು ಕಾನೂನು ಪ್ರಕಾರ ಹೇಗೆ ಸರಿ ಅಥವಾ ತಪ್ಪು ಎಂಬುದನ್ನೂ ಸ್ಪೀಕರ್ ಮುಂದಿಟ್ಟಿದ್ದಾರೆ. ಆ ಮೂಲಕ ತಾನು ಪಕ್ಷಪಾತದಿಂದ ವರ್ತಿಸಿಲ್ಲ, ಪಕ್ಷಾಂತರ ನಿಷೇಧ ಕಾಯ್ದೆಯನ್ವಯವೇ ಕ್ರಮ ತೆಗೆದುಕೊಂಡಿದ್ದೇನೆ ಎಂಬುದಕ್ಕೆ ಸಾಕ್ಷ್ಯಗಳನ್ನು ಒದಗಿಸಿದ್ದಾರೆ. ತಾನು ತರಾತುರಿಯೂ ಮಾಡಲಿಲ್ಲ, ಕಾಯ್ದೆಯ ಉದ್ದೇಶವನ್ನು ಈಡೇರಿಸುವ ನಿಟ್ಟಿನಲ್ಲಿ ತಡವೂ ಮಾಡಲಿಲ್ಲ ಎಂಬುದನ್ನೂ ವಿವರಿಸಿದರು.

ತಾನು ರಾಜೀನಾಮೆ ಅಂಗೀಕಾರಕ್ಕೆ ತಡಮಾಡುತ್ತಿದ್ದೇನೆಂದು ಸುಪ್ರೀಂಕೋರ್ಟಿಗೆ ಸುಳ್ಳು ಹೇಳಿದರೆಂಬುದನ್ನು ಘಟನಾವಳಿಗಳ ಮೂಲಕ ಸ್ಪೀಕರ್ ಬಿಚ್ಚಿಟ್ಟರು. ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಸಭಾಪತಿ ವೆಂಕಯ್ಯನಾಯ್ಡು ಅವರು ಶರದ್ ಯಾದವ್ ಅವರ ಪ್ರಕರಣದಲ್ಲಿ ನೀಡಿದ ತೀರ್ಪನ್ನೂ ಉಲ್ಲೇಖಿಸಿದರು.

ಈ ವಿಚಾರಕ್ಕೆ ಸಂಬಂಧಿಸಿದಂತೆ ಆರಂಭದಿಂದಲೂ ಸ್ಪೀಕರ್ ರಮೇಶ್ ಕುಮಾರ್ ಅವರು ಹಾಲಿ ಅಡ್ವೋಕೇಟ್ ಜನರಲ್ ಉದಯ್ ಹೊಳ್ಳ ಮತ್ತು ಮಾಜಿ ಅಡ್ವೋಕೇಟ್ ಜನರಲ್ ರವಿವರ್ಮಕುಮಾರ್ ಅವರಿಂದ ಕಾನೂನು ಸಲಹೆಯನ್ನು ಪಡೆದುಕೊಂಡಿದ್ದರು ಎನ್ನಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...