Homeಅಂಕಣಗಳುಆಘಾತವಾಣಿ | `ಜೈಲೊಳಗೆ ಸ್ವೋಭುನಕ್ಕೆ ರೆಡಿ ಮಾಡಿ, ಆಮ್ಯಾಲೆ ನನ್ನ ಅರೆಸ್ಟ್ ಮಾಡ್ರುಲಾ’

ಆಘಾತವಾಣಿ | `ಜೈಲೊಳಗೆ ಸ್ವೋಭುನಕ್ಕೆ ರೆಡಿ ಮಾಡಿ, ಆಮ್ಯಾಲೆ ನನ್ನ ಅರೆಸ್ಟ್ ಮಾಡ್ರುಲಾ’

- Advertisement -
- Advertisement -
  • ಅಟ್ಯಾಕ್ ಹನ್ಮಂತ |

ನಮಸ್ಕಾರ ಆಘಾತವಾಣಿ ವಾರ್ತೆಗಳಿಗೆ ಸ್ವಾಗತ, ಓದುತ್ತಿರುವವರು ಅಟ್ಯಾಕ್ ಹನ್ಮಂತ.

ಕಣ್ಣಿಗೆ ಏನೇ ಕಂಡರೂ ಅದನ್ನು ಉದ್ಘಾಟನೆ ಮಾಡಿ ಪೋಟೋ ತಗೊಳ್ತೀನಿ ಅಂತ ಓಡೋಡಿ ಬರುವ ಮಾನ್ಯ ಪ್ರದ್ರಾನ ಮಂತ್ರಿ ‘ಪಕೋಡಪ್ಪ ಕುಂಡಾಲೇಂದ್ರ’ ಅವರು ಇತ್ತೀಚೆಗೆ ಒಂದು ವಿಶೇಷ ಉದ್ಘಾಟನೆಯಿಂದಾಗಿ ಮತ್ತೆ ಸುದ್ದಿಯಾಗಿದ್ದಾರೆ. ಉತ್ತರಪ್ರದೇಶದಲ್ಲಿ ಮಾಯಾವತಿ ಮತ್ತು ಅಖಿಲೇಶ್ ಯಾದವ್ ಇವರುಗಳು ಕಳೆದ ತಮ್ಮ ಅಧಿಕಾರಾವಧಿಯಲ್ಲಿ ದೆಹಲಿಗೆ ಹೊಂದಿಕೊಂಡಂತೆ ನೂರಾರು ಕಿಲೋಮೀಟರ್‍ಗಳ ಎಕ್ಸ್‍ಪ್ರೆಸ್ ಹೈವೇ ನಿರ್ಮಿಸಿದ್ದರು. ಅದನ್ನು ತಮ್ಮ ವೈಯಕ್ತಿಕ ಪ್ರಚಾರಕ್ಕೆ ಬಳಸಿಕೊಳ್ಳುವ ಪ್ರತಿಭೆಯ ಕೊರತೆಯಿಂದಾಗಿ ಹಾಲಿ ವಿಫಲ ರಾಜಕಾರಣಿಗಳಾಗಿದ್ದಾರೆ. ಆದರೆ ಪಕೋಡೇಂದ್ರನ ಬಹುಮುಖ ಪ್ರತಿಭೆಗೆ ಮತ್ತೊಂದು ತಾಜಾ ನಿದರ್ಶನ ಇದೀ ವರದಿಯಾಗಿದೆ.. ದೆಹಲಿಯಿಂದ ಮೀರತ್ ನಡುವೆ ಜುಜುಬಿ 9 ಕಿಲೋಮೀಟರ್ ಎಕ್ಸ್‍ಪ್ರೆಸ್ ಹೈವೇಯನ್ನು ನಿರ್ಮಿಸಿ ‘ನಾನೇ ಮಾಡಿದ್ದು, ನಾನೇ ನಾನೇ..’ ಎಂದು ಕೂಗಾಡಿ ಕಿರುಚಾಡಿ ಫೋಟೋ ತಗೆಸಿ ಪ್ರಚಾರ ಮಾಡಿ ಕೊಂಡಿದ್ದಾರೆ. ಇಂಥದೊಂದು ಚಿಲ್ಲರೆ ಸುದ್ದಿಗಾಗಿಯೇ ಕಾದು ಕುಳಿತಿದ್ದ ಮೀಡಿಯಾಗಳು ಮಂತ್ರಕ್ಕಿಂತ ಉಗುಳನ್ನೇ ಹೆಚ್ಚಾಗಿ ಖರ್ಚುಮಾಡಿ ತಮ್ಮ ಖಾಲಿತಲೆಯನ್ನು ಪ್ರದರ್ಶನಕ್ಕಿಟ್ಟಿರುವುದು ವರದಿಯಾಗಿದೆ. ಈ ಸುದ್ದಿಯಿಂದ ಉತ್ತೇಜಿತನಾದ ಜಡೇಮಾಯಸಂದ್ರದ ಹಾಸ್ಯನಟ ಗಜ್ಜೇಶ್ ಅವರು, ತಮ್ಮ ‘ಮನೆಯ ಶೌಚಾಲಯಕ್ಕೆ ಹಾಕಿಸಿರೋ ಹೊಸ ಟೈಲ್ಸ್‍ಗಳು ಮತ್ತು ತಮ್ಮೂರಿನಲ್ಲಿ ಹೊಸದಾಗಿ ಹಾಕಿರುವ ರಸ್ತೆಉಬ್ಬುಗಳನ್ನು ಉದ್ಘಾಟಿಸಲು ಕ್ಯಾಮೆರಾ ಸಮೇತ ತಾವು ಬರಲೇಬೇಕೆಂದು’ ಪ್ರದಾನಮಂತ್ರಿ ‘ಪಕೋಡೇಂದ್ರ’ ಅವರನ್ನು ಬೇಡಿಕೊಂಡಿದ್ದಾರೆಂದು ವರದಿಯಾಗಿದೆ.

* * * *

ದೇಶದ ಬ್ಯಾಂಕ್‍ಗಳಲ್ಲಿ ಬೇಕಾಬಿಟ್ಟಿ ಸಾಲ ಮಾಡಿ ದೇಶ ಬಿಟ್ಟು ಓಡಿಹೋಗಲು ಸನ್ಮಾನ್ಯ ‘ಕುಂಡಾಲೇಂದ್ರ’ ಅವರು ಶುರು ಮಾಡಿರುವ ‘ಕುಣ್ಕೊಂಡ್ ಬನ್ನಿ ದೋಚ್ಕೊಂಡ್ ಓಡಿ’ ಯೋಜನೆಯಡಿಯಲ್ಲಿ ಇಲ್ಲಿಯವರೆಗೆ 33 ಮಂದಿ ಕಾರ್ಪೊರೇಟ್ ಕಳ್ಳರು ತಾವು ಸಾಲ ಪಡೆದ ಬ್ಯಾಂಕುಗಳ ತಲೆಯನ್ನು ನುಣ್ಣಗೆ ಬೋಳಿಸಿ ದೇಶ ಬಿಟ್ಟು ಓಡಿ ಹೋಗಿರುವುದು ಹಳೆಯ ವಿಷಯ. ಈಗ ಈ ಯೋಜನೆಯಡಿಯಲ್ಲಿ ದೇಶಬಿಟ್ಟ ಮೊದಲಿಗರಾದ ಮಲ್ಯಪ್ಪನವರನ್ನು ಲಂಡನ್‍ನಿಂದ ವಾಪಸ್ಸು ಕಳಿಸಲು ಕುಂಡಾಲೇಂದ್ರ ಬ್ರಿಟನ್ ಸರ್ಕಾರವನ್ನು ಅಂಗಲಾಚಿ ಕೇಳಿಕೊಂಡಿದ್ದರು. ಇದಕ್ಕೆ ಮಲ್ಯಪ್ಪನವರು “ಇಂಡಿಯಾ ದೇಸುದ ಜೈಲ್‍ಗುಳಲ್ಲಿ ಸೊಳ್ಳೆಕಾಟ ಜ್ಯಾಸ್ತಿ, ನಿಂಬೆ ಶರ್ಬತ್ತಿನಷ್ಟು ಗಟ್ಟಿ ಸಾಂಬಾರ್ ಮಾಡ್ತಾರೆ, ಆಲೂಗಡ್ಡೆ ಪಲ್ಯುದ ಬದ್ಲು ಬೂಸ್ಟು ಹಿಡಿದ ಹಪ್ಪಳ ಕೊಡ್ತಾರೆ. ನಾನು ಇಂಥಾ ಇಂಡಿಯಾ ಜೈಲ್‍ಗುಳಿಗೆ ಹ್ವೋಗಲ್ಲ, ಮೊದ್ಲು ಆ ದೇಸುದ ಜೈಲುಗಳಲ್ಲಿ ಸಿಮ್ಮಿಂಗ್ ಫೂಲ್ ಕಟ್ಟುಸಿ, ತ್ರಿಬಲ್ ಬೆಡ್ರೂಂ ಜೈಲುಕ್ವಾಣೆಯೊಳಗೆ ನನ್ನ ಹೊಸ ಹೆಂಡ್ತಿ ಜ್ವತೆ ಶೋಭನ ಮಾಡ್ಕ್ಯನಕ್ಕೆ ಕುರ್ಲಾನ್ ಹಾಸಿಗೆ ವ್ಯವಸ್ಥೆ ಮಾಡಿ ಮುಗಿದ ಮ್ಯಾಲೆ ಬೇಕಾದ್ರೆ ನನ್ನುನ್ನ ಅರೆಸ್ಟು ಮಾಡಿ” ಎಂದು ಉತ್ತರಿಸಿದ್ದಾರಂತೆ. ಈ ಸಂಬಂಧ ಕುರ್ಲಾನ್ ಹಾಸಿಗೆಯ ಮೇಲೆ ಚೆಲ್ಲಲು ಮಲ್ಲಿಗೆಹೂವುಗಳ ಪೂರೈಕೆದಾರರರಿಗೆ ಕುಂಡಾಲೇಂದ್ರ ಟೆಂಡರ್ ಕರೆಯುತ್ತಾರಾ ಎಂದು ಜನರು ಕುಂಡೆ ಬಡಕೊಂಡು ನಗುತ್ತಿದ್ದಾರೆ ಎಂದು ವರದಿಯಾಗಿದೆ.

* * * *

ಇತ್ತೀಚೆಗೆ ವಿವಿಧ ರಾಜ್ಯಗಳಲ್ಲಿ ನಡೆದ ಉಪಚುನಾವಣೆಗಳಲ್ಲಿ ನೂರಾರು ಸಂಖ್ಯೆಯಲ್ಲಿ ಕೆಟ್ಟು ಕುಲಗೆಟ್ಟಿರುವ ಇವಿಎಂಗಳನ್ನು ಬಳಸಲಾಗಿದೆಯೆಂದು ಚುನಾವಣಾ ಅಭ್ಯರ್ಥಿಗಳು ಎಲೆಕ್ಷನ್ ಕಮಿಷನ್ನಿಗೆ ದೂರು ಕೊಟ್ಟಿದ್ದಾರೆ. ಈ ಸಂಬಂಧ ಉತ್ತರಿಸಿರುವ ಚುನಾವಣಾ ಆಯೋಗವು `ಆ ಸ್ಥಳಗಳಲ್ಲಿ ಟೆಂಪ್ರೇಚರ್ರು ಶ್ಯಾನೆ ಹೆಚ್ಚಾಗಿಹ್ವೋಗಿ ನಂ ಇವಿಎಂ ಮೆಷೀನುಗಳ ತಲೆಕೆಟ್ಟು, ಇದ್ದುಕ್ಕಿದ್ದಂತೆ ಹುಚ್ಚ್‍ನಾಯಿ ಕಚ್ಚುದಂಗೆ ಬಿಜೆಪಿಗೆ ವೋಟು ಹಾಕ್ತಾ ಕುಂತವೆ‘ ಎಂದೂ ವಿವರಣೆ ಕೊಟ್ಟಿದೆ. ವಾತಾವರಣದ ಉಷ್ಣಾಂಶ ಹೆಚ್ಚಾಗಿ ಮೊಬೈಲ್‍ಗಳು ಕೆಟ್ಟಿಲ್ಲ, ಕಂಪ್ಯೂಟರ್‍ಗಳು ಕೆಟ್ಟಿಲ್ಲ, ಟಿವಿ, ಮಿಕ್ಸಿ, ಟೇಪ್‍ರೆಕಾರ್ಡರಿನಂಥ ಎಲೆಕ್ಟ್ರಾನಿಕ್ ವಸ್ತುಗಳೂ ಕೆಟ್ಟ ಉದಾಹರಣೆಯಿಲ್ಲ. ಹೀಗಿರುವಾಗ ಇವಿಎಂಗಳು ಮಾತ್ರ ಉಷ್ಣಾಂಶಕ್ಕೆ ಹೆದರಿ ಯಾಕೆ ಉಚ್ಚೆ ಹುಯ್ದುಕೊಳ್ಳುತ್ತಿವೆ ಎಂಬ ಪ್ರಶ್ನೆ ಜನಸಾಮಾನ್ಯರನ್ನು ಕಾಡುತ್ತಿದೆ. ಇವನ್ನು ತಯಾರಿಸಿದ್ದು ಸರ್ಕಾರದ ಎಲೆಕ್ಟ್ರಾನಿಕ್ ಎಂಜಿನಿಯರ್‍ಗಳೋ ಅಥವ ಹಳೇಸೀಸ ಖಾಲಿ ಬಾಟ್ಲು ವ್ಯಾಪಾರಿಗಳೋ ಎಂದು ಜನರು ತಲೆ ಕೆರೆದುಕೊಳ್ಳುತ್ತಿದ್ದಾರೆ.

* * * *

ರೈತರ ಸಾಲ ಮನ್ನಾ ಮಾಡದಿದ್ರೆ ನಾವು ಕರ್ನಾಟಕ ಬಂದ್ ಮಾಡ್ತೀವಿ’ ಅಂತ ತಮ್ಮದೇ ತೊಡೆಯನ್ನು ತಟ್ಟಿಕೊಂಡು ಹೇಳಿದ ಧಡಿಯೂರಪ್ಪನವರು ನಂತರ ಕೈ ಪಕ್ಷವು ಕೋರ್ಟ್‍ಗೆ ಹೋಗಿ ಕೇಸಾಕ್ತೀವಿ ಎಂದು ಹೆದರಿಸಿದ ಮೇಲೆ.. ನಾನಂಗೆ ಹೇಳೇ ಇಲ್ಲ, ಮೋಸ್ಟ್ ಲಿ ನನ್ನ ಆತ್ಮ ದೇಹದಿಂದ ಪುಸುಕ್ ಅಂತ ಹೊರಬಂದು.. ಡೈಲಾಗ್ ಹೊಡೆದು ದಬುಕ್ ಅಂತ ಒಳಕ್ಕೆ ಹೋಗಿರಬೇಕು ಎಂದು ಪ್ಲೇಟ್ ಚೇಂಜ್ ಮಾಡಿಬಿಟ್ಟಿದ್ದರು. ಈ ಅವಾಂತರಗಳನ್ನು ಕಣ್ಣಾರೆ ಕಂಡ ಕರ್ನಾಟಕದ ಜನ ಬಂದನ್ನೇ ಬಂದ್ ಮಾಡಿ ಧಡಿಯೂರಪ್ಪನಿಗೆ ಮಣ್ಣುಮುಕ್ಕಿಸಿದ್ದಾರೆ. ಈ ಸಂದರ್ಭದಲ್ಲಿ ಮೈಸೂರಿನಲ್ಲಿ ವಿಶೇಷ ಚೇತನ ಮಾನಸಿಕ ಅಸ್ವಸ್ಥ ಪ್ರಪಾತ ಸಿಮ್ಮನನ್ನು ಅರೆಸ್ಟ್ ಮಾಡಿರುವ ಪೊಲೀಸರು.. ಸಿಮ್ಮನ ಎರಡೂ ಕಾಲುಗಳಿಗೆ ಹಗ್ಗ ಕಟ್ಟಿ, ಬಾಯಿಗೆ ಗೋಣಿಚೀಲ ತುರುಕಿ, ಎರಡೂ ಕಣ್ಣಿಗೆ ಪತಂಜಲಿ ಖಾರದಪುಡಿ ಎರಚಿ, ಫ್ಯಾನಿಗೆ ನೇತುಹಾಕಿ ನಾಯಿಗೆ ಹೊಡೆದಂತೆ ಇನ್ನೂ ಹೊಡೆದಿಲ್ಲವೆಂದು ವರದಿಯಾಗಿದೆ.

* * * *

ನಮ್ಮ ಪ್ರದ್ರಾನಮಂತ್ರಿ ಕುಂಡಾಲೇಂದ್ರ ವಿಶ್ವಬ್ಯಾಂಕಿನಿಂದ ನಯಾಪೈಸ ಸಾಲ ತೆಗೆದುಕೊಳ್ಳದೆ ಸರ್ಕಾರ ನಡೆಸುತ್ತಿದ್ದಾನೆಂದು ಮೋತಿಭಕ್ತರು ಊರಲ್ಲೆಲ್ಲ ಪುಂಗಿ ಊದುತ್ತಿರುವ ವರದಿಗಳು ವ್ಯಾಪಕವಾಗಿ ಕೇಳಿಬಂದಿವೆ. ಕೈಯಲ್ಲಿ ಪೊರಕೆ ಹಿಡಿದು, ಮುಖಕ್ಕೆ ಮೂರು ಇಂಚು ಮೇಕಪ್ಪು ರುಬ್ಬಿಕೊಂಡು ಟೊಯ್ಯಟೊಯ್ಯ ಎಂದು ಕಸಗುಡಿಸುವ ಡ್ರಾಮಾ ಮಾಡುತ್ತಿದ್ದ ಮೋತಿಜೀ, ಈ ಬಿಕನಾಸಿ ನಾಟಕವನ್ನು ಪತ್ರಿಕೆಗಳಲ್ಲಿ ಪ್ರಚಾರ ಮಾಡಲೂ ಸಹ ವಿಶ್ವಬ್ಯಾಂಕಿನಿಂದ ತಿರುಪೆ ಸಾಲ ತಂದಿದ್ದಾನೆಂದು ವಿಶ್ವಬ್ಯಾಂಕ್ ಮೂಲಗಳು ತಿಳಿಸಿವೆ. ಇಂಥಹ ಹಸಿಸುಳ್ಳುಗಳನ್ನೇ ಹೇಳುತ್ತ ತಿರುಗುತ್ತಿರುವ ಮೋತಿಜಿ ಮತ್ತು ಮೋತಿಭಕ್ತರನ್ನು ಜನರು ಅಟ್ಟಾಡಿಸಿಕೊಂಡು ಬಟ್ಟೆ ಹರಿದುಹೋಗುವಂತೆ ಬಡಿದು ನೆಲಕ್ಕೆ ಹಾಕಿ ತುಳಿಯಲು ಪ್ರಯತ್ನ ನಡೆಸಿರುವ ಘಟನೆ ಇನ್ನೂ ವರದಿಯಾಗಿಲ್ಲ.

* * * *

ಉತ್ತರಪ್ರದೇಶದ ಕಬ್ಬು ಬೆಳೆಯುವ ರೈತರಿಗೆ ಕೊಡಬೇಕಾದ 13 ಸಾವಿರ ಕೋಟಿ ಖರೀದಿ ಹಣವನ್ನು ಕೊಡದೆ ಮುಂಡಾ ಮೋಚಿರುವ ಜೋಗಿ ಪ್ಯಾದೇನಾತನ ಸರ್ಕಾರವು ಈ ಬಗ್ಗೆ ಪ್ರದ್ರಾನಮಂತ್ರಿಗೆ ಹಣಬಿಡುಗಡೆಗೆ ಕೇಳಿದಾಗ.. ಕುಂಡಾಲೇಂದ್ರನು..’ ಏನೂ ಹೆದರಬ್ಯಾಡ.. ಪಾಕಿಸ್ತಾನದಿಂದ ಸಕ್ಕರೆ ತರಿಸಿಕೊಂಡು ಉತ್ತರಪ್ರದೇಶದ ರೈತರ ಕಣ್ಣಿಗೆ ಮಣ್ಣುಸುಣ್ಣ ಎರಡನ್ನೂ ಮಿಕ್ಸ್ ಮಾಡಿ ಎರಚೋಣ’ಎಂದು ಭರವಸೆ ಕೊಟ್ಟಿದ್ದಾನೆ ಎಂದು ದೆಹಲಿಯಿಂದ ವರದಿ ಬಂದಿದೆ. ಅದರಂತೆ ಪಾಕಿಸ್ತಾನದಿಂದ 2 ಲಕ್ಷ ಟನ್ ಸಕ್ಕರೆ ಆಮದು ಮಾಡಿಕೊಂಡು ಉತ್ತರಪ್ರದೇಶದ ಕಬ್ಬುಬೆಳೆಗಾರರಿಗೆ ಈ ಅಲ್ಲಣ್ಣ-ಮಲ್ಲಣ್ಣ ಅಲಕ್ ಬುಲಕ್ ಜೋಡಿಯು ನಾಮ ಎಳೆದಿದೆ ಎಂದು ತಿಳಿದುಬಂದಿದೆ.
ಇಲ್ಲಿಗೆ ಆಘಾತವಾಣಿ ವಾರ್ತೆಗಳು ಮುಕ್ತಾಯವಾಯಿತು. ಮತ್ತೆ ಸಿಗೋಣ. ಬೈ ಟೇಕ್ ಕೇರ್..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...