Homeಅಂಕಣಗಳುಆಘಾತವಾಣಿ | `ಜೈಲೊಳಗೆ ಸ್ವೋಭುನಕ್ಕೆ ರೆಡಿ ಮಾಡಿ, ಆಮ್ಯಾಲೆ ನನ್ನ ಅರೆಸ್ಟ್ ಮಾಡ್ರುಲಾ’

ಆಘಾತವಾಣಿ | `ಜೈಲೊಳಗೆ ಸ್ವೋಭುನಕ್ಕೆ ರೆಡಿ ಮಾಡಿ, ಆಮ್ಯಾಲೆ ನನ್ನ ಅರೆಸ್ಟ್ ಮಾಡ್ರುಲಾ’

- Advertisement -
- Advertisement -
  • ಅಟ್ಯಾಕ್ ಹನ್ಮಂತ |

ನಮಸ್ಕಾರ ಆಘಾತವಾಣಿ ವಾರ್ತೆಗಳಿಗೆ ಸ್ವಾಗತ, ಓದುತ್ತಿರುವವರು ಅಟ್ಯಾಕ್ ಹನ್ಮಂತ.

ಕಣ್ಣಿಗೆ ಏನೇ ಕಂಡರೂ ಅದನ್ನು ಉದ್ಘಾಟನೆ ಮಾಡಿ ಪೋಟೋ ತಗೊಳ್ತೀನಿ ಅಂತ ಓಡೋಡಿ ಬರುವ ಮಾನ್ಯ ಪ್ರದ್ರಾನ ಮಂತ್ರಿ ‘ಪಕೋಡಪ್ಪ ಕುಂಡಾಲೇಂದ್ರ’ ಅವರು ಇತ್ತೀಚೆಗೆ ಒಂದು ವಿಶೇಷ ಉದ್ಘಾಟನೆಯಿಂದಾಗಿ ಮತ್ತೆ ಸುದ್ದಿಯಾಗಿದ್ದಾರೆ. ಉತ್ತರಪ್ರದೇಶದಲ್ಲಿ ಮಾಯಾವತಿ ಮತ್ತು ಅಖಿಲೇಶ್ ಯಾದವ್ ಇವರುಗಳು ಕಳೆದ ತಮ್ಮ ಅಧಿಕಾರಾವಧಿಯಲ್ಲಿ ದೆಹಲಿಗೆ ಹೊಂದಿಕೊಂಡಂತೆ ನೂರಾರು ಕಿಲೋಮೀಟರ್‍ಗಳ ಎಕ್ಸ್‍ಪ್ರೆಸ್ ಹೈವೇ ನಿರ್ಮಿಸಿದ್ದರು. ಅದನ್ನು ತಮ್ಮ ವೈಯಕ್ತಿಕ ಪ್ರಚಾರಕ್ಕೆ ಬಳಸಿಕೊಳ್ಳುವ ಪ್ರತಿಭೆಯ ಕೊರತೆಯಿಂದಾಗಿ ಹಾಲಿ ವಿಫಲ ರಾಜಕಾರಣಿಗಳಾಗಿದ್ದಾರೆ. ಆದರೆ ಪಕೋಡೇಂದ್ರನ ಬಹುಮುಖ ಪ್ರತಿಭೆಗೆ ಮತ್ತೊಂದು ತಾಜಾ ನಿದರ್ಶನ ಇದೀ ವರದಿಯಾಗಿದೆ.. ದೆಹಲಿಯಿಂದ ಮೀರತ್ ನಡುವೆ ಜುಜುಬಿ 9 ಕಿಲೋಮೀಟರ್ ಎಕ್ಸ್‍ಪ್ರೆಸ್ ಹೈವೇಯನ್ನು ನಿರ್ಮಿಸಿ ‘ನಾನೇ ಮಾಡಿದ್ದು, ನಾನೇ ನಾನೇ..’ ಎಂದು ಕೂಗಾಡಿ ಕಿರುಚಾಡಿ ಫೋಟೋ ತಗೆಸಿ ಪ್ರಚಾರ ಮಾಡಿ ಕೊಂಡಿದ್ದಾರೆ. ಇಂಥದೊಂದು ಚಿಲ್ಲರೆ ಸುದ್ದಿಗಾಗಿಯೇ ಕಾದು ಕುಳಿತಿದ್ದ ಮೀಡಿಯಾಗಳು ಮಂತ್ರಕ್ಕಿಂತ ಉಗುಳನ್ನೇ ಹೆಚ್ಚಾಗಿ ಖರ್ಚುಮಾಡಿ ತಮ್ಮ ಖಾಲಿತಲೆಯನ್ನು ಪ್ರದರ್ಶನಕ್ಕಿಟ್ಟಿರುವುದು ವರದಿಯಾಗಿದೆ. ಈ ಸುದ್ದಿಯಿಂದ ಉತ್ತೇಜಿತನಾದ ಜಡೇಮಾಯಸಂದ್ರದ ಹಾಸ್ಯನಟ ಗಜ್ಜೇಶ್ ಅವರು, ತಮ್ಮ ‘ಮನೆಯ ಶೌಚಾಲಯಕ್ಕೆ ಹಾಕಿಸಿರೋ ಹೊಸ ಟೈಲ್ಸ್‍ಗಳು ಮತ್ತು ತಮ್ಮೂರಿನಲ್ಲಿ ಹೊಸದಾಗಿ ಹಾಕಿರುವ ರಸ್ತೆಉಬ್ಬುಗಳನ್ನು ಉದ್ಘಾಟಿಸಲು ಕ್ಯಾಮೆರಾ ಸಮೇತ ತಾವು ಬರಲೇಬೇಕೆಂದು’ ಪ್ರದಾನಮಂತ್ರಿ ‘ಪಕೋಡೇಂದ್ರ’ ಅವರನ್ನು ಬೇಡಿಕೊಂಡಿದ್ದಾರೆಂದು ವರದಿಯಾಗಿದೆ.

* * * *

ದೇಶದ ಬ್ಯಾಂಕ್‍ಗಳಲ್ಲಿ ಬೇಕಾಬಿಟ್ಟಿ ಸಾಲ ಮಾಡಿ ದೇಶ ಬಿಟ್ಟು ಓಡಿಹೋಗಲು ಸನ್ಮಾನ್ಯ ‘ಕುಂಡಾಲೇಂದ್ರ’ ಅವರು ಶುರು ಮಾಡಿರುವ ‘ಕುಣ್ಕೊಂಡ್ ಬನ್ನಿ ದೋಚ್ಕೊಂಡ್ ಓಡಿ’ ಯೋಜನೆಯಡಿಯಲ್ಲಿ ಇಲ್ಲಿಯವರೆಗೆ 33 ಮಂದಿ ಕಾರ್ಪೊರೇಟ್ ಕಳ್ಳರು ತಾವು ಸಾಲ ಪಡೆದ ಬ್ಯಾಂಕುಗಳ ತಲೆಯನ್ನು ನುಣ್ಣಗೆ ಬೋಳಿಸಿ ದೇಶ ಬಿಟ್ಟು ಓಡಿ ಹೋಗಿರುವುದು ಹಳೆಯ ವಿಷಯ. ಈಗ ಈ ಯೋಜನೆಯಡಿಯಲ್ಲಿ ದೇಶಬಿಟ್ಟ ಮೊದಲಿಗರಾದ ಮಲ್ಯಪ್ಪನವರನ್ನು ಲಂಡನ್‍ನಿಂದ ವಾಪಸ್ಸು ಕಳಿಸಲು ಕುಂಡಾಲೇಂದ್ರ ಬ್ರಿಟನ್ ಸರ್ಕಾರವನ್ನು ಅಂಗಲಾಚಿ ಕೇಳಿಕೊಂಡಿದ್ದರು. ಇದಕ್ಕೆ ಮಲ್ಯಪ್ಪನವರು “ಇಂಡಿಯಾ ದೇಸುದ ಜೈಲ್‍ಗುಳಲ್ಲಿ ಸೊಳ್ಳೆಕಾಟ ಜ್ಯಾಸ್ತಿ, ನಿಂಬೆ ಶರ್ಬತ್ತಿನಷ್ಟು ಗಟ್ಟಿ ಸಾಂಬಾರ್ ಮಾಡ್ತಾರೆ, ಆಲೂಗಡ್ಡೆ ಪಲ್ಯುದ ಬದ್ಲು ಬೂಸ್ಟು ಹಿಡಿದ ಹಪ್ಪಳ ಕೊಡ್ತಾರೆ. ನಾನು ಇಂಥಾ ಇಂಡಿಯಾ ಜೈಲ್‍ಗುಳಿಗೆ ಹ್ವೋಗಲ್ಲ, ಮೊದ್ಲು ಆ ದೇಸುದ ಜೈಲುಗಳಲ್ಲಿ ಸಿಮ್ಮಿಂಗ್ ಫೂಲ್ ಕಟ್ಟುಸಿ, ತ್ರಿಬಲ್ ಬೆಡ್ರೂಂ ಜೈಲುಕ್ವಾಣೆಯೊಳಗೆ ನನ್ನ ಹೊಸ ಹೆಂಡ್ತಿ ಜ್ವತೆ ಶೋಭನ ಮಾಡ್ಕ್ಯನಕ್ಕೆ ಕುರ್ಲಾನ್ ಹಾಸಿಗೆ ವ್ಯವಸ್ಥೆ ಮಾಡಿ ಮುಗಿದ ಮ್ಯಾಲೆ ಬೇಕಾದ್ರೆ ನನ್ನುನ್ನ ಅರೆಸ್ಟು ಮಾಡಿ” ಎಂದು ಉತ್ತರಿಸಿದ್ದಾರಂತೆ. ಈ ಸಂಬಂಧ ಕುರ್ಲಾನ್ ಹಾಸಿಗೆಯ ಮೇಲೆ ಚೆಲ್ಲಲು ಮಲ್ಲಿಗೆಹೂವುಗಳ ಪೂರೈಕೆದಾರರರಿಗೆ ಕುಂಡಾಲೇಂದ್ರ ಟೆಂಡರ್ ಕರೆಯುತ್ತಾರಾ ಎಂದು ಜನರು ಕುಂಡೆ ಬಡಕೊಂಡು ನಗುತ್ತಿದ್ದಾರೆ ಎಂದು ವರದಿಯಾಗಿದೆ.

* * * *

ಇತ್ತೀಚೆಗೆ ವಿವಿಧ ರಾಜ್ಯಗಳಲ್ಲಿ ನಡೆದ ಉಪಚುನಾವಣೆಗಳಲ್ಲಿ ನೂರಾರು ಸಂಖ್ಯೆಯಲ್ಲಿ ಕೆಟ್ಟು ಕುಲಗೆಟ್ಟಿರುವ ಇವಿಎಂಗಳನ್ನು ಬಳಸಲಾಗಿದೆಯೆಂದು ಚುನಾವಣಾ ಅಭ್ಯರ್ಥಿಗಳು ಎಲೆಕ್ಷನ್ ಕಮಿಷನ್ನಿಗೆ ದೂರು ಕೊಟ್ಟಿದ್ದಾರೆ. ಈ ಸಂಬಂಧ ಉತ್ತರಿಸಿರುವ ಚುನಾವಣಾ ಆಯೋಗವು `ಆ ಸ್ಥಳಗಳಲ್ಲಿ ಟೆಂಪ್ರೇಚರ್ರು ಶ್ಯಾನೆ ಹೆಚ್ಚಾಗಿಹ್ವೋಗಿ ನಂ ಇವಿಎಂ ಮೆಷೀನುಗಳ ತಲೆಕೆಟ್ಟು, ಇದ್ದುಕ್ಕಿದ್ದಂತೆ ಹುಚ್ಚ್‍ನಾಯಿ ಕಚ್ಚುದಂಗೆ ಬಿಜೆಪಿಗೆ ವೋಟು ಹಾಕ್ತಾ ಕುಂತವೆ‘ ಎಂದೂ ವಿವರಣೆ ಕೊಟ್ಟಿದೆ. ವಾತಾವರಣದ ಉಷ್ಣಾಂಶ ಹೆಚ್ಚಾಗಿ ಮೊಬೈಲ್‍ಗಳು ಕೆಟ್ಟಿಲ್ಲ, ಕಂಪ್ಯೂಟರ್‍ಗಳು ಕೆಟ್ಟಿಲ್ಲ, ಟಿವಿ, ಮಿಕ್ಸಿ, ಟೇಪ್‍ರೆಕಾರ್ಡರಿನಂಥ ಎಲೆಕ್ಟ್ರಾನಿಕ್ ವಸ್ತುಗಳೂ ಕೆಟ್ಟ ಉದಾಹರಣೆಯಿಲ್ಲ. ಹೀಗಿರುವಾಗ ಇವಿಎಂಗಳು ಮಾತ್ರ ಉಷ್ಣಾಂಶಕ್ಕೆ ಹೆದರಿ ಯಾಕೆ ಉಚ್ಚೆ ಹುಯ್ದುಕೊಳ್ಳುತ್ತಿವೆ ಎಂಬ ಪ್ರಶ್ನೆ ಜನಸಾಮಾನ್ಯರನ್ನು ಕಾಡುತ್ತಿದೆ. ಇವನ್ನು ತಯಾರಿಸಿದ್ದು ಸರ್ಕಾರದ ಎಲೆಕ್ಟ್ರಾನಿಕ್ ಎಂಜಿನಿಯರ್‍ಗಳೋ ಅಥವ ಹಳೇಸೀಸ ಖಾಲಿ ಬಾಟ್ಲು ವ್ಯಾಪಾರಿಗಳೋ ಎಂದು ಜನರು ತಲೆ ಕೆರೆದುಕೊಳ್ಳುತ್ತಿದ್ದಾರೆ.

* * * *

ರೈತರ ಸಾಲ ಮನ್ನಾ ಮಾಡದಿದ್ರೆ ನಾವು ಕರ್ನಾಟಕ ಬಂದ್ ಮಾಡ್ತೀವಿ’ ಅಂತ ತಮ್ಮದೇ ತೊಡೆಯನ್ನು ತಟ್ಟಿಕೊಂಡು ಹೇಳಿದ ಧಡಿಯೂರಪ್ಪನವರು ನಂತರ ಕೈ ಪಕ್ಷವು ಕೋರ್ಟ್‍ಗೆ ಹೋಗಿ ಕೇಸಾಕ್ತೀವಿ ಎಂದು ಹೆದರಿಸಿದ ಮೇಲೆ.. ನಾನಂಗೆ ಹೇಳೇ ಇಲ್ಲ, ಮೋಸ್ಟ್ ಲಿ ನನ್ನ ಆತ್ಮ ದೇಹದಿಂದ ಪುಸುಕ್ ಅಂತ ಹೊರಬಂದು.. ಡೈಲಾಗ್ ಹೊಡೆದು ದಬುಕ್ ಅಂತ ಒಳಕ್ಕೆ ಹೋಗಿರಬೇಕು ಎಂದು ಪ್ಲೇಟ್ ಚೇಂಜ್ ಮಾಡಿಬಿಟ್ಟಿದ್ದರು. ಈ ಅವಾಂತರಗಳನ್ನು ಕಣ್ಣಾರೆ ಕಂಡ ಕರ್ನಾಟಕದ ಜನ ಬಂದನ್ನೇ ಬಂದ್ ಮಾಡಿ ಧಡಿಯೂರಪ್ಪನಿಗೆ ಮಣ್ಣುಮುಕ್ಕಿಸಿದ್ದಾರೆ. ಈ ಸಂದರ್ಭದಲ್ಲಿ ಮೈಸೂರಿನಲ್ಲಿ ವಿಶೇಷ ಚೇತನ ಮಾನಸಿಕ ಅಸ್ವಸ್ಥ ಪ್ರಪಾತ ಸಿಮ್ಮನನ್ನು ಅರೆಸ್ಟ್ ಮಾಡಿರುವ ಪೊಲೀಸರು.. ಸಿಮ್ಮನ ಎರಡೂ ಕಾಲುಗಳಿಗೆ ಹಗ್ಗ ಕಟ್ಟಿ, ಬಾಯಿಗೆ ಗೋಣಿಚೀಲ ತುರುಕಿ, ಎರಡೂ ಕಣ್ಣಿಗೆ ಪತಂಜಲಿ ಖಾರದಪುಡಿ ಎರಚಿ, ಫ್ಯಾನಿಗೆ ನೇತುಹಾಕಿ ನಾಯಿಗೆ ಹೊಡೆದಂತೆ ಇನ್ನೂ ಹೊಡೆದಿಲ್ಲವೆಂದು ವರದಿಯಾಗಿದೆ.

* * * *

ನಮ್ಮ ಪ್ರದ್ರಾನಮಂತ್ರಿ ಕುಂಡಾಲೇಂದ್ರ ವಿಶ್ವಬ್ಯಾಂಕಿನಿಂದ ನಯಾಪೈಸ ಸಾಲ ತೆಗೆದುಕೊಳ್ಳದೆ ಸರ್ಕಾರ ನಡೆಸುತ್ತಿದ್ದಾನೆಂದು ಮೋತಿಭಕ್ತರು ಊರಲ್ಲೆಲ್ಲ ಪುಂಗಿ ಊದುತ್ತಿರುವ ವರದಿಗಳು ವ್ಯಾಪಕವಾಗಿ ಕೇಳಿಬಂದಿವೆ. ಕೈಯಲ್ಲಿ ಪೊರಕೆ ಹಿಡಿದು, ಮುಖಕ್ಕೆ ಮೂರು ಇಂಚು ಮೇಕಪ್ಪು ರುಬ್ಬಿಕೊಂಡು ಟೊಯ್ಯಟೊಯ್ಯ ಎಂದು ಕಸಗುಡಿಸುವ ಡ್ರಾಮಾ ಮಾಡುತ್ತಿದ್ದ ಮೋತಿಜೀ, ಈ ಬಿಕನಾಸಿ ನಾಟಕವನ್ನು ಪತ್ರಿಕೆಗಳಲ್ಲಿ ಪ್ರಚಾರ ಮಾಡಲೂ ಸಹ ವಿಶ್ವಬ್ಯಾಂಕಿನಿಂದ ತಿರುಪೆ ಸಾಲ ತಂದಿದ್ದಾನೆಂದು ವಿಶ್ವಬ್ಯಾಂಕ್ ಮೂಲಗಳು ತಿಳಿಸಿವೆ. ಇಂಥಹ ಹಸಿಸುಳ್ಳುಗಳನ್ನೇ ಹೇಳುತ್ತ ತಿರುಗುತ್ತಿರುವ ಮೋತಿಜಿ ಮತ್ತು ಮೋತಿಭಕ್ತರನ್ನು ಜನರು ಅಟ್ಟಾಡಿಸಿಕೊಂಡು ಬಟ್ಟೆ ಹರಿದುಹೋಗುವಂತೆ ಬಡಿದು ನೆಲಕ್ಕೆ ಹಾಕಿ ತುಳಿಯಲು ಪ್ರಯತ್ನ ನಡೆಸಿರುವ ಘಟನೆ ಇನ್ನೂ ವರದಿಯಾಗಿಲ್ಲ.

* * * *

ಉತ್ತರಪ್ರದೇಶದ ಕಬ್ಬು ಬೆಳೆಯುವ ರೈತರಿಗೆ ಕೊಡಬೇಕಾದ 13 ಸಾವಿರ ಕೋಟಿ ಖರೀದಿ ಹಣವನ್ನು ಕೊಡದೆ ಮುಂಡಾ ಮೋಚಿರುವ ಜೋಗಿ ಪ್ಯಾದೇನಾತನ ಸರ್ಕಾರವು ಈ ಬಗ್ಗೆ ಪ್ರದ್ರಾನಮಂತ್ರಿಗೆ ಹಣಬಿಡುಗಡೆಗೆ ಕೇಳಿದಾಗ.. ಕುಂಡಾಲೇಂದ್ರನು..’ ಏನೂ ಹೆದರಬ್ಯಾಡ.. ಪಾಕಿಸ್ತಾನದಿಂದ ಸಕ್ಕರೆ ತರಿಸಿಕೊಂಡು ಉತ್ತರಪ್ರದೇಶದ ರೈತರ ಕಣ್ಣಿಗೆ ಮಣ್ಣುಸುಣ್ಣ ಎರಡನ್ನೂ ಮಿಕ್ಸ್ ಮಾಡಿ ಎರಚೋಣ’ಎಂದು ಭರವಸೆ ಕೊಟ್ಟಿದ್ದಾನೆ ಎಂದು ದೆಹಲಿಯಿಂದ ವರದಿ ಬಂದಿದೆ. ಅದರಂತೆ ಪಾಕಿಸ್ತಾನದಿಂದ 2 ಲಕ್ಷ ಟನ್ ಸಕ್ಕರೆ ಆಮದು ಮಾಡಿಕೊಂಡು ಉತ್ತರಪ್ರದೇಶದ ಕಬ್ಬುಬೆಳೆಗಾರರಿಗೆ ಈ ಅಲ್ಲಣ್ಣ-ಮಲ್ಲಣ್ಣ ಅಲಕ್ ಬುಲಕ್ ಜೋಡಿಯು ನಾಮ ಎಳೆದಿದೆ ಎಂದು ತಿಳಿದುಬಂದಿದೆ.
ಇಲ್ಲಿಗೆ ಆಘಾತವಾಣಿ ವಾರ್ತೆಗಳು ಮುಕ್ತಾಯವಾಯಿತು. ಮತ್ತೆ ಸಿಗೋಣ. ಬೈ ಟೇಕ್ ಕೇರ್..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...