Homeಅಂಕಣಗಳುಆಘಾತವಾಣಿ | `ಜೈಲೊಳಗೆ ಸ್ವೋಭುನಕ್ಕೆ ರೆಡಿ ಮಾಡಿ, ಆಮ್ಯಾಲೆ ನನ್ನ ಅರೆಸ್ಟ್ ಮಾಡ್ರುಲಾ’

ಆಘಾತವಾಣಿ | `ಜೈಲೊಳಗೆ ಸ್ವೋಭುನಕ್ಕೆ ರೆಡಿ ಮಾಡಿ, ಆಮ್ಯಾಲೆ ನನ್ನ ಅರೆಸ್ಟ್ ಮಾಡ್ರುಲಾ’

- Advertisement -
- Advertisement -
  • ಅಟ್ಯಾಕ್ ಹನ್ಮಂತ |

ನಮಸ್ಕಾರ ಆಘಾತವಾಣಿ ವಾರ್ತೆಗಳಿಗೆ ಸ್ವಾಗತ, ಓದುತ್ತಿರುವವರು ಅಟ್ಯಾಕ್ ಹನ್ಮಂತ.

ಕಣ್ಣಿಗೆ ಏನೇ ಕಂಡರೂ ಅದನ್ನು ಉದ್ಘಾಟನೆ ಮಾಡಿ ಪೋಟೋ ತಗೊಳ್ತೀನಿ ಅಂತ ಓಡೋಡಿ ಬರುವ ಮಾನ್ಯ ಪ್ರದ್ರಾನ ಮಂತ್ರಿ ‘ಪಕೋಡಪ್ಪ ಕುಂಡಾಲೇಂದ್ರ’ ಅವರು ಇತ್ತೀಚೆಗೆ ಒಂದು ವಿಶೇಷ ಉದ್ಘಾಟನೆಯಿಂದಾಗಿ ಮತ್ತೆ ಸುದ್ದಿಯಾಗಿದ್ದಾರೆ. ಉತ್ತರಪ್ರದೇಶದಲ್ಲಿ ಮಾಯಾವತಿ ಮತ್ತು ಅಖಿಲೇಶ್ ಯಾದವ್ ಇವರುಗಳು ಕಳೆದ ತಮ್ಮ ಅಧಿಕಾರಾವಧಿಯಲ್ಲಿ ದೆಹಲಿಗೆ ಹೊಂದಿಕೊಂಡಂತೆ ನೂರಾರು ಕಿಲೋಮೀಟರ್‍ಗಳ ಎಕ್ಸ್‍ಪ್ರೆಸ್ ಹೈವೇ ನಿರ್ಮಿಸಿದ್ದರು. ಅದನ್ನು ತಮ್ಮ ವೈಯಕ್ತಿಕ ಪ್ರಚಾರಕ್ಕೆ ಬಳಸಿಕೊಳ್ಳುವ ಪ್ರತಿಭೆಯ ಕೊರತೆಯಿಂದಾಗಿ ಹಾಲಿ ವಿಫಲ ರಾಜಕಾರಣಿಗಳಾಗಿದ್ದಾರೆ. ಆದರೆ ಪಕೋಡೇಂದ್ರನ ಬಹುಮುಖ ಪ್ರತಿಭೆಗೆ ಮತ್ತೊಂದು ತಾಜಾ ನಿದರ್ಶನ ಇದೀ ವರದಿಯಾಗಿದೆ.. ದೆಹಲಿಯಿಂದ ಮೀರತ್ ನಡುವೆ ಜುಜುಬಿ 9 ಕಿಲೋಮೀಟರ್ ಎಕ್ಸ್‍ಪ್ರೆಸ್ ಹೈವೇಯನ್ನು ನಿರ್ಮಿಸಿ ‘ನಾನೇ ಮಾಡಿದ್ದು, ನಾನೇ ನಾನೇ..’ ಎಂದು ಕೂಗಾಡಿ ಕಿರುಚಾಡಿ ಫೋಟೋ ತಗೆಸಿ ಪ್ರಚಾರ ಮಾಡಿ ಕೊಂಡಿದ್ದಾರೆ. ಇಂಥದೊಂದು ಚಿಲ್ಲರೆ ಸುದ್ದಿಗಾಗಿಯೇ ಕಾದು ಕುಳಿತಿದ್ದ ಮೀಡಿಯಾಗಳು ಮಂತ್ರಕ್ಕಿಂತ ಉಗುಳನ್ನೇ ಹೆಚ್ಚಾಗಿ ಖರ್ಚುಮಾಡಿ ತಮ್ಮ ಖಾಲಿತಲೆಯನ್ನು ಪ್ರದರ್ಶನಕ್ಕಿಟ್ಟಿರುವುದು ವರದಿಯಾಗಿದೆ. ಈ ಸುದ್ದಿಯಿಂದ ಉತ್ತೇಜಿತನಾದ ಜಡೇಮಾಯಸಂದ್ರದ ಹಾಸ್ಯನಟ ಗಜ್ಜೇಶ್ ಅವರು, ತಮ್ಮ ‘ಮನೆಯ ಶೌಚಾಲಯಕ್ಕೆ ಹಾಕಿಸಿರೋ ಹೊಸ ಟೈಲ್ಸ್‍ಗಳು ಮತ್ತು ತಮ್ಮೂರಿನಲ್ಲಿ ಹೊಸದಾಗಿ ಹಾಕಿರುವ ರಸ್ತೆಉಬ್ಬುಗಳನ್ನು ಉದ್ಘಾಟಿಸಲು ಕ್ಯಾಮೆರಾ ಸಮೇತ ತಾವು ಬರಲೇಬೇಕೆಂದು’ ಪ್ರದಾನಮಂತ್ರಿ ‘ಪಕೋಡೇಂದ್ರ’ ಅವರನ್ನು ಬೇಡಿಕೊಂಡಿದ್ದಾರೆಂದು ವರದಿಯಾಗಿದೆ.

* * * *

ದೇಶದ ಬ್ಯಾಂಕ್‍ಗಳಲ್ಲಿ ಬೇಕಾಬಿಟ್ಟಿ ಸಾಲ ಮಾಡಿ ದೇಶ ಬಿಟ್ಟು ಓಡಿಹೋಗಲು ಸನ್ಮಾನ್ಯ ‘ಕುಂಡಾಲೇಂದ್ರ’ ಅವರು ಶುರು ಮಾಡಿರುವ ‘ಕುಣ್ಕೊಂಡ್ ಬನ್ನಿ ದೋಚ್ಕೊಂಡ್ ಓಡಿ’ ಯೋಜನೆಯಡಿಯಲ್ಲಿ ಇಲ್ಲಿಯವರೆಗೆ 33 ಮಂದಿ ಕಾರ್ಪೊರೇಟ್ ಕಳ್ಳರು ತಾವು ಸಾಲ ಪಡೆದ ಬ್ಯಾಂಕುಗಳ ತಲೆಯನ್ನು ನುಣ್ಣಗೆ ಬೋಳಿಸಿ ದೇಶ ಬಿಟ್ಟು ಓಡಿ ಹೋಗಿರುವುದು ಹಳೆಯ ವಿಷಯ. ಈಗ ಈ ಯೋಜನೆಯಡಿಯಲ್ಲಿ ದೇಶಬಿಟ್ಟ ಮೊದಲಿಗರಾದ ಮಲ್ಯಪ್ಪನವರನ್ನು ಲಂಡನ್‍ನಿಂದ ವಾಪಸ್ಸು ಕಳಿಸಲು ಕುಂಡಾಲೇಂದ್ರ ಬ್ರಿಟನ್ ಸರ್ಕಾರವನ್ನು ಅಂಗಲಾಚಿ ಕೇಳಿಕೊಂಡಿದ್ದರು. ಇದಕ್ಕೆ ಮಲ್ಯಪ್ಪನವರು “ಇಂಡಿಯಾ ದೇಸುದ ಜೈಲ್‍ಗುಳಲ್ಲಿ ಸೊಳ್ಳೆಕಾಟ ಜ್ಯಾಸ್ತಿ, ನಿಂಬೆ ಶರ್ಬತ್ತಿನಷ್ಟು ಗಟ್ಟಿ ಸಾಂಬಾರ್ ಮಾಡ್ತಾರೆ, ಆಲೂಗಡ್ಡೆ ಪಲ್ಯುದ ಬದ್ಲು ಬೂಸ್ಟು ಹಿಡಿದ ಹಪ್ಪಳ ಕೊಡ್ತಾರೆ. ನಾನು ಇಂಥಾ ಇಂಡಿಯಾ ಜೈಲ್‍ಗುಳಿಗೆ ಹ್ವೋಗಲ್ಲ, ಮೊದ್ಲು ಆ ದೇಸುದ ಜೈಲುಗಳಲ್ಲಿ ಸಿಮ್ಮಿಂಗ್ ಫೂಲ್ ಕಟ್ಟುಸಿ, ತ್ರಿಬಲ್ ಬೆಡ್ರೂಂ ಜೈಲುಕ್ವಾಣೆಯೊಳಗೆ ನನ್ನ ಹೊಸ ಹೆಂಡ್ತಿ ಜ್ವತೆ ಶೋಭನ ಮಾಡ್ಕ್ಯನಕ್ಕೆ ಕುರ್ಲಾನ್ ಹಾಸಿಗೆ ವ್ಯವಸ್ಥೆ ಮಾಡಿ ಮುಗಿದ ಮ್ಯಾಲೆ ಬೇಕಾದ್ರೆ ನನ್ನುನ್ನ ಅರೆಸ್ಟು ಮಾಡಿ” ಎಂದು ಉತ್ತರಿಸಿದ್ದಾರಂತೆ. ಈ ಸಂಬಂಧ ಕುರ್ಲಾನ್ ಹಾಸಿಗೆಯ ಮೇಲೆ ಚೆಲ್ಲಲು ಮಲ್ಲಿಗೆಹೂವುಗಳ ಪೂರೈಕೆದಾರರರಿಗೆ ಕುಂಡಾಲೇಂದ್ರ ಟೆಂಡರ್ ಕರೆಯುತ್ತಾರಾ ಎಂದು ಜನರು ಕುಂಡೆ ಬಡಕೊಂಡು ನಗುತ್ತಿದ್ದಾರೆ ಎಂದು ವರದಿಯಾಗಿದೆ.

* * * *

ಇತ್ತೀಚೆಗೆ ವಿವಿಧ ರಾಜ್ಯಗಳಲ್ಲಿ ನಡೆದ ಉಪಚುನಾವಣೆಗಳಲ್ಲಿ ನೂರಾರು ಸಂಖ್ಯೆಯಲ್ಲಿ ಕೆಟ್ಟು ಕುಲಗೆಟ್ಟಿರುವ ಇವಿಎಂಗಳನ್ನು ಬಳಸಲಾಗಿದೆಯೆಂದು ಚುನಾವಣಾ ಅಭ್ಯರ್ಥಿಗಳು ಎಲೆಕ್ಷನ್ ಕಮಿಷನ್ನಿಗೆ ದೂರು ಕೊಟ್ಟಿದ್ದಾರೆ. ಈ ಸಂಬಂಧ ಉತ್ತರಿಸಿರುವ ಚುನಾವಣಾ ಆಯೋಗವು `ಆ ಸ್ಥಳಗಳಲ್ಲಿ ಟೆಂಪ್ರೇಚರ್ರು ಶ್ಯಾನೆ ಹೆಚ್ಚಾಗಿಹ್ವೋಗಿ ನಂ ಇವಿಎಂ ಮೆಷೀನುಗಳ ತಲೆಕೆಟ್ಟು, ಇದ್ದುಕ್ಕಿದ್ದಂತೆ ಹುಚ್ಚ್‍ನಾಯಿ ಕಚ್ಚುದಂಗೆ ಬಿಜೆಪಿಗೆ ವೋಟು ಹಾಕ್ತಾ ಕುಂತವೆ‘ ಎಂದೂ ವಿವರಣೆ ಕೊಟ್ಟಿದೆ. ವಾತಾವರಣದ ಉಷ್ಣಾಂಶ ಹೆಚ್ಚಾಗಿ ಮೊಬೈಲ್‍ಗಳು ಕೆಟ್ಟಿಲ್ಲ, ಕಂಪ್ಯೂಟರ್‍ಗಳು ಕೆಟ್ಟಿಲ್ಲ, ಟಿವಿ, ಮಿಕ್ಸಿ, ಟೇಪ್‍ರೆಕಾರ್ಡರಿನಂಥ ಎಲೆಕ್ಟ್ರಾನಿಕ್ ವಸ್ತುಗಳೂ ಕೆಟ್ಟ ಉದಾಹರಣೆಯಿಲ್ಲ. ಹೀಗಿರುವಾಗ ಇವಿಎಂಗಳು ಮಾತ್ರ ಉಷ್ಣಾಂಶಕ್ಕೆ ಹೆದರಿ ಯಾಕೆ ಉಚ್ಚೆ ಹುಯ್ದುಕೊಳ್ಳುತ್ತಿವೆ ಎಂಬ ಪ್ರಶ್ನೆ ಜನಸಾಮಾನ್ಯರನ್ನು ಕಾಡುತ್ತಿದೆ. ಇವನ್ನು ತಯಾರಿಸಿದ್ದು ಸರ್ಕಾರದ ಎಲೆಕ್ಟ್ರಾನಿಕ್ ಎಂಜಿನಿಯರ್‍ಗಳೋ ಅಥವ ಹಳೇಸೀಸ ಖಾಲಿ ಬಾಟ್ಲು ವ್ಯಾಪಾರಿಗಳೋ ಎಂದು ಜನರು ತಲೆ ಕೆರೆದುಕೊಳ್ಳುತ್ತಿದ್ದಾರೆ.

* * * *

ರೈತರ ಸಾಲ ಮನ್ನಾ ಮಾಡದಿದ್ರೆ ನಾವು ಕರ್ನಾಟಕ ಬಂದ್ ಮಾಡ್ತೀವಿ’ ಅಂತ ತಮ್ಮದೇ ತೊಡೆಯನ್ನು ತಟ್ಟಿಕೊಂಡು ಹೇಳಿದ ಧಡಿಯೂರಪ್ಪನವರು ನಂತರ ಕೈ ಪಕ್ಷವು ಕೋರ್ಟ್‍ಗೆ ಹೋಗಿ ಕೇಸಾಕ್ತೀವಿ ಎಂದು ಹೆದರಿಸಿದ ಮೇಲೆ.. ನಾನಂಗೆ ಹೇಳೇ ಇಲ್ಲ, ಮೋಸ್ಟ್ ಲಿ ನನ್ನ ಆತ್ಮ ದೇಹದಿಂದ ಪುಸುಕ್ ಅಂತ ಹೊರಬಂದು.. ಡೈಲಾಗ್ ಹೊಡೆದು ದಬುಕ್ ಅಂತ ಒಳಕ್ಕೆ ಹೋಗಿರಬೇಕು ಎಂದು ಪ್ಲೇಟ್ ಚೇಂಜ್ ಮಾಡಿಬಿಟ್ಟಿದ್ದರು. ಈ ಅವಾಂತರಗಳನ್ನು ಕಣ್ಣಾರೆ ಕಂಡ ಕರ್ನಾಟಕದ ಜನ ಬಂದನ್ನೇ ಬಂದ್ ಮಾಡಿ ಧಡಿಯೂರಪ್ಪನಿಗೆ ಮಣ್ಣುಮುಕ್ಕಿಸಿದ್ದಾರೆ. ಈ ಸಂದರ್ಭದಲ್ಲಿ ಮೈಸೂರಿನಲ್ಲಿ ವಿಶೇಷ ಚೇತನ ಮಾನಸಿಕ ಅಸ್ವಸ್ಥ ಪ್ರಪಾತ ಸಿಮ್ಮನನ್ನು ಅರೆಸ್ಟ್ ಮಾಡಿರುವ ಪೊಲೀಸರು.. ಸಿಮ್ಮನ ಎರಡೂ ಕಾಲುಗಳಿಗೆ ಹಗ್ಗ ಕಟ್ಟಿ, ಬಾಯಿಗೆ ಗೋಣಿಚೀಲ ತುರುಕಿ, ಎರಡೂ ಕಣ್ಣಿಗೆ ಪತಂಜಲಿ ಖಾರದಪುಡಿ ಎರಚಿ, ಫ್ಯಾನಿಗೆ ನೇತುಹಾಕಿ ನಾಯಿಗೆ ಹೊಡೆದಂತೆ ಇನ್ನೂ ಹೊಡೆದಿಲ್ಲವೆಂದು ವರದಿಯಾಗಿದೆ.

* * * *

ನಮ್ಮ ಪ್ರದ್ರಾನಮಂತ್ರಿ ಕುಂಡಾಲೇಂದ್ರ ವಿಶ್ವಬ್ಯಾಂಕಿನಿಂದ ನಯಾಪೈಸ ಸಾಲ ತೆಗೆದುಕೊಳ್ಳದೆ ಸರ್ಕಾರ ನಡೆಸುತ್ತಿದ್ದಾನೆಂದು ಮೋತಿಭಕ್ತರು ಊರಲ್ಲೆಲ್ಲ ಪುಂಗಿ ಊದುತ್ತಿರುವ ವರದಿಗಳು ವ್ಯಾಪಕವಾಗಿ ಕೇಳಿಬಂದಿವೆ. ಕೈಯಲ್ಲಿ ಪೊರಕೆ ಹಿಡಿದು, ಮುಖಕ್ಕೆ ಮೂರು ಇಂಚು ಮೇಕಪ್ಪು ರುಬ್ಬಿಕೊಂಡು ಟೊಯ್ಯಟೊಯ್ಯ ಎಂದು ಕಸಗುಡಿಸುವ ಡ್ರಾಮಾ ಮಾಡುತ್ತಿದ್ದ ಮೋತಿಜೀ, ಈ ಬಿಕನಾಸಿ ನಾಟಕವನ್ನು ಪತ್ರಿಕೆಗಳಲ್ಲಿ ಪ್ರಚಾರ ಮಾಡಲೂ ಸಹ ವಿಶ್ವಬ್ಯಾಂಕಿನಿಂದ ತಿರುಪೆ ಸಾಲ ತಂದಿದ್ದಾನೆಂದು ವಿಶ್ವಬ್ಯಾಂಕ್ ಮೂಲಗಳು ತಿಳಿಸಿವೆ. ಇಂಥಹ ಹಸಿಸುಳ್ಳುಗಳನ್ನೇ ಹೇಳುತ್ತ ತಿರುಗುತ್ತಿರುವ ಮೋತಿಜಿ ಮತ್ತು ಮೋತಿಭಕ್ತರನ್ನು ಜನರು ಅಟ್ಟಾಡಿಸಿಕೊಂಡು ಬಟ್ಟೆ ಹರಿದುಹೋಗುವಂತೆ ಬಡಿದು ನೆಲಕ್ಕೆ ಹಾಕಿ ತುಳಿಯಲು ಪ್ರಯತ್ನ ನಡೆಸಿರುವ ಘಟನೆ ಇನ್ನೂ ವರದಿಯಾಗಿಲ್ಲ.

* * * *

ಉತ್ತರಪ್ರದೇಶದ ಕಬ್ಬು ಬೆಳೆಯುವ ರೈತರಿಗೆ ಕೊಡಬೇಕಾದ 13 ಸಾವಿರ ಕೋಟಿ ಖರೀದಿ ಹಣವನ್ನು ಕೊಡದೆ ಮುಂಡಾ ಮೋಚಿರುವ ಜೋಗಿ ಪ್ಯಾದೇನಾತನ ಸರ್ಕಾರವು ಈ ಬಗ್ಗೆ ಪ್ರದ್ರಾನಮಂತ್ರಿಗೆ ಹಣಬಿಡುಗಡೆಗೆ ಕೇಳಿದಾಗ.. ಕುಂಡಾಲೇಂದ್ರನು..’ ಏನೂ ಹೆದರಬ್ಯಾಡ.. ಪಾಕಿಸ್ತಾನದಿಂದ ಸಕ್ಕರೆ ತರಿಸಿಕೊಂಡು ಉತ್ತರಪ್ರದೇಶದ ರೈತರ ಕಣ್ಣಿಗೆ ಮಣ್ಣುಸುಣ್ಣ ಎರಡನ್ನೂ ಮಿಕ್ಸ್ ಮಾಡಿ ಎರಚೋಣ’ಎಂದು ಭರವಸೆ ಕೊಟ್ಟಿದ್ದಾನೆ ಎಂದು ದೆಹಲಿಯಿಂದ ವರದಿ ಬಂದಿದೆ. ಅದರಂತೆ ಪಾಕಿಸ್ತಾನದಿಂದ 2 ಲಕ್ಷ ಟನ್ ಸಕ್ಕರೆ ಆಮದು ಮಾಡಿಕೊಂಡು ಉತ್ತರಪ್ರದೇಶದ ಕಬ್ಬುಬೆಳೆಗಾರರಿಗೆ ಈ ಅಲ್ಲಣ್ಣ-ಮಲ್ಲಣ್ಣ ಅಲಕ್ ಬುಲಕ್ ಜೋಡಿಯು ನಾಮ ಎಳೆದಿದೆ ಎಂದು ತಿಳಿದುಬಂದಿದೆ.
ಇಲ್ಲಿಗೆ ಆಘಾತವಾಣಿ ವಾರ್ತೆಗಳು ಮುಕ್ತಾಯವಾಯಿತು. ಮತ್ತೆ ಸಿಗೋಣ. ಬೈ ಟೇಕ್ ಕೇರ್..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...