Homeಅಂಕಣಗಳುಆಘಾತವಾಣಿ | `ಜೈಲೊಳಗೆ ಸ್ವೋಭುನಕ್ಕೆ ರೆಡಿ ಮಾಡಿ, ಆಮ್ಯಾಲೆ ನನ್ನ ಅರೆಸ್ಟ್ ಮಾಡ್ರುಲಾ’

ಆಘಾತವಾಣಿ | `ಜೈಲೊಳಗೆ ಸ್ವೋಭುನಕ್ಕೆ ರೆಡಿ ಮಾಡಿ, ಆಮ್ಯಾಲೆ ನನ್ನ ಅರೆಸ್ಟ್ ಮಾಡ್ರುಲಾ’

- Advertisement -
- Advertisement -
  • ಅಟ್ಯಾಕ್ ಹನ್ಮಂತ |

ನಮಸ್ಕಾರ ಆಘಾತವಾಣಿ ವಾರ್ತೆಗಳಿಗೆ ಸ್ವಾಗತ, ಓದುತ್ತಿರುವವರು ಅಟ್ಯಾಕ್ ಹನ್ಮಂತ.

ಕಣ್ಣಿಗೆ ಏನೇ ಕಂಡರೂ ಅದನ್ನು ಉದ್ಘಾಟನೆ ಮಾಡಿ ಪೋಟೋ ತಗೊಳ್ತೀನಿ ಅಂತ ಓಡೋಡಿ ಬರುವ ಮಾನ್ಯ ಪ್ರದ್ರಾನ ಮಂತ್ರಿ ‘ಪಕೋಡಪ್ಪ ಕುಂಡಾಲೇಂದ್ರ’ ಅವರು ಇತ್ತೀಚೆಗೆ ಒಂದು ವಿಶೇಷ ಉದ್ಘಾಟನೆಯಿಂದಾಗಿ ಮತ್ತೆ ಸುದ್ದಿಯಾಗಿದ್ದಾರೆ. ಉತ್ತರಪ್ರದೇಶದಲ್ಲಿ ಮಾಯಾವತಿ ಮತ್ತು ಅಖಿಲೇಶ್ ಯಾದವ್ ಇವರುಗಳು ಕಳೆದ ತಮ್ಮ ಅಧಿಕಾರಾವಧಿಯಲ್ಲಿ ದೆಹಲಿಗೆ ಹೊಂದಿಕೊಂಡಂತೆ ನೂರಾರು ಕಿಲೋಮೀಟರ್‍ಗಳ ಎಕ್ಸ್‍ಪ್ರೆಸ್ ಹೈವೇ ನಿರ್ಮಿಸಿದ್ದರು. ಅದನ್ನು ತಮ್ಮ ವೈಯಕ್ತಿಕ ಪ್ರಚಾರಕ್ಕೆ ಬಳಸಿಕೊಳ್ಳುವ ಪ್ರತಿಭೆಯ ಕೊರತೆಯಿಂದಾಗಿ ಹಾಲಿ ವಿಫಲ ರಾಜಕಾರಣಿಗಳಾಗಿದ್ದಾರೆ. ಆದರೆ ಪಕೋಡೇಂದ್ರನ ಬಹುಮುಖ ಪ್ರತಿಭೆಗೆ ಮತ್ತೊಂದು ತಾಜಾ ನಿದರ್ಶನ ಇದೀ ವರದಿಯಾಗಿದೆ.. ದೆಹಲಿಯಿಂದ ಮೀರತ್ ನಡುವೆ ಜುಜುಬಿ 9 ಕಿಲೋಮೀಟರ್ ಎಕ್ಸ್‍ಪ್ರೆಸ್ ಹೈವೇಯನ್ನು ನಿರ್ಮಿಸಿ ‘ನಾನೇ ಮಾಡಿದ್ದು, ನಾನೇ ನಾನೇ..’ ಎಂದು ಕೂಗಾಡಿ ಕಿರುಚಾಡಿ ಫೋಟೋ ತಗೆಸಿ ಪ್ರಚಾರ ಮಾಡಿ ಕೊಂಡಿದ್ದಾರೆ. ಇಂಥದೊಂದು ಚಿಲ್ಲರೆ ಸುದ್ದಿಗಾಗಿಯೇ ಕಾದು ಕುಳಿತಿದ್ದ ಮೀಡಿಯಾಗಳು ಮಂತ್ರಕ್ಕಿಂತ ಉಗುಳನ್ನೇ ಹೆಚ್ಚಾಗಿ ಖರ್ಚುಮಾಡಿ ತಮ್ಮ ಖಾಲಿತಲೆಯನ್ನು ಪ್ರದರ್ಶನಕ್ಕಿಟ್ಟಿರುವುದು ವರದಿಯಾಗಿದೆ. ಈ ಸುದ್ದಿಯಿಂದ ಉತ್ತೇಜಿತನಾದ ಜಡೇಮಾಯಸಂದ್ರದ ಹಾಸ್ಯನಟ ಗಜ್ಜೇಶ್ ಅವರು, ತಮ್ಮ ‘ಮನೆಯ ಶೌಚಾಲಯಕ್ಕೆ ಹಾಕಿಸಿರೋ ಹೊಸ ಟೈಲ್ಸ್‍ಗಳು ಮತ್ತು ತಮ್ಮೂರಿನಲ್ಲಿ ಹೊಸದಾಗಿ ಹಾಕಿರುವ ರಸ್ತೆಉಬ್ಬುಗಳನ್ನು ಉದ್ಘಾಟಿಸಲು ಕ್ಯಾಮೆರಾ ಸಮೇತ ತಾವು ಬರಲೇಬೇಕೆಂದು’ ಪ್ರದಾನಮಂತ್ರಿ ‘ಪಕೋಡೇಂದ್ರ’ ಅವರನ್ನು ಬೇಡಿಕೊಂಡಿದ್ದಾರೆಂದು ವರದಿಯಾಗಿದೆ.

* * * *

ದೇಶದ ಬ್ಯಾಂಕ್‍ಗಳಲ್ಲಿ ಬೇಕಾಬಿಟ್ಟಿ ಸಾಲ ಮಾಡಿ ದೇಶ ಬಿಟ್ಟು ಓಡಿಹೋಗಲು ಸನ್ಮಾನ್ಯ ‘ಕುಂಡಾಲೇಂದ್ರ’ ಅವರು ಶುರು ಮಾಡಿರುವ ‘ಕುಣ್ಕೊಂಡ್ ಬನ್ನಿ ದೋಚ್ಕೊಂಡ್ ಓಡಿ’ ಯೋಜನೆಯಡಿಯಲ್ಲಿ ಇಲ್ಲಿಯವರೆಗೆ 33 ಮಂದಿ ಕಾರ್ಪೊರೇಟ್ ಕಳ್ಳರು ತಾವು ಸಾಲ ಪಡೆದ ಬ್ಯಾಂಕುಗಳ ತಲೆಯನ್ನು ನುಣ್ಣಗೆ ಬೋಳಿಸಿ ದೇಶ ಬಿಟ್ಟು ಓಡಿ ಹೋಗಿರುವುದು ಹಳೆಯ ವಿಷಯ. ಈಗ ಈ ಯೋಜನೆಯಡಿಯಲ್ಲಿ ದೇಶಬಿಟ್ಟ ಮೊದಲಿಗರಾದ ಮಲ್ಯಪ್ಪನವರನ್ನು ಲಂಡನ್‍ನಿಂದ ವಾಪಸ್ಸು ಕಳಿಸಲು ಕುಂಡಾಲೇಂದ್ರ ಬ್ರಿಟನ್ ಸರ್ಕಾರವನ್ನು ಅಂಗಲಾಚಿ ಕೇಳಿಕೊಂಡಿದ್ದರು. ಇದಕ್ಕೆ ಮಲ್ಯಪ್ಪನವರು “ಇಂಡಿಯಾ ದೇಸುದ ಜೈಲ್‍ಗುಳಲ್ಲಿ ಸೊಳ್ಳೆಕಾಟ ಜ್ಯಾಸ್ತಿ, ನಿಂಬೆ ಶರ್ಬತ್ತಿನಷ್ಟು ಗಟ್ಟಿ ಸಾಂಬಾರ್ ಮಾಡ್ತಾರೆ, ಆಲೂಗಡ್ಡೆ ಪಲ್ಯುದ ಬದ್ಲು ಬೂಸ್ಟು ಹಿಡಿದ ಹಪ್ಪಳ ಕೊಡ್ತಾರೆ. ನಾನು ಇಂಥಾ ಇಂಡಿಯಾ ಜೈಲ್‍ಗುಳಿಗೆ ಹ್ವೋಗಲ್ಲ, ಮೊದ್ಲು ಆ ದೇಸುದ ಜೈಲುಗಳಲ್ಲಿ ಸಿಮ್ಮಿಂಗ್ ಫೂಲ್ ಕಟ್ಟುಸಿ, ತ್ರಿಬಲ್ ಬೆಡ್ರೂಂ ಜೈಲುಕ್ವಾಣೆಯೊಳಗೆ ನನ್ನ ಹೊಸ ಹೆಂಡ್ತಿ ಜ್ವತೆ ಶೋಭನ ಮಾಡ್ಕ್ಯನಕ್ಕೆ ಕುರ್ಲಾನ್ ಹಾಸಿಗೆ ವ್ಯವಸ್ಥೆ ಮಾಡಿ ಮುಗಿದ ಮ್ಯಾಲೆ ಬೇಕಾದ್ರೆ ನನ್ನುನ್ನ ಅರೆಸ್ಟು ಮಾಡಿ” ಎಂದು ಉತ್ತರಿಸಿದ್ದಾರಂತೆ. ಈ ಸಂಬಂಧ ಕುರ್ಲಾನ್ ಹಾಸಿಗೆಯ ಮೇಲೆ ಚೆಲ್ಲಲು ಮಲ್ಲಿಗೆಹೂವುಗಳ ಪೂರೈಕೆದಾರರರಿಗೆ ಕುಂಡಾಲೇಂದ್ರ ಟೆಂಡರ್ ಕರೆಯುತ್ತಾರಾ ಎಂದು ಜನರು ಕುಂಡೆ ಬಡಕೊಂಡು ನಗುತ್ತಿದ್ದಾರೆ ಎಂದು ವರದಿಯಾಗಿದೆ.

* * * *

ಇತ್ತೀಚೆಗೆ ವಿವಿಧ ರಾಜ್ಯಗಳಲ್ಲಿ ನಡೆದ ಉಪಚುನಾವಣೆಗಳಲ್ಲಿ ನೂರಾರು ಸಂಖ್ಯೆಯಲ್ಲಿ ಕೆಟ್ಟು ಕುಲಗೆಟ್ಟಿರುವ ಇವಿಎಂಗಳನ್ನು ಬಳಸಲಾಗಿದೆಯೆಂದು ಚುನಾವಣಾ ಅಭ್ಯರ್ಥಿಗಳು ಎಲೆಕ್ಷನ್ ಕಮಿಷನ್ನಿಗೆ ದೂರು ಕೊಟ್ಟಿದ್ದಾರೆ. ಈ ಸಂಬಂಧ ಉತ್ತರಿಸಿರುವ ಚುನಾವಣಾ ಆಯೋಗವು `ಆ ಸ್ಥಳಗಳಲ್ಲಿ ಟೆಂಪ್ರೇಚರ್ರು ಶ್ಯಾನೆ ಹೆಚ್ಚಾಗಿಹ್ವೋಗಿ ನಂ ಇವಿಎಂ ಮೆಷೀನುಗಳ ತಲೆಕೆಟ್ಟು, ಇದ್ದುಕ್ಕಿದ್ದಂತೆ ಹುಚ್ಚ್‍ನಾಯಿ ಕಚ್ಚುದಂಗೆ ಬಿಜೆಪಿಗೆ ವೋಟು ಹಾಕ್ತಾ ಕುಂತವೆ‘ ಎಂದೂ ವಿವರಣೆ ಕೊಟ್ಟಿದೆ. ವಾತಾವರಣದ ಉಷ್ಣಾಂಶ ಹೆಚ್ಚಾಗಿ ಮೊಬೈಲ್‍ಗಳು ಕೆಟ್ಟಿಲ್ಲ, ಕಂಪ್ಯೂಟರ್‍ಗಳು ಕೆಟ್ಟಿಲ್ಲ, ಟಿವಿ, ಮಿಕ್ಸಿ, ಟೇಪ್‍ರೆಕಾರ್ಡರಿನಂಥ ಎಲೆಕ್ಟ್ರಾನಿಕ್ ವಸ್ತುಗಳೂ ಕೆಟ್ಟ ಉದಾಹರಣೆಯಿಲ್ಲ. ಹೀಗಿರುವಾಗ ಇವಿಎಂಗಳು ಮಾತ್ರ ಉಷ್ಣಾಂಶಕ್ಕೆ ಹೆದರಿ ಯಾಕೆ ಉಚ್ಚೆ ಹುಯ್ದುಕೊಳ್ಳುತ್ತಿವೆ ಎಂಬ ಪ್ರಶ್ನೆ ಜನಸಾಮಾನ್ಯರನ್ನು ಕಾಡುತ್ತಿದೆ. ಇವನ್ನು ತಯಾರಿಸಿದ್ದು ಸರ್ಕಾರದ ಎಲೆಕ್ಟ್ರಾನಿಕ್ ಎಂಜಿನಿಯರ್‍ಗಳೋ ಅಥವ ಹಳೇಸೀಸ ಖಾಲಿ ಬಾಟ್ಲು ವ್ಯಾಪಾರಿಗಳೋ ಎಂದು ಜನರು ತಲೆ ಕೆರೆದುಕೊಳ್ಳುತ್ತಿದ್ದಾರೆ.

* * * *

ರೈತರ ಸಾಲ ಮನ್ನಾ ಮಾಡದಿದ್ರೆ ನಾವು ಕರ್ನಾಟಕ ಬಂದ್ ಮಾಡ್ತೀವಿ’ ಅಂತ ತಮ್ಮದೇ ತೊಡೆಯನ್ನು ತಟ್ಟಿಕೊಂಡು ಹೇಳಿದ ಧಡಿಯೂರಪ್ಪನವರು ನಂತರ ಕೈ ಪಕ್ಷವು ಕೋರ್ಟ್‍ಗೆ ಹೋಗಿ ಕೇಸಾಕ್ತೀವಿ ಎಂದು ಹೆದರಿಸಿದ ಮೇಲೆ.. ನಾನಂಗೆ ಹೇಳೇ ಇಲ್ಲ, ಮೋಸ್ಟ್ ಲಿ ನನ್ನ ಆತ್ಮ ದೇಹದಿಂದ ಪುಸುಕ್ ಅಂತ ಹೊರಬಂದು.. ಡೈಲಾಗ್ ಹೊಡೆದು ದಬುಕ್ ಅಂತ ಒಳಕ್ಕೆ ಹೋಗಿರಬೇಕು ಎಂದು ಪ್ಲೇಟ್ ಚೇಂಜ್ ಮಾಡಿಬಿಟ್ಟಿದ್ದರು. ಈ ಅವಾಂತರಗಳನ್ನು ಕಣ್ಣಾರೆ ಕಂಡ ಕರ್ನಾಟಕದ ಜನ ಬಂದನ್ನೇ ಬಂದ್ ಮಾಡಿ ಧಡಿಯೂರಪ್ಪನಿಗೆ ಮಣ್ಣುಮುಕ್ಕಿಸಿದ್ದಾರೆ. ಈ ಸಂದರ್ಭದಲ್ಲಿ ಮೈಸೂರಿನಲ್ಲಿ ವಿಶೇಷ ಚೇತನ ಮಾನಸಿಕ ಅಸ್ವಸ್ಥ ಪ್ರಪಾತ ಸಿಮ್ಮನನ್ನು ಅರೆಸ್ಟ್ ಮಾಡಿರುವ ಪೊಲೀಸರು.. ಸಿಮ್ಮನ ಎರಡೂ ಕಾಲುಗಳಿಗೆ ಹಗ್ಗ ಕಟ್ಟಿ, ಬಾಯಿಗೆ ಗೋಣಿಚೀಲ ತುರುಕಿ, ಎರಡೂ ಕಣ್ಣಿಗೆ ಪತಂಜಲಿ ಖಾರದಪುಡಿ ಎರಚಿ, ಫ್ಯಾನಿಗೆ ನೇತುಹಾಕಿ ನಾಯಿಗೆ ಹೊಡೆದಂತೆ ಇನ್ನೂ ಹೊಡೆದಿಲ್ಲವೆಂದು ವರದಿಯಾಗಿದೆ.

* * * *

ನಮ್ಮ ಪ್ರದ್ರಾನಮಂತ್ರಿ ಕುಂಡಾಲೇಂದ್ರ ವಿಶ್ವಬ್ಯಾಂಕಿನಿಂದ ನಯಾಪೈಸ ಸಾಲ ತೆಗೆದುಕೊಳ್ಳದೆ ಸರ್ಕಾರ ನಡೆಸುತ್ತಿದ್ದಾನೆಂದು ಮೋತಿಭಕ್ತರು ಊರಲ್ಲೆಲ್ಲ ಪುಂಗಿ ಊದುತ್ತಿರುವ ವರದಿಗಳು ವ್ಯಾಪಕವಾಗಿ ಕೇಳಿಬಂದಿವೆ. ಕೈಯಲ್ಲಿ ಪೊರಕೆ ಹಿಡಿದು, ಮುಖಕ್ಕೆ ಮೂರು ಇಂಚು ಮೇಕಪ್ಪು ರುಬ್ಬಿಕೊಂಡು ಟೊಯ್ಯಟೊಯ್ಯ ಎಂದು ಕಸಗುಡಿಸುವ ಡ್ರಾಮಾ ಮಾಡುತ್ತಿದ್ದ ಮೋತಿಜೀ, ಈ ಬಿಕನಾಸಿ ನಾಟಕವನ್ನು ಪತ್ರಿಕೆಗಳಲ್ಲಿ ಪ್ರಚಾರ ಮಾಡಲೂ ಸಹ ವಿಶ್ವಬ್ಯಾಂಕಿನಿಂದ ತಿರುಪೆ ಸಾಲ ತಂದಿದ್ದಾನೆಂದು ವಿಶ್ವಬ್ಯಾಂಕ್ ಮೂಲಗಳು ತಿಳಿಸಿವೆ. ಇಂಥಹ ಹಸಿಸುಳ್ಳುಗಳನ್ನೇ ಹೇಳುತ್ತ ತಿರುಗುತ್ತಿರುವ ಮೋತಿಜಿ ಮತ್ತು ಮೋತಿಭಕ್ತರನ್ನು ಜನರು ಅಟ್ಟಾಡಿಸಿಕೊಂಡು ಬಟ್ಟೆ ಹರಿದುಹೋಗುವಂತೆ ಬಡಿದು ನೆಲಕ್ಕೆ ಹಾಕಿ ತುಳಿಯಲು ಪ್ರಯತ್ನ ನಡೆಸಿರುವ ಘಟನೆ ಇನ್ನೂ ವರದಿಯಾಗಿಲ್ಲ.

* * * *

ಉತ್ತರಪ್ರದೇಶದ ಕಬ್ಬು ಬೆಳೆಯುವ ರೈತರಿಗೆ ಕೊಡಬೇಕಾದ 13 ಸಾವಿರ ಕೋಟಿ ಖರೀದಿ ಹಣವನ್ನು ಕೊಡದೆ ಮುಂಡಾ ಮೋಚಿರುವ ಜೋಗಿ ಪ್ಯಾದೇನಾತನ ಸರ್ಕಾರವು ಈ ಬಗ್ಗೆ ಪ್ರದ್ರಾನಮಂತ್ರಿಗೆ ಹಣಬಿಡುಗಡೆಗೆ ಕೇಳಿದಾಗ.. ಕುಂಡಾಲೇಂದ್ರನು..’ ಏನೂ ಹೆದರಬ್ಯಾಡ.. ಪಾಕಿಸ್ತಾನದಿಂದ ಸಕ್ಕರೆ ತರಿಸಿಕೊಂಡು ಉತ್ತರಪ್ರದೇಶದ ರೈತರ ಕಣ್ಣಿಗೆ ಮಣ್ಣುಸುಣ್ಣ ಎರಡನ್ನೂ ಮಿಕ್ಸ್ ಮಾಡಿ ಎರಚೋಣ’ಎಂದು ಭರವಸೆ ಕೊಟ್ಟಿದ್ದಾನೆ ಎಂದು ದೆಹಲಿಯಿಂದ ವರದಿ ಬಂದಿದೆ. ಅದರಂತೆ ಪಾಕಿಸ್ತಾನದಿಂದ 2 ಲಕ್ಷ ಟನ್ ಸಕ್ಕರೆ ಆಮದು ಮಾಡಿಕೊಂಡು ಉತ್ತರಪ್ರದೇಶದ ಕಬ್ಬುಬೆಳೆಗಾರರಿಗೆ ಈ ಅಲ್ಲಣ್ಣ-ಮಲ್ಲಣ್ಣ ಅಲಕ್ ಬುಲಕ್ ಜೋಡಿಯು ನಾಮ ಎಳೆದಿದೆ ಎಂದು ತಿಳಿದುಬಂದಿದೆ.
ಇಲ್ಲಿಗೆ ಆಘಾತವಾಣಿ ವಾರ್ತೆಗಳು ಮುಕ್ತಾಯವಾಯಿತು. ಮತ್ತೆ ಸಿಗೋಣ. ಬೈ ಟೇಕ್ ಕೇರ್..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...